ಸುಳಿ ಮುರುಟಿದ ಅಡಿಕೆ ಗಿಡ

ಅಡಿಕೆ ಸಸ್ಯಗಳು ಮುರುಟಿಕೊಳ್ಳುವುದೇಕೆ? ಪರಿಹಾರ ಏನು?

ಅಡಿಕೆ ಸಸ್ಯಗಳ ಸುಳಿ ಮುರುಟಿಕೊಳ್ಳುವಿಕೆ ಮತ್ತು ಶಿರಭಾಗ ಬಾಗಿ ತಿರುಗುವಿಕೆ, ಗರಗಸ ಗಂಟು ಇವೆಲ್ಲಾ ಒಂದು ಶಾರೀರಿಕ ಸಮಸ್ಯೆಗಳು.ಕೆಲವು ಪ್ರಾಥಮಿಕ ಹಂತದಲ್ಲಿರುವವುಗಳನ್ನು ಸರಿಪಡಿಸಲು ಸಾಧ್ಯವಾಗುತ್ತದೆ. ಆದರೆ ಇದು ಸ್ವಲ್ಪ ನಿಧಾನ ಪ್ರಕ್ರಿಯೆ. ಗೊಬ್ಬರ ನಿರ್ವಹಣೆ ಮತ್ತು ಅಗತ್ಯ ಬೇಸಾಯ ಕ್ರಮದಲ್ಲೇ ಇದನ್ನು  ಸರಿಪಡಿಸಿಕೊಳ್ಳಲು ಸಾಧ್ಯ. ನೂರು ಅಡಿಕೆ ಮರಗಳಲ್ಲಿ ಕನಿಷ್ಟ 10 ಆದರೂ ಈ ತರಹ ಸುಳಿ ಮುರುಟುವುದು, ಗರಿ ಬಿಡಿಸಿಕೊಳ್ಳದೆ ಅಲ್ಲಿಗೆ ಗುಛ್ಛವಾಗುವುದು ಇರುತ್ತದೆ. ಇದಕ್ಕೆ ಪ್ರಾದೇಶಿಕ ಇತಿ ಮಿತಿ ಇಲ್ಲ. ಇದನ್ನು ಕೆಲವರು ಹಿಡಿ…

Read more
ಬಾಳೆ ಎಲೆ ವೈರಾಣು ರೋಗ ಚಿನ್ಹೆ- Virus diseae symptom

ಬಾಳೆಯ ಎಲೆ ಹೀಗೆ ಆದರೆ ಅದು ಯಾರಿಂದಲೂ ಸರಿಪಡಿಸಲು ಸಾಧ್ಯವಿಲ್ಲ..

ಬಾಳೆ ಹಾಗೆಯೇ ಇನ್ನೂ ಕೆಲವು ಬೆಳೆಗಳಲ್ಲಿ ವೈರಾಣು ರೋಗ ಬಂದಿತೆಂದರೆ ಅದನ್ನು ಉಳಿಸಿದರೆ ಬೇರೆ ಬಾಳೆಗೆ ಹರಡುತ್ತದೆ. ಇದನ್ನು  ಮುಂಚಿತವಾಗಿ ಗುರುತಿಸಿ ಅದನ್ನು ನಾಶ ಮಾಡುವುದರಲ್ಲೇ ಇರುವುದು ಬಾಳೆಯ ರೋಗ ಮುಕ್ತ ಬೇಸಾಯ ಕ್ರಮ. ನೀವು ನೆಟ್ಟ ಬಾಳೆಯ ಎಲೆಗಳು  ಸಹಜವಾಗಿ ಇರದೆ ಎಲೆಗಳ ಮೂಡುವಿಕೆ ಗುಚ್ಚದ ತರಹ ಆಗಿ, ಯಾವುದೂ ಪೂರ್ಣವಾಗಿ ಬಿಡಿಸಿಕೊಳ್ಳದಿದ್ದರೆ ಅದು ನಂಜಾಣು ರೋಗ. ಕೆಲವು ಎಲೆಗಳು ಸಹಜವಾಗಿ ಬಂದು ನಂತರ ಬರುವ ಎಲೆಗಳು ಶಕ್ತಿ ಕಳೆದುಕೊಂಡು ಹಳದಿಯಾಗಿ ಮೂಡಿತೆಂದರೆ ಅದು ಸಹ…

Read more
Only to the requred place spray weedicides

ಅನಿವಾರ್ಯ ಕಳೆಗಳಿಗೆ ಮಾತ್ರ ಕಳೆನಾಶಕ ಬಳಸಿ.

ಕಳೆಗಳು ನಿಜವಾಗಿಯೂ ನಿಮಗೆ ತೊಂದರೆದಾಯಕವೇ? ಬೇರೆ ಯಾವುದೇ ರೀತಿಯಲ್ಲಿ ಇದನ್ನು ನಿಯಂತ್ರಿಸಲಿಕ್ಕೆ ಆಗುವುದಿಲ್ಲವೇ ಹಾಗಿರುವ ಕಳೆಗಳನ್ನು ಆಯ್ಕೆ  ಮಾಡಿ ಅದೇ ಗುರಿಗೆ ಕಳೆ ನಾಶಕ ಬಳಸಿ ನಿಯಂತ್ರಣ ಮಾಡಿ. ಸುಲಭದಲ್ಲಿ ಒಮ್ಮೆ ಸ್ವಚ್ಚವಾಗುತ್ತದೆ ಎಂದು ಎಲ್ಲದಕ್ಕೂ ಹೊಡೆಯಬೇಡಿ.   ಮೊನ್ನೆ ಇದೇ ಪುಟದಲ್ಲಿ ಕಳೆನಾಶಕ ಬಳಸುವಾಗ ವಹಿಸಬೇಕಾದ ಮುನ್ನೆಚ್ಚರಿಕೆ ಬಗ್ಗೆ ಕೆಲವು ವಿಚಾರಗಳನ್ನು  ಹೇಳಲಾಗಿತ್ತು. ಕೆಲವರು ಇದರ ಬಗ್ಗೆ ಬಹಳ ವಿರೋಧ ವ್ಯಕ್ತಪಡಿಸಿದ್ದಾರೆ. ಇವರು ಲೇಖನವನ್ನು ಪೂರ್ತಿ ಓದಲಿಲ್ಲ ಎಂಬುದು ಸಸ್ಯವಾದರೂ, ಅವರ ಕಳಕಳಿ ಬಗ್ಗೆ ಮೆಚ್ಚುಗೆ…

Read more

ಅಡಿಕೆ ಬೆಳೆಗಾರರೇ- ಮೈಲುತುತ್ತೆ ಪರೀಕ್ಷೆ ಹೀಗೆ ಮಾಡಿ.

ಬೋರ್ಡೋ ದ್ರಾವಣ ತಯಾರಿಕೆಗೆ ಬಳಸುವ ಮೈಲುತುತ್ತೆ ಸರಿ ಇಲ್ಲದ ಕಾರಣ ಅಡಿಕೆ ಕೊಳೆರೋಗ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆಯೇ ಎಂಬ ಸಂಶಯ ಇದೆ. ಅದಕ್ಕೆ ಪುಷ್ಟಿ ಕೊಡುವಂತೆ  ಹಿಂದೆ ಕೆಲವೇ ಕೆಲವು ತಯಾರಿಕೆಗಳು ಇದ್ದರೆ ಈಗ ಹಲವಾರು ತಯಾರಕರು, ಹಲವಾರು ಬ್ರಾಂಡುಗಳು ಬಂದು ರೈತರಿಗೆ ಸಂಪೂರ್ಣವಾಗಿ ದ್ವಂದ್ವ ಉಂಟಾಗಿದೆ. ಈ ದ್ವಂದ್ವ ಬೇಡ. ನೀವೇ ಇದನ್ನು ಪರೀಕ್ಷಿಸಿ ಬಳಸಿ.  ಕಾಪರ್ ಸಲ್ಫೇಟ್ ಸರಬರಾಜುದಾರರ ಬಗ್ಗೆ ಅಂತರ್ ಜಾಲದಲ್ಲಿ ಹುಡುಕಿ. ಹಲವಾರು ಜನ ಇದನ್ನು ಒದಗಿಸುವರು ಸಿಗುತ್ತಾರೆ.ದರ ಸಮರವೂ ಇರುತ್ತದೆ….

Read more
ಶುಂಠಿ ಹೊಲ

ಶುಂಠಿ ಬೆಳೆಯ ಪ್ರಮುಖ ಕೀಟ ಮತ್ತು ನಿಯಂತ್ರಣ

ಶುಂಠಿ ಬೆಳೆಯನ್ನು ತುಂಬಾ ನಿಗಾ ವಹಿಸಿ ಬೆಳೆದರೆ ಮಾತ್ರ ಅದು ಕೈ ಹಿಡಿಯುತ್ತದೆ. ನಾಟಿಯಿಂದ ಬೆಳೆವಣಿಗೆ ತನಕ ಪ್ರತೀ ಹಂತದಲ್ಲೂ ತೀವ್ರ ನಿಗಾ ಬೇಕು. ಅಷ್ಟೇ ಗಮನವೂ ಬೇಕು. ಶುಂಠಿಯಲ್ಲಿ ಸಸಿ ಹಂತದಲ್ಲಿ ನಿತ್ಯ ಗಮನಿಸಬೇಕಾದುದು ಅದರ ಕೀಟ ಹಾವಳಿ.ಶುಂಠಿಗೆ ಕಾಂಡ  ಕೊರಕ ಹುಳಿವಿನ ತೊಂಡರೆ ಸಾಮಾನ್ಯವಾಗಿ ಎಲ್ಲಾ ಕಡೆಯಲ್ಲೂ ಕಂಡು ಬರುವ ಸಮಸ್ಯೆ. ಕಾಂಡ ಕೊರಕ ಹುಳು ಹೆಚ್ಚಾದರೆ ಬೆಳೆ ಗಣನೀಯವಾಗಿ ನಷ್ಟವಾಗುತ್ತದೆ. ಇದನ್ನು ನಿತ್ಯ ಗಮನಿಸಿ  ನಿರ್ವಹಣೆ ಮಾಡಬೇಕು. ಯಾವಾಗ ಹೆಚ್ಚು: ಕಾಂಡ ಕೊರಕ…

Read more
ಬೋರ್ಡೋ ದ್ರಾವಣ ಸಿಂಪಡಿಸಿದ ಮರ

ಬೋರ್ಡೋ ದ್ರಾವಣ ತಾಯಾರಿಕೆ ವಿಧಾನ ಇದು.

ಸುಣ್ಣ ಮತ್ತು ಮೈಲು ತುತ್ತೆಯನ್ನು ಸರಿಯಾದ ಪ್ರಮಾಣದಲ್ಲಿ ಮಿಶ್ರಣ ಮಾಡಿ ತಯಾರಿಸುವ ದ್ರಾವಣಕ್ಕೆ ಬೋರ್ಡೋ  ದ್ರಾವಣ (Bordeaux mixture )ಎಂದು ಹೆಸರು. ಇದು  ಕೊಳೆಯುವ ರೋಗಕ್ಕೆ ಕಾರಣವಾದ  ಶಿಲೀಂದ್ರದ ಬೀಜಾಣುಗಳನ್ನು ಮೊಳಕೆಯೊಡೆಯದಂತೆ  ಪ್ರತಿಬಂಧಿಸುವ ಶಕ್ತಿಯನ್ನು ಹೊಂದಿದೆ. ಪ್ರಾನ್ಸ್ ದೇಶದ ಬೊರ್ಡೋ ಎಂಬ ಪ್ರದೇಶದಲ್ಲಿ ದ್ರಾಕ್ಷಿ ತೋಟಗಳಲ್ಲಿ ಸಸ್ಯಾಣುಗಳಿಂದ ಉಂಟಾಗುವ ರೋಗವನ್ನು ನಿಯಂತ್ರಿಸಲು ಈ ಸಾಮಾಗ್ರಿಗಳ ಪಾಕವನ್ನು ಬಳಸಲಾಗುತ್ತಿತ್ತಂತೆ. ಅದನ್ನು ಮೈಸೂರು ಪ್ರಾಂತ್ಯದಲ್ಲಿ ಅಡಿಕೆ ಬೆಳೆಯುವ ಪ್ರದೇಶಗಳಲ್ಲಿ ಪರಿಚಯಿಸಿದವರು  ಲೆಸ್ಲಿ ಸಿ ಕೋಲ್ ಮನ್ Leslie Charles Coleman…

Read more

ಅಡಿಕೆ ಮರಗಳು ಹೀಗೆ ಯಾಕೆ ಆಗುತ್ತವೆ?

ಸಹಜ ಸ್ಥಿತಿಯಲ್ಲಿ ಅಡಿಕೆ ಮರದ ಗಂಟುಗಳು  ಒಂದೇ ನೇರಕ್ಕೆ  ಸುತ್ತು ಬಂದಿರಬೇಕು.ಆದರೆ  ಕೆಲವು ತೊಟಗಳಲ್ಲಿ ಕೆಲವು ಮರಗಳಲ್ಲಿ ಅದರ ಗಂಟು ವಿಚಿತ್ರವಾಗಿ ಗರಗಸದ ತರಹ ಬೆಳೆಯುತ್ತವೆ. ಇದ್ದು ರೋಗವೋ ಎಂಬ ಸಂದೇಹ ರೈತರಲ್ಲಿದೆ. ಇದು ರೋಗವಲ್ಲ.  ಪೊಷಕಾಂಶದ ಅಸಮತೋಲನ. ಗರಗಸ ಗಂಟು ಹೇಗೆ ಆಗುತ್ತದೆ? ಅದು 2005 ನೇ ಇಸವಿ. ಬಂಟ್ವಾಳ ತಾಲೂಕು, ಕಾಅವಳ ಮುಡೂರು ಗ್ರಾಮದ ಕೆದ್ದಳಿಕೆ ಗಣೇಶ್ ಭಟ್ ಇವರ ತೋಟಕ್ಕೆ  ಹೋಗಿದ್ದೆ. ಆಗ ಅವರು ತಮ್ಮ ಅಡಿಕೆ ಮರಗಳಿಗೆ ಕೊಡುತ್ತಿದ್ದ ಗೊಬ್ಬರ ಹರಳಿನ ಹಿಂಡಿ. ಹನಿ…

Read more
Carbaryl

ತಜ್ಞರು ಶಿಫಾರಸು ಮಾಡುವ ಮಾರುಕಟ್ಟೆಯಲ್ಲಿ ಇಲ್ಲದ ಕೀಟನಾಶಕ.

ಕೃಷಿ ತಜ್ಞರು ಹಲವು ಬಗೆಯ ಕೀಟ ನಿಯಂತ್ರಣಕ್ಕೆ ಈಗಲೂ ಕಾರ್ಬರಿಲ್  ಕೀಟನಾಶಕ ಶಿಫಾರಸು ಮಾಡುತ್ತಾರೆ. ಸುಮಾರು 8 ವರ್ಷಗಳಿಂದ ಇದು ಮಾರುಕಟ್ಟೆಯಿಂದ ನಾಪತ್ತೆಯಾಗಿದ್ದರೂ, ಇವರಿಗೆ ಈ ವಿಚಾರ ಗಮನಕ್ಕೇ ಬಂದಿಲ್ಲವೇನೋ. ಈಗಲೂ ಎಲ್ಲಾ ಪುಸ್ತಕಗಳಲ್ಲೂ ಇದನ್ನು ಶಿಫಾರಸು ಮಾಡುತ್ತಲೇ ಇದ್ದಾರೆ.   ಭಾರತ ಸರಕಾರದ ಕಿಸಾನ್ ಸಮ್ಮಾನ್ ಯೋಜನೆಯ ಎಲ್ಲಾ ಫಲಾನುಭಗಳಿಗೆ ವಾರ ವಾರವಾದರೂ ಕೃಷಿ ನಿರ್ಧೇಶಕರ ಮುಖಾಂತರ ಕೃಷಿ ಸಲಹೆಯ ಸಂದೇಶ ಬರುತ್ತದೆ. ಇದರಲ್ಲಿ ಕೀಟ ನಿಯಂತ್ರಣಕ್ಕೆ ಕಾರ್ಬರಿಲ್ ಸಿಂಪಡಿಸಿ ಎನ್ನುತ್ತಾರೆ. ಆದರೆ ಅದು ಮಾರುಕಟ್ಟೆಯಲ್ಲಿ ಇಲ್ಲವೇ…

Read more
ತೆಂಗಿನ ಮರ ಏರುವ ಇಲಿ ನಿಯಂತ್ರಣ ವಿಧಾನ

ತೆಂಗಿನ ಮರಕ್ಕೆ ಇಲಿ ಕಾಟವೇ- ಇದು ಪರಿಹಾರ?

ತೆಂಗಿನ ಮರದ ಮೇಲೆ ಹೋಗಿ ಇಲಿ ಪಾಶಾಣ ಇಡಲಿಕ್ಕೆ ಆಗುವುದಿಲ್ಲ. ಮರ ಏರಿ ಇಲಿ ಕೊಲ್ಲಲಿಕ್ಕೆ ಆಗುವುದಿಲ್ಲ.  ಇಲಿಗಳು ಹಾಳು ಮಾಡುವ ಎಳೆ ಕಾಯಿಗಳನ್ನು ನೋಡಿದರೆ ಮಾತ್ರ ಬೆಳೆದವರಿಗೆ  ಬಹಳ ನಷ್ಟ. ಇಲಿಗಳನ್ನು ಕಾದು ಕುಳಿತುಕೊಳ್ಳಲು ಆಗುತ್ತದೆಯೇ? ಇಲ್ಲ. ಇದನ್ನು  ಕೆಲವು ಉಪಾಯಗಳಿಂದಲೇ  ನಿಯಂತ್ರಿಸಬೇಕು. ನಮ್ಮ ರೈತರ ತಲೆಯಲ್ಲಿ ಕೆಲವು  ಸಣ್ಣ ಸಣ್ಣ ಯೋಚನೆಗಳು ಇರುತ್ತವೆ. ಇದರ ಅನುಕೂಲ ಮಾತ್ರ  ಬಹಳ ದೊಡ್ಡದು. ಇತ್ತೀಚೆಗೆ ನಮ್ಮಲ್ಲಿ ಇಂತಹ ಯುಕ್ತಿಗಳನ್ನು ತಿಳಿದವರು ತುಂಬಾ ಕಡಿಮೆಯಾಗುತ್ತಿದ್ದಾರೆ. ಇಂತಹ ಹಿರಿಯರು ನಮ್ಮೊಂಡನೆ…

Read more

ಮಂಗ-ಪಕ್ಷಿಗಳಿಂದ ಬೆಳೆ ರಕ್ಷಣೆ.

ಹಣ್ಣು ಹಂಪಲು  ಬೆಳೆಯಲ್ಲಿ  ಸುಮಾರು 50 % ಕ್ಕೂ ಹೆಚ್ಚು ಹಣ್ಣು ಹಕ್ಕಿ- ಬಾವಲಿ, ಮಂಗ, ಅಳಿಲು ನವಿಲು ಮತ್ತು ಪತಂಗಗಳಿಂದ ಹಾನಿಯಾಗುತ್ತದೆ. ಕೆಲವು ತಿಂದು ಹಾಳಾದರೆ ಮತ್ತೆ ಕೆಲವು ಗಾಯ ಮಾಡಿ  ಹಾಳು ಮಾಡುತ್ತವೆ. ಇದನ್ನು ತಡೆಯಲು ಇರುವ ಏಕೈಕ ಉಪಾಯ  ಬಲೆ ಹಾಕುವುದು.. ಬಲೆ ಹಾಕುವ ಪದ್ದತಿ ಸುಮಾರು 25-30 ವರ್ಷಗಳಿಂದ ದ್ರಾಕ್ಷಿ ಬೇಸಾಯದಲ್ಲಿ ಚಾಲ್ತಿಯಲ್ಲಿ  ಇತ್ತು. ಈಗ ಇದು ಬಹುತೇಕ ಹಣ್ಣಿನ ಬೆಳೆಗಳಲ್ಲಿ ಬಳಸಲ್ಪಡುತ್ತದೆ. ಬಲೆ ಇಲ್ಲದಿದ್ದರೆ ಹಣ್ಣೇ ಇಲ್ಲ. ಬೇಸಿಗೆಯಲ್ಲಿ ಬಹುತೇಕ…

Read more
error: Content is protected !!