ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ ಕೀಟ ಇರಬಹುದು ಗಮನಿಸಿ.
ಕರಿಮೆಣಸಿನ ಬಳ್ಳಿಗೆ ರೋಗ ಬರುತ್ತದೆ. ಇದರಿಂದಾಗಿ ಬಳ್ಳಿ ಸಾಯುತ್ತದೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ. ಆದರೆ ರೋಗ ಬಂದು ಬಳ್ಳಿ…
ಕರಿಮೆಣಸಿನ ಬಳ್ಳಿಗೆ ರೋಗ ಬರುತ್ತದೆ. ಇದರಿಂದಾಗಿ ಬಳ್ಳಿ ಸಾಯುತ್ತದೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ. ಆದರೆ ರೋಗ ಬಂದು ಬಳ್ಳಿ ಸಾಯುವುದಲ್ಲದೆ ಕೀಟದ ಕಾರಣದಿಂದಲೂ ಬಳ್ಳಿ ಸಾಯುತ್ತದೆ. ಇದು ಹರಡುವ ಕೀಟವಾಗಿದ್ದು, ರೋಗದಿಂದ ಬಳ್ಳಿ ಒಣಗಿದಂತೆ ಇದರಿಂದಲೂ ಒಣಗುತ್ತದೆ. ಕರೆಗಳೂ ಉದುರುತ್ತದೆ. ಎಲೆಗಳೂ ಉದುರುತ್ತದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. ಗದ್ದೆ ಬೇಸಾಯ ಮಾಡುವವರಿಗೆ ಬೇಸಾಯ ಕೈ ಹಿಡಿಯಬೇಕಿದ್ದರೆ ದಿನಾ ಗದ್ದೆಗೆ ಸುತ್ತು ಬರಬೇಕಂತೆ. ಅದಕ್ಕಾಗಿಯೇ ಗದ್ದೆಗೆ ಹುಣಿಯೂ ಇರುತ್ತದೆ. ಉತ್ತಮ ಬೇಸಾಯಗಾರರು ಬೆಳಗ್ಗಿನ ಹೊತ್ತು ಗದ್ದೆಗೆ…
ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….
ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …
ಸಕ್ಕರೆ ಖಾಯಿಲೆ, ಮಧುಮೇಹ, ಡಯಾಬಿಟಿಸ್ ಗೆ ರಾಮಬಾಣದಂತೆ ಕೆಲವು ಮನೆಮದ್ದುಗಳು ಕೆಲಸಮಾಡುತ್ತವೆ. ವೈದ್ಯರಿಗೆ ಖರ್ಚು ಮಾಡಿ ಚಿಕಿತ್ಸೆ ಮಾಡಿದರೂ ತಾತ್ಕಾಲಿಕ ಉಪಶಮನ ಮಾತ್ರ ಆಗುವ ಈ ಖಾಯಿಲೆಗೆ ಶಾಶ್ವತ ಪರಿಹಾರ ಕೊಡುವಲ್ಲಿ ಈ ಔಷಧಿ ಸಹಾಯಕ. ಇದಕ್ಕೆ ಖರ್ಚು ಇಲ್ಲ. ಮನೆಯಲ್ಲಿ ನಾವೇ ತಯಾರಿಸಿಕೊಳ್ಳಬಹುದು. ಸಕ್ಕರೆ ಖಾಯಿಲೆ ಬರುವುದು ರಕ್ತದಲ್ಲಿ ಇನ್ಸುಲಿನ್ ಎಂಬ ಹಾರ್ಮೋನ್ ನ ಉತ್ಪಾದನೆ ಕಡಿಮೆಯಾಗಿ. ಕೆಲವರಿಗೆ ಎಳೆ ಪ್ರಾಯದಲ್ಲಿ ಈ ಸಮಸ್ಯೆ ಉಂಟಾಗುತ್ತದೆ. ಹೆಚ್ಚಿನವರಿಗೆ 50 ವಯಸ್ಸು ದಾಟಿದ ನಂತರ ಪ್ರಾರಂಭವಾಗುತ್ತದೆ. ಅಪರೂಪವಾಗಿ…
ಸಸ್ಯಗಳು ಪೋಷಕಾಂಶಗಳನ್ನು ಬೇರಿನ ಮೂಲಕ ಹೀರಿಕೊಳ್ಳುತ್ತವೆ. ಬೇರಿನ ಸಾಂದ್ರತೆ, ಮತ್ತು ಅವುಗಳ ಹೀರಿಕೊಳ್ಳುವ ಸಾಮರ್ಥ್ಯದ ಮೇಲೆ ಪೋಷಕಗಳು ಬೆಳೆಗೆ ಲಭ್ಯವಾಗುತ್ತದೆ. ಎಲೆಗಳಿಗೆ ಗೊಬ್ಬರ ಸಿಂಪರಣೆ ಎಂಬುದು ಒಂದು ಶಾರ್ಟ್ಕಟ್.ಇಲ್ಲಿ ಬೇರುಗಳ ಸ್ಥಿತಿ ಹೇಗೂ ಇರಲಿ, ಒಮ್ಮೆಗೆ ಸಸ್ಯಕ್ಕೆ ಪೋಷಕಗಳು ಲಭ್ಯವಾಗಿ ಲವಲವಿಕೆ ಉಂಟಾಗುತ್ತದೆ. ಹಲವಾರು ಸಸ್ಯ ಪೋಷಕಾಂಶಗಳನ್ನು ಎಲೆ ಮತ್ತು ಕಾಂಡಗಳ ಮೂಲಕ ಬೆಳೆಗಳಿಗೆ ಒದಗಿಸಬಹುದು. ಈ ರೀತಿ ಎಲೆ ಮತ್ತು ಕಾಂಡಗಳ ಮೇಲೆ ಸಿಂಪಡಿಸಿದಾಗ ಸಸ್ಯಗಳು ಅವನ್ನು ಹೀರಿಕೊಂಡು ಉಪಯೋಗಿಸುತ್ತವೆ. ಸಸ್ಯ ಪೋಷಕಾಂಶಗಳನ್ನು ಪ್ರತ್ಯೇಕವಾಗಿಯೂ ಅಥವಾ…
ಅಡಿಕೆ ಗಿಡ ನೆಡುವುದು ಹೊಸತಾಗಿ ತೋಟ ಮಾಡುವುದನ್ನು ಸಧ್ಯಕ್ಕೆ ನಿಲ್ಲಿಸಿ. ಮುಂದಿನ ವರ್ಷ ಸೂಪರ್ ಎಲ್ ನೀನೋ ಸನ್ನಿವೇಶದ ಇರುವುದರಿಂದ ಬರಗಾಲ ಸಾಧ್ಯತೆ ಇದೆ. ಹಾಗಾಗಿ ಖರ್ಚು ಮಾಡಿ ಅಡಿಕೆ ತೋಟ ಮಾಡಿ ಕೈ ಸುಟ್ಟುಕೊಳ್ಳಬೇಡಿ. ಈ ತನಕ ಬಂದ ಎಲ್ ನೀನೋ ಸನ್ನಿವೇಶಕ್ಕಿಂತ ಇದು ಬಲವಾದದ್ದು. ಹಾಗಾಗಿ ಕುಡಿಯುವ ನೀರಿಗೂ ತೊಂದರೆ ಉಂಟಾಗಬಹುದು. ಎಲ್ಲರಿಗೂ ಅಡಿಕೆ ತೋಟ ಮಾಡುವ ಹುಮ್ಮಸ್ಸು. ಈಗ ಇರುವ ತೋಟದ ವಿಸ್ತೀರ್ಣವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳುವ ಉತ್ಸಾಹ ಕೆಲವರದ್ದಾದರೆ ಇನ್ನು ಕೆಲವರು ಹೊಸತಾಗಿ…
ಹಸು ಗಂಡು ಕರು ಹಾಕಿತೆಂದರೆ ತಲೆಬಿಸಿ ಮಾಡಿಕೊಂಡು ಅದನ್ನು ತರಾತುರಿಯಲ್ಲಿ ಕಸಾಯಿಗೆ 500-1000ರೂ. ಗಳಿಗೆ ಮಾರಬೇಡಿ. ಅದರಿಂದ ತಿಂಗಳಿಗೆ 1500 ರೂ. ಆದಾಯ ಇದೆ ಎಂದರೆ ನಂಬುತ್ತೀರಾ? ನಿಜವಾಗಿಯೂ ಇದೆ. ಒಂದು ಗಂಡು ಕರು ದಿನಕ್ಕೆ ಒಂದು ಬುಟ್ಟಿ ಗೊಬ್ಬರ ತಯಾರಿಸುತ್ತದೆ. ಇಷ್ಟು ಗೊಬ್ಬರವನ್ನು ನಾವು ಖರೀದಿಸುವುದೇ ಆದರೆ ಅದಕ್ಕೆ ರೂ.50 ಕೊಡಬೇಕು. ನಾವೇ ಅದನ್ನು ಸಾಕಿದರೆ ಕೊಡುವ ರೂ.50 ಉಳಿಯುತ್ತದೆ. ವಾರ್ಷಿಕ 18,000 ರೂ. ಗಳ ಗೊಬ್ಬರ ನಮ್ಮಲ್ಲೇ ಉತ್ಪಾದಿಸಬಹುದು. ಬಹಳ ಜನ ಗಂಡು ಕರು…
ಅಲಸಂಡೆ ಬೆಳೆಗೆ ಸಸ್ಯ ಹೇನು ಎಂಬ ಕೀಟ ಭಾರೀ ಸಮಸ್ಯೆಯನ್ನು ಉಂಟು ಮಾಡುತ್ತದೆ. ಇದರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಂಡರೆ ಅಧಿಕ ಲಾಭದ ಸರ್ವ ರೂತು ತರಕಾರಿ ಎಂದರೆ ಅಲದಂಡೆ. ಈ ಕೀಟವನ್ನು ರಾಸಾಯನಿಕವಾಗಿ, ಜೈವಿಕವಾಗಿ ಹಾಗೆಯೇ ರಾಸಾಯನಿಕ ಬಳಸದೆ ಯಾವ ಯಾವ ವಿಧಾನದಲ್ಲಿ ನಿಯಂತ್ರಣ ಮಾಡಬಹುದು ಎಂಬುದನ್ನು ನೋಡೋಣ. ಅಲಸಂಡೆ ಮಳೆಗಾಲದಲ್ಲಿ – ಚಳಿಗಾಲದಲ್ಲಿ ಬೇಸಿಗೆಯಲ್ಲಿ ಬೆಳೆಯಬಹುದಾದ ಉತ್ತಮ ತರಕಾರಿ ಬೆಳೆಯಾಗಿದ್ದು ಈ ಬೆಳೆಗೆ ಬರುವ ಪ್ರಮುಖ ಕೀಟ ಹೇನು. ಈ ಹೇನು ಎಲೆಗಳಿಗೆ ಬಾಧಿಸಿ…
ಇಲ್ಲಿ ತೋರಿಸಿದ ದಾಳಿಂಬೆ ಹಣ್ಣು ನೋಡಲು ಆಕರ್ಷಕವಾಗಿಲ್ಲ. ಹಾಗಾಗಿ ಉಚಿತವಾಗಿ ಕೊಟ್ಟರೂ ಕೊಳ್ಳುವುದಕ್ಕೆ ಗಿರಾಕಿ ಇಲ್ಲ. ಇದನ್ನು ಹಣ್ಣು ಮಾರುವ ಅಂಗಡಿ,ಸೂಪರ್ ಮಾರ್ಕೆಟ್ ನಲ್ಲಿ ಮಾರಲಿಕ್ಕಾಗುವುದಿಲ್ಲ. ಇದನ್ನು ರೈತರ ಹೊಲದಿಂದ ಕೊಳ್ಳುವವರೂ ಇಲ್ಲ. ಇದನ್ನು ಉಚಿತವಾಗಿ ಕೊಟ್ಟಂತೆ ರೈತರು ಮಾರಬೇಕು. ರಸ್ತೆ ಬದಿಯಲ್ಲಿ ಮಂದ ಬೆಳಕಿನಲ್ಲಿ ಅಗ್ಗ- ಭಾರೀ ಅಗ್ಗ ಎಂದು ಬೊಬ್ಬೆ ಹಾಕಿ ಮಾರಾಟ ಮಾಡಬೇಕು. ಇದು ನಮ್ಮ ಮನೋಸ್ಥಿತಿ. ಕೃಷಿಕರಿಗೆ ಗ್ರಾಹಕರು ಅತೀ ಮುಖ್ಯ. ಗ್ರಾಹಕ ಎಂದರೆ ಬಳಕೆದಾರ. ರೈತ ಬೆಳೆ ಬೆಳೆಯುವಾಗ ಬಳಕೆದಾರರ…
ತೆಂಗಿನ ಮರ, ಗಿಡಗಳಿಗೆ ಇತ್ತೀಚೆಗೆ ಕೆಂಪು ಮೂತಿ ಕೀಟದ ಹಾವಳಿ ಭಾರೀ ಹೆಚ್ಚಾಗುತ್ತಿದೆ. ರೈತರು ತೆಂಗು ಬೆಳೆಯುವುದೇ ಅಸಾಧ್ಯ ಎನ್ನಲಾರಂಭಿಸಿದ್ದಾರೆ. ಹೀಗೇ ಮುಂದುವರಿದರೆ ರೈತರಿಗೆ ಸಸಿ ನೆಡುವುದೇ ಕೆಲಸವಾದರೂ ಅಚ್ಚರಿ ಇಲ್ಲ. ಇದನ್ನು ಸರಿಯಾಗಿ ಹದ್ದುಬಸ್ತಿಗೆ ತಾರದೆ ಇದ್ದರೆ ಮುಂದೆ ರೈತರು ತೆಂಗು ಬೆಳೆಸುವುದನ್ನೇ ಬಿಡುವ ಸ್ಥಿತಿ ಬಂದರೂ ಅಚ್ಚರಿ ಇಲ್ಲ. ಯಾವ ಕಾರಣಕ್ಕೆ ಈ ದುಂಬಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣ ಹೇಗೆ? ತೆಂಗಿನ ಮರಗಳಿಗೆ ಬರುವ ಎಲ್ಲಾ ರೋಗಗಳಿಂದಲೂ, ಕೀಟಗಳಿಂದಲೂ ಪ್ರಭಲವಾದದ್ದು ಕೆಂಪು ಮೂತಿ ದುಂಬಿ…