ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ

ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ – ಮಾಡಬೇಕಾದದ್ದು ಬೇರೆ ಇದೆ.

ಎಲೆಚುಕ್ಕೆ ರೋಗ ಇಲ್ಲದ ಸ್ಥಳವೇ ಇಲ್ಲ. ಇದಕ್ಕೆ ಬೆಳೆಗಾರರು ಏನು ಸಿಂಪಡಿಸಬೇಕು ಎಂದು ಕೇಳುತ್ತಾರೆ. ಆದರೆ ಮೊದಲು ಮಾಡಬೇಕಾದಾದ ಈ ಕೆಲಸ ಮಾಡದೆ ಸಿಂಪರಣೆ  ಮಾಡಿದರೆ ವಾಸಿಯಾಗುವುದಿಲ್ಲ. ಕೆಲವು ಕಡೆ ಕಡಿಮೆ ಇರಬಹುದು. ಕೆಲವು ಕಡೆ ಉಲ್ಪಣ ಸ್ಥಿತಿಗೆ ತಲುಪಿರಲೂ ಬಹುದು. ನೂರು ಮರಗಳಲ್ಲಿ ಕೆಲವು ಮರಗಳು ಸೋಂಕು  ತಗಲಿಸಿಕೊಳ್ಳದೆಯೂ ಇರಬಹುದು. ಇದೆಲ್ಲಾ ಸಸ್ಯದ ಅಂತರ್ಗತ ಶಕ್ತಿಯ ಮೇಲೆ ಅವಲಂಭಿಸಿದೆ. ಕೆಲವು ಸಾಂಕ್ರಾಮಿಕ ರೋಗಗಳು ತೀವ್ರವಾಗಿ ಹರಡಿದರೂ ಎಲ್ಲರನ್ನೂ ಬಾಧಿಸದೆ ಕೆಲವರನ್ನು ಬಿಟ್ಟಿರಬಹುದು. ಅದು ರೋಗಾಣು ಕೊಟ್ಟ…

Read more
ಅಡಿಕೆ ಧಾರಣೆ ನೀರಸ- ಮುಂದಿನ ಸ್ಥಿತಿ ಏನು

ಅಕ್ಟೋಬರ್ ತಿಂಗಳು ಅಡಿಕೆ ಧಾರಣೆ ನೀರಸ- ಮುಂದಿನ ಸ್ಥಿತಿ ಏನು?

ಅಕ್ಟೋಬರ್ ತಿಂಗಳಲ್ಲಿ ನವರಾತ್ರೆ. ದೀಪಾವಳಿ ಹಬ್ಬಗಳ ಕಾರಣ ಅಡಿಕೆ ಧಾರಣೆ ಏರಿಕೆ ಕಾಣಬಹುದು ಎಂಬ ಆಶಯ ಇತ್ತು. ಆದರೆ ಅದು ನೀರಸವಾಗಿ ಮುಂದುವರಿದಿದೆ. ಮುಂದೆ ಏರಿಕೆ ಆಗಬಹುದೇ ಅಥವಾ ಇಳಿಕೆಯೇ ಎಂಬ ಅನುಮಾನ  ಬೆಳೆಗಾರರನ್ನು ಸಹಜವಾಗಿ ಕಾಡುತ್ತಿದೆ. ಕೆಲವು ಬೆಳವಣಿಗೆಗಳ ಪ್ರಕಾರ ಕೆಂಪಡಿಕೆ ಧಾರಣೆ ಇನ್ನು ಒಂದೆರಡು ತಿಂಗಳ ಕಾಲ ಏರಿಕೆ ಆಗದೆ ಮುಂದುವರಿಯುವ ಸಾಧ್ಯತೆ ಇದೆ. ಚಾಲಿ ಸ್ವಲ್ಪ ಏರಿಕೆ ಆಗುವ ಲಕ್ಷಣ ಕಾಣಿಸುತ್ತಿದೆ. ಚಾಲಿಗೆ 500 ಆಗುತ್ತದೆ ಎಂದು ಕಾದು ಕಾದು ಕಡೆಗೆ 480-485…

Read more
ಅಡಿಕೆ ತೋಟ ಮಾಡಬೇಡಿ – ಸದ್ಯಕ್ಕೆ ಮುಂದೂಡಿ

ಅಡಿಕೆ ತೋಟ ಮಾಡಬೇಡಿ – ಸದ್ಯಕ್ಕೆ ಮುಂದೂಡಿ – ಪರಿಸ್ಥಿತಿ ಅನುಕೂಲಕರವಾಗಿ ಇಲ್ಲ.

ಅಡಿಕೆ ಎಂದರೆ ಚಿನ್ನದ ಬೆಳೆ ಎಂದು ತೋಟ ಮಾಡುವವರು ಅಪರಿಮಿತ ಸಂಖ್ಯೆಯಲ್ಲಿ ಹೆಚ್ಚುತ್ತಿದ್ದಾರೆ. ಆದರೆ ಕಳವಳದ ಸಂಗತಿ ಎಂದರೆ ಪ್ರಕೃತಿ ಅಡಿಕೆ ಬೆಳೆಗೆ ಸ್ವಲ್ಪ ಮಟ್ಟಿಗೆ ಮುನಿಸಿಕೊಂಡಂತೆ ಕಾಣಿಸುತ್ತಿದೆ. ಆದ ಕಾರಣ ಸ್ವಲ್ಪ ಸಮಯದ ವರೆಗೆ ಅಡಿಕೆ ಬೆಳೆ ವಿಸ್ತರಣೆ, ಹೊಸ ತೋಟ ಮಾಡುವುದನ್ನು ನಿಲ್ಲಿಸಿ. ಇರುವ ತೋಟದ ಆರೈಕೆಯನ್ನು ಉತ್ತಮಪಡಿಸಿ ಹೆಚ್ಚಿನ ಇಳುವರಿ ತೆಗೆಯುವ ಬಗ್ಗೆ ಗಮನಹರಿಸಿ. ಅಡಿಕೆ ಬೆಳೆಗೆ ಅದರಲ್ಲೂ ಸಸಿಗಳಿಗೆ ವಿಪರೀತವಾಗಿ ಎಲೆ ಚುಕ್ಕೆ ರೋಗ  ಬಾಧಿಸುತ್ತಿದ್ದು, ಏನೇ ಸಾಹಸ ಮಾಡಿದರೂ ಇದರನ್ನು…

Read more
ಭೂತಾನ್ ದೇಶದ ಅಡಿಕೆ – ಸಾಗರಕ್ಕೆ ಒಂದು ಕೊಡ ನೀರು ಚೆಲ್ಲಿದಂತೆ

ಭೂತಾನ್ ದೇಶದ ಅಡಿಕೆ – ಸಾಗರಕ್ಕೆ ಒಂದು ಕೊಡ ನೀರು ಚೆಲ್ಲಿದಂತೆ.

ಭಾರತ ಸರಕಾರ ನೆರೆಯ ಭೂತಾನ್ ನಿಂದ ಹಸಿ ಅಡಿಕೆಯನ್ನು ಆಮದು ಮಾಡಿಕೊಳ್ಳುವ ಕುರಿತು ಅನುಮತಿ ನೀಡಿದೆ   ಇದು ನಮ್ಮ ದೇಶದ ಉತ್ಪಾದನೆಗೆ ಹೋಲಿಸಿದರೆ ಸಾಗರಕ್ಕೆ ಒಂದು ಕೊಡ ನೀರು ಚೆಲ್ಲಿದಂತೆ. ಸುದ್ದಿ  ಮಾತ್ರ ಭಾರೀ ಎಲ್ಲರಲ್ಲೂ ಆತಂಕವನ್ನು ಸೃಷ್ಟಿಸಿದೆ. ಭಾರತ ಸರಕಾರದ ವಿದೇಶಿ ವ್ಯಾಪಾರದ ನಿರ್ಧೇಶನಾಲಯದ (Directorate general of Foreign Trade ) ಈ ಆಮದಿಗೆ ಅನುಮತಿಸಿದೆ ಎನ್ನಲಾಗುತ್ತಿದೆ. ಈ ನಿರ್ಧೇಶನಾಲಯದ ಅಧಿಕೃತ ವೆಬ್ ಸೈಟ್ ನಲ್ಲಿ ಈ ಕುರಿತಂತೆ ಒಂದು ಸುತ್ತೋಲೆಯೂ ಇದೆ. ಹಾಗಾಗಿ…

Read more
ಅಡಿಕೆಯ ಧಾರಣೆ ಏನಾಗಬಹುದು? ಇಳಿಕೆಯೋ ಏರಿಕೆಯೋ

ಅಡಿಕೆಯ ಧಾರಣೆ ಏನಾಗಬಹುದು? ಇಳಿಕೆಯೋ ಏರಿಕೆಯೋ?

ಅಡಿಕೆ ಧಾರಣೆಯ ಈಗಿನ ಪರಿಸ್ಥಿತಿ ಬೆಳೆಗಾರರನ್ನು ಚಿಂತೆಗೀಡುಮಾಡಿದ್ದು, ಇಳಿಕೆಯಾದೀತೋ ಎಂಬ ಆತಂಕ ಉಂಟುಮಾಡಿದೆ. ಬೆಳೆಗಾರರು ಆತಂಕ ಪಡಬೇಕಾಗಿಲ್ಲ. ಪರಿಸ್ಥಿತಿಗೆ ಅನುಗುಣವಾಗಿ ಈಗ ದರ ಇಳಿಕೆ ಆಗಿದೆ. ಮುಂದೆ ಇದು ಸರಿಯಾಗುತ್ತದೆ. ಈ ಸಮಯದಲ್ಲಿ ದರ ಇಳಿಕೆ ಆಗುವುದು ಸಹಜವಾಗಿದೆ.ಈಗ ಕೃಷಿಕರಿಗೆ ಹಣದ ಅಗತ್ಯ ಇರುತ್ತದೆ. ಬೆಳೆಗಾರರಿಗೆ ಮಾರಾಟ ಮಾಡದೆ ನಿರ್ವಾಹ ಇಲ್ಲದ ಸ್ಥಿತಿ ಇರುತ್ತದೆ. ಅದಕ್ಕೆ ಅನುಗುಣವಾಗಿ ದರ ಇಳಿಕೆ ಆಗುತ್ತದೆ. ಈಗ ಅದದ್ದೂ ಇದೆ. ಬೆಳೆಗಾರರೆಲ್ಲರೂ ಅಧಿಕ ಬೆಲೆ ಸಿಗಬೇಕು ಎಂದು ಬಯಸುತ್ತಾರೆ. ಅದಕ್ಕಾಗಿ ಸಾಧ್ಯವಾದಷ್ಟು…

Read more
3 ವರ್ಷ ತುಂಬುತ್ತಿರುವ ಅಡಿಕೆ ಸಸಿ

3 ವರ್ಷಕ್ಕೆ ಅಡಿಕೆ ಫಲ ಕೊಡಬೇಕಾದರೆ ಏನೇನು ಮಾಡಬೇಕು?

ಅಡಿಕೆ ಸಸಿ ನೆಟ್ಟು ಅದು ಇಳುವರಿ ಬರಲು ಅಥವಾ ಹೂ ಗೊಂಚಲು ಮೂಡಲು ಕೇವಲ 3 ವರ್ಷ ಸಾಕು. ಅದು ನಾವು ಬೆಳೆಸುವ ಕ್ರಮ ಮತ್ತು ತಳಿ ಗುಣದಿಂದ ನಿರ್ಧಾರವಾಗುತ್ತದೆ. ಬಹುತೇಕ ಎಲ್ಲಾ ತಳಿಗಳೂ ಫಸಲು ಕೊಡುವುದು 1 ವರ್ಷ ವಿಳಂಬವಾದರೂ ಹೂ ಗೊಂಚಲನ್ನು ಕೇವಲ 3 ನೇ ವರ್ಷಕ್ಕೆ ತೋರಿಸುತ್ತದೆ. ಅಡಿಕೆ ಸಸಿಯಲ್ಲಿ ಹೂ ಗೊಂಚಲು ಬರಲು ಕೆಲವರು 4-5-6 ವರ್ಷ ತನಕವೂ ಕಾಯುತ್ತಾರೆ. ಇದು ಅವರ ಅಸಮರ್ಪಕ ತೋಟ ನಿರ್ವಹಣೆ ವಿಧಾನದಿಂದ ಆಗುವುದು. ಉತ್ತಮವಾದ…

Read more
ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ

ಕೆಂಪು ರಾಶಿ ಸ್ವಲ್ಪ ಹಿನ್ನಡೆ – ಚಾಲಿಗೆ ಬೇಡಿಕೆ ಕಡಿಮೆ -ಮಾರುಕಟ್ಟೆಗೆ ಮಾಲು ಇಲ್ಲ.

ಕೆಂಪು ರಾಶಿ ಅಡಿಕೆ ಮಾರುಕಟ್ಟೆ ಹೇಗಾದರೂ ಒಮ್ಮೆ 55,000 ತಲುಪಿತು. ಆದರೆ ಶುಕ್ರವಾರದ ಮಾರುಕಟ್ಟೆ, ಭಾನುವಾರದ ತೀರ್ಥಹಳ್ಳಿ ಮಾರುಕಟ್ಟೆಯಲ್ಲಿ ಹಾಗೂ ಇಂದು 12-09-2022 ಸಾಗರ, ಶಿವಮೊಗ್ಗದಲ್ಲಿನ ವ್ಯವಹಾರ ನೋಡುವಾಗ ಸ್ವಲ್ಪ ಸ್ವಲ್ಪ ಹಿಂದೆ ಬರುವ ಲಕ್ಷಣ ಕಾಣಿಸುತ್ತಿದೆ.  ನಿಖರವಾಗಿ ಹಿಂದೆ ಬಂತು ಎಂಬಂತಿಲ್ಲ. ಇನ್ನೂ ಒಂದೆರಡು ದಿನಗಳ ಮಾರುಕಟ್ಟೆ ಸ್ಥಿತಿ ನೋಡಿ ಅಂದಾಜು ಮಾಡಬಹುದಷ್ಟೇ. ಚಾಲಿ ಮಾರುಕಟ್ಟೆಯಲ್ಲಿ ಖಾಸಗಿಯವರು ಸ್ವಲ್ಪ ಮುಂದೆ ಬಂದಿದ್ದಾರೆ. ಅಡಿಕೆ ಬರುತ್ತಿಲ್ಲ ಎಂಬ ಕಾರಣಕ್ಕೆ ದರ ಏರಿಸಲಾಗಿದೆ ಎನ್ನುತ್ತಾರೆ. ಚಾಲಿ ದರ ಏರಿಕೆ-…

Read more
ಚಾಲಿ ಅಡಿಕೆ ತುಸು ಹಿಮ್ಮುಖ- ಕೆಂಪು ರಾಶಿ ಮಾರುಕಟ್ಟೆ ಸ್ಥಿರ

ಚಾಲಿ ಅಡಿಕೆ ತುಸು ಹಿಮ್ಮುಖ- ಕೆಂಪು ರಾಶಿ ಮಾರುಕಟ್ಟೆ ಸ್ಥಿರ.

ಚಾಲಿ ಅಡಿಕೆ ಧಾರಣೆಯಲ್ಲಿ ಸ್ವಲ್ಪ ಹಿಮ್ಮುಖವಾಗಿದೆ ಎಂಬ ಸುದ್ದಿ. ಹಾಗೆಂದು ದೊಡ್ಡ ಇಳಿಕೆ ಆಗಿಲ್ಲ. ದರ ಮೇಲೆ ಏರಲಿಲ್ಲ ಎಂದಷ್ಟೇ ಹೇಳಬಹುದು. ಕ್ಯಾಂಪ್ಕೋ ತನ್ನ ಸೂಚಿತ ಮಾಮೂಲಿ ದರವನ್ನೇ ಮುಂದುವರಿಸಿದೆ. ಆದರೆ ಗುಣಮಟ್ಟದ ಹೆಸರಿನಲ್ಲಿ ಅಡಿಕೆ ಖರೀದಿಯಲ್ಲಿ  ಸ್ವಲ್ಪ ಹಿಮ್ಮುಖ ಅಷ್ಟೇ. ಒಳ್ಳೆಯ ಅಡಿಕೆಗೆ ಖಾಸಗಿಯವರು 48,000-48500  ತನಕ ಖರೀದಿ ಮಾಡುತ್ತಿದ್ದಾರೆ. ಪರಿಸ್ಥಿತಿ  ಪಿತೃ ಪಕ್ಷ ಮುಗಿಯುವ ತನಕ ಹೀಗೇ ಮುಂದುವರಿಯಲಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ. ಬೆಳೆಗಾರರು ನಿರಾಶರಾಗಬೇಕಾಗಿಲ್ಲ. ಅಡಿಕೆಗೆ ಬೇಡಿಕೆ ಇದೆ. ಬೆಲೆಯೂ ಬರುತ್ತದೆ….

Read more
ಚಾಲಿ, ಕೆಂಪು ಎರಡೂ ತೇಜಿ

ಚಾಲಿ, ಕೆಂಪು ಎರಡೂ ತೇಜಿ- ಬೆಳೆಗಾರರ ಬೆಲೆ ನಿರೀಕ್ಷೆ ಇನ್ನೂ ಮುಂದೆ.

ಚಾಲಿ ಅಡಿಕೆ ಧಾರಣೆ ನಿರೀಕ್ಷೆಯಂತೆ ಈ ತಿಂಗಳಾಂತ್ಯದ ಒಳಗೆ ಕಿಲೋ.500 ತಲುಪುವುದು ಬಹುತೇಕ ಖಾತ್ರಿಯಾದಂತಾಗಿದೆ. ಜೊತೆಗೆ ಕೆಂಪಡಿಕೆಯೂ ಏರಿಕೆ ಕಂಡಿದೆ. ಅದರೆ ನಿರೀಕ್ಷೆ ಮಾತ್ರ 60,000 ದ ವರೆಗೆ ಎಂದಿತ್ತು. ಅದಕ್ಕೆ ಪೂರಕವಾಗಿ ಪರಿಸ್ಥಿತಿಯೂ ಇತ್ತು. ಆದರೆ ದರ ಆ ಮಟ್ಟಕ್ಕೆ ಏರಿಕೆಯಾಗಲಿಲ್ಲ. 49,000 ದ ಆಸುಪಾಸಿನಲ್ಲಿದ್ದುದು, 52,000 -53,000 ಕ್ಕೆ ಏರಿಕೆಯಾಯಿತಷ್ಟೇ. ಕೆಂಪಡಿಕೆಯ ಮಾರುಕಟ್ಟೆಯನ್ನು ಚಾಲಿ ನುಂಗಿದಂತಾಗಿದೆ. ಸಾಮಾನ್ಯವಾಗಿ ಹಿಂದೆ ಆಗಸ್ಟ್ ತಿಂಗಳಿನಿಂದ ಸಪ್ಟೆಂಬರ್ ತಿಂಗಳ ನವರಾತ್ರೆ ವರೆಗೆ ಅಡಿಕೆ ತೇಜಿ ಆಗುವುದು ಮಾಮೂಲು. ಹಿರಿಯ…

Read more
ಅಡಿಕೆ ಮಾರುಕಟ್ಟೆಗೆ ಹೊಸ ಹುರುಪು- ಕೆಂಪು 52,000 ಚಾಲಿ 48,500

ಅಡಿಕೆ ಮಾರುಕಟ್ಟೆಗೆ ಹೊಸ ಹುರುಪು- ಕೆಂಪು 52,500 ಚಾಲಿ 48,500

ಈ ವಾರದಲ್ಲಿ ಅಡಿಕೆ ಮಾರುಕಟ್ಟೆಗೆ ಹೊಸ ಹುರುಪು ಬಂದಿದೆ. ಚಾಲಿ ಅಡಿಕೆದರ ಏರುತ್ತಿದೆ. ಕೆಂಪಡಿಕೆಯೂ ಏರಿಕೆಯಾಗಲಾರಂಭಿಸಿದೆ. ಇಂದು ಹೊಸ ಚಾಲಿ ಖಾಸಗಿ ಮಾರುಕಟ್ಟೆಯಲ್ಲಿ 48,500 ತನಕ ಖರೀದಿ ಮಾಡುವುದಾಗಿ ದರ ಪ್ರಕಟಿಸಿರುತ್ತಾರೆ. ಕೆಂಪಡಿಕೆ ಸರಾಸರಿ 52,500 ದಾಟಿದೆ. ಅಡಿಕೆ ಬೆಳೆಗಾರರ ಬಹುದಿನಗಳ ಆಸೆ ಇನ್ನು ಮುಂದಿನ ದಿನಗಳಲ್ಲಿ ಈಡೇರುವ ನಿರೀಕ್ಷೆ ಇದೆ. ಎಲ್ಲೆಡೆಯಲ್ಲೂ ಅಡಿಕೆಗೆ ಬೆಲೆ ಏರಿದ್ದೇ ಸುದ್ದಿ, ಎಲ್ಲರಿಗೂ ಖುಷಿಯೋ ಖುಷಿ. ದೇಶದ ಮಾರುಕಟ್ಟೆಗೆ  ಮಲೇಶಿಯಾ, ಇಂಡೋನೇಶಿಯಾ, ಶ್ರೀಲಂಕಾ ಗಳಿಂದ ಅಡಿಕೆ ಆಮದು ಆಗುತ್ತಲೇ ಇದೆ….

Read more
error: Content is protected !!