ಕೆಂಪಡಿಕೆ ಧಾರಣೆ 49000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….

Read more
ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.

ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.   

ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …

Read more
ಈ ದಾಳಿಂಬೆ ಹಣ್ಣು ಉಚಿತವಾಗಿ ಕೊಟ್ಟರೂ ಗಿರಾಕಿ ಇಲ್ಲ. ಯಾಕೆ?

ಈ  ದಾಳಿಂಬೆ ಹಣ್ಣು ಉಚಿತವಾಗಿ ಕೊಟ್ಟರೂ ಗಿರಾಕಿ ಇಲ್ಲ. ಯಾಕೆ?

ಇಲ್ಲಿ ತೋರಿಸಿದ ದಾಳಿಂಬೆ ಹಣ್ಣು ನೋಡಲು ಆಕರ್ಷಕವಾಗಿಲ್ಲ. ಹಾಗಾಗಿ ಉಚಿತವಾಗಿ ಕೊಟ್ಟರೂ ಕೊಳ್ಳುವುದಕ್ಕೆ ಗಿರಾಕಿ ಇಲ್ಲ. ಇದನ್ನು ಹಣ್ಣು ಮಾರುವ ಅಂಗಡಿ,ಸೂಪರ್ ಮಾರ್ಕೆಟ್ ನಲ್ಲಿ ಮಾರಲಿಕ್ಕಾಗುವುದಿಲ್ಲ. ಇದನ್ನು ರೈತರ ಹೊಲದಿಂದ ಕೊಳ್ಳುವವರೂ ಇಲ್ಲ. ಇದನ್ನು ಉಚಿತವಾಗಿ ಕೊಟ್ಟಂತೆ ರೈತರು ಮಾರಬೇಕು. ರಸ್ತೆ ಬದಿಯಲ್ಲಿ  ಮಂದ ಬೆಳಕಿನಲ್ಲಿ ಅಗ್ಗ- ಭಾರೀ ಅಗ್ಗ  ಎಂದು ಬೊಬ್ಬೆ ಹಾಕಿ ಮಾರಾಟ ಮಾಡಬೇಕು.  ಇದು  ನಮ್ಮ ಮನೋಸ್ಥಿತಿ. ಕೃಷಿಕರಿಗೆ ಗ್ರಾಹಕರು ಅತೀ ಮುಖ್ಯ. ಗ್ರಾಹಕ ಎಂದರೆ ಬಳಕೆದಾರ. ರೈತ  ಬೆಳೆ ಬೆಳೆಯುವಾಗ ಬಳಕೆದಾರರ…

Read more
ಅಡಿಕೆ ಮಾರುಕಟ್ಟೆ ಕುಸಿಯುತ್ತಿದೆ ! ಮತ್ತೆ ಯಾವಾಗ ಚೇತರಿಕೆ ಆಗಬಹುದು?

ಅಡಿಕೆ ಮಾರುಕಟ್ಟೆ ಕುಸಿಯುತ್ತಿದೆ ! ಮತ್ತೆ ಯಾವಾಗ ಚೇತರಿಕೆ ಆಗಬಹುದು?   

ಅಡಿಕೆ ಮಾರುಕಟ್ಟೆ ಅನಿರೀಕ್ಷಿತವಾಗಿ ಕುಸಿಯಲಾರಂಭಿಸಿದೆ. 45000 ದಿಂದ 40500 ಕ್ಕೆ ಕುಸಿಯಿತು. ಮುಂದಿನ ವಾರ ಮತ್ತೆ ಕುಸಿತವಾಗುವ ಸೂಚನೆ  ಇದೆ. ಈ ಕುಸಿತ ತಾತ್ಕಾಲಿಕವೇ ಅಥವಾ ಮತ್ತೆ ಏತರಿಕೆ ಆಗಹುದುದೇ ಎಂಬ ಕುತೂಹಲ ನಮ್ಮೆಲ್ಲರದ್ದು. ಒಂದು ತಿಂಗಳ ತನಕ ಈ ಅಸ್ತಿರತೆ ಮುಂದುವರಿಯಲಿದ್ದು, ಮತ್ತೆ ಚೇತರಿಕೆ ಆಗುವ ಸಾಧ್ಯತೆ  ಇದೆ. ಬೆಳೆಗಾರರು ನಿರಾಶರಾಗಬೇಕಾಗಿಲ್ಲ. ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣುವ ಸೂಚನೆ ಇಲ್ಲ ಎಂಬುದಾಗಿ ಸುದ್ದಿಗಳು ಹರಡುತ್ತಿವೆ. ಆದರೆ ಕೆಲವು ಮೂಲಗಳ ಪ್ರಕಾರ ಮತ್ತೆ ಚೇತರಿಕೆ ಆಗುವ ಸಾಧ್ಯತೆ …

Read more
ಭತ್ತದ ಬೆಳೆಗಾರರಿಗೆ ಭಾರತ ಸರಕಾರದ ಸಹಾಯ.

ಭತ್ತದ ಬೆಳೆಗಾರರಿಗೆ ಭಾರತ ಸರಕಾರದ ಸಹಾಯ.    

ಭಾರತ ಸರಕಾರ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಅಕ್ಕಿ ಹಾಗೂ ಇತರ ಆಹಾರ ಧಾನ್ಯಗಳನ್ನು ಇನ್ನೂ ಐದು  ವರ್ಷದ ವರೆಗೆ ಉಚಿತವಾಗಿ ನೀಡಲು ಮುಂದಾಗಿದೆ. ಭತ್ತ ಗೋಧಿ ಮುಂತಾದ ಆಹಾರ ಬೆಳೆಗಳ  ಬೆಂಬಲ ಬೆಲೆಯನ್ನು ಹೆಚ್ಚಿಸಿದೆ. ಈ ಕಾರಣದಿಂದ ಭತ್ತದ, ಗೋಧಿಯ ಬೆಲೆ ಹೆಚ್ಚಳವಾಗಿದೆ. ಇನ್ನೂ ಹೆಚ್ಚಳವಾಗಲಿದೆ. ಸರಕಾರದ ಯೋಜನೆ ರೈತಾಪಿ ವರ್ಗಕ್ಕೆ ಪರೋಕ್ಷವಾಗಿ ಲಾಭದಾಯಕವಾಗಿದೆ.  ಕಳೆದ ವರ್ಷದಿಂದ ಭತ್ತದ ಬೆಲೆ ಏರಿಕೆ ಆದ ಕಾರಣದಿಂದಾಗಿ ಬೆಳೆ ಪ್ರದೇಶ ಹೆಚ್ಚಳವಾಗಲಾರಂಭಿಸಿದೆ. ಭತ್ತದ ಬೆಳೆಗಾರರು ಈ ತನಕ ಬೇಸಾಯ…

Read more
ವೃತ್ತಿ ಪ್ರೌಢತೆ ಪಡೆದುಕೊಂಡ ಓರ್ವ ಕಾಫೀ, ಮೆಣಸು ಭತ್ತದ ಕೃಷಿಕ ವೈ ಎಸ್ ರುದ್ರಪ್ಪ, ಸಕಲೇಶಪುರ, ಬಾಗೆಯ ಕೃಷಿಕರು.

ಕೃಷಿಕರು ತಮ್ಮ ವೃತ್ತಿಕ್ಷೇತ್ರದಲ್ಲಿ ಪ್ರೌಢತೆ ಬೆಳೆಸಿಕೊಳ್ಳದಿದ್ದರೆ ಉಳಿಗಾಲ ಇಲ್ಲ.

ಒಬ್ಬ ಮೆಕ್ಯಾನಿಕ್ ಶಿಕ್ಷಣ ಕಡಿಮೆಯಾದರೂ ಸಹ ತನ್ನ ವೃತ್ತಿ ಕ್ಷೇತ್ರದಲ್ಲಿ ಪ್ರೌಢತೆಯನ್ನು ಬೆಳೆಸಿಕೊಳ್ಳುತ್ತಾ ಮುಂದುವರಿಯುತ್ತಿರುತ್ತಾನೆ. ಇಂತಹ ಪಾರ್ಟ್ ಹಾಳಾದ ಕಾರಣ ಈ ಸಮಸ್ಯೆ ಉಂಟಾಗಿದೆ ಎಂಬುದಾಗಿ ನಿಖರವಾಗಿ ಹೇಳುತ್ತಾನೆ. ಆದರೆ ನಮ್ಮ ಕೃಷಿಕರು ಈ ವಿಷಯದಲ್ಲಿ ಇನ್ನೂ ಪ್ರೌಢರಾಗಿಲ್ಲ. ಪ್ರತೀಯೊಂದು ವಿಚಾರಕ್ಕೂ ಇನ್ನೊಬ್ಬನಲ್ಲಿ ಕೇಳುವ, ಅವನ ಸಂಭಾವನೆ ರಹಿತ ಉಚಿತ ಸಲಹೆ ಕೇಳುವ ಬಹಳಶ್ಟು ಸಂದೇಹಗಳಲ್ಲೇ  ಮುಂದುವರಿಯುವ ಮನೋಸ್ಥಿತಿ ನಮ್ಮ ಕೃಷಿಕ ವರ್ಗದಲ್ಲಿ ಕಾಣಿಸುತ್ತಿದೆ. ಹತ್ತು ಜನರ ಅಭಿಪ್ರಾಯ ಕೇಳಿ ತನಗೆ ತೋಚಿದಂತೆ ಅದನ್ನು ಅಳವಡಿಸಿಕೊಳ್ಳುವುದು ನಮ್ಮಲ್ಲಿ…

Read more
ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ ಸಾಧ್ಯತೆ.

ಸಧ್ಯವೇ ಅಡಿಕೆ ಮಾರುಕಟ್ಟೆ ಕುಸಿತ  ಸಾಧ್ಯತೆ.

ಅಡಿಕೆ ಮಾರುಕಟ್ಟೆಯಲ್ಲಿ ದರ ಕುಸಿತದ ಸುದ್ದಿ ಹಬ್ಬುತ್ತಿದೆ. ಕೆಂಪಡಿಕೆ  ಕೊಯಿಲು ಪ್ರಾರಂಭವಾಗಿದೆ. ಚಾಲಿ ಅಡಿಕೆ ಮಾಡುವ ಪ್ರದೇಶಗಳಲ್ಲೂ  ಒಂದು ಕೊಯಿಲಿನ ಅಡಿಕೆ  ಹಣ್ಣಾಗಿ ಅಗಿದೆ. ಹೊಸತು ಹಳತಾಗಿದೆ. ಹೊಚ್ಚ ಹೊಸತು ಬರಲಾರಂಭಿಸಿದೆ. ಈ ಮಧ್ಯೆ ಅಡಿಕೆ ಧಾರಣೆ ಏರಿಕೆ ಆಗುವ ಸುಳಿವು ಇಲ್ಲ. ಹೊಸತು ಮಾರುಕಟ್ಟೆಗೆ ಬರುವ ಈ ಸಮಯಕ್ಕೆ  ಹಳೆ ಅಡಿಕೆಗೆ ದರ ಸ್ವಲ್ಪವಾದರೂ ಹೆಚ್ಚಾಗಬೇಕಿತ್ತು. ಆದರೆ  ಹಳೇ (ಡಬ್ಬಲ್) ಅಡಿಕೆಗೆ ಬೇಡಿಕೆಯೇ ಇಲ್ಲದ ಸ್ಥಿತಿ ಉಂಟಾಗಿದೆ. ಎಲ್ಲೋ ಒಂದೆಡೆ ಅಡಿಕೆ ಧಾರಣೆ ಕುಸಿಯುವ ಸುಳಿವು…

Read more
ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ..

ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ.

ಕೃಷಿಕರಾದವರು ಕಾಲಸ್ಥಿತಿಗೆ ಅನುಗುಣವಾಗಿ ತಮ್ಮ ವೃತ್ತಿಕ್ಷೇತ್ರದಲ್ಲಿ ಮಾರ್ಪಾಡುಗಳನ್ನು ಮಾಡಿಕೊಂಡು ಬಂದರೆ  ಯಾವುದೋ ಕಷ್ಟವಿಲ್ಲದೆ ಅದರಲ್ಲಿ ಯಶಸ್ಸನು ಹೊಂದಬಹುದು ಎಂಬುದು ಕರಿಕಳ ಅಶೋಕ್ ಕುಮಾರ್ ಇವರ ಅನುಭವದ ಮಾತು. ಇವರು ಹುಟ್ಟು ಕೃಷಿಕರು. ಅದೇ ಕ್ಷೇತ್ರದಲ್ಲಿ ವ್ಯಾಸಂಗವನ್ನೂ ಮಾಡಿದವರು. ಜೊತೆಗೆ ಅದೇ ಕ್ಷೇತ್ರದಲ್ಲೇ ತನ್ನ ಬದುಕನ್ನೂ ಕಟ್ಟಿಕೊಂಡವರು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಸಮೀಪದ ಕರಿಕಳ ಎಂಬಲ್ಲಿ ವೈದ್ಯರ ಮಗನಾಗಿ ಹುಟ್ಟಿ, ಈಗ ಬೆಂಗಳೂರು ದೊಡ್ಡಬಳ್ಳಾಪುರದಲ್ಲಿ ಕೃಷಿ ಮತ್ತು ಅದಕ್ಕೆ ಪೂರಕ ವೃತ್ತಿ ನಡೆಸುತ್ತಿದ್ದಾರೆ. ಇವರರನ್ನು  ಕೃಷಿ…

Read more
ಅಡಿಕೆ ಮಾರುಕಟ್ಟೆಯ ಗ್ರಹಣ ಮೋಕ್ಷ – ಬೆಲೆ ಏರಿಕೆ ಶುರು.

ಅಡಿಕೆ ಮಾರುಕಟ್ಟೆಯ ಗ್ರಹಣ ಮೋಕ್ಷ – ಬೆಲೆ ಏರಿಕೆ ಶುರು.

ಅಡಿಕೆ ಮಾರುಕಟ್ಟೆ ವರ್ಷದುದ್ದಕ್ಕೂ ಏಕಪ್ರಕಾರವಾಗಿ ಇರುವುದಿಲ್ಲ. ಒಮ್ಮೆ ಗ್ರಹಣ ಹಿಡಿದು ಬೆಲೆ ಕುಸಿಯುತ್ತದೆ. ಮತ್ತೆ ಗ್ರಹಣ ಮೋಕ್ಷ ಕಾಲ ಬಂದೇ ಬರುತ್ತದೆ. ಅಡಿಕೆ ಮಾರಾಟವಾಗಿ ಹಣ ಕೈಗೆ ಬರುವ ತನಕ ಗ್ರಹಣ ಕಾಲವೂ, ಹಣ ಬರಲಾರಂಭಿಸಿದ  ತರುವಾಯ ಅದು ಮುಗಿಯುವ ತನಕ ಗ್ರಹಣ ಮೋಕ್ಷವೂ  ನಡೆಯುತ್ತಾ ಇರುತ್ತದೆ. ಇವುಗಳ ಮಧ್ಯೆ ರೈತರು ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಬೇಕಾಗುತ್ತದೆ. ಸಪ್ಟೆಂಬರ್ ತಿಂಗಳಲ್ಲಿ ಮತ್ತೆ ಕೆಂಪಡಿಕೆ ಧಾರಣೆ ಸ್ವಲ್ಪ ಚೇತರಿಗೆ ಪ್ರಾರಂಭವಾಗಿದೆ. ಚಾಲಿಗೆ ಸ್ವಲ್ಪ ನೆರಳು ಕವಿದಿದೆ. ಅನಿರ್ಧಿಷ್ಟಾವಧಿಯ ತನಕ…

Read more
ನೀರಿಗೆ ಬರ ಬಂದರೆ ? -. ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು

ನೀರಿಗೆ ಬರ ಬಂದರೆ ? ಕಡಿಮೆ ನೀರಿನಲ್ಲಿ ಹೇಗೆ ಬೆಳೆ ಉಳಿಸಿಕೊಳ್ಳುವುದು?  

2023 ನೇ ಇಸವಿ ನಮಗೆ ಮಳೆ ಇಲ್ಲದೆ ಬರಗಾಲದ ಸನ್ನಿವೇಶವನ್ನು ತೋರಿಸಿಯೇ ಬಿಡುತ್ತದೆಯೋ ಎಂಬ ಅನುಮಾನ ಮೂಡುತ್ತಿದೆ. ಜುಲೈ ತಿಂಗಳ ಕೊನೆಗೆ ಕಾಣೆಯಾದ ಮಳೆ ಮತ್ತೆ ಬಂದುದು ಆಗಾಗ ನೆಂಟರಂತೆ.  ಹೀಗೆ ಮುಂದುವರಿದರೆ ಬರಗಾಲ ಗ್ಯಾರಂಟಿ. ಯಾವುದಕ್ಕೂ ನಾವು ಸಿದ್ದರಾಗಿರಬೇಕು. ಕೆಲವು ಮೂಲಗಳ ಪ್ರಕಾರ ಇನ್ನು ಬರುವ  ಮಳೆ ಅಲ್ಪ ಸ್ವಲ್ಪ ಪ್ರಮಾಣದ್ದೇ ಹೊರತು, ತಳಕ್ಕಿಳಿದ ನೀರಿನ ಮಟ್ಟವನ್ನು ಮತ್ತೆ ಮೇಲಕ್ಕೇರಿಸುವಷ್ಟು  ಬಲವಾಗಿರುವುದಿಲ್ಲ. ಹಾಗಾಗಿ ನೀರಿನ ಕ್ಷಾಮ ಉಂಟಾಗಲೂಬಹುದು. ಅದಕ್ಕಾಗಿ ಈಗಲೇ ಸಿದ್ದರಾಗೋಣ. ಪ್ರಕೃತಿಯ ಮುಂದೆ ಮಾನವ…

Read more
error: Content is protected !!