ಡ್ರಾಗನ್ ಹಣ್ಣಿನ ಬೆಳೆಯಿಂದ ರೈತರ ಆದಾಯ

ಡ್ರಾಗನ್ ಹಣ್ಣಿನ ಬೆಳೆಯಿಂದ ರೈತರ ಆದಾಯ ಹೆಚ್ಚಲಾರಂಭಿಸಿದೆ

ಡ್ರಾಗನ್ ಹಣ್ಣಿನ ಬೆಳೆಗೆ ಭಾರೀ ಮಹತ್ವ ಬರುತ್ತಿದ್ದು, ಮಾರುಕಟ್ಟೆಯಲ್ಲಿ ಬೇಡಿಕೆಯೂ ಉತ್ತಮವಾಗಿದೆ. ಈ ಬೆಳೆ ರೈತರ ಆದಾಯ ಹೆಚ್ಚಳಕ್ಕೆ ನೆರವಾಗುತ್ತಿದೆ. ನಮ್ಮ ದೇಶವಲ್ಲದೆ ಬೇರೆ ದೇಶಗಳಲ್ಲೂ ಡ್ರಾಗನ್ ಹಣ್ಣಿನ ಬೆಳೆ ಜನಪ್ರಿಅತೆ ಗಳಿಸುತ್ತಿದ್ದು, ಇದಕ್ಕೆ ಪ್ರಾಪಂಚಿಕ ಮಾರುಕಟ್ಟೆ ಇದೆ. ಇಲ್ಲೊಬ್ಬರು ಹೂವಿನ ಹಡಗಲಿಯ ಕಾಲ್ವಿ ಗ್ರಾಮದ ರೈತ  ಡ್ರಾಗನ್ ಹಣ್ಣಿನ ಬೆಳೆ ಬೆಳೆದು ಹೇಗೆ ಆದಾಯ ಹೆಚ್ಚಿಸಿಕೊಂಡರು ನೋಡೋಣ. ಕರ್ನಾಟಕ ರಾಜ್ಯ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಕಾಲ್ವಿ ಗ್ರಾಮದ ಬಣಕಾರ ಶಿವನಾಗಪ್ಪ ದೊಡ್ಡತೋಟಪ್ಪ( 65) ಒಬ್ಬ…

Read more
ಎನ್ ಸಿ ಪಟೇಲ್ ರವರಿಗೆ ಗೌರವ ಡಾಕ್ಟರೇಟ್

ಎನ್ ಸಿ ಪಟೇಲ್ ರವರಿಗೆ ಗೌರವ ಡಾಕ್ಟರೇಟ್ – ಯೋಗ್ಯ ವ್ಯಕ್ತಿಗೆ ಯೋಗ್ಯ ಪುರಸ್ಕಾರ.

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಇವರು ತಮ್ಮ  56 ನೇ ಘಟಿಕೋತ್ಸವದಲ್ಲಿ ಎನ್ ಸಿ ಪಟೇಲ್  ಎಂಬ  ಅ ತ್ಯುತ್ತಮ ಕೃಷಿಕರಿಗೆ ಗೌರವ ಡಾಕ್ಟರೇಟ್ ನೀಡಿದ್ದು ಯೋಗ್ಯ ವ್ಯಕ್ತಿಗೆ ಯೋಗ್ಯ ಪುರಸ್ಕಾರ ಎನ್ನಿಸಿದೆ. ಶ್ರಿಯುತ  ಎನ್ ಸಿ ಪಟೇಲ್ ಇವರು ತಮ್ಮ ಇಡೀ ಜೀವಮಾನವನ್ನೇ ಕೃಷಿಗಾಗಿ ಮುಡಿಪಾಗಿಟ್ಟವರು. ತೋಟಗಾರಿಕಾ ಬೆಳೆಗಳಾದ ಮಾವು, ದ್ರಾಕ್ಷಿ, ದಾಳಿಂಬೆ, ಸೀಬೆ, ನೇರಳೆ ಮುಂತಾದ ಬೆಳೆಗಳನ್ನು ಅಚ್ಚುಕಟ್ಟಾಗಿ ಬೆಳೆಯುತ್ತಿರುವ ಮಾದರಿ ರೈತ. ನಾಗದಾಸನಹಳ್ಳಿ ಚಿಕ್ಕಕೆಂಪಣ್ಣ ಪಟೇಲ್ (Nagadasanahalli Chikakempanna patel) ಬೆಂಗಳೂರು ಹೊರವಲಯದ ಯಲಹಂಕದ…

Read more
ಬೀದರ್ ನಲ್ಲೂ ಸೇಬು ಬೆಳೆಯುತ್ತದೆ

ಬೀದರ್ ನಲ್ಲೂ  ಸೇಬು ಬೆಳೆಯುತ್ತದೆ- ಬೆಳೆದು ನೋಡಿದ್ದಾರೆ ಅಪ್ಪಾರಾವ್ ಭೋಸಲೆ

ಬೀದರ್ ಜಿಲ್ಲೆಯ ಕೆಂಪು ಮಣ್ಣಿನಲ್ಲಿ ಸೇಬು ಬೆಳೆ ಬೆಳೆಯಬಹುದು. ಇದು ಕಾಶ್ಮೀರದಲ್ಲಿ ಮಾತ್ರ ಬೆಳೆಯುವ ಬೆಳೆಯಲ್ಲ. ಇದನ್ನು ಅಪ್ಪಾರಾವ್ ಭೋಸಲೆ  ಎಂಬ ಪ್ರಗತಿಪರ ರೈತರು  ಬೆಳೆದು ತೋರಿಸಿದ್ದಾರೆ. ಕೆಲವೊಂದು ಬೆಳೆಗಳು ಸಾಂಪ್ರದಾಯಿಕವಾಗಿ ನಿರ್ದಿಷ್ಟ ಪ್ರದೇಶದಲ್ಲಿ ಮಾತ್ರ ಬೆಳೆಯುವಂತದ್ದು ಎಂದು ಇತರರು ಅದರ ಗೋಜಿಗೆ ಹೋಗುವುದಿಲ್ಲ. ಕೆಲವೇ ಕೆಲವು ಆಸಕ್ತರು, ಬಂದರೆ ಬರುತ್ತದೆ, ಹೋದರೆ ಹೋಗುತ್ತದೆ ಎಂದು ಬೆಳೆಸಿ ನೋಡುವ ಮನಸ್ಸು ಮಾಡುತ್ತಾರೆ. ಕೆಲವೊಮ್ಮೆ ಅದು ಯಶಸ್ವಿಯೂ ಆಗುತ್ತದೆ. ಇಂತಹ ಉದಾಹರಣೆ ಸಾಕಷ್ಟು ಇದೆ. ಸಾಂಪ್ರದಾಯಿಕ ಪ್ರದೇಶ,  ವಾತಾವರಣ,…

Read more
ಕೃಷಿ ಅರಣ್ಯ ದೊಂದಿಗೆ ಅರಶಿನ ಬೆಳೆ

ಕೃಷಿ ಅರಣ್ಯ ದೊಂದಿಗೆ ಅರಶಿಣ ಬೆಳೆಸಿ ಮೌಲ್ಯವರ್ದನೆ.

ಕಲಬುರಗಿ ತಾಲೂಕಿನ ಹಾಗರಗಾ ಗ್ರಾಮದಲ್ಲಿ ನಲವತ್ತೆರಡು ವರ್ಷದ ಲಕ್ಷ್ಮೀಕಾಂತ ಹಿಬಾರೆಯವರು ಬಿರುಬಿಸಿಲಿನ  ನಾಡಾದರೂ ತಮ್ಮ 2.5 ಎಕರೆ ಬರಡು ಭೂಮಿಯಲ್ಲಿ ಉತ್ತಮ ಬೆಳೆ ಬೆಳೆದಿದ್ದಾರೆ. ಸಹಜ ಮತ್ತು ನೈಸರ್ಗಿಕ  ಕೃಷಿ ಅರಣ್ಯ ಪ್ರದೇಶದಲ್ಲಿ ಔಷಧಿಯುಕ್ತ ಅರಶಿಣವನ್ನು ಮಿಶ್ರ ಬೆಳೆಯಾಗಿ ಬೆಳೆದು ಉತ್ತಮ ಆದಾಯ ಸಂಪಾದಿಸಿದ್ದಾರೆ. ಮುಖ್ಯವಾಗಿ ಅರಶಿನ ಹುಡಿ ಮಾಡಿ ಮೌಲ್ಯವರ್ಧನೆ ಮಾಡಿದ್ದೇ ಈ ಲಾಭಕ್ಕೆ ಕಾರಣ. ಲಕ್ಷ್ಮೀಕಾಂತ ಹಿಬಾರೆಯವರು ಕಳೆದ 10 ವರ್ಷದಿಂದ ಕೃಷಿ ಅರಣ್ಯ ಬೇಸಾಯ ಮಾಡುತ್ತಿದ್ದಾರೆ. ಇವರ ಹೊಲದಲ್ಲಿ ಬೆಳೆದಿರುವ ಬಗೆಬಗೆಯ ಅರಣ್ಯ…

Read more
ಬೆಳೆ ಯೋಜನೆ ಇದ್ದರೆ ತೆಂಗಿನ ಬೆಳೆಯೂ ಲಾಭದಾಯಕ

ಬೆಳೆ ಯೋಜನೆ ಇದ್ದರೆ ತೆಂಗಿನ ಬೆಳೆಯೂ ಲಾಭದಾಯಕವೇ.

ತೆಂಗು ಬೆಳೆ ಲಾಭದಾಯಕ ಎಂದರೆ ಎಲ್ಲರೂ ನಗುತ್ತಾರೆ. ಆದರೆ ತೆಂಗಿನ ಬೆಳೆಯೊಂದರಿಂದಲೇ ಲಾಭ ಇಲ್ಲ. ಅದರ ಜೊತೆಗೆ ಬೇರೆ ಬೇರೆ ಬೆಳೆ ಬೆಳೆಸಬೇಕು. ಉತ್ತಮ ಇಳುವರಿ ಕೊಡುವ ತಳಿಗಳನ್ನು ಆಯ್ಕೆ ಮಾಡಬೇಕು. ಇಂತಹ ಬೆಳೆ ಯೋಜನೆಯಿಂದ ತೆಂಗಿನ ಬೆಳೆ ಸಹ ಲಾಭದಾಯಕಬಲ್ಲದು ಎನ್ನುತ್ತಾರೆ  ಈ ರೈತ. ಹೈಬ್ರೀಡ್ ತಳಿಯ ತೆಂಗು, ಅದರ ಮಧ್ಯಂತರದಲ್ಲಿ ಬಾಳೆ,  ಅರಶಿನ, ಸುವರ್ಣ ಗಡ್ಡೆ,  ನೀರಿನ ಕೆರೆಯಲ್ಲಿ ಮೀನು ಸಾಕಾಣಿಕೆ, ಬೀಜೋತ್ಪಾದನೆಗಾಗಿ ಭತ್ತದ ಬೆಳೆ, ಬೇಸಿಗೆಯಲ್ಲಿ ಭಾರೀ ಲಾಭ ಕೊಡುವ ಲಿಂಬೆ, ಹಲಸು,…

Read more
ಅಮಾನುಲ್ಲಾ ಅವರ ತೋಟ

1 ಎಕ್ರೆಗೆ 2600 ಫಲ ಕೊಡುವ ಬೆಳೆಗಳು – ನಂಬುತ್ತೀರಾ?

ಹೌದು, ನಂಬಿಕೆ ಬಾರದಿದ್ದರೆ ಒಮ್ಮೆ ಶಿವಮೊಗ್ಗ ಜಿಲ್ಲೆ , ಸಾಗರ ತಾಲೂಕು, ಮಂಕಳಲೆ ಗ್ರಾಮದ ಓರ್ವ ಕೃಷಿಕ, ಶ್ರೀ ಅಮಾನುಲ್ಲಾ ಖಾನ್ ಇವರ   ಹೊಲಕ್ಕೊಮ್ಮೆ ಭೇಟಿ ಕೊಡಿ. ಸುಮಾರು  20 ಎಕ್ರೆಯ ಇವರ ಹೊಲದಲ್ಲಿ 50,000 ಕ್ಕೂ ಹೆಚ್ಚಿನ ಫಲ ಕೊಡುವ ಬೆಳೆಗಳಿವೆ. ಅಂದರೆ ಎಕ್ರೆಗೆ 2600 ಗಿಡಗಳು. ಇದು ಬಹುಶಃ ನಾವು ಯಾರೂ ಕಲ್ಪನೆ ಸಹ ಮಾಡಲಾಗದ ಕೃಷಿ ಕ್ಷೇತ್ರ ಎಂದರೆ ಅತಿಶಯೋಕಿಯಲ್ಲ. ಅದಕ್ಕಾಗಿಯೇ ಈ ಹೊಲವನ್ನು ನೋಡಿದರೆ ನಾವು ವಿಯೆಟ್ನಾಂ ದೇಶದ ಕರಿಮೆಣಸು ಕೃಷಿ…

Read more
error: Content is protected !!