ತರಹೇವಾರು ಸೌಂದರ್ಯದಕೀಟಗಳು

ಕೀಟಗಳ ಹಾವಳಿ ಹೆಚ್ಚುತ್ತಿರುವುದಕ್ಕೆ ಕಾರಣ ಏನು ಗೊತ್ತೇ?

ಪ್ರತೀಯೊಬ್ಬ ಕೃಷಿಕನೂ ತಪ್ಪದೇ ತಿಳಿದುಕೊಳ್ಳಬೇಕಾದ ಮಹತ್ವದ ವಿಚಾರ ಇದು. ರೈತರು ಕೀಟಗಳ ವಿರುದ್ಧ ಹೋರಾಡಲು ಕೀಟನಾಶಕಗಳ ಮೊರೆ ಹೋಗಿದ್ದಾರೆ. ಕೀಟನಾಶಕ ತಯಾರಕರು ರೈತರ ನೆರವಿಗೆ ಇದ್ದಾರೆ. ಕೀಟಗಳು ಪ್ರಾಭಲ್ಯ ಸಾಧಿಸುತ್ತಿವೆ.  ಇದಕ್ಕೆಲ್ಲಾ ಕಾರಣ ಎನು ಎಂಬುದು ಇಲ್ಲಿ ಹೇಳಲಿಚ್ಚಿಸುವ  ಮಹತ್ವದ ವಿಚಾರ. ಕೀಟಗಳ ಸಂತತಿ ಹೆಚ್ಚುತ್ತಾ ಇದೆ. ಕೀಟನಾಶಕಗಳಿಗೆ ಅವು ನಿರೋಧಕ ಶಕ್ತಿ ಪಡೆಯುತ್ತಿವೆ. ಕೀಟಗಳ ನಿಯಂತ್ರಣಕ್ಕೆ ಕೀಟನಾಶಕಗಳೇ ಇಲ್ಲದಿದ್ದಾಗ ಈ ಕೀಟಗಳು ಎಲ್ಲಿದ್ದವು. ಇವು ಹೊಸತಾಗಿ ಸೃಷ್ಟಿಯಾದವುಗಳೇ ಎಂಬೆಲ್ಲಾ ಸಂದೇಹಗಳು ಬರಬಹುದು. ಕೀಟಗಳು ನಾವು ಬೆಳೆ…

Read more
ಆಫ್ರಿಕನ್ ದೈತ್ಯ ಬಸವನ ಹುಳ

ಆಫ್ರಿಕನ್ ಬಸವನ ಹುಳುವಿನ ಅಪಾಯ-ನಿಯಂತ್ರಣ.

ಕೆಲವು ವರ್ಷಗಳ ಹಿಂದೆ ಶಿವಮೊಗ್ಗದ ಬಿದ್ರಳ್ಳಿಯಲ್ಲಿ ಕಂಡಿದ್ದ ಆಫ್ರಿಕನ್ ಬಸವನ ಹುಳ Giant African Snail (Lissachatina fulica) ಈಗ ಎಲ್ಲೆಡೆಯಲ್ಲೂ ಕಂಡು ಬರುತ್ತಿದೆ. ರೈತರ ಹೊಲದಲ್ಲಿ, ಮನೆ, ಶೆಡ್ ಎಲ್ಲೆಂದರಲ್ಲಿ ಈ ಹುಳ ಹರಿದಾಡುವ ಸ್ಥಿತಿ ಉಂಟಾಗಿದೆ. ಹಿಡುದು ಕೊಲ್ಲುತ್ತಾರೆ. ಮತ್ತೆ ಹುಟ್ಟುತ್ತಲೇ ಇದೆ. ಯಾವ ರೀತಿ ನಿಯಂತ್ರಣ ಎಂದೇ ಗೊತ್ತಾಗದೆ ಕಂಗಾಲಾಗಿದ್ದಾರೆ ರೈತರು ಮತ್ತು ಇತರ ಜನ ಸಮುದಾಯ. ಇವು ಮರದ ಮೇಲೆಲ್ಲಾ ಏರಿಕೊಂಡು ಕುಳಿತುಕೊಳ್ಳುತ್ತದೆ.ಹಗಲು ನಾಲ್ಕು- ಐದು ಇದ್ದರೆ, ಕತ್ತಾಲಾದರೆ ಮರದ ತುಂಬಾ,…

Read more
ಹಣ್ಣು ನೊಣ ಬಾಧೆಯಿಂದ ಹಾಳಾಗುವ ಹಾಗಲಕಾಯಿ

ಹಾಗಲಕಾಯಿ- ಹೀರೆಕಾಯಿ ಹಾಳಾಗುವುದಕ್ಕೆ ಕಾರಣ ಏನು ಗೊತ್ತೇ?

ನಾವೆಲ್ಲಾ ಬೆಳೆಸುವ ಹೀರೆಕಾಯಿ, ಹಾಗಲಕಾಯಿ, ಪಡುವಲ ಕಾಯಿ ಮುಳ್ಳು ಸೌತೆ ಹಾಳಾಗುವುದಕ್ಕೆ ಕಾರಣ ಒಂದು ನೊಣ. ಈ ನೊಣದ ಸಂತತಿ ಇತ್ತೀಚಿನ ದಿನಗಳಲ್ಲಿ ಬಹಳ ಹೆಚ್ಚಳವಾಗಿದ್ದು, ಯಾವುದೇ ಬೆಳೆಯನ್ನು ಬಿಡದ ಸ್ಥಿತಿ ಬಂದಿದೆ. ಹಿಂದೆ ಕೆಲವು ಸಿಹಿ ಹಣ್ಣು , ತರಕಾರಿಗಳಿಗೆ ಮಾತ್ರ ಇದ್ದ ಇದರ ಕಾಟ ಈಗ ಬಹುತೇಕ ಎಲ್ಲಾ  ತರಕಾರಿಗಳಿಗೂ ಬಂದಿದೆ. ತೊಂಡೆಯನ್ನೂ ಬಿಡುತ್ತಿಲ್ಲ. ಪಪ್ಪಾಯಿಯನ್ನೂ ಬಿಡುತ್ತಿಲ್ಲ.  ಇವುಗಳ ನಿಯಂತ್ರಣ ಒಂದು ಸಾಹಸವೇ ಆಗಿದೆ. ಹಣ್ಣು ನೊಣ Drosophila melanogaster  ಎಂದು ಕರೆಯಲ್ಪಡುವ  ಒಂದು…

Read more
ತೆಂಗಿನ ಸಸಿ ಆರೋಗ್ಯವಾಗಿದ್ದರೆ ಹೀಗೆ ಇರುತ್ತದೆ.

ತೆಂಗಿನ ಸಸಿ ಬೇಗ ಫಲಕೊಡಬೇಕಾದರೆ ಮಾಡಬೇಕಾದ ಅಗತ್ಯ ಕೆಲಸ.

ತೆಂಗಿನ ಸಸಿ ಹಾಗೂ ತಾಳೆ ಜಾತಿಯ ಎಲ್ಲಾ ಮರಗಳಿಗೂ ಕುರುವಾಯಿ ದುಂಬಿ ಕಾಟ ಇಲ್ಲದಿದ್ದರೆ, ಸಸಿ ಆರೋಗ್ಯವಾಗಿ ಬೆಳೆದು ಬೇಗ ಫಲ ಕೊಡುವುದರಲ್ಲಿ ಅನುಮಾನ ಇಲ್ಲ. ತೆಂಗು ಜಾತಿಯ ಮರಗಳಲ್ಲಿ ಒಂದೇ ಮೊಳಕೆ (Bud) ಇರುವುದು. ಇವುಗಳ ತಲೆ ಕಡಿದರೆ ಅವು ಮತ್ತೆ ಇತರ ಮರಗಳಂತೆ ಚಿಗುರಿ ಬೆಳೆಯಲಾರದು. ಆದರೆ ಇತರ ಮರ ಮಟ್ಟುಗಳ  ಎಲ್ಲಾ ಎಲೆ ಗೆಲ್ಲು ಕಡಿದರೂ ಅದು ಮತ್ತೆ ಚಿಗುರಿ ಬೆಳೆಯುತ್ತದೆ. ಆದ ಕಾರಣ ತೆಂಗಿನಂತಹ ಮರಗಳಿಗೆ ಎಲೆಯೇ ಆಧಾರ. ಕೆಲವು ಸಂದರ್ಭಗಳಲ್ಲಿ…

Read more

ಹೈನುಗಾರಿಕೆ- ನೊಣಗಳ ನಿಯಂತ್ರಣಕ್ಕೆ ಸುರಕ್ಷಿತ ಉಪಾಯ.

ಹಟ್ಟಿ, ಮನೆ, ಬೆಳೆ ಮುಂತಾದ ಕಡೆಗಳಲ್ಲಿ ತುಂಬಾ ಕಿರಿ ಕಿರಿ ಉಂಟುಮಾಡುವ ಹಾರುವ ಕೀಟಗಳ ನಿಯಂತ್ರಣಕ್ಕೆ ಈ ವ್ಯವಸ್ಥೆ ಯನ್ನು ಮಾಡಿಕೊಂಡರೆ ಯಾವ ಕೀಟನಾಶಕವೂ ಬೇಕಾಗಿಲ್ಲ. ಬಹುತೇಕ ರೈತರು ತಿಳಿದಿರುವಂತೆ ಹಾರುವ ಕೀಟಗಳನ್ನು ನಿಯಂತ್ರಿಸಲು ವಿಷ ರಾಸಾಯನಿಕ ಫಲಕೊಡುವುದಕ್ಕಿಂತ ಹೆಚ್ಚು, ಕೆಲವು ಉಪಾಯಗಳು ಫಲ ಕೊಡುತ್ತವೆ. ಹಾರುವ ನೊಣ, ಪತಂಗಗಳಿಗೆ ಕೀಟನಾಶಕ  ಸರಿಯಾಗಿ ತಗಲುವುದಿಲ್ಲ. ಅವು  ತಪ್ಪಿಸಿಕೊಳ್ಳುತ್ತವೆ. ಅವುಗಳನ್ನು ಬಂಧಿಸಲು ಕೆಲವು ಸುರಕ್ಷಿತ ಉಪಾಯಗಳಿವೆ. ಇದರ ಬಳಕೆಯಿಂದ ಯಾರಿಗೂ ಯಾವ ಹಾನಿಯೂ ಇರುವುದಿಲ್ಲ. ನಾವು ಯಾವಾಗಲೂ ಕೈಯಿಂದ…

Read more
Mite infection

ತರಕಾರಿ ಬೆಳೆಗಳಲ್ಲಿ ಎಲೆ ಮುರುಟುವುದಕ್ಕೆ ಸುರಕ್ಷಿತ ಪರಿಹಾರ.

ಚಳಿಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ಎಲೆ ಮುರುಟುವ ಸಮಸ್ಯೆಗೆ ಕಾರಣ ಏನು ಮತ್ತು ಸುರಕ್ಷಿತ ಪರಿಹಾರ ಯಾವುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ತರಕಾರಿ  ಬೆಳೆ ವಾಣಿಜ್ಯಿಕವಾಗಿ ಮಾಡಿದರೂ ಈ ಸಮಸ್ಯೆ ಇದೆ.  ಮನೆಬಳಕೆಗೆ ಬೇಕಾದಷ್ಟೇ ಮಾಡಿದರೂ ಈ ಸಮಸ್ಯೆ  ಬೆನ್ನು ಬಿಡುವುದಿಲ್ಲ. ತರಕಾರಿ ಬೆಳೆಗಳು ವಿಶೇಷವಾಗಿ ರಾಸಾಯನಿಕ ಮುಕ್ತವಾಗಿದ್ದರೆ ಬೆಳೆಗಾರರಿಗೂ ಒಳ್ಳೆಯದು. ಬಳಕೆದಾರರಿಗೂ  ಒಳ್ಳೆಯದು. ಕೃಷಿಕರು ಕೀಟನಾಶಕ ಬಳಸುವುದರಿಂದ ಮೊದಲಾಗಿ ದೊಡ್ಡ ದುಷ್ಪರಿಣಾಮ ಉಂಟಾಗುವುದು ಸಿಂಪಡಿಸಿದವರಿಗೆ. ಅದನ್ನು ಉಸಿರಾಡಿದವರಿಗೆ, ಮೈಗೆ ಕೈಗೆ ತಾಗಿಸಿಕೊಂಡವರಿಗೆ ಪ್ರಾಥಮಿಕ…

Read more
border crops to pest attraction

ಕೀಟಗಳ ನಿಯಂತ್ರಣಕ್ಕೆ ಇದು ಸುರಕ್ಷಿತ ವಿಧಾನ.

ಕೀಟನಾಶಕ ಬಳಕೆಯಿಂದ ತಿನ್ನುವವರಿಗಿಂತ ಬಳಸುವವರಿಗೆ ತೊಂದರೆ ಜಾಸ್ತಿ. ಅದ ಕಾರಣ ಸಾಧ್ಯವಾದಷ್ಟು ಅದರ ಬಳಕೆ ಕಡಿಮೆ ಮಾಡಿ.  ಬಲೆ ಬೆಳೆ ಎಂದರೆ ಒಂದು ಬೆಳೆಗೆ ಬರುವ ಕೀಟವನ್ನು ಮತ್ತೊಂದು ಬೆಳೆಯ ಮೂಲಕ ಆಕರ್ಷಿಸುವುದು. ಮತ್ತು ಮುಖ್ಯ ಬೆಳೆಯನ್ನು ರಕ್ಷಿಸುವುದು.ಎಲ್ಲದಕ್ಕೂ ಕೀಟ  ನಾಶಕ ಪರಿಹಾರ ಅಲ್ಲ. ಅದು ಸಮಂಜಸ ಪರಿಹಾರವೂ ಅಲ್ಲ.  ಸುಲಭದಲ್ಲಿ  ಕೊಯ್ಯುವುದು ಸಾಧ್ಯವಿದ್ದರೆ ಅದರಿಂದಲೇ  ಕೊಯಿಲು ಮಾಡಬೇಕು. ಅಲ್ಲಿಗೆ ಕೊಕ್ಕೆ ಬೇಡ. ನಾವು ಈಗ ಕೊಕ್ಕೆ ಅನಿವಾರ್ಯವಾದಂತೆ  ವರ್ತಿಸುತ್ತೇವೆ. ಹುಳ ಬಿದ್ದಿದೆ ಯಾವ ಕೀಟ ನಾಶಕ…

Read more
hibiscus flower

ತೋಟದ ಬೇಲಿಯಲ್ಲಿ ದಾಸವಾಳ ನೆಟ್ಟರೆ ಭಾರೀ ಅನುಕೂಲ.

ಹಿಂದಿನವರು ತಮ್ಮ ಅಡಿಕೆ ತೋಟದ ಬೌಂಡ್ರಿಯ ಸುತ್ತ ದಾಸವಾಳದ ಗಿಡ ನೆಡುತ್ತಿದ್ದರು. ಇದರ ಹಿಂದೆ ಸಾಕಷ್ಟು ವೈಜ್ಞಾನಿಕತೆ ಅಡಗಿದೆ.  ವಿಟ್ಲ, ಪುತ್ತೂರು, ಸುಳ್ಯ , ಕಾಸರಗೋಡು, ಹಾಗೆಯೇ ಶ್ರಿಂಗೇರಿ, ಕೊಪ್ಪ, ಸಾಗರ, ಶಿರಸಿ  ಕಡೆಯ  ಹಳೆಯ ಅಡಿಕೆ ಕೃಷಿಕರ ತೋಟದ ಸುತ್ತ ಬೇಲಿಗಳಲ್ಲಿ ದಾಸವಾಳದ ಸಸ್ಯ ಇರುತ್ತದೆ. ದಾಸವಾಳ ಸಸಿ ಬೆಳೆಸುವುದು ಸುಲಭ. ಅಂದಕ್ಕೆ ಹೂವೂ ಆಗುತ್ತದೆ. ಬೇಲಿ ಧೀರ್ಘ ಕಾಲದ ತನಕ ಹಾಳಾಗುವುದಿಲ್ಲ. ಇದು ಬೇಲಿ ಮಾಡುವವರಿಗೆ ತಿಳಿದಿರುವ ಸಂಗತಿ. ತಮ್ಮ ಹಿರಿಯರು ಇದನ್ನು ಅನುಸರಿಸುತ್ತಿದ್ದರು….

Read more
snail

ಅಡಿಕೆ ಮರದ ಸಿಂಗಾರ ತಿನ್ನುವ ಸಿಂಬಳದಹುಳು ನಿಯಂತ್ರಣ

ಸಿಂಬಳದ ಹುಳುವಿನ ಉಪಟಳ ಇಬ್ಬನಿ ಬೀಳುವ ಚಳಿಗಾಲದಲ್ಲಿ ಹೆಚ್ಚು. ಈ ಹುಳುಗಳು ನೆಲದಲ್ಲಿ ಇರುತ್ತವೆ. ಅವು ಆಹಾರ ಹುಡುಕುತ್ತಾ ಮರವನ್ನು ಏರಿ ಅಲ್ಲಿ ಎಳೆ ಹೂ ಗೊಂಚಲನ್ನು ತಿನ್ನುತ್ತವೆ. ಬರೇ ಅಡಿಕೆ ಹೂ ಗೊಂಚಲು ಮಾತ್ರವಲ್ಲ ಇವು ಆಹಾರವಾಗಿ ಹಣ್ಣು ತರಕಾರಿಗಳನ್ನೂ ತಿನ್ನುತ್ತವೆ. ಇದನ್ನು ನಿಯಂತ್ರಿಸದೆ ಇದ್ದರೆ  ಒಂದೆರಡು ಸಿಂಗಾರ ಹಾಳಾಗುತ್ತದೆ. ಇಳುವರಿ ನಷ್ಟವಾಗುತ್ತದೆ. ಬಸವನ ಹುಳುಗಳು, ಸಿಂಬಳದ ಹುಳುಗಳು , ಮಳೆಗಾಲದಲ್ಲಿ ನೆಲದಲ್ಲಿ ಅಲ್ಲಲ್ಲಿ ಸಂಚರಿಸುತ್ತಾ ಇರುತ್ತವೆ. ಹಾವಸೆ ಇತ್ಯಾದಿಗಳು ಇದರ ಆಹಾರ. ಅದನ್ನು ತಿನ್ನುತ್ತಾ…

Read more
ಸಾಮಾನ್ಯವಾಗಿ ಎಲ್ಲಾ ಕಡೆಯಲ್ಲೂ ಇರುವ ಬಂಬು ಕೀಟ

ಈ ವಾಸನೆ ಕೀಟಗಳ ಹಾವಳಿಯಿಂದ ಪಾರಾಗುವುದು ಹೇಗೆ?

ಬಹುತೇಕ ಎಲ್ಲಾ ಬೆಳೆಗಳಿಗೂ ರಸ ಹೀರಲು ಒಂದು ತಿಗಣೆ ಪ್ರಭೇದದ ಕೀಟ ಬರುತ್ತದೆ. ಇದು ತರಕಾರಿಗಳು, ಭತ್ತ, ಮೆಣಸು ಮುಂತಾದವುಗಳಲ್ಲಿ ಕುಳಿತು ರಸ ಹೀರಿ ಗಣನೀಯ   ಬೆಳೆ ಹಾನಿ ಮಾಡುತ್ತವೆ. ಸಾಮಾನ್ಯ ಆಡು ಭಾಷೆಯಲ್ಲಿ ಇದನ್ನು ಬಂಬು ಕೀಟ ಎನ್ನುತ್ತಾರೆ. ಇವು ತಿಗಣೆಗಳು. ವಾಸನೆಯಿಂದ ಕುಡಿವೆ. ಹಾಸಿಗೆಯ ಎಡೆಗಳಲ್ಲಿ ವಾಸ ಮಾಡುವ ತಿಗಣೆಯಂತೆ ಇದು. ಇದು ರಸ ಹೀರಿದ ತರಕಾರಿ, ಹಣ್ಣು ಹಂಪಲುಗಳು ವಾಸನೆಯಿಂದ ಕೂಡಿರುತ್ತದೆ. ಕೈಯಲ್ಲಿ ಮುಟ್ಟಿದರೆ ಸಾಕು ಅಸಹ್ಯ ವಾಸನೆ ಕೊಡಬಲ್ಲ ಸಾವಿರಾರು ಬಗೆಯ…

Read more
error: Content is protected !!