krushiabhivruddi

ತೆಂಗಿನ ಮರಗಳು

ತೆಂಗಿನ ಮರಕ್ಕೆ ಈಗ ಹಾಕಿದ ಗೊಬ್ಬರದಿಂದ ಇಳುವರಿ ಸಿಗುವುದು ಯಾವಾಗ?

ಹೆಚ್ಚಿನ ರೈತರು ಹೇಳುವುದುಂಟು, ಈ ವರ್ಷ ನಾವು  ತೆಂಗಿನ ಮರಕ್ಕೆ ಸಾಕಷ್ಟು ಗೊಬ್ಬರ ಕೊಟ್ಟಿದ್ದೇವೆ. ಮುಂದಿನ ವರ್ಷ  ಫಸಲು ಹೆಚ್ಚಬಹುದು ಎಂದು.  ಆದರೆ ವಾಸ್ತವಿಕತೆ ಬೇರೆಯೇ ಇದೆ. ಈ ವರ್ಷ ಹಾಕಿದ ಗೊಬ್ಬರದ ಫಲದಲ್ಲಿ ಮುಂದಿನ ವರ್ಷ ಇಳುವರಿಯಲ್ಲಿ  ದೊರೆಯುವುದಿಲ್ಲ. ಅದು ದೊರೆಯುವುದು ಮುಂದಿನ 32 ತಿಂಗಳ ನಂತರ. ತೆಂಗಿನ ಮರದ ಕಾಂಡದಲ್ಲಿ ಹುಟ್ಟುವ  ಅದರ ಹೂ ಗೊಂಚಲು ಮೊನ್ನೆ ಮೊನ್ನೆಮೂಡಿದ್ದು ಎಂದು ತಿಳಿಯದಿರಿ. ಇದರೆ ಹುಟ್ಟು,(Innitiation)  ಸುಮಾರು ಮೂರು ವರ್ಷಗಳ ಹಿಂದೆಯೇ ಆಗಿರುತ್ತದೆ. ಆಗಲೇ ಅದರಲ್ಲಿ…

Read more
Suresh nayak on his farm

ರೈತರ ಉದ್ದಾರಕ್ಕೆ ಇದೊಂದೇ ಪರಿಹಾರ.

ರೈತನೊಬ್ಬ ತಾನು ಬೆಳೆದ ಉತ್ಪನ್ನವನ್ನು ತಾನೇ ಮಾರಿ ಸಮಾನ ಮನಸ್ಕರಿಗೂ ಮಾರುಕಟ್ಟೆ ಒದಗಿಸಿಕೊಟ್ಟಿರುವುದು ಬಹುಷಃ  ಇನ್ನೆಲ್ಲೂ ಇರಲಿಕ್ಕಿಲ್ಲ. ಇದು ಈ ಹಿಂದೆಯೂ ಆದ ಉದಾಹರಣೆ ಇಲ್ಲ. ಇದೊಂದು ಹೊಸ ಪರಿಕಲ್ಪನೆ. ಕೊರೋನಾ ಮಹಾಮಾರಿ ದೇಶದ ಅಸಂಖ್ಯಾತ ಜನರಿಗೆ ಬಾರೀ ತೊಂದರೆಯನ್ನು ಉಂಟು ಮಾಡಿತು. ಉದ್ದಿಮೆಗಳು ಮುಚ್ಚಿದವು. ಕೆಲಸಗಾರರು ಕೆಲಸ ಕಳೆದುಕೊಂಡರು. ರೈತರು ಬದುಕಿಗಾಗಿ ಬೆಳೆದ ಬೆಳೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎಂಬಂತಾಯಿತು. ಇಂತಹ ಸಂದರ್ಭದಲ್ಲಿ  ಒಬ್ಬ ಕೃಷಿಕ ಮಾಡಿದ ಸಾಧನೆ  ಮಾತ್ರ ಕೃಷಿಕರೆಲ್ಲರಿಗೂ ಅನುಕರಣೀಯ. ಹಿರಿಯಡ್ಕದ…

Read more

ಬಾಳೆಗೆ 50% ಗೊಬ್ಬರ ಕಡಿಮೆ ಮಾಡಬಹುದಾದ ವಿಧಾನ.

ಬಾಳೆ ಬೆಳೆಗೆ ಅತ್ಯಧಿಕ ಪೋಷಕಾಂಶಗಳು ಬೇಕು. ಇದು ಕಡಿಮೆ  ಸಮಯದಲ್ಲಿ ದಷ್ಟ ಪುಷ್ಟವಾಗಿ ಬೆಳೆಯುವ ಸಸ್ಯವಾದ ಕಾರಣ ಅಷ್ಟೇ ಪೋಷಕಗಳು ಬೇಕಾಗುತ್ತವೆ. ನಾವು ಕೊಡುವ ಎಲ್ಲಾ ಪೋಷಕಗಳೂ  ಮೊದಲ ಬೆಳೆಗೇ ಬಳಕೆಯಾಗದೆ ಸ್ವಲ್ಪ ಬಾಳೆಯ ಅಂಗಾಂಶಗಳಲ್ಲಿ ಉಳಿದುಕೊಂಡಿರುತ್ತದೆ. ಅದನ್ನು ಸದುಪಯೋಗಮಾಡಿಕೊಂಡರೆ  ಮುಂದಿನ ಕೂಳೆ ಬೆಳೆ ಉತ್ತಮವಾಗಿರುತ್ತದೆ. ಕಂದುಗಳೂ ಆರೋಗ್ಯವಾಗಿರುತ್ತವೆ.   ಎಲ್ಲಾ ಬೆಳೆಗಳೂ ತಮ್ಮ ಬೆಳೆವಣಿಗೆಗೆ ಬಳಕೆ ಮಾಡಿದ ಪೋಷಕಗಳನ್ನು  ಪೂರ್ಣವಾಗಿ  ಉಪಯೋಗಿಸಿಕೊಂಡಿರುವುದಿಲ್ಲ. ಸ್ವಲ್ಪ ಪ್ರಮಾಣದಲ್ಲಿ ಅದು ಎಲೆಗಳಲ್ಲಿ ಉಳಿದಿರುತ್ತದೆ. ಅದು ಉದುರಿ ಬಿದ್ದಾಗ ಅದರ ಜೊತೆಗೆ…

Read more
ತೆಂಗಿನ ಮರ ಏರುವ ಇಲಿ ನಿಯಂತ್ರಣ ವಿಧಾನ

ತೆಂಗಿನ ಮರಕ್ಕೆ ಇಲಿ ಕಾಟವೇ- ಇದು ಪರಿಹಾರ?

ತೆಂಗಿನ ಮರದ ಮೇಲೆ ಹೋಗಿ ಇಲಿ ಪಾಶಾಣ ಇಡಲಿಕ್ಕೆ ಆಗುವುದಿಲ್ಲ. ಮರ ಏರಿ ಇಲಿ ಕೊಲ್ಲಲಿಕ್ಕೆ ಆಗುವುದಿಲ್ಲ.  ಇಲಿಗಳು ಹಾಳು ಮಾಡುವ ಎಳೆ ಕಾಯಿಗಳನ್ನು ನೋಡಿದರೆ ಮಾತ್ರ ಬೆಳೆದವರಿಗೆ  ಬಹಳ ನಷ್ಟ. ಇಲಿಗಳನ್ನು ಕಾದು ಕುಳಿತುಕೊಳ್ಳಲು ಆಗುತ್ತದೆಯೇ? ಇಲ್ಲ. ಇದನ್ನು  ಕೆಲವು ಉಪಾಯಗಳಿಂದಲೇ  ನಿಯಂತ್ರಿಸಬೇಕು. ನಮ್ಮ ರೈತರ ತಲೆಯಲ್ಲಿ ಕೆಲವು  ಸಣ್ಣ ಸಣ್ಣ ಯೋಚನೆಗಳು ಇರುತ್ತವೆ. ಇದರ ಅನುಕೂಲ ಮಾತ್ರ  ಬಹಳ ದೊಡ್ಡದು. ಇತ್ತೀಚೆಗೆ ನಮ್ಮಲ್ಲಿ ಇಂತಹ ಯುಕ್ತಿಗಳನ್ನು ತಿಳಿದವರು ತುಂಬಾ ಕಡಿಮೆಯಾಗುತ್ತಿದ್ದಾರೆ. ಇಂತಹ ಹಿರಿಯರು ನಮ್ಮೊಂಡನೆ…

Read more

ಹೀಗೆ ಮಾಡಿದರೆ ನೀರು ತುಂಬಾ ಕಡಿಮೆ ಸಾಕು.

ಕೆಲವು ಮಣ್ಣಿನಲ್ಲಿ  ಮಳೆ ಬಂದರೆ  ನೀರು ವಾರಗಟ್ಟಲೆ  ಆರುವುದೇ ಇಲ್ಲ. ಬಿಸಿಲು ಬಂದರೆ  ನೆಲ ಟಾರು ರಸ್ತೆ  ತರಹ. ಇಂತಲ್ಲಿ   ಇಬ್ಬನಿ ರೂಪದಲ್ಲಿ ಬಿದ್ದ ನೀರೂ ಸಹ ಪೋಲಾಗದೆ ಬೆಳೆಗೆ ದೊರೆಯುವಂತಾಗಲು ರೈತರು ಕಂಡುಕೊಂಡ ವಿಧಾನ ಉಸುಕು ಹಾಕುವಿಕೆ.   ಕಪ್ಪು ಹತ್ತಿ ಮಣ್ಣು  ಒಂದು ಮಳೆ ಬಂದರೆ ಅಂಟು ಅಂಟಾಗುತ್ತದೆ. ಇದಕ್ಕೆ ಮಳೆ ಹನಿ ಬಿದ್ದಾಗ ಮಣ್ಣು ಕರಗಿ ಹೋಗುತ್ತದೆ. ನೀರು ಕಡಿಮೆಯಾದಾಗ ಮಣ್ಣು ಒಡೆದು ಹೂಗುತ್ತದೆ. ರಾಜ್ಯದಲ್ಲಿ  ಬಿಜಾಪುರ, ಗದಗ, ನರಗುಂದ ಧಾರವಾಡದ ಕೆಲ…

Read more

ತೆಂಗಿನ ಗಿಡ ಯಾಕೆ ಫಲಕೊಡುವುದಿಲ್ಲ.

ತೆಂಗಿನ ಸಸಿಗಳಲ್ಲಿ ಗಿಡ್ದ, ಎತ್ತರದ ತಳಿಗಳು ಎಂಬ ಎರಡು ಬಗೆ. ಗಿಡ್ಡ ತಳಿಗಳು ನಾಟಿ ಮಾಡಿ ಮೂರು ವರ್ಷಕ್ಕೆ ಹೂ ಗೊಂಚಲು ಬಿಟ್ಟರೆ ಎತ್ತರದ ತಳಿ ನಾಟಿ ಮಾಡಿ 5  ವರ್ಷಕ್ಕೆ ಹೂಗೊಂಚಲು ಬಿಡುವುದು ವಾಡಿಕೆ. ಕೆಲವೊಮ್ಮೆ ಇದು ತಡವಾಗಬಹುದು, ಬೇಗವೂ ಆಗಬಹುದು. ಆದರೆ ಕೆಲವು ಮರಗಳು ತಮ್ಮ ಜೀವನ ಪರ್ಯಂತ ಇಳುವರಿ ಕೊಡುವುದೇ ಇಲ್ಲ. ಕಾರಣ ಅದರ ವಂಶ ಗುಣ. ತೆಂಗಿನ ಸಸಿ ಇಳುವರಿ ಪ್ರಾರಂಭಿಸುವುದಕ್ಕೆ ತಳಿ ಗುಣದ ಜೊತೆಗೆ ಆರೈಕೆಯೂ ಅಗತ್ಯ. ಪ್ರಾರಂಭಿಕ ಆರೈಕೆ…

Read more

ಭೂ ತಾಯಿ ಮುನಿದಿದ್ದಾಳೆ- ನಾವೆಲ್ಲಾ ಒಟ್ಟಾಗಿ ಪ್ರಾರ್ಥಿಸೋಣ.

ಪ್ರತೀ ವರ್ಷ ಎಪ್ರೀಲ್ 22 ದಿನವನ್ನು ಜಾಗತಿಕ ಭೂಮಿಯ ದಿನ ಎಂದು ಆಚರಿಸಲಾಗುತ್ತದೆ. ಪ್ರತೀ ವರ್ಷ ಒಂದೊಂದು ಧ್ಯೇಯಗಳನ್ನು ಇಟ್ಟುಕೊಂಡು ಈ ದಿನವನ್ನು ವಿಶೇಷ ಪ್ರಾತಿನಿಧ್ಯ ಕೊಟ್ಟು ಆಚರಿಸಲಾಗುತ್ತದೆ. ಈ ವರ್ಷ ಹವಾಮಾನ ಬದಲಾವಣೆಯಂತಃ ಗಂಭೀರ ಸಮಸ್ಯೆಯನ್ನು ಮುಂದಿಟ್ಟುಕೊಂಡು ಅದನ್ನು ಆಚರಿಸಲಾಗುತ್ತದೆ. ಬಹುಷಃ ಈ ವರ್ಷದ  ಆಚರಣೆಗೆ ಪ್ರಕೃತಿಯ ಅಸಮಾಧಾನ ಏನೋ ಇದ್ದಂತಿದೆ. ಕೊರೋನಾ ಎಂಬ ಮಹಾ ಮಾರಿ ರೂಪದಲ್ಲಿ ಮನುಕೂಲದ ಮೇಲೆ ಭೂ ತಾಯಿ ಮುನಿದಂತಿದೆ. ಜಗತ್ತೇ ಮನುಕುಲ ಕಾಣದ ಅನಾಹುತದ ಸುಳಿಯಲ್ಲಿ ಸಿಕ್ಕಿಕೊಂಡಿದೆ. ಇದು…

Read more
ಕ್ಯಾಲ್ಸಿಯಮ್ ಸಮೃಧ ಕಬ್ಬು ಬೆಳೆ

ಕಬ್ಬು ಬೆಳೆಗೆ ಕ್ಯಾಲ್ಸಿಯಂ ಪೋಷಕ ಅಗತ್ಯ.

ಕ್ಯಾಲ್ಸಿಯಂ ಎಲ್ಲಾ ಸಸ್ಯಗಳ ಬೆಳವಣಿಗೆ ಮುಖ್ಯವಾದ ಆಹಾರವಾಗಿದೆ. ಇದು ಮಣ್ಣು ಹಾಗು ಬೆಳೆಯಲ್ಲಿನ ಹುಳಿ ಆಂಶವನ್ನು ತಟಸ್ಥ ಮಾಡುವುದು.  ಕಬ್ಬಿನ ಬೆಳೆಗೆ ಕ್ಯಾಲ್ಸಿಯಂ ಅಥವಾ ಸುಣ್ಣವನ್ನು ಹಾಕುವುದರಿಂದ ಇಳುವರಿ ಹೆಚ್ಚುತ್ತದೆ. ಕಬ್ಬಿನ ಗುಣಮಟ್ಟ ಉತ್ತಮವಾಗುತ್ತದೆ.ಮಣ್ಣಿನ ಗುಣವೂ ಉತ್ತಮವಾಗುತ್ತದೆ. ಯಾವುದೇ ಬೆಳೆ ಇರಲಿ ಅದಕ್ಕೆ ಬರೇ ಮುಖ್ಯ ಪೋಷಕಾಂಶಗಳಾದ ಸಾರಜನಕ , ರಂಜಕ ಮತ್ತು ಪೊಟ್ಯಾಶ್ ಮಾತ್ರ ಸಾಲದು. ಈ ಮೂರು ಪೋಷಕಗಳು ಸಮರ್ಪಕವಾಗಿ ಬೆಳೆಗೆ ದೊರೆಯಲು ದ್ವಿತೀಯ ಪೋಷಕಾಂಶಗಳಾದ ಕ್ಯಾಲ್ಸಿಯಂ, ಮೆಗ್ನೀಶಿಯಂ ಮತ್ತು ಗಂಧಕ ಅಂಶ ಬೇಕು. …

Read more

ವಾಂದಾ ತಂದೀತೇ ಅಡಿಕೆ ಬೆಲೆಗೆ ಕುತ್ತು?.

ಅಡಿಕೆಯ ವ್ಯವಹಾರದಲ್ಲಿ 90% ಕ್ಕೂ ಹೆಚ್ಚು ಮುಂಗಡ ಹಣ ಪಡೆಯದೇ  ನಡೆಯುತ್ತದೆ. ಅಡಿಕೆ ಹೋಗುತ್ತದೆ, ದುಡ್ಡು ಬರುವು  ದು  ನಂತರ. ಮಾರುಕಟ್ಟೆ ಸರಿಯಿಲ್ಲ.  ಸೇಟು ಊರಿಗೆ ಹೋದ ಕಾರಣ ಹಣದ ಅಡಚಣೆ. ಮುಂತಾದ ಮಾತುಗಳನ್ನು ಕೇಳಿದ್ದೀರಲ್ಲಾ. ಅದೇ ಮಾಲು ಕಳುಹಿಸಿ ಅವರಿಂದ ಹಣ ಪಡೆಯುವಾಗ ನಡೆಯುವ ವಾಂದಾ ವ್ಯವಹಾರ. ವಾಂದಾ ಎಂದರೆ ತಕರಾರು. ಮಾಲು ಹೋದ ನಂತರ ತಕರಾರು ಮಾಡುವವರಿಗೆ ಸಾಕಷ್ಟು ಅವಕಾಶಗಳಿರುತ್ತವೆ. ಈ ತಕರಾರು ಮಾರುಕಟ್ಟೆಯನ್ನು ಬಹಳ ಅಲ್ಲಾಡಿಸುತ್ತದೆ. ಅದು ಮುಂದೆ ಅಡಿಕೆ ಮಾರುಕಟ್ಟೆ ತೆರೆಯುವ…

Read more

ಪ್ರಪಂಚದಲ್ಲೇ ಇದು ಅಧ್ಬುತ– ಮಿಡಿ ಮಾವು.

ಅಪ್ಪೆ ಮಿಡಿ ಒಂದು ಸುಗಂಧಿತ ಮಾವು. ಇದು ಬೆಳೆಯುವುದು ಹೊಳೆ ದಂಡೆಯಲ್ಲಿ. ಅದಕ್ಕಾಗಿ ಈ ಮಾವಿಗೆ ಹೊಳೆಸಾಲು ಅಪ್ಪೆ ಎಂಬ ಹೆಸರು. ಇದು ನಮ್ಮ ರಾಜ್ಯದ ಮಲೆನಾಡಿನ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಮಾತ್ರ ಕಂಡು ಬರುತ್ತದೆ. ಇದರ ಮಿಡಿಯ ಉಪ್ಪಿನ ಕಾಯಿ ಅಲ್ಲದೆ ಕೆಲವು ಖಾದ್ಯಗಳು ಸರ್ವಶ್ರೇಷ್ಟ. ಮಿಡಿ ಉಪ್ಪಿನ ಕಾಯಿ ಸವಿಯುವುದೇ ಅದರೆ, ಅಪ್ಪೆ ಮಿಡಿಯ ಸವಿಯನ್ನು ಒಮ್ಮೆ ನೋಡಿ. ಅದೂ ಮಲೆನಾಡಿನ ಕೆಲವು ಪಾಕಶಾಸ್ತ್ರಜ್ಞರ ಕೈಯಲ್ಲಿ ಮಾಡಿದ್ದೇ ಆಗಬೇಕು. ಮಾವಿನ ಮಿಡಿ ಒಯ್ದು ಉಪ್ಪಿನ…

Read more
error: Content is protected !!