ಸಾಗುವಾನಿ (ತೇಗ)ಮರದ ಗೆಲ್ಲು ಕಡಿದರೆ ಏನಾಗುತ್ತದೆ?

ಮರಮಟ್ಟುಗಳಲ್ಲಿ ಚಿನ್ನದ ಮರವೆಂದೇ ಖ್ಯಾತವಾದ ಸಾಗುವಾನಿ (ತೇಗ) ಮರವನ್ನು ನೇರವಾಗಿ ಬೆಳೆಯಲಿ ಎಂದೋ, ಇತರ ಉದ್ಡೆಶಗಳಿಗಾಗಿಯೋ ಗೆಲ್ಲು ಸವರುತ್ತೇವೆ. ಗೆಲ್ಲು ಸವರುವುದರಿಂದ ಮರದ ಗುಣಮಟ್ಟ ಏನಾಗುತ್ತದೆ ಎಂಬುದರ ಪೂರ್ಣ ಮಾಹಿತಿ. ಬಹಳ ಜನ ನಮ್ಮ ಹಲಸಿನ ಮರ ಸಾಗುವಾನಿ ಮರ ಹೆಬ್ಬಲಸಿನ ಮರದಲ್ಲಿ ಒಡಕು( ಬಿರುಕು) ಬಂದು ಯಾವುದಕ್ಕೂ ಆಗದಂತಾಯಿತು ಎಂದು ಹೇಳುತ್ತಾರೆ.  ಇದಕ್ಕೆ ಕಾರಣ ನಾವೇ ಹೊರತು ಮರ ಅಲ್ಲ. ಸಾಗುವಾನಿ ಇರಲಿ, ಇನ್ಯಾವುದೇ ನಾಟಾ ಉದ್ದೇಶದ ಮರಮಟ್ಟುಗಳು  ಇರಲಿ ನಾವು ತಿಳಿದೋ ತಿಳಿಯದೆಯೋ  ಗೆಲ್ಲುಗಳನ್ನು…

Read more
ಸಾಗುವಾನು ಮರದ ಬುಡದ ಮಣ್ನು -soil of teak tree base

ಸಾಗುವಾನಿ ಮರದ ಬುಡದ ಮಣ್ಣು ಬಂಗಾರ.

ನಿಮ್ಮಲ್ಲಿ ಸಾಗುವಾನಿ ಮರ ಇದೆಯೇ , ಅದರ ಬುಡದಲ್ಲಿ ಬಿದ್ದ ತರಗೆಲೆಯ ಅಡಿಯ ಮಣ್ಣನ್ನು ಒಮ್ಮೆ ಗಮನ ಇಟ್ಟು ನೋಡಿ. ಇದು ಫಲವತ್ತಾದ ರಸಸಾರ ತಟಸ್ಥ ಇರುವ ಮೆಕ್ಕಲು ಮಣ್ಣಾಗಿರುತ್ತದೆ. ಸಾಗುವಾನಿ ಮರದ ಎಲೆಗಳು ಮಣ್ಣನ್ನು ಫಲವತ್ತಾಗಿಸುತ್ತದೆ, ಹಾಗೆಯೇ ಮಣ್ಣಿನ pH  ಅನ್ನು ಸರಿಮಾಡಿಕೊಡುತ್ತದೆ. ಸಾಗುವಾನಿ ಮರದ ಬುಡದಲ್ಲಿ ಎಲ್ಲಾ ನಮೂನೆಯ ಸೂಕ್ಷ್ಮ ಜೀವಿಗಳು ಇರುತ್ತವೆ ಎಂಬುದಾಗಿ ಕೇರಳದ ಅರಣ್ಯ ಸಂಶೊಧಾನ ಸಂಸ್ಥೆಯ ವಿಜ್ಞಾನಿಗಳು ಹೇಳುತ್ತಾರೆ. ಇದರ ಎಲೆಯ ಗಾತ್ರ, ಅದರ ತೂಕ, ಅದು ಕರಗುವ ವೇಗ…

Read more
stump planted teak

ಸಾಗುವಾನಿ ಬೆಳೆಸಲು ಈ ಕಡ್ಡಿ ಸಾಕು.

ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ಒಂದು ಅರಣ್ಯ ಪ್ರದೇಶ ಎಂದೇ ಹೇಳಬಹುದು. ಇದು ಪಶ್ಚಿಮ ಘಟ್ಟದ ತಪ್ಪಲು. ಸ್ವಲ್ಪ ಮುಂದೆ ಹೋದರೆ ತಮಿಳುನಾಡಿನ ಗಡಿ. ಅದನ್ನು ದಾಟಿದರೆ  ಕರ್ನಾಟಕದ ಬಂಡೀಪುರ. ಈ ಬೆಟ್ಟ ಗುಡ್ಡಗಳ ಪ್ರದೇಶದುದ್ದಕ್ಕೂ ನೈಸರ್ಗಿಕವಾಗಿ ಬೆಳೆದ ಮರಮಟ್ಟುಗಳು, ನೆಟ್ಟು ಬೆಳೆಸಿದ ಸಾಗುವಾನಿಯ ಮರಮಟ್ಟುಗಳು, ಹೇರಳವಾಗಿ ಕಾಣಸಿಗುತ್ತವೆ. ಇಲ್ಲೆಲ್ಲಾ ಇರುವುದು ಸಾಗುವಾನಿ ( ತೇಗದ) ಬೇರು ತುಂಡು (stump) ನೆಟ್ಟ ಮರಗಳು. ಪ್ರಾರಂಭ: ಅದು ಬ್ರೀಟೀಷರ ಕಾಲ 1840 ರಲ್ಲಿ ಇವರು ತ್ರಿಕಾಲಿಯೂರು ದೇವಸ್ವಂ Thrikkaliyur…

Read more
ಹತ್ತಾರು ಲಕ್ಷ ಬೆಲೆಬಾಳುವ ಸಾಗುವಾನಿ ಮರ.

ಸಾಗುವಾನಿಯೂ ಶ್ರೀಗಂಧಕ್ಕೆ ಸಮನಾದ ಮರ.

ಶ್ರೀಗಂಧ ಚಿನ್ನ ಚಿನ್ನವೇ. ಆದರೆ ನಮಗೆ ಅದನ್ನು ಉಳಿಸಿ ಅನುಭವಿಸುವ ಭಾಗ್ಯ ಬೇಕು! ಶ್ರೀಗಂಧ ಬೆಳೆಸಿ ಕೋಟಿ ನಿರೀಕ್ಷೆಯಲ್ಲಿ ನಿರಂತರ ಜೇಬಿನಲ್ಲಿ ಕೆಂಡ ಇಟ್ಟುಕೊಂಡು ಜೀವನ ಕಳೆಯುವ  ಬದಲು ಇದ್ಯಾವುದರ ಭಯವೂ ಇಲ್ಲದೆ ಸಾಗುವಾನಿ ಬೆಳೆಸಿ ಬದುಕಬಹುದು. ಕೋಟಿಯಲ್ಲದಿದ್ದರೂ ಲಕ್ಷಾಂತರ ಆದಾಯ ಕೊಡಬಲ್ಲ ಬೆಳೆ ಸಾಗುವಾನಿ ಮರ. ಇದು ರೈತರೆಲ್ಲರ ಗಮನದಲ್ಲಿ ಇರಬೇಕು. ಸಾಗುವಾನಿ ಅರವನ್ನು ಯಾರೂ ಕದ್ದುಕೊಂಡು ಹೋದಾರು ಎಂಬ ಭಯ ಇಲ್ಲ. ನೀವು ಇಚ್ಚಿಸಿದವರಿಗೆ ಮಾರಬಹುದು. ಎಷ್ಟು ಬೆಳೆಯಿತೋ ಅಷ್ಟು ಮೌಲ್ಯ ಹೆಚ್ಚಾಗುತ್ತದೆ. ಅಸಾಮಾನ್ಯ…

Read more
ಸಾಗುವಾನಿ ಮರಗಳಲ್ಲಿ ಅತ್ಯಧಿಕ ಎಲೆಗಳು

ಸಾಗುವಾನಿ ಬೆಳೆದರೆ ಮಣ್ಣು ಫಲವತ್ತಾಗುತ್ತದೆ.

ಜೀವಾಣುಗಳಿಂದ ಸಮೃದ್ಧವಾದ ಮಣ್ಣು  ಇರುವುದು ಮಾನವನ ಹಸ್ತಕ್ಷೇಪ ಇಲ್ಲದ ಕಾಡಿನ ಮಣ್ಣು ಮತ್ತು ಸಾಗುವಾನು ಮರದ ಬುಡದ ಮಣ್ಣಿನಲ್ಲಿ. ಯಾಕೆಂದರೆ ಸಾಗುವಾನಿ ಮರದ ಎಲೆಗಳ ರಚನೆಯೇ ಹಾಗೆ. ಸಾಗುವಾನಿ ಮರದ ಬುಡದಲ್ಲಿ  ಬೇಸಿಗೆಯಲ್ಲಿ ನಡೆದುಕೊಂದು ಹೋದರೆ  ಚಕ್ಕುಲಿ  ಹುಡಿಯಾದ ಸದ್ದು ಕೇಳಿಸುತ್ತದೆ. ಮಳೆಗಾಲದಲ್ಲಿ ನಡೆದುಕೊಂಡು ಹೋದರೆ  ಜಾರಿ ಬೀಳಬಹುದು ಅಷ್ಟು ಪ್ರಮಾಣದ ಮೆಕ್ಕಲು ಮಣ್ಣು ಬುಡದಲ್ಲಿ ಸಂಗ್ರಹವಾಗಿರುತ್ತದೆ. ಇದು ಸಾಗುವಾನಿ ಮರದ ವೈಶಿಷ್ಟ್ಯ. ಸಾಗುವಾನಿ ಅಥವಾ ತೇಗದ ಮರ ಎಲ್ಲಾ ಪ್ರದೇಶಗಳಲ್ಲೂ ಬೆಳೆಯುವ ಮರಮಟ್ಟು. ಕೃಷಿ ಅರಣ್ಯವೂ…

Read more
error: Content is protected !!