ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ

ಮೆಣಸು ಬೆಳೆಗೆ ಈ ಸಮಸ್ಯೆ ಯಾಕೆ ಬರುತ್ತದೆ? ಪರಿಹಾರ ಏನು?

ಮೆಣಸು ಬೆಳೆಯಲ್ಲಿ ಎಲೆ ಮುರುಟುವಿಕೆ ಒಂದು ಸಮಸ್ಯೆಯಾದರೆ ಇನ್ನೊಂದು ಸಮಸ್ಯೆ  ಕಾಯಿ ಈ ರೀತಿ ಆಗಿ ಕೊಳೆತು ಹೋಗುವುದು. ಕೆಲವು ಪ್ರದೇಶಗಳಲ್ಲಿ ಈ ಸಮಸ್ಯೆ ಬಹಳಶ್ಟು ಹೆಚಾಗುತ್ತಿದ್ದು, ಮೆಣಸು ಬೆಳೆಯನ್ನೇ ಬಿಡುವ ವರೆಗೆ ಪರಿಸ್ಥಿತಿ ಬಿಗಡಾಯಿಸಿದೆ. ಇದು ಯಾವ ಕಾರಣಕ್ಕೆ ಹೀಗೆ ಆಗುತ್ತದೆ, ಕೀಟ ಸಮಸ್ಯೆಯೇ ಅಥವಾ ರೋಗವೇ ಎಂಬುದನ್ನು ಇಲ್ಲಿ ನೋಡೋಣ. ನಮ್ಮ ದೇಶದಲ್ಲಿ ಮೆಣಸು ಒಂದು ಪ್ರಾಮುಖ್ಯ ಸಾಂಬಾರ ಬೆಳೆ. ಇಲ್ಲಿನ ಮೆಣಸಿಗೆ ಜಾಗತಿಕ ಮನ್ನಣೆ ಇದೆ. ರಪ್ತು ಸಹ ಆಗುತ್ತದೆ. ಕೆಲವೊಮ್ಮೆ ಇಲ್ಲಿಂದ…

Read more
ಅಡಿಕೆ ಮಾರುಕಟ್ಟೆಯ ಗ್ರಹಣ ಮೋಕ್ಷ – ಬೆಲೆ ಏರಿಕೆ ಶುರು.

ಅಡಿಕೆ ಮಾರುಕಟ್ಟೆಯ ಗ್ರಹಣ ಮೋಕ್ಷ – ಬೆಲೆ ಏರಿಕೆ ಶುರು.

ಅಡಿಕೆ ಮಾರುಕಟ್ಟೆ ವರ್ಷದುದ್ದಕ್ಕೂ ಏಕಪ್ರಕಾರವಾಗಿ ಇರುವುದಿಲ್ಲ. ಒಮ್ಮೆ ಗ್ರಹಣ ಹಿಡಿದು ಬೆಲೆ ಕುಸಿಯುತ್ತದೆ. ಮತ್ತೆ ಗ್ರಹಣ ಮೋಕ್ಷ ಕಾಲ ಬಂದೇ ಬರುತ್ತದೆ. ಅಡಿಕೆ ಮಾರಾಟವಾಗಿ ಹಣ ಕೈಗೆ ಬರುವ ತನಕ ಗ್ರಹಣ ಕಾಲವೂ, ಹಣ ಬರಲಾರಂಭಿಸಿದ  ತರುವಾಯ ಅದು ಮುಗಿಯುವ ತನಕ ಗ್ರಹಣ ಮೋಕ್ಷವೂ  ನಡೆಯುತ್ತಾ ಇರುತ್ತದೆ. ಇವುಗಳ ಮಧ್ಯೆ ರೈತರು ತಮ್ಮ ಅದೃಷ್ಟ ಪರೀಕ್ಷೆ ಮಾಡಿಕೊಳ್ಳಬೇಕಾಗುತ್ತದೆ. ಸಪ್ಟೆಂಬರ್ ತಿಂಗಳಲ್ಲಿ ಮತ್ತೆ ಕೆಂಪಡಿಕೆ ಧಾರಣೆ ಸ್ವಲ್ಪ ಚೇತರಿಗೆ ಪ್ರಾರಂಭವಾಗಿದೆ. ಚಾಲಿಗೆ ಸ್ವಲ್ಪ ನೆರಳು ಕವಿದಿದೆ. ಅನಿರ್ಧಿಷ್ಟಾವಧಿಯ ತನಕ…

Read more
ಕಳೆದ ವರ್ಷ 7500. ಈ ವರ್ಷ 6300 ಅಡಿಕೆ ಮಾರುಕಟ್ಟೆ ಅಸ್ಥಿರವಾದೀತೇ

ಕಳೆದ ವರ್ಷ 7500. ಈ ವರ್ಷ 6300. ಅಡಿಕೆ ಮಾರುಕಟ್ಟೆ ಅಸ್ಥಿರವಾದೀತೇ?   

ಕಳೆದ ವರ್ಷ ಈ ಸಮಯದಲ್ಲಿ ಹಸಿ ಅಡಿಕೆಗೆ 7500 ರೂ. ಬೆಲೆಗೆ ಖರೀದಿ ಮಾಡಲಾಗುತ್ತಿತ್ತು. ಈ ವರ್ಷ ಪ್ರಾರಂಭಿಕ ದರ 6500, ಇನ್ನೂ ಇಳಿಕೆಯಾಗಿ 6300 ಕ್ಕೆ ಬಂದಿದೆ. ಇನ್ನೂ ಇಳಿಯುವ ಸಂಭವ. ಇದು ಮುಂದಿನ ಅಡಿಕೆ ಧಾರಣೆಯ ಅಸ್ಥಿರತೆಯನ್ನು ತೋರಿಸುತ್ತಿದೆ. ಕೆಂಪಡಿಕೆಯ ಉತ್ಪಾದನೆ ಭಾರೀ ಹೆಚ್ಚಳವಾಗುತ್ತಿದ್ದು, ಸಾಂಪ್ರದಾಯಿಕ ಪ್ರದೇಶಗಳ ಇಳುವರಿಯನ್ನು ಹೊಸ ಪ್ರದೇಶಗಳು ಹಿಂದಿಕ್ಕುತ್ತಿದೆ. ಜೋಳ, ರಾಗಿ, ಭತ್ತ ತರಕಾರಿ ಬೆಳೆಯುತ್ತಿದ್ದ ಬಯಲು ಸೀಮೆ ಪ್ರದೇಶಗಳಲ್ಲಿ  ಉತ್ತಮ ಇಳುವರಿ ಕಾಣಿಸುತ್ತಿದ್ದು,  ಮಾರುಕಟ್ಟೆ ಈ ಉತ್ಪಾದನೆಯನ್ನು ತಾಳಿಕೊಳ್ಳಬಹುದೇ…

Read more
ಅಡಿಕೆ ಮಾರುಕಟ್ಟೆ- ಕೆಂಪಡಿಕೆ ಹಿಂದೆ- ಚಾಲಿ ಮುಂದೆ.

 ಅಡಿಕೆ ಮಾರುಕಟ್ಟೆ- ಕೆಂಪಡಿಕೆ ಹಿಂದೆ- ಚಾಲಿ ಮುಂದೆ.   

ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ದಿನಾಂಕ 11-08-2023ರ ಶುಕ್ರವಾರ ಒಟ್ಟು ಸುಮಾರು 425 ಟನ್  ಅಡಿಕೆ ವ್ಯವಹಾರ ನಡೆದಿದೆ. ಕಳೆದ ವಾರ ಯಾವುದೋ  ಸುದ್ದಿಯ ಕಾರಣಕ್ಕೆ ಕೆಂಪಡಿಕೆ ಧಾರಣೆಯಲ್ಲಿ  ಇಳಿಕೆ ಕಂಡು ಬಂತು. ಚಾಲಿ ಅಡಿಕೆಯ ಧಾರಣೆಯಲ್ಲಿ ಏರಿಕೆ ಆಗುತ್ತಾ ಇದೆ. ಆಗಸ್ಟ್  ತಿಂಗಳು ಸಪ್ಟೆಂಬರ್ ತಿಂಗಳಲ್ಲಿ ಇನ್ನೂ ಸ್ವಲ್ಪ ಏರಿಕೆ ಆಗಬಹುದು ಎಂಬ ಆಶಾಭಾವನೆ  ಮಾರಾಟಗಾರರ ಮಾಹಿತಿಯಿಂದ ಕೇಳಿ ಬರುತ್ತಿದೆ. ಕೆಂಪಡಿಕೆ ಧಾರಣೆ ಇಳಿಕೆ ತಾತ್ಕಾಲಿಕವಾಗಿದ್ದು, ತಿಂಗಳಾಂತ್ಯಕ್ಕೆ  ಇದೆ. ಕ್ವಿಂಟಾಲಿಗೆ ರೂ.1000 ದಷ್ಟಾದರೂ ಏರಬಹುದು ಎನ್ನುತ್ತಾರೆ. ಕಳೆದ…

Read more
ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ.

ಮೆಣಸಿನ ಬೆಳೆಯ ಈ ಸಮಸ್ಯೆಗೆ ಕಾರಣ ಮತ್ತು ಪರಿಹಾರ.

ಮೆಣಸಿನ ಬೆಳೆಯಲ್ಲಿ ಅತೀ ದೊಡ್ಡ ಸಮಸ್ಯೆ ಎಂದರೆ ಎಲೆ ಮುರುಟುವಿಕೆ. ಮೆಣಸು ಬೆಳೆಯುವ ಎಲ್ಲಾ ಪ್ರದೇಶಗಳಲ್ಲೂ ಈ ಸಮಸ್ಯೆ ಕಾಣಿಸುತ್ತದೆ. ಇದರಿಂದಾಗಿ ಭಾರೀ ಪ್ರಮಾಣದ ಇಳುವರಿ ಕಡಿಮೆಯಾಗುತ್ತದೆ. ಈ ರೋಗ ಯಾವ ಕಾರಣಕ್ಕೆ ಬರುತ್ತದೆ. ಯಾವ ಸಮಯದಲ್ಲಿ ಇದು ಹೆಚ್ಚು. ಇದನ್ನು ಹೇಗೆ ನಿಯಂತ್ರಿಸಬಹುದು ಎಂಬುದರ ಪೂರ್ಣ ಮಾಹಿತಿ ಇಲ್ಲಿದೆ. ಮೆಣಸನ್ನು ಜಗತ್ತಿನ ಎಲ್ಲಾ ಜನರೂ ಒಂದು ಪ್ರಮುಖ ಮಸಾಲೆ ವಸ್ತುವಾಗಿ ಬಳಕೆ ಮಾಡುತ್ತಾರೆ. ಎಲ್ಲಾ ದೇಶಗಳಲ್ಲೂ ಇದು ಒಂದು ಪ್ರಮುಖ ವಾಣಿಜ್ಯ ಬೆಳೆಯೂ ಹೌದು. ಮಸಾಲೆ…

Read more
ಸಂಚಲನದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ

ಏರಿಳಿತದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ.ಮುಂದೆ ಯಾವುದರ ಸರದಿ?.

ಯಾರೂ ಕಲ್ಪಿಸಿಯೂ ಇರದಂತಹ ಸಂಚಲನವೊಂದು ಕರಿಮೆಣಸು ಮಾರುಕಟ್ಟೆಯಲ್ಲಿ ಜುಲೈ 2023 ರಲಿ ಘಟಿಸಿದೆ. ಹಾಗೆಯೇ ಅಡಿಕೆ ಮಾರುಕಟ್ಟೆಯಲ್ಲೂ ಒಂದು ಸಂಚಲನ ಉಂಟಾಗಿದೆ. ಮುಂದಿನ ದಿನಗಳಲ್ಲಿ ಅಡಿಕೆ ಧಾರಣೆ ಏನಾಗಬಹುದು? ಕರಿಮೆಣಸಿನ ಧಾರಣೆ ಏನಾಗಬಹುದು? ಇತರ ಉತ್ಪನ್ನಗಳಾದ ಕೊಬ್ಬರಿ, ಶುಂಠಿ, ಹಾಗೆಯೇ ರಬ್ಬರ್  ಧಾರಣೆ ಏನಾಗಬಹುದು ಎಂಬ ಕುತೂಹಲವೇ? ಕೆಲವು ಮಾರುಕಟ್ಟೆ  ತಿಳುವಳಿಕೆ ಉಳ್ಳ ಜನರ ಹಾಗು ಪರಿಸ್ಥಿತಿಗಳ ಆಧಾರದ ಮೇಲೆ ಒಂದು ಊಹನೆ ಹೀಗಿದೆ. 2023 ರ ಜುಲೈ ತಿಂಗಳಲ್ಲಿ ಹಠಾತ್ತಾಗಿ ಕರಿಮೆಣಸು, ಮಾರುಕಟ್ಟೆಯಲ್ಲಿ ಬೃಹತ್ ಸಂಚಲನ…

Read more
ಅಡಿಕೆ ಧಾರಣೆ ಸ್ವಲ್ಪ ಅಸ್ಥಿರವಾಗಿದೆ- ಬೆಳೆಗಾರರು ದೊಡ್ಡ ನಿರೀಕ್ಷೆ ಹೊಂದಬೇಕಾಗಿಲ್ಲ.

ಅಡಿಕೆ ಧಾರಣೆ ಸ್ವಲ್ಪ ಅಸ್ಥಿರವಾಗಿದೆ- ಬೆಳೆಗಾರರು ದೊಡ್ಡ ನಿರೀಕ್ಷೆ ಹೊಂದಬೇಕಾಗಿಲ್ಲ.

ಜುಲೈ ತಿಂಗಳ ಪ್ರಾರಂಭದಲ್ಲಿ ಕೆಂಪಡಿಕೆ ಧಾರಣೆ ಏರಿಕೆ ಪ್ರಾರಂಭವಾಗಿ ಬೆಳೆಗಾರರು  ಹೆಚ್ಚಿನ ನಿರೀಕ್ಷೆ ಹೊಂದುವಂತಾಯಿತು. ಇನ್ನೂ ಏರಬಹುದು ಸ್ವಲ್ಪ ಕಾಯೋಣ ಎಂದು ಮಾರಾಟಕ್ಕೆ ಹಿಂದೇಟು ಹಾಕುವ ಸ್ಥಿತಿ. ಸಹಜವಾಗಿ ಎಲ್ಲರೂ ಹೀಗೇ ಮಾಡುವುದು. ಆದರೆ ದರ ಏರುತ್ತಾ  ಏರುತ್ತಾ ಮುಂದೆ ಹೋಗುವುದಿಲ್ಲ. ಕೆಲ ಸಮಯದ ನಂತರ ಇಳಿಕೆ ಆಗಿಯೇ ಆಗುತ್ತದೆ. ಈಗ ಸ್ವಲ್ಪ ಇಳಿಕೆ ಸಾಧ್ಯತೆ ಕಾಣಿಸುತ್ತಿದೆ. ದರ ಏರಿಕೆಯಾಗುವಾಗ ಮಾಲು ಕೊಡಲು ಯಾವ ರೈತನಿಗೂ  ಮನಸ್ಸು ಬರುವುದಿಲ್ಲ. ಕೊನೆಗೆ ಇಳಿಕೆಯಾಗುವಾಗ ಮಾರಾಟ ಮಾಡುವುದು ಅನಿವಾರ್ಯವಾಗುತ್ತದೆ. ಇದುವೇ…

Read more
ತೆಂಗಿನ ಮರಗಳಿಗೆ ಯಾವಾಗ ಹೇಗೆ ಗೊಬ್ಬರ ಹಾಕಬೇಕು?

ತೆಂಗಿನ ಮರಗಳಿಗೆ ಯಾವಾಗ ಹೇಗೆ ಗೊಬ್ಬರ ಹಾಕಬೇಕು?

ತೆಂಗಿನ ಮರ ತೋಟಗಾರಿಕಾ ಬೆಳೆಗಳಲ್ಲಿ ಅತೀ ಹೆಚ್ಚು  ಪೋಷಕಾಂಶಗಳನ್ನು ಬಯಸುವ ಬೆಳೆ. ವರ್ಷವಿಡೀ ಬೆಳವಣಿಗೆ ಇರುವ ಇದು ಎಲ್ಲಾ ಋತುಮಾನದಲ್ಲೂ ಏಕಪ್ರಕಾರ ಪೋಷಕಗಳನ್ನು ಬಯಸುತ್ತದೆ. ಬಹಳಷ್ಟು ರೈತರು ತೆಂಗಿಗೆ ಗೊಬ್ಬರ ಕೊಡುವ ವಿಚಾರದಲ್ಲಿ ಸಾಕಷ್ಟು ತಪ್ಪುಗಳನ್ನು ಮಾಡುತ್ತಾರೆ. ಮರದ ಉತ್ತಮ ಬೆಳವಣಿಗೆ ಮತ್ತು ಉತ್ತಮ ಇಳುವರಿಗೆ ಯಾವ ರೀತಿಯಲ್ಲಿ ಗೊಬ್ಬರ ಹಾಕಬೇಕು ಎಂಬ ಪೂರ್ಣ ಮಾಹಿತಿ ಇಲ್ಲಿದೆ. ತೆಂಗಿನ ಮರದ ಶಿರ ಭಾಗ ಲಕ್ಷಣ ಅದರ ಆರೋಗ್ಯವನ್ನು ತಿಳಿಸುತ್ತದೆ. ಮರದ ಗರಿಗಳು ಚತ್ರಿಯಂತೆ ಬಿಡಿಸಿರಬೇಕು.  ಮರದಲ್ಲಿ 35…

Read more
ತೆಂಗು ಬೆಳೆಗಾರರನ್ನು ಉಳಿಸಿ- ಇಲ್ಲವಾದರೆ ತೆಂಗು ಬೆಳೆಯೇ ಕ್ಷೀಣಿಸಬಹುದು!

ತೆಂಗು ಬೆಳೆಗಾರರನ್ನು ಉಳಿಸಿ- ಇಲ್ಲವಾದರೆ ತೆಂಗು ಬೆಳೆಯೇ ಕ್ಷೀಣಿಸಬಹುದು!

ತೆಂಗು ಬೆಳೆಗಾರರ ನೆರವಿಗೆ ಸರಕಾರ ಮತ್ತು ತೆಂಗಿನ ಉತ್ಪನ್ನ ಬಳಕೆದಾರರು ಬಾರದೆ ಇದ್ದರೆ ಕೆಲವೇ ಸಮಯದಲ್ಲಿ ತೆಂಗಿನ ಬೆಳೆಯನ್ನೇ ರೈತರು ಬಿಡುವ ಸ್ಥಿತಿ ಬರಬಹುದು. ಕಲ್ಪವೃಕ್ಷ ತೆಂಗು, ಯಾವತ್ತೂ ಭವಿಷ್ಯವಿರುವ ಬೆಳೆ ಎಂದು ನಂಬಿದ್ದ ಬೆಳೆಗಾರರಿಗೆ ಯಾವತ್ತೂ  ಆಕರ್ಷಕ ಬೆಲೆ ಬರಲೇ ಇಲ್ಲ. ತೆಂಗಿನ ಬೆಳೆ ಕಡಿಮೆ ಇದ್ದ 30-40 ವರ್ಷಗಳ ಹಿಂದೆ ಇದ್ದ ಬೆಲೆಗಿಂತಲೂ ಕಡಿಮೆ ಬೆಲೆ ಈಗ ತೆಂಗಿನ ಕಾಯಿಯದ್ದು. ಈ ಬೆಲೆಯಲ್ಲಿ ತೆಂಗು ಬೆಳೆಗಾರರು ಉಳಿಯುವುದು ಸಾಧ್ಯವೇ? ಖಂಡಿತವಾಗಿಯೂ ಇಲ್ಲ. ಸರಕಾರ ತೆಂಗು…

Read more
ಬೆಳೆಗಾರರು ತಪ್ಪದೆ ಗಮನಿಸಿ – ಈ ಸಸಿಗಳು ಚೆನ್ನಾಗಿ ಬೆಳೆಯುತ್ತವೆ?.

ಬೆಳೆಗಾರರು ತಪ್ಪದೆ ಗಮನಿಸಿ – ಈ ಸಸಿಗಳು ಚೆನ್ನಾಗಿ ಬೆಳೆಯುತ್ತವೆ?.

ಅಡಿಕೆ ತೆಂಗು ಹಾಗೆಯೇ ಇನ್ನೂ ಕೆಲವು ಬೆಳೆ ಬೆಳೆಯುವ ಬೆಳೆಗಾರರು ತಮ್ಮ ತೋಟದ ಒಳಗೆ ಒಮ್ಮೆ ಎಲ್ಲಾ ಮರ, ಸಸಿಗಳನ್ನು ಗಮನಿಸುತ್ತಾ ತಿರುಗಾಡಿ. ಅಲ್ಲಿ ನಮ್ಮ ಗಮನಕ್ಕೆ ಬರುವುದು ಬಿದ್ದ ಬೀಜ ನಮ್ಮ ಕಣ್ಣು ತಪ್ಪಿಸಿ ಅಲ್ಲೇ ಉಳಿದು ಮೊಳೆತು ಸಸಿಯಾಗಿರುವ “ಉರಲು ಹುಟ್ಟಿದ ಸಸಿ” ಎಷ್ಟೊಂದು ಚೆನ್ನಾಗಿ ಬೆಳೆಯುತ್ತದೆ, ಮತ್ತು ಅದರಲ್ಲಿ ಎಷ್ಟು ಚೆನ್ನಾಗಿ ಫಲ ಬರುತ್ತದೆ ಎಂಬ ಅಂಶ. ಇದು ಪ್ರತೀಯೊಬ್ಬ ಬೆಳೆಗಾರನ ತೋಟದಲ್ಲೂ ಕಾಣಲು ಸಿಗುತ್ತದೆ. ಮನಸ್ಸು ಹೇಳುತ್ತದೆ, ಊರಲು ಹುಟ್ಟಿದ ಸಸಿ…

Read more
error: Content is protected !!