ಮಾವಿನ ಹಣ್ಣು

ರಾಸಾಯನಿಕ ಬಳಸದೆ ಹಣ್ಣು ಮಾಡುವ ಸರಳ ವಿಧಾನ

ಹೆಚ್ಚಾಗಿ ಮಾವಿನ ಕಾಯಿ ಹಣ್ಣು ಮಾಡಲು ಹಿಂದಿನಿಂದಲೂ ಕ್ಯಾಲ್ಸಿಯಂ ಕಾರ್ಬೇಟ್ ಎಂಬ ಅಪಾಯಕಾರೀ ವಸ್ತುವನ್ನು ಬಳಸಲಾಗುತ್ತಿತ್ತು. ಈಗ ಹಾಗಿಲ್ಲ. ಅದರ ಬದಲಿಗೆ  ಅರೋಗ್ಯಕ್ಕೆ ಹಾನಿ ಇಲ್ಲದ ಹಣ್ಣು ಮಾಡುವ ವಿಧಾನವನ್ನು ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯವರು ಬೆಳೆಗಾರರಿಗೆ ತಿಳಿಸಿಕೊಟ್ಟಿದ್ದಾರೆ. ಇದನ್ನು ಬಹಳಷ್ಟು ಬೆಳೆಗಾರರು ಅಳವಡಿಸಿಕೊಂಡಿದ್ದಾರೆ. ನಮ್ಮ ರಾಜ್ಯದ ಮಾವಿನ ರಾಜದಾನಿ ಎಂದೇ  ಖ್ಯಾತವಾದ ಶ್ರೀನಿವಾಸಪುರದಿಂದ ಸಂಜೆ ಹೊತ್ತು ಲಾರಿಗೆ ಲೊಡ್ ಆದ ಮಾವು ಮರುದಿನ ತಲುಪಬೇಕಾದಲ್ಲಿಗೆ ತಲುಪುವಾಗ ಮೆತ್ತಗಾಗುತ್ತದೆ.  ಅದನ್ನು ಖರೀದಿಸಿವರು ಮರುದಿನ ಮಾರಾಟ ಮಾಡುವಾಗ ಬಣ್ಣ…

Read more
Kare Ishaad

ಉತ್ತರ ಕನ್ನಡದ ವಿಶೇಷ ಮಾವು- ಕರೇ ಈಶಾಡ್.

ಕುಮಟಾ ಅಂಕೋಲಾ ಮಧ್ಯೆ ಹೆಚ್ಚಿನವರ ಮನೆ ಬಾಗಿಲಿನಲ್ಲಿ ಒಂದೆರಡು ಮಾವಿನ ಮರ ಇದ್ದೇ ಇರುತ್ತದೆ. ಇಲ್ಲಿ ಜನ ಯಾವುದಾದರೂ ಮರ ಕಡಿದಾರು ಆದರೆ ಮನೆ ಹಿತ್ತಲಿನಲ್ಲಿರುವ ಕರೇ ಈಶಾಡ್ ಮಾವಿನ ಮರಕ್ಕೆ  ಕೊಡಲಿ ಇಡಲಾರರು. ಕಾರಣ ಇದು ಆ ಪ್ರದೇಶದ ಪ್ರಸಿದ್ದ ಮಾವಿನ ತಳಿ. ಜೊತೆಗೆ ಹಣ್ಣಿನ ಸೀಸನ್‍ನಲ್ಲಿ ಸ್ವಲ್ಪ ಉತ್ಪತ್ತಿ ತಂದುಕೊಡುವ ಬೆಳೆ.    ಕರೇ ಈಶಾಡ್ ಎಂಬುದು ಕುಮಟಾ ಅಂಕೋಲಾ ಮಧ್ಯದ ಪ್ರದೇಶಗಳಲ್ಲಿ ಬೆಳೆಯಲ್ಪಡುವ ಸ್ಥಳೀಯ ಮಾವಿನ ತಳಿ. ಸುಮಾರಾಗಿ ಮುಂಡಪ್ಪದ ಗಾತ್ರದಲ್ಲಿರುವ ಈ…

Read more
ಅಧಿಕ ಸಾಂದ್ರದಲ್ಲಿ ಬೆಳೆದ ಬಾಳೆ ಗೊನೆಯ ನೋಟ

ಒಂದೆಕ್ರೆಯಲ್ಲಿ 2000 ಕ್ಕೂ ಹೆಚ್ಚಿನ ಬಾಳೆ ಬೆಳೆಸುವ ವಿಧಾನ.

ಬಾಳೆ ಬೇಸಾಯ ವಿಧಾನದಲ್ಲಿ ಅಧಿಕ ಇಳುವರಿ ಪಡೆಯಲು ಅನುಕೂಲವಾಗುವ ಹಲವಾರು  ಬೆಳೆ ತಾಂತ್ರಿಕತೆಗಳ ಬಗ್ಗೆ  ಸಂಶೋಧನೆಗಳು ನಡೆಯುತ್ತಿವೆ. ರೈತರೂ ಇದನ್ನು ಅಳವಡಿಸಿ ಯಶಸ್ವಿ ಯಾಗುತಿದ್ದಾರೆ.ಅದರಲ್ಲಿ ಒಂದು ಅಧಿಕ ಸಾಂದ್ರ ಬೇಸಾಯ. ಈ ವಿಧಾನದಲ್ಲಿ ಎಕ್ರೆಗೆ 1230  ರಿಂದ 2000 ಗಿಡಗಳ ತನಕ ಹಿಡಿಸುವ ತಾಂತ್ರಿಕತೆ  ಚಾಲ್ತಿಯಲ್ಲಿದೆ. ಇದರಲ್ಲಿ ಎಕ್ರೆಗೆ 45 ಟನ್ ನಿಂದ 70 ಟನ್ ತನಕವೂ ಇಳುವರಿ ಪಡೆಯಲು ಸಾಧ್ಯ. ಬಾಳೆಯ ಸಾಂಪ್ರದಾಯಿಕ ನಾಟಿ ವಿಧಾನದಲ್ಲಿ  ಗಿಡದಿಂದ ಗಿಡಕ್ಕೆ , ಸಾಲಿನಿಂದ   ಸಾಲಿಗೆ 6 ಅಡಿ ಅಂತರವನ್ನು ಪಾಲಿಸಲಾಗುತ್ತದೆ….

Read more

ಬಾಳೆ ಜೊತೆ ಮಿಶ್ರ ಬೆಳೆ – ಎಕ್ರೆಗೆ 5 ಲಕ್ಷದಷ್ಟು ಆದಾಯ.

ಬಾಳೆ 9-11 ತಿಂಗಳ ಬೆಳೆ. ಈ ಅವಧಿಯಲ್ಲಿ ಕೆಲವು ಲೆಕ್ಕಾಚಾರ ಹಾಕಿಕೊಂಡು ಮಿಶ್ರ  ಬೆಳೆಯನ್ನು ಬೆಳೆಸಲಿಕ್ಕಾಗುತ್ತದೆ. ಕೆಲವು ಬೆಳೆಗಳ ಜೊತೆಗೆ ಬಾಳೆ ಮಿಶ್ರ ಬೆಳೆಯೂ ಆಗುತ್ತದೆ. ಇದನ್ನು ಹಲವು ರೈತರು ಮಾಡುತ್ತಾರೆ.ಬಾಳೆ ನಾಟಿ ಮಾಡಿ 3-4 ತಿಂಗಳ ತನಕ ಮಧ್ಯಂತರದಲ್ಲಿ ಸಾಕಷ್ಟು ಬೆಳೆಕು ಇರುತ್ತದೆ. ಈ ಸಮಯದಲ್ಲಿ ಅಲ್ಪಾವಧಿ ಬೆಳೆಗಳನ್ನು ಎಡೆಯಲ್ಲಿ ಬೆಳೆಸಬಹುದು. ಕೆಲವು ಬೆಳೆಗಳನ್ನು ಮುಂಚೆಯೇ ಬೆಳೆಸಿ ಅದು ಕಠಾವಿಗೆ 3-4 ತಿಂಗಳು ಇರುವಾಗ ಬಾಳೆ ಹಾಕಿದರೆ ಅದನ್ನು ಕಠಾವು ಅಥವಾ ಒಕ್ಕಣೆ  ಮಾಡುವಾಗ ಅದರ…

Read more

ಅಂಜೂರ – ಒಣ ಭೂಮಿಗೆ ಲಾಭದ ಹಣ್ಣಿನ ಬೆಳೆ.

ಅಂಜೂರದ ಹಣ್ಣು ತಿಂದವನೇ ಬಲ್ಲ ಅದರ ರುಚಿ. ಬಹುಶಃ ಇದು ಸಕ್ಕರೆಗಿಂತಲೂ ಸಿಹಿಯಾದ ಹಣ್ಣು. ಸ್ವಲ್ಪ ತಿಂದರೂ ಸಾಕು ಎನ್ನಿಸುತ್ತದೆ. ಇದೊಂದು ತಾಜಾ ಮತ್ತು ಒಣಗಿಸಿ ಸಂಸ್ಕರಣೆಗೆ  ಸೂಕ್ತವಾದ ಹಣ್ಣು. ಬಹಳಷ್ಟು ಹಣ್ಣುಗಳಲ್ಲಿ ಹುಳಿ ಅಂಶ ( ಆಮ್ಲತೆ ಇದ್ದರೆ, ಇದರಲ್ಲಿ ಅದು ಇಲ್ಲವೇ ಇಲ್ಲ. ಪೌಷ್ಟಿಕಾಂಶ ಭರಿತ ಕೆಲವೇ ಕೆಲವು  ಹಣ್ಣುಗಳಲ್ಲಿ ಇದು ಇದು ಒಂದು. ಕರ್ನಾಟಕದ ಮೈಸೂರಿನ ಶ್ರೀರಂಗಪಟ್ಟಣದ   ಗಂಜಾಮ್ ಎಂಬ ಊರಿನ ಅಂಜೂರದ  ಹಣ್ಣು ಇತಿಹಾಸ  ಪ್ರಸಿದ್ದಿ. ಈಗ ಈ ಪ್ರದೇಶವಲ್ಲದೆ ಹೊಸ…

Read more

ಬಾಳೆಗೆ 50% ಗೊಬ್ಬರ ಕಡಿಮೆ ಮಾಡಬಹುದಾದ ವಿಧಾನ.

ಬಾಳೆ ಬೆಳೆಗೆ ಅತ್ಯಧಿಕ ಪೋಷಕಾಂಶಗಳು ಬೇಕು. ಇದು ಕಡಿಮೆ  ಸಮಯದಲ್ಲಿ ದಷ್ಟ ಪುಷ್ಟವಾಗಿ ಬೆಳೆಯುವ ಸಸ್ಯವಾದ ಕಾರಣ ಅಷ್ಟೇ ಪೋಷಕಗಳು ಬೇಕಾಗುತ್ತವೆ. ನಾವು ಕೊಡುವ ಎಲ್ಲಾ ಪೋಷಕಗಳೂ  ಮೊದಲ ಬೆಳೆಗೇ ಬಳಕೆಯಾಗದೆ ಸ್ವಲ್ಪ ಬಾಳೆಯ ಅಂಗಾಂಶಗಳಲ್ಲಿ ಉಳಿದುಕೊಂಡಿರುತ್ತದೆ. ಅದನ್ನು ಸದುಪಯೋಗಮಾಡಿಕೊಂಡರೆ  ಮುಂದಿನ ಕೂಳೆ ಬೆಳೆ ಉತ್ತಮವಾಗಿರುತ್ತದೆ. ಕಂದುಗಳೂ ಆರೋಗ್ಯವಾಗಿರುತ್ತವೆ.   ಎಲ್ಲಾ ಬೆಳೆಗಳೂ ತಮ್ಮ ಬೆಳೆವಣಿಗೆಗೆ ಬಳಕೆ ಮಾಡಿದ ಪೋಷಕಗಳನ್ನು  ಪೂರ್ಣವಾಗಿ  ಉಪಯೋಗಿಸಿಕೊಂಡಿರುವುದಿಲ್ಲ. ಸ್ವಲ್ಪ ಪ್ರಮಾಣದಲ್ಲಿ ಅದು ಎಲೆಗಳಲ್ಲಿ ಉಳಿದಿರುತ್ತದೆ. ಅದು ಉದುರಿ ಬಿದ್ದಾಗ ಅದರ ಜೊತೆಗೆ…

Read more

ಪ್ರಪಂಚದಲ್ಲೇ ಇದು ಅಧ್ಬುತ– ಮಿಡಿ ಮಾವು.

ಅಪ್ಪೆ ಮಿಡಿ ಒಂದು ಸುಗಂಧಿತ ಮಾವು. ಇದು ಬೆಳೆಯುವುದು ಹೊಳೆ ದಂಡೆಯಲ್ಲಿ. ಅದಕ್ಕಾಗಿ ಈ ಮಾವಿಗೆ ಹೊಳೆಸಾಲು ಅಪ್ಪೆ ಎಂಬ ಹೆಸರು. ಇದು ನಮ್ಮ ರಾಜ್ಯದ ಮಲೆನಾಡಿನ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಮಾತ್ರ ಕಂಡು ಬರುತ್ತದೆ. ಇದರ ಮಿಡಿಯ ಉಪ್ಪಿನ ಕಾಯಿ ಅಲ್ಲದೆ ಕೆಲವು ಖಾದ್ಯಗಳು ಸರ್ವಶ್ರೇಷ್ಟ. ಮಿಡಿ ಉಪ್ಪಿನ ಕಾಯಿ ಸವಿಯುವುದೇ ಅದರೆ, ಅಪ್ಪೆ ಮಿಡಿಯ ಸವಿಯನ್ನು ಒಮ್ಮೆ ನೋಡಿ. ಅದೂ ಮಲೆನಾಡಿನ ಕೆಲವು ಪಾಕಶಾಸ್ತ್ರಜ್ಞರ ಕೈಯಲ್ಲಿ ಮಾಡಿದ್ದೇ ಆಗಬೇಕು. ಮಾವಿನ ಮಿಡಿ ಒಯ್ದು ಉಪ್ಪಿನ…

Read more

ಬಾಳೆಯ ಕಾಂಡದ ಈ ರೋಗಕ್ಕೆ ಪರಿಹಾರ ಇದು.

ಬಾಳೆಯಲ್ಲಿ ಕಾಂಡ ಎಂಬುದು ಎಲೆಯ ಕವಚಗಳು ಪರಸ್ಪರ ಒತ್ತೊತ್ತಾಗಿ ಸೇರಿದಾಗ ಉಂಟಾಗುತ್ತದೆ. ಬಾಳೆಗೆ ಕಾಂಡ ಎಂಬುದು ಇಲ್ಲ. ಇದನ್ನು ಹುಸಿ ಕಾಂಡ ಎನ್ನುತ್ತಾರೆ. ಹುಸಿ ಕಾಂಡ ಉಂಟಾಗಬೇಕಾದರೆ  ಎಲೆಯ ತೊಟ್ಟಿನ ಭಾಗ (petiole)ಗಳು ಪರಸ್ಪರ ಅಂಟಿಕೊಂಡು ಬೆಳೆಯಬೇಕು. ಅದು ಬಿಚ್ಚಿಕೊಂಡಿದ್ದರೆ ಅದು ಒಂದು ರೋಗ. ಇದು ಒಂದು ನಂಜಾಣು ರೋಗದ ಲಕ್ಷಣ.  ಬಾಳೆ ಸಸ್ಯ 2-3 ತಿಂಗಳ ಬೆಳೆವಣಿಗೆಯಲ್ಲಿ ಇದು ಜಾಸ್ತಿ.   ಪ್ರಾರಂಭದಲ್ಲಿ ಎಲೆದಂಟು ಕಾಂಡದಿಂದ ಬೇರ್ಪಟ್ಟು ಕಾಂಡ ಸಪುರವಾಗುತ್ತಾ ಹೋಗುತ್ತದೆ. ಇಂತಹ ಬಾಳೆ ಕೆಲವೊಮ್ಮೆ…

Read more
rose apple red

ತಿನ್ನಲು ಸಿಗದ ಈ ಹಣ್ಣುಗಳು- ಏನು ಪರಿಹಾರ?

ಒಂದು ವರ್ಷ  ಈ ಹಣ್ಣುಗಳು ತಿನ್ನಲು ಸಿಕ್ಕರೆ ಮತ್ತೆ ಇಲ್ಲವೇ ಇಲ್ಲ. ರಾಶಿ ರಾಶಿ ಹಣ್ಣುಗಳಾಗುತ್ತವೆ. ಆದರೆ ಎಲ್ಲವೂ ಬುಡದಲ್ಲಿ ಬಿದ್ದು, ಹಾಳೇ ಆಗುವುದು. ಇದು ನಮ್ಮ ಬಹುತೇಕ ರೈತರಲ್ಲಿ ಇರುವ ರೋಸ್ ಆಪಲ್ ಹಾಗೂ ವುಡ್ ಆಪಲ್ ಎಂಬ ಬಹು ಬಗೆಯ ಬೇಸಿಗೆ ಹಣ್ಣುಹಂಪಲುಗಳ  ಗತಿ. ಇದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ವಿಧಾನ ಇಲ್ಲಿದೆ. ಇದು ಹಣ್ಣು ನೊಣದಿಂದ ಆಗುವ ತೊಂದರೆ , ಇದನ್ನು ಪ್ರಾರಂಭಿಕ ಹಂತದಲ್ಲಿ ಬಾರದಂತೆ ಮಾಡಿದರೆ ಸ್ವಲ್ಪ ಮಟ್ಟಿಗೆಯಾದರೂ ಉತ್ತಮ ಹಣ್ಣನ್ನು ಉಳಿಸಬಹುದು….

Read more
ಒಣ ದ್ರಾಕ್ಷಿ

ದ್ರಾಕ್ಷಿ ಬೆಳೆಗಾರ ಸಂಕಷ್ಟಕ್ಕೆ ಉತ್ತರ – ಒಣ ದ್ರಾಕ್ಷಿ.

ಮಣಕ ಅಥವಾ ಒಣ ದ್ರಾಕ್ಷಿ  ಮಾಡಿದರೆ ಅದನ್ನು ಹೆಚ್ಚು ಸಮಯದ ತನಕ ದಾಸ್ತಾನು ಇಟ್ಟು ಮಾರಾಟ ಮಾಡಬಹುದು. ಇದಕ್ಕೆ ಮಧ್ಯವರ್ತಿಗಳು, ದಾಸ್ತಾನುಗಾರರು, ಚಿಲ್ಲರೆ ಮಾರಾಟಗಾರರು ಬೇಕಾಗಿಲ್ಲ. ನೀವು  ಬುದ್ದಿವಂತರಾಗಿದ್ದರೆ ಆನ್ ಲೈನ್ ಮೂಲಕ ನೇರವಾಗಿ ಗ್ರಾಹಕರಿಗೆ  ಮಾರಾಟ ಮಾಡಬಹುದು. ಸರಕಾರ ದ್ರಾಕ್ಷಿ ಬೆಳೆಗಾರರ ಸಮಸ್ಯೆ ನಿವಾರಣೆಗೆ ವೈನರಿಯನ್ನು ಎಲ್ಲಾ ತೆರೆಯುವಂತೆ ಸೂಚಿಸಿದೆಯಂತೆ. ಈ ವೈನರಿಗಳು ಕೊಡುವ ಬೆಲೆ ಬರೇ ಜುಜುಬಿ. ಅದರ ಬದಲು ಮಣಕ ಮಾಡಿದರೆ ಲಾಭ ಹೆಚ್ಚು. ಉತ್ತರ ಕರ್ನಾಟಕದ ಬಿಜಾಪುರ, ಬಾಗಲಕೊಟೆಯ ದ್ರಾಕ್ಷಿ ಬೆಳೆಗಾರರು…

Read more
error: Content is protected !!