ಈ ಹಂತದಲ್ಲಿ ಥಿನ್ನಿಂಗ್ ಮಾಡಬೇಕು

ದ್ರಾಕ್ಷಿ ಥಿನ್ನಿಂಗ್ ಮಾಡಿ – ಗುಣಮಟ್ಟ ಹೆಚ್ಚಿಸಿ.

ದ್ರಾಕ್ಷಿ ಗೊಂಚಲಿನಲ್ಲಿ ಎಲ್ಲಾ ಒಂದೇ ಗಾತ್ರದ  ಹಣ್ಣುಗಳಿದ್ದರೆ ತುಂಬಾ ಆಕರ್ಷಕವಾಗಿರುತ್ತದೆ. ಅದು ಉತ್ತಮ ಬೆಲೆಗೆ ಮಾರಾಟವಾಗುತ್ತದೆ. ಎಲ್ಲದಕ್ಕೂ  ಗಾತ್ರ ಮತ್ತು ನೋಟವೇ ಮುಖ್ಯ. ಇದು ತನ್ನಷ್ಟಕ್ಕೇ ಆಗುವುದಲ್ಲ. ಬೆಳೆಗಾರರು ಅದಕ್ಕೆ ಬೇಕಾದ ಥಿನ್ನಿಂಗ್ ಮಾಡಿದರೆ ಮಾತ್ರ ಹೀಗೆ ಇರುತ್ತದೆ. ದ್ರಾಕ್ಷಿ ಗೊಂಚಲಿನಲ್ಲಿ ಹೆಚ್ಚಿನ ಹೂವುಗಳು ಪರಾಗಸ್ಪರ್ಶಕ್ಕೊಳಗಾಗಿ ಕಾಯಿಕಚ್ಚುತ್ತವೆ. ಎಲ್ಲವೂ ಕಾಯಿಯಾದರೆ ಕೆಲವು ಬಟಾಣಿ ಗಾತ್ರ , ಮತ್ತೆ ಕೆಲವು ಇನ್ನೂ ಸಣ್ಣ ಗಾತ್ರ ಕೆಲವು ಯೋಗ್ಯ ಗಾತ್ರ, ಹೀಗೆ ಕಾಯಿಗಳಲ್ಲೆಲ್ಲಾ ಆಕಾರ ವೆತ್ಯಾಸ ಇರುತ್ತದೆ. ಹೀಗೆ ಆದರೆ…

Read more

ಉತ್ತಮ ಬಾಳೆಗೊನೆಗೆ ಎಷ್ಟು ಪೋಷಕಾಂಶ ಕೊಡಬೇಕು.

ಯಾವುದೇ ಬೆಳೆಗೆ ಅದರ ಬೆಳೆ ಅವಧಿಗನುಗುಣವಾಗಿ ಪೋಷಕಾಂಶಗಳನ್ನು  ಬಳಸಿಕೊಳ್ಳುತ್ತದೆ. ಧೀರ್ಘಾವಧಿ ಬೆಳೆಗಳು  ನಿಧಾನ ಗತಿಯಲ್ಲಿ ಪೋಷಕಗಳನ್ನು ಬಳಕೆ ಮಾಡಿಕೊಂಡರೆ ಅಲ್ಪಾವಧಿ ಬೆಳೆಗಳು ಅಧಿಕ ಪೋಷಕಗಳನ್ನು ಬಳಸಿಕೊಳ್ಳುತ್ತವೆ.   ಬಾಳೆ ಬೆಳೆ ಅಲ್ಪಾವಧಿ ಬೆಳೆ ಎಂದರೆ ತಪ್ಪಾಗಲಾರದು. ಇದು ನಾಟಿ ಮಾಡಿ 6 ರಿಂದ10  ತಿಂಗಳ ಒಳಗೆ ಫಸಲನ್ನು ಕೊಡುತ್ತದೆ. ಇಷ್ಟು ಕನಿಷ್ಟ ಅವಧಿಯಲ್ಲಿ  ಅದು ತನ್ನ ಶರೀರ ಸುಮಾರು ಕ್ವಿಂಟಾಲಿಗೂ ಹೆಚ್ಚು ಬೆಳೆಯುತ್ತದೆ. ಗೊನೆ ಹೊರ ಬೀಳುವ ಸಮಯದಲ್ಲಿ  ಮತ್ತು ಬಲಿಯುವ ಸಮಯದಲ್ಲಿ ಅದು ಇನ್ನೂ ಹೆಚ್ಚಾಗುತ್ತದೆ….

Read more

ದಾಳಿಂಬೆ-ಗುಣಮಟ್ಟದ ಹಣ್ಣು ಪಡೆಯುವ ವಿಧಾನ

ದಾಳಿಂಬೆ  ಬೆಳೆಯಲ್ಲಿ ಹೆಚ್ಚಾಗಿ ಕಂಡುಬರುವ ಸಮಸ್ಯೆ ಕಾಯಿ ಒಡೆಯುವಿಕೆ ಮತ್ತು ಕಾಯಿಯ ನೋಟ ಕೆಡುವಿಕೆ. ಬೆಳೆದು ಇನ್ನೇನು ಕಠಾವಿಗೆ ಸಿದ್ದವಾಗುವ ಸಮಯದಲ್ಲಿ ನೋಟವನ್ನು ಕೆಡಿಸುವ  ಕಾಯಿ ಒಡಕ, ಮತ್ತು ಸನ್ ಬರ್ನ್ ಸಮಸ್ಯೆ ಕಂಡು ಬರುತ್ತದೆ. ಇದರಿಂದ ಅರ್ಧಕ್ಕೂ  ಹೆಚ್ಚು ಕಾಯಿ ಉಪಯೋಗಕ್ಕಿಲ್ಲದೆ ನಷ್ಟವಾಗುತ್ತದೆ. ಈ ತೊಂದರೆ  ಮತ್ತು ರೋಗ ,ಕೀಟ ಸಮಸ್ಯೆಗಳಿಂದ ಪಾರಾದರೆ ಇದು ಲಾಭದ ಉತ್ತಮ ಬೆಳೆ.   ಯಾಕೆ ಆಗುತ್ತದೆ? ದಾಳಿಂಬೆಯ ಕಾಯಿಗೆ ಯಾವ ರೋಗಾಣು – ಕೀಟಾಣು ಬಾಧೆ ಇಲ್ಲದಿದ್ದರೂ ಇದು…

Read more
ವಯಸ್ಸಿನಲ್ಲಿ ಮರ ಗಾತ್ರದಲ್ಲಿ ಗಿಡ

ವಯಸ್ಸಿನಲ್ಲಿ ಮರ – ಗಾತ್ರದಲ್ಲಿ ಗಿಡ.

ಇವು ವಯಸ್ಸಿನಲ್ಲಿ  ಮರಗಳಾದರೂ  ನೋಡಲು  ಸಸಿಗಳು. ಇದು ನಾವು ಮಾಡುವುದು. ಇದರ ಉದ್ದೇಶ ಭವಿಷ್ಯದಲ್ಲಿ ಕೃಷಿಗೆ ಎದುರಾಗಲಿರುವ  ಕಾರ್ಮಿಕರ ಕೊರತೆಗೆ ಪರಿಹಾರ.  ಮರ ಸಣ್ಣದಿರಬಹುದು. ಇದಕ್ಕೆ  ನೀರು, ಗೊಬ್ಬರ, ಮತ್ತು ಇನ್ನಿತರ ನಿರ್ವಹಣೆ  ಮಾಡಿದಾಗ  ಇದರಲ್ಲಿ ದೊಡ್ದ  ಮರದಲ್ಲಿ ಪಡೆಯುವಷ್ಟೇ ಇಳುವರಿಯನ್ನು  ಪಡೆಯಬಹುದು. ಇದುವೇ ಅತ್ಯಧಿಕ ಸಾಂದ್ರ ಬೇಸಾಯ ತಾಂತ್ರಿಕತೆ. ಅಧಿಕ ಸಾಂದ್ರ ಬೆಳೆ: ಸಾಂಪ್ರದಾಯಿಕವಾಗಿ ಮಾವನ್ನು 30 ಅಡಿ ಅಂತರದಲ್ಲಿ ಬೆಳೆಸುತ್ತಾರೆ. ಆಗ ಅದು ದೊಡ್ದ ಮರ ಈ ಪ್ರಕಾರ  ಬೆಳೆಸಿದಾಗ ಎಕ್ರೆಗೆ  80 ಗಿಡ…

Read more
ಬಾಳೆ ಎಲೆ ಶಿಲೀಂದ್ರ ರೋಗ

ಮಳೆಗಾಲದಲ್ಲಿ ಬಾಳೆ ಬೆಳೆಗೆ ಬಾಧಿಸುವ ರೋಗದ ನಿವಾರಣೆ ಹೀಗೆ.

ಬಾಳೆಯ ಎಲೆ ಹಳದಿಯಾಗುವುದು, ಒಣಗುವುದು ಶಿಲೀಂದ್ರ ರೋಗ. ಇದಕ್ಕೆ ಮುನ್ನೆಚ್ಚರಿಕೆ  ಅಗತ್ಯ. ಶಿಲೀಂದ್ರ ರೋಗಗಳು ಹೆಚ್ಚಾಗಿ ಮಳೆಗಾಲದಲ್ಲಿ  ಬರುವುದು ಜಾಸ್ತಿ. ಅದು ಮಳೆಗಾಲ ಮುಗಿಯುವ ಸಮಯದಲ್ಲಿ ಬಂದರೆ  ಮುಂದಿನ ಚಳಿಗಾಲ ಪ್ರಾರಂಭವಾಗುವಾಗ  ನಮ್ಮ ಗಮನಕ್ಕೆ ಬರುತ್ತದೆ. ಕೆಲವೊಮ್ಮೆ ಇಬ್ಬನಿ ಬೀಳುವ ಸಮಯದಲ್ಲೂ ಬರುತ್ತದೆ. ಬಾಳೆಗೆ  ಬರುವ ರೋಗಗಳಲ್ಲಿ ಬಂಚೀ ಟಾಪ್ ಒಂದನ್ನು ಹೊರತು ಪಡಿಸಿ ಉಳಿದ ರೋಗಗಳನ್ನು ಪ್ರಾರಂಭಿಕ ಹಂತದಲ್ಲಿ ಗುರುತಿಸಿದರೆ ನಿಯಂತ್ರಣ ಮಾಡುವುದು ಸುಲಭ. . ಬಾಳೆಯಲ್ಲಿ ಚಳಿಗಾಲ ಪ್ರಾರಂಭವಾಗುವಾಗ  ಮತ್ತು ಮಳೆಗಾಲ ಅಂತ್ಯದ ಸಮಯದಲ್ಲಿ…

Read more
ನೆಲ್ಲಿ ಕಾಯಿ

ಭೂಲೋಕದ ಸಂಜೀವಿನಿ- ನೆಲ್ಲಿ ಕಾಯಿ

ಮಾನವ ತನ್ನ ಆರೋಗ್ಯವನ್ನು ಕಾಪಾಡಿಕೊಳ್ಳಲು  ಪ್ರಕೃತಿ ಕೊಟ್ಟ  ಔಷಧೀಯ ಸಸ್ಯವೇ ನೆಲ್ಲಿ. ಸಾಮಾನ್ಯವಾಗಿ ಇದನ್ನು ಆಮಲಕ, ಬೆಟ್ದದನೆಲ್ಲಿ, ಅಥವಾ ಇಂಡಿಯನ್ ಗೂಸ್ ಬೆರಿ ಎಂದು ಕರೆಯಲಾಗುತ್ತದೆ. ಇದು ಭಾರತದಲ್ಲಿ ನಮ್ಮ ಹಿರಿಯರಿಂದಲೂ ಉಪಯೋಗಿಸಿಕೊಂಡು ಬಂದಂತ ಔಷಧೀಯ ಮಹತ್ವದ  ಹಣ್ಣಿನ ಬೆಳೆ. ಹೇಗೆ ಬೆಳೆಸಬಹುದು: ನೆಲ್ಲಿಯ ವಿಶೇಷತೆಯೆಂದರೆ ವಿವಿಧ ರೀತಿಯ ಮಣ್ಣುಗಳಲ್ಲೂ  ಇದನ್ನು ಬೆಳೆಸಬಹುದು. ಹಾಗೆಯೆ ಒಣ ಪ್ರದೇಶಗಳಲ್ಲೂ, ಅತಿ ಹೆಚ್ಚು ಹಾಗು ಕಡಿಮೆ ಉಷ್ಟಾಂಶದಲ್ಲೂ, ಕ್ಷಾರೀಯ ಮಣ್ಣಿನಲ್ಲೂ ಬೆಳೆಸಬಹುದಾದ ಬೆಳೆ. ಕಸಿಗಿಡ ನೆಟ್ಟು ನಾಲ್ಕು ವರ್ಷಗಳ ಬಳಿಕ…

Read more
ಸ್ಟ್ರಾಬೆರಿ ಹಣ್ಣು

ನಾವೂ ಬೆಳೆಸಬಹುದೇ ಸ್ಟ್ರಾಬೆರಿ ಬೆಳೆ.

ಕೆಂಪು ಕೆಂಪಾದ ಸ್ಟ್ರಾಬೆರಿ ಹಣ್ಣೆಂದರೆ  ಎಲ್ಲರಿಗೂ  ಇಷ್ಟ. ಈ ಹಣ್ಣು  ಬೆಳೆಸಬೇಕು ತಿನ್ನಬೇಕು ಎಂಬ ತವಕ. ಆದರೆ ಇದನ್ನು ಎಲ್ಲಾ ಕಡೆ ಬೆಳೆಸಲು ಆಗುವುದಿಲ್ಲ. ಸೂಕ್ತ ವಾತಾವರಣದಲ್ಲಿ  ಮಾತ್ರ ಇದು ಉತ್ತಮವಾಗಿ ಬೆಳೆದು ಉತ್ತಮ ಹಣ್ಣುಗಳನ್ನು ನೀಡುತ್ತದೆ.  ಕೈ ಹಿಡಿದರೆ  ಮಾತ್ರ ಇದು ಭಾರೀ ಲಾಭದ ಬೆಳೆ . ನಾವೆಲ್ಲಾ ಮಾರುಕಟ್ಟೆಯಿಂದ ಖರೀದಿ ಮಾಡುವ ಸ್ಟ್ರಾಬೆರಿ ಹಣ್ಣುಗಳು  ಬರುವುದು ಮಹಾರಾಷ್ಟ್ರದ  ಮಹಾಬಲೇಶ್ವರದಿಂದ. ಇದಕ್ಕೆ ಮಹಾಬಲೇಶ್ವರ ಸ್ಟ್ರಾಬೆರಿ ಎಂಬ ಹೆಸರು.  ದೇಶದ ಬೇರೆ ಕಡೆಗಳಲ್ಲಿ ಬೆಳೆಯುತ್ತಾರೆಯಾದರೂ ಇಷ್ಟು ಪ್ರಮಾಣ…

Read more
error: Content is protected !!