ಕೆಂಪಡಿಕೆ ಧಾರಣೆ 49000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….

Read more
ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.

ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.   

ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …

Read more
ಅಲಸಂಡೆ ಬೆಳೆಯಲ್ಲಿ ಸಸ್ಯ ಹೇನು ನಿಯಂತ್ರಣ

ಅಲಸಂಡೆ ಬೆಳೆಯಲ್ಲಿ ಸಸ್ಯ ಹೇನು ನಿಯಂತ್ರಣ

ಅಲಸಂಡೆ ಬೆಳೆಗೆ ಸಸ್ಯ ಹೇನು ಎಂಬ ಕೀಟ ಭಾರೀ ಸಮಸ್ಯೆಯನ್ನು ಉಂಟು ಮಾಡುತ್ತದೆ. ಇದರ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಂಡರೆ ಅಧಿಕ ಲಾಭದ  ಸರ್ವ ರೂತು ತರಕಾರಿ ಎಂದರೆ ಅಲದಂಡೆ. ಈ ಕೀಟವನ್ನು ರಾಸಾಯನಿಕವಾಗಿ, ಜೈವಿಕವಾಗಿ ಹಾಗೆಯೇ ರಾಸಾಯನಿಕ ಬಳಸದೆ ಯಾವ ಯಾವ ವಿಧಾನದಲ್ಲಿ ನಿಯಂತ್ರಣ ಮಾಡಬಹುದು ಎಂಬುದನ್ನು ನೋಡೋಣ. ಅಲಸಂಡೆ ಮಳೆಗಾಲದಲ್ಲಿ – ಚಳಿಗಾಲದಲ್ಲಿ ಬೇಸಿಗೆಯಲ್ಲಿ  ಬೆಳೆಯಬಹುದಾದ ಉತ್ತಮ ತರಕಾರಿ ಬೆಳೆಯಾಗಿದ್ದು ಈ ಬೆಳೆಗೆ ಬರುವ ಪ್ರಮುಖ ಕೀಟ ಹೇನು. ಈ ಹೇನು  ಎಲೆಗಳಿಗೆ ಬಾಧಿಸಿ…

Read more
ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿಗೆ ಯಾಕೆ ಈ ಕೀಟದ ಹಾವಳಿ ಹೆಚ್ಚಾಯಿತು? ಏನು ಪರಿಹಾರ.

ತೆಂಗಿನ ಮರ, ಗಿಡಗಳಿಗೆ ಇತ್ತೀಚೆಗೆ ಕೆಂಪು ಮೂತಿ ಕೀಟದ ಹಾವಳಿ ಭಾರೀ ಹೆಚ್ಚಾಗುತ್ತಿದೆ. ರೈತರು ತೆಂಗು ಬೆಳೆಯುವುದೇ ಅಸಾಧ್ಯ ಎನ್ನಲಾರಂಭಿಸಿದ್ದಾರೆ. ಹೀಗೇ ಮುಂದುವರಿದರೆ ರೈತರಿಗೆ ಸಸಿ ನೆಡುವುದೇ ಕೆಲಸವಾದರೂ ಅಚ್ಚರಿ ಇಲ್ಲ. ಇದನ್ನು ಸರಿಯಾಗಿ ಹದ್ದುಬಸ್ತಿಗೆ ತಾರದೆ ಇದ್ದರೆ ಮುಂದೆ ರೈತರು ತೆಂಗು ಬೆಳೆಸುವುದನ್ನೇ ಬಿಡುವ ಸ್ಥಿತಿ ಬಂದರೂ ಅಚ್ಚರಿ ಇಲ್ಲ. ಯಾವ ಕಾರಣಕ್ಕೆ ಈ ದುಂಬಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣ ಹೇಗೆ? ತೆಂಗಿನ ಮರಗಳಿಗೆ ಬರುವ ಎಲ್ಲಾ ರೋಗಗಳಿಂದಲೂ, ಕೀಟಗಳಿಂದಲೂ  ಪ್ರಭಲವಾದದ್ದು  ಕೆಂಪು ಮೂತಿ ದುಂಬಿ…

Read more
ಎಲೆಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ. ಯಾಕೆ ಗೊತ್ತೇ?

ಸಿಂಪರಣೆಯಿಂದ ಎಲೆ ಚುಕ್ಕೆರೋಗ ವಾಸಿ ಅಸಾಧ್ಯ. ಯಾಕೆ?

ಅಡಿಕೆಗೆ ಬಾದಿತವಾದ ಎಲೆ ಚುಕ್ಕೆರೋಗ ವಾಸಿ ಮಾಡುವುದಕ್ಕೆ ತಜ್ಞರು ಬಹಳಷ್ಟು ಸಲಹೆಗಳನ್ನು ನೀಡುತ್ತಿದ್ದಾರೆ.  ಅವರ ಸಲಹೆಯನ್ನು ಪಾಲಿಸಿದವರಲ್ಲಿ ಈ ರೋಗ ಒಮ್ಮೆ ಹತೋಟಿಯಾದಂತೆ ಕಂಡರೂ ಮತ್ತೆ ನಾನಿದ್ದೇನೆ ಎಂದು ಮರುಕಳಿಸುತ್ತಿದೆ. ದುಬಾರಿ ಬೆಲೆಯ ಶಿಲೀಂದ್ರ ನಾಶಕ- ದುಬಾರಿ ಕೂಲಿ ಸಂಭಾವನೆಯೊಂದಿಗೆ ಎಲೆಚುಕ್ಕೆ ರೋಗ ಓಡಿಸುವ ರೈತರ ಶ್ರಮ ಹೇಳತೀರದು. ಎಲೆ ಚುಕ್ಕೆ ರೋಗವನ್ನು ಅಲ್ಪ ಕಾಲದ ತನಕ ಹತೋಟಿ ಮಾಡಬಹುದೇ ಹೊರತು ಇಲ್ಲದಂತೆ ಮಾಡಲು  ಪ್ರಕೃತಿಯೇ ಸಹಕರಿಸಬೇಕು. ಎಲೆ ಚುಕ್ಕೆರೋಗ ಅಡಿಕೆ ಬೆಳೆಗಾರರ ಪಾಲಿಗೆ ಇಷ್ಟು ದೊಡ್ಡ …

Read more
ಬೆಣ್ಣೆ ಹಣ್ಣುಗಳಲ್ಲಿ ಸರ್ವ ಶ್ರೇಷ್ಟವಾದ ಹಾಸ್ ತಳಿಯನ್ನು ಹೇಗೆ ಬೆಳೆಯಬೇಕು

ಬೆಣ್ಣೆ ಹಣ್ಣುಗಳಲ್ಲಿ ಸರ್ವ ಶ್ರೇಷ್ಟವಾದ ಹಾಸ್ ತಳಿಯನ್ನು ಹೇಗೆ ಬೆಳೆಯಬೇಕು?

ಹಾಸ್ ಹೆಸರಿನ ಬೆಣ್ಣೆಹಣ್ಣು ತಳಿ (Avocado) ಜಾಗತಿಕವಾಗಿ ಮನ್ನಣೆ ಪಡೆದ ಸರ್ವ ಶ್ರೇಷ್ಟ ಹಣ್ಣಾಗಿದ್ದು, ಇದನ್ನು ಕೆಲವು ನಿರ್ದಿಷ್ಟ ವಾತಾವರಣದಲ್ಲಿ ಮಾತ್ರ ಬೆಳೆಯಬಹುದು. ಈ ತಳಿಯ ಬೆಣ್ಣೆ ಹಣ್ಣಿಗೆ ಅದರದ್ದೇ ಆದ ವಿಶಿಷ್ಟ ಗುಣಗಳಿವೆ. ಹಾಗಾಗಿಯೇ ಇದಕ್ಕೆ ಉತ್ತಮ ಬೆಲೆ ಮತ್ತು ಬೇಡಿಕೆ. ಹಾಗಾದರೆ ಹ್ಯಾಸ್ ತಳಿ ಏನು, ಇದನ್ನು ಎಲ್ಲೆಲ್ಲಿ ಬೆಳೆದರೆ ಮಾತ್ರ ಫಲ ಪಡೆಯಬಹುದು ಎಂಬುದನ್ನು ತಿಳಿಯೋಣ. ಬೆಣ್ಣೆ ಹಣ್ಣು, ಅವಕಯಾಡೋ,ದಲ್ಲಿ ಹಲವಾರು ತಳಿಗಳಿವೆ. ಗಾತ್ರದಲ್ಲಿ, ಬಣ್ಣದಲ್ಲಿ, ರಚನೆಯಲ್ಲಿ  ಇರುವ ವ್ಯತ್ಯಾಸಕ್ಕನುಗುಣವಾಗಿ ತಳಿಗಳಿಗೆ ನಾಮಕರಣ…

Read more
ನೇರಳೆ ಮರವನ್ನು ಪೊದೆಯಾಗಿ ಬೆಳೆಸುವ ವಿಧಾನ

ನೇರಳೆ ಮರವನ್ನು ಪೊದೆಯಾಗಿ ಬೆಳೆಸುವ ವಿಧಾನ.

ನೇರಳೆ ಮರ ಇದು ನಮಗೆಲ್ಲಾ ಗೊತ್ತಿರುವಂತದ್ದು. ಮರ ಪೊದೆಯಾಗಿದ್ದರೆ ಕೊಯ್ಯುವುದು ಬಹಳ ಸುಲಭ. ಇದನ್ನು ತರಬೇತಿಗೊಳಿಸುತ್ತಾ ಪೊದೆಯಾಕಾರದಲ್ಲಿ ಬೆಳೆಸಲು ಸಾಧ್ಯ. ನೇರಳೆ ಹಣ್ಣು ಒಂದು ಆರೋಗ್ಯ ಸಂಜೀವಿನಿಯಾಗಿದ್ದು, ಇದರ ಹಣ್ಣಿಗೆ ಭಾರೀ ಬೇಡಿಕೆ. ಇದರ ಬೀಜಕ್ಕೂ ಸಹ ಬೆಲೆ ಇದ್ದು, ಎಲ್ಲಾ ಬೆಳೆಗಳ ಜೊತೆಗೆ ಸ್ವಲ್ಪ ನೇರಳೆ  ಬೆಳೆಯೂ ಇದ್ದರೆ  ಒಳ್ಳೆಯದು. ಹಳ್ಳಿಯ ಹಿರಿಯ ತಲೆಮಾರಿನ ಜನರಿಗೆ ನೇರಳೆ ಹಣ್ಣು , ಕುಂಟು ನೇರಳೆ ಹಣ್ಣು, ಹಾಗೆಯೇ ಇನ್ನಿತರ ಕಾಡು ಹಣ್ಣುಗಳನ್ನು ತಿಂದ ಅನುಭವ ಇದೆ. ಹಿಂದೆ…

Read more
ಅಡಿಕೆ ಮಾರುಕಟ್ಟೆ ಕುಸಿಯುತ್ತಿದೆ ! ಮತ್ತೆ ಯಾವಾಗ ಚೇತರಿಕೆ ಆಗಬಹುದು?

ಅಡಿಕೆ ಮಾರುಕಟ್ಟೆ ಕುಸಿಯುತ್ತಿದೆ ! ಮತ್ತೆ ಯಾವಾಗ ಚೇತರಿಕೆ ಆಗಬಹುದು?   

ಅಡಿಕೆ ಮಾರುಕಟ್ಟೆ ಅನಿರೀಕ್ಷಿತವಾಗಿ ಕುಸಿಯಲಾರಂಭಿಸಿದೆ. 45000 ದಿಂದ 40500 ಕ್ಕೆ ಕುಸಿಯಿತು. ಮುಂದಿನ ವಾರ ಮತ್ತೆ ಕುಸಿತವಾಗುವ ಸೂಚನೆ  ಇದೆ. ಈ ಕುಸಿತ ತಾತ್ಕಾಲಿಕವೇ ಅಥವಾ ಮತ್ತೆ ಏತರಿಕೆ ಆಗಹುದುದೇ ಎಂಬ ಕುತೂಹಲ ನಮ್ಮೆಲ್ಲರದ್ದು. ಒಂದು ತಿಂಗಳ ತನಕ ಈ ಅಸ್ತಿರತೆ ಮುಂದುವರಿಯಲಿದ್ದು, ಮತ್ತೆ ಚೇತರಿಕೆ ಆಗುವ ಸಾಧ್ಯತೆ  ಇದೆ. ಬೆಳೆಗಾರರು ನಿರಾಶರಾಗಬೇಕಾಗಿಲ್ಲ. ಅಡಿಕೆ ಮಾರುಕಟ್ಟೆ ಚೇತರಿಕೆ ಕಾಣುವ ಸೂಚನೆ ಇಲ್ಲ ಎಂಬುದಾಗಿ ಸುದ್ದಿಗಳು ಹರಡುತ್ತಿವೆ. ಆದರೆ ಕೆಲವು ಮೂಲಗಳ ಪ್ರಕಾರ ಮತ್ತೆ ಚೇತರಿಕೆ ಆಗುವ ಸಾಧ್ಯತೆ …

Read more
error: Content is protected !!