ಮಾವಿನ ಕಾಯಿಗೆ ಈಗ ರೂ. 125, ಕಾರಣ ಅಕಾಲಿಕ ಮಾವು

ಮಾವಿನ ಕಾಯಿಗೆ ಈಗ ರೂ. 125, ಕಾರಣ ಅಕಾಲಿಕ ಮಾವು.

ಮಾರುಕಟ್ಟೆಯಲ್ಲಿ ಈಗ ತೋತಾಪುರಿ,ಆಪೂಸು ಮಾವಿನ ಕಾಯಿಗಳು ಕಿಲೋ 125 ಕ್ಕೂ ಹೆಚ್ಚಿನ ಬೆಲೆಗೆ ಮಾರಲ್ಪಡುತ್ತದೆ. ಯಾವುದೇ ಹಣ್ಣು ಹಂಪಲು, ತರಕಾರಿ  ಅಕಾಲಿಕವಾಗಿ   ಬೆಳೆದರೆ  ಅಧಿಕ ಲಾಭ. ಮಾವು ಸಹ ಹಾಗೆಯೇ. ಕರಾವಳಿಯ ಭಟ್ಕಳದಿಂದ ಮತ್ತು  ಕೋಲಾರ ಕಡೆಯಿಂದ ಈಗ ಮಾವಿನ ಕಾಯಿ ಗರಿಷ್ಟ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರುತ್ತಿದೆ. ಮಾವು ಒಂದು ಋತುಮಾನದ ಹಣ್ಣಿನ ಬೆಳೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ . ಬೇಸಿಗೆ ಕಾಲ ಮಾರ್ಚ್ ನಿಂದ ಜೂನ್ ತನಕ  ಮಾವಿನ ಪ್ರಮುಖ ಸೀಸನ್. ಈಗ…

Read more
ಮಾವಿನ ಹಣ್ಣು ಈ ರೀತಿ ಆದರೆ ಅದು ಕೊಳೆಯುವ ಪ್ರಾರಂಭಿಕ ಹಂತ

ಮಾವಿನ ಕಾಯಿ ಹಣ್ಣಾಗುವಾಗ ಕೊಳೆಯುವುದಕ್ಕೆ ಏನು ಕಾರಣ?

ಮಾವಿನ ಹಣ್ಣಿನ ತೊಟ್ಟಿನ ಭಾಗ ಮೊದಲು ಮೆತ್ತಗಾಗಿ ಕೊಳೆಯುತ್ತದೆ. ಹಣ್ಣು ಮೇಲ್ಮೈಯಲ್ಲಿ ಅಲ್ಲಲ್ಲಿ ತಪ್ಪು ಕಲೆಗಳಾಗಿ ಕೊಳೆಯುತ್ತದೆ.  ಮಾವಿನ ಹಣ್ಣು ನೋಡುವಾಗ ಅದನ್ನು ತಿನ್ನಲು ಹೇಸಿಗೆಯೆನಿಸುತ್ತದೆ. ಇದು ಯಾಕೆ ಹೀಗಾಗುತ್ತದೆ ಎಂಬುದರ ಬಗ್ಗೆ ಬಹಳಷ್ಟು ರೈತರಿಗೆ ಗೊತ್ತೇ ಇಲ್ಲ.  ಇದು ರಾಸಾಯನಿಕ ಬಳಸಿ ಬೆಳೆದರೂ ಆಗುತ್ತದೆ. ಸಾವಯವದಲ್ಲಿ ಬೆಳೆದರೂ ಆಗುತ್ತದೆ. ಇದನ್ನು ಕೆಲವು ಕ್ರಮಗಳ ಮೂಲಕ ನಿಯಂತ್ರಣ ಮಾಡಬಹುದು. ಇದು ಮಾವಿನ ಹಣ್ಣಿನ ಸೀಸನ್. ಕೆಲವರ ಮನೆಯಂಗಳದ ಮಾವಿನ ಮರದಲ್ಲಿ ಕಾಯಿ ಇದೆ. ಕೆಲವರು ಅಂಗಡಿಯಿಂದ ಒಯ್ಯುತ್ತಾರೆ. …

Read more
ಹೂವು ಬಿಟ್ಟ ಮಾವಿನ ಮರ

ಮಾವಿನ ಹೂವು ಉದುರದಂತೆ ರಕ್ಷಿಸುವ ವಿಧಾನ.

ಈ ವರ್ಷ ಮಾವಿನ ಮರಗಳೆಲ್ಲಾ ಹೂವು  ಬಿಟ್ಟಿವೆ. ಎಲ್ಲಾ ಹೂವು ಕಾಯಿಕಚ್ಚಿ ಕಾಯಿಯಾದರೆ ಮಾವಿನ ಮಾರುಕಟ್ಟೆಯೇ ಸಾಕಾಗದು. ಆದರೆ ಬಹುತೇಕ ಮಾವಿನ ಹೂವು ಉಳಿಯುವುದಿಲ್ಲ.  ರಕ್ಷಿಸಲು ಕೆಲವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ಮಾವಿನ ಮರದಲ್ಲಿ ಹೂ ಬಿಡುವ ಹಂತ ಬಹಳ ನಿರ್ಣಾಯಕ ಹಂತವಾಗಿದ್ದು, ದೊಡ್ಡ ದೊಡ್ಡ ಬೆಳೆಗಾರರರು  ಹೂ ಉಳಿದು ಕಾಯಿ ಹೆಚ್ಚಲು ಗರಿಷ್ಟ ಸಿಂಪರಣೆ ಮಾಡುತ್ತಾರೆ.ವಾಣಿಜ್ಯಿಕ ಮಾವು ಬೆಳೆಗೆ ಇದೆಲ್ಲಾ ಸರಿ. ಸಣ್ಣ ಸಣ್ಣ ಹಿತ್ತಲಿನ ಹಣ್ಣು ಹಂಪಲು ಮರವುಳ್ಳವರು ಹೂವು ಬಿಟ್ಟದ್ದನ್ನು ರಕ್ಷಿಸಿಕೊಳ್ಳುವ  ಉಪಾಯ…

Read more
ರತ್ನಗಿರಿ ಅಲ್ಫೊನ್ಸ್ ಹಣ್ಣು

ರತ್ನಗಿರಿ ಅಲ್ಫೋನ್ಸ್ ಮಾವು – ಹೇಗೆ ಬೆಳೆಯುತ್ತಾರೆ? ಯಾಕೆ ರುಚಿ?

ನಾವೆಲ್ಲಾ ರತ್ನಗಿರಿ ಅಲ್ಫೋನ್ಸ್ ಮಾವಿನ ಹಣ್ಣು ಕೇಳಿದ್ದೇವೆ. ಇದರ ರುಚಿಗೆ ಸರಿಸಟಿಯಾದ ಮಾವು ಬೇರೊಂದಿಲ್ಲ ಎಂಬ ಹೆಗ್ಗಳಿಕೆಯೂ ಇದೆ. ಭಾರತದಿಂದ ರಪ್ತು ಆಗುವ ಮಾವುಗಳ ಸಾಲಿನಲ್ಲಿ ಈ ಅಲ್ಫೋನ್ಸ್ ಹಣ್ಣೇ ಅತ್ಯಧಿಕ. ಮಹಾರಾಷ್ಟ್ರದಲ್ಲಿ ರತ್ನಗಿರಿ ಅಲ್ಫೋನ್ಸ್ ಬೆಳೆಯುವ ಜಾಗ ಹೇಗಿದೆ? ಹೇಗೆ ಬೆಳೆಯುತ್ತಾರೆ. ಯಾಕೆ ಅದು ರುಚಿಯಾಗಿರುತ್ತದೆ ಎಂಬುದರ ಎಲ್ಲಾ ಮಾಹಿತಿ ಇಲ್ಲಿ ಇದೆ. ಭೌಗೋಳಿಕ ಸ್ಥಿತಿಯು ಪ್ರತಿಯೊಂದು ಬೆಳೆಯ ಮೇಲೆ ತನ್ನದೇ ಆದ ಪ್ರಭಾವವನ್ನು ಬೀರುತ್ತದೆ. ಭೌಗೋಳಿಕ ಸ್ಥಿತಿಗತಿಗೆ ಸಮನಾಗಿರುವ ಇನ್ನೊಂದು ಪ್ರದೇಶದಲ್ಲಿ ಅದನ್ನು  ಬೆಳೆಸಿದರೆ…

Read more
ಸರಿಯಾದ ಸಮಯಕ್ಕೆ ಸಿಂಪರಣೆ ಮಾಡಿದಾಗ ಹೀಗೆ ಹೂ ಬಿಡುತ್ತದೆ

ಚಿಗುರು ಉಳಿಸಿದರೆ – ಮಾವು ಉತ್ತಮ ಫಲ ಕೊಡುತ್ತದೆ.

ವಾಣಿಜ್ಯಿಕವಾಗಿ ಮಾವಿನ ಬೇಸಾಯ ಮಾಡುವವರು  ಮಾವಿನ ಹಣ್ಣು ಬೆಳೆಯುವ ತನಕ ಕನಿಷ್ಟ  8-10 ಸಲ  ಕೀಟನಾಶಕ ರೋಗ ನಾಶಕ ಸಿಂಪಡಿಸುತ್ತಾರೆ. ಇದನ್ನು ಮಾಡದೇ ಇದ್ದರೆ  ಮಾವಿನ ಬೇಸಾಯವೇ ವ್ಯರ್ಥ. ಯಾವುದೇ ಒಂದು ಬೆಳೆಯನ್ನು ವಾಣಿಜ್ಯಿಕವಾಗಿ ಮಾಡುವಾಗ ಅದಕ್ಕೆ ಕೀಟಗಳು ರೋಗಗಳು ಹೆಚ್ಚು. ನಿಯಂತ್ರಣ ಕೈಗೊಳ್ಳದೇ ಇದ್ದರೆ ಅದರ ಹಾನಿ ಹೆಚ್ಚಾಗುತ್ತಾ ಇರುತ್ತದೆ. ಇಂತದ್ದರಲ್ಲಿ ಒಂದು ಮಾವಿನ ಚಿಗುರು ಕೊರಕ ಹುಳು. ಚಿಗುರು ಸಸ್ಯ ಬೆಳವಣಿಗೆಯ ಪ್ರಮುಖ ಹಂತ. ಅದಕ್ಕೆ ತೊಂದರೆ ಆದಾಗ ಸಸ್ಯ ಬೆಳವಣಿಗೆ ಕುಂಠಿತವಾಗಿ ,…

Read more
ಮಣಿಪುರದ ಸ್ಥಳೀಯ ಬಣ್ಣದ ಮಾವು

ಲಕ್ಷ ಬೆಲೆಯ ಮಾವು ಇರುವುದು ನಿಜವೇ? ಇಲ್ಲಿದೆ ನೈಜ ಮಾಹಿತಿ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಲಕ್ಷಾಂತರ ಬೆಲೆಯ ಮಾವಿನ ಹಣ್ಣಿನ ಬಗ್ಗೆ ಪ್ರಚಾರಗಳು ನಡೆಯುತ್ತಿದೆ. ವಾಸ್ತವವಾಗಿ ಮಾವಿನ ಹೊರತೊಗಟೆಯ ಬಣ್ಣ ಹೇಗಿದ್ದರೂ ಮಾವಿನ ರುಚಿ ಒಂದೇ ಆಗಿರುತ್ತದೆ. ರೈತರಿಗೆ ನೈಜ ವಿಷಯನ್ನು ತಿಳಿಸುವುದು ಅವಶ್ಯಕವಾಗಿದೆ. ಜನ ಯಾವುದಕ್ಕೆ ಬೇಡಿಕೆ ವ್ಯಕ್ತಪಡಿಸುತ್ತಾರೆಯೋ ಅದಕ್ಕೆ ಬೆಲೆ ಬರುತ್ತದೆ. ಕಲ್ಲಿನ ಚೂರು ವಜ್ರವೆನಿಸುವುದು ಅದಕ್ಕೆ ಮೌಲ್ಯ ಕಟ್ಟುವವರು ಇದ್ದಾಗ. ಹಾಗೆಯೇ ಇದು. ಗ್ರಾಹಕರು ಕೆಲವು ಆಕರ್ಷಕ ಬಣ್ಣ, ನೋಟಗಳಿಗೆ ಮಾರು ಹೋಗುತ್ತಾರೆ. ಅದಕ್ಕನುಸಾರವಾಗಿ ಅದಕ್ಕೆ ಬೇಡಿಕೆ, ಬೆಲೆ ಬರುತ್ತದೆ. ಮಾರುಕಟ್ಟೆಯಲ್ಲಿ ಲಭ್ಯವಿರುವ ಹಲವಾರು ಹಣ್ಣು…

Read more
ರತ್ನಗಿರಿ ಅಲ್ಫೊನ್ಸ್ ಹಣ್ಣು

ಮಾವು ಕೊಯ್ಯುವಷ್ಟು ಬೆಳೆದಿದೆಯೇ ? ಹೇಗೆ ತಿಳಿಯುವುದು?

ಮಾವಿನ ಕಾಯಿ ಕೊಯ್ಯುವಾಗ ಅದು ಸರಿಯಾಗಿ ಬೆಳೆದಿದ್ದರೆ ಅದರ ರುಚಿಯೇ ಭಿನ್ನ. ಕಾಯಿ ಕೊಯ್ಯುವಷ್ಟು ಬೆಳೆದಿದೆಯೇ ಇಲ್ಲವೇ ಎಂದು ತಿಳಿಯಲು ಸ್ವಲ್ಪ ಅನುಭವ ಬೇಕು. ಈ ಬಗ್ಗೆ ಮಾಹಿತಿ ಇಲ್ಲಿದೆ. ಈಗ ಮಾವಿನ ಕಾಯಿ ಮಾಗುವ ಸಮಯ. ಮಾವಿನ ಕಾಯಿ ಹೂ  ಬಿಟ್ಟು, ಮಾಗಿ ಹಣ್ಣಾಗಲು 3 ತಿಂಗಳು ಬೇಕು. ಈ ಅವಧಿಯನ್ನು ಕರಾರುವಕ್ಕಾಗಿ ಲೆಕ್ಕಾಚಾರ ಹಾಕಲು ಆಗದು. ಅದಕ್ಕಾಗಿ ಕೆಲವು ಕಣ್ಣಂದಾಜಿನ ಪರೀಕ್ಷೆಗಳು ಮತ್ತು ಯಾದೃಚ್ಚಿಕ ಪರೀಕ್ಷೆಗಳನ್ನು ಮಾಡಿ ಬಲಿತಿದೆಯೇ ಇಲ್ಲವೇ ಎಂದು ತಿಳಿಯಬಹುದು. ಎಳೆಯದಾದ…

Read more
ಉಪಚಾರ ಮಾಡಿ ಚೆನ್ನಾಗಿ ಹೂ ಬಿಟ್ಟ ಮಾವಿನ ಮರ.

ಮಾವಿನ ಮರದಲ್ಲಿ ಹೂ ಬರಲು ಇದನ್ನು ಮಾಡಬೇಕು.

ಮಾವಿನ ಮರದಲ್ಲಿ ಡಿಸೆಂಬರ್ ತಿಂಗಳಿಂದ ಪ್ರಾರಂಭವಾಗಿ ಫೆಬ್ರವರಿ ತನಕ ಹೂವಾಗುತ್ತದೆ. ಹೂವಾಗುವ ಸಮಯದಲ್ಲಿ  ಮರದ ಆರೋಗ್ಯ ಉತ್ತಮವಾಗಿರಬೇಕು. ಮುಖ್ಯವಾಗಿ ಮಾವಿನ ಹೂ ಬರುವ ಮೊಗ್ಗು (bud) ಭಾಗ ಆರೋಗ್ಯವಾಗಿದ್ದರೆ, ಅಂದರೆ ಕೀಟ , ರೋಗ ಸೋಂಕಿನಿಂದ ಮುಕ್ತವಾಗಿದ್ದರೆ, ಹೂ ಹೆಚ್ಚು ಬರುತ್ತದೆ. ಮುಂದೆ ಹೂವಿಗೆ ಬರುವ ಕೀಟಗಳೂ ಕಡಿಮೆಯಾಗುತ್ತವೆ. ಹೂವು ಉದುರುವುದು ಕಡಿಮೆಯಾಗಿ ಕಾಯಿ ಕಚ್ಚುವಿಕೆ ಹೆಚ್ಚುತ್ತದೆ. ಇದಕ್ಕೆ ಮರ ಚಿಗುರುವ ಮುಂಚೆ ಕೆಲವು ಉಪಚಾರಗಳನ್ನು ತಪ್ಪದೆ ಮಾಡಬೇಕು. ಗೇರು ಮರ ಚಿಗುರಿದರೆ ಅದರಲ್ಲಿ ಹೂ ಗೊಂಚಲು…

Read more
ಮಾವಿನ ಹಣ್ಣು

ರಾಸಾಯನಿಕ ಬಳಸದೆ ಹಣ್ಣು ಮಾಡುವ ಸರಳ ವಿಧಾನ

ಹೆಚ್ಚಾಗಿ ಮಾವಿನ ಕಾಯಿ ಹಣ್ಣು ಮಾಡಲು ಹಿಂದಿನಿಂದಲೂ ಕ್ಯಾಲ್ಸಿಯಂ ಕಾರ್ಬೇಟ್ ಎಂಬ ಅಪಾಯಕಾರೀ ವಸ್ತುವನ್ನು ಬಳಸಲಾಗುತ್ತಿತ್ತು. ಈಗ ಹಾಗಿಲ್ಲ. ಅದರ ಬದಲಿಗೆ  ಅರೋಗ್ಯಕ್ಕೆ ಹಾನಿ ಇಲ್ಲದ ಹಣ್ಣು ಮಾಡುವ ವಿಧಾನವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯವರು ಬೆಳೆಗಾರರಿಗೆ ತಿಳಿಸಿಕೊಟ್ಟಿದ್ದಾರೆ. ಇದನ್ನು ಬಹಳಷ್ಟು ಬೆಳೆಗಾರರು ಅಳವಡಿಸಿಕೊಂಡಿದ್ದಾರೆ. ನಮ್ಮ ರಾಜ್ಯದ ಮಾವಿನ ರಾಜದಾನಿ ಎಂದೇ  ಖ್ಯಾತವಾದ ಶ್ರೀನಿವಾಸಪುರದಿಂದ ಸಂಜೆ ಹೊತ್ತು ಲಾರಿಗೆ ಲೊಡ್ ಆದ ಮಾವು ಮರುದಿನ ತಲುಪಬೇಕಾದಲ್ಲಿಗೆ ತಲುಪುವಾಗ ಮೆತ್ತಗಾಗುತ್ತದೆ.  ಅದನ್ನು ಖರೀದಿಸಿವರು ಮರುದಿನ ಮಾರಾಟ ಮಾಡುವಾಗ ಬಣ್ಣ…

Read more
Kare Ishaad

ಉತ್ತರ ಕನ್ನಡದ ವಿಶೇಷ ಮಾವು- ಕರೇ ಈಶಾಡ್.

ಕುಮಟಾ ಅಂಕೋಲಾ ಮಧ್ಯೆ ಹೆಚ್ಚಿನವರ ಮನೆ ಬಾಗಿಲಿನಲ್ಲಿ ಒಂದೆರಡು ಮಾವಿನ ಮರ ಇದ್ದೇ ಇರುತ್ತದೆ. ಇಲ್ಲಿ ಜನ ಯಾವುದಾದರೂ ಮರ ಕಡಿದಾರು ಆದರೆ ಮನೆ ಹಿತ್ತಲಿನಲ್ಲಿರುವ ಕರೇ ಈಶಾಡ್ ಮಾವಿನ ಮರಕ್ಕೆ  ಕೊಡಲಿ ಇಡಲಾರರು. ಕಾರಣ ಇದು ಆ ಪ್ರದೇಶದ ಪ್ರಸಿದ್ದ ಮಾವಿನ ತಳಿ. ಜೊತೆಗೆ ಹಣ್ಣಿನ ಸೀಸನ್‍ನಲ್ಲಿ ಸ್ವಲ್ಪ ಉತ್ಪತ್ತಿ ತಂದುಕೊಡುವ ಬೆಳೆ.    ಕರೇ ಈಶಾಡ್ ಎಂಬುದು ಕುಮಟಾ ಅಂಕೋಲಾ ಮಧ್ಯದ ಪ್ರದೇಶಗಳಲ್ಲಿ ಬೆಳೆಯಲ್ಪಡುವ ಸ್ಥಳೀಯ ಮಾವಿನ ತಳಿ. ಸುಮಾರಾಗಿ ಮುಂಡಪ್ಪದ ಗಾತ್ರದಲ್ಲಿರುವ ಈ…

Read more
error: Content is protected !!