ಬೇರು ಹುಳ ಬಾಧಿತ ತೆಂಗು

ತೆಂಗಿಗೂ ತೊಂದರೆ ಮಾಡುತ್ತಿದೆ- ಬೇರು ಹುಳ

ಎಷ್ಟೇ ಪೊಷಕಾಂಶ ಒದಗಿಸಿದರೂ ಸ್ಪಂದಿಸದೆ, ಮರದ ಗರಿಗಳು ಸದಾ ತಿಳಿ ಹಸುರು ಬಣ್ಣದಲ್ಲಿದ್ದರೆ, ಇಳುವರಿ ತೀರಾ ಕಡಿಮೆ  ಇರುವುದೇ ಆಗಿದ್ದರೆ   ಅಂತಹ ಮರಕ್ಕೆ ಬೇರು ಹುಳದ ತೊಂದರೆ  ಇದೆ ಎಂದು ಸಂಶಯ ಪಡಬಹುದು. ತೆಂಗಿನ ಮರಕ್ಕೆ  ಸಾಕಷ್ಟು ನೀರು ಒದಗಿಸಿ- ಗೊಬ್ಬರ ಕೊಡಿ ಒಂದು ವರ್ಷ ತನಕ ಕಾಯಿರಿ. ಎಲೆಗಳು ಹಸುರಾಗದೇ, ಗರಿಗಳು ಹೆಚ್ಚದೇ ಇದ್ದರೆ ಅಂತಹ ಮರಗಳಿಗೆ ಬೇರು ಹುಳ ಬಾಧಿಸಿದೆ ಎಂದು ಖಾತ್ರಿ ಮಾಡಿಕೊಳ್ಳಬಹುದು. ಕರ್ನಾಟಕದ ಅಡಿಕೆ ಬೆಳೆಯುವ ಪ್ರದೇಶಗಳಲ್ಲೆಲ್ಲಾ ಬಹುತೇಕ ಹೆಚ್ಚು ಕಡಿಮೆ …

Read more
Wide bole

ತೆಂಗಿನ ಮರಕ್ಕೆ ಬೊಡ್ಡೆ ಬರುವುದು ಹೇಗೆ ಮತ್ತು ಇದರ ಪ್ರಯೋಜನ.

ತೆಂಗಿನ ಮರದ ಬುಡದಲ್ಲಿ ಬೆಳೆಯುವ ಒಂದು ರೀತಿಯ ಬೊಡ್ಡೆಯೇ (Bole) ಆ ಮರದ ಶಕ್ತಿ ಕೇಂದ್ರ. ಯಾವ ತೆಂಗಿನ ಮರಕ್ಕೆ  ಬೊಡ್ಡೆ ಇದೆಯೋ ಆ ಮರ ಸ್ವಲ್ಪ ಮಟ್ಟಿಗೆ ಬರ ನಿರೋಧಕ ಶಕ್ತಿಯನ್ನು ಪಡೆದಿರುತ್ತದೆ.    ಮರಳುಗಾಡಿನಲ್ಲಿ ವಾಸಿಸುವ ಒಂಟೆ ತನ್ನ ಬೆನ್ನಿನ ಭಾಗದಲ್ಲಿ ಆಪತ್ಕಾಲಕ್ಕೆ ಬೇಕಾಗುವ ಆಹಾರ ನೀರನ್ನು ಲಭ್ಯವಿರುವಾಗ ಸಂಗ್ರಹಿಸಿಟ್ಟುಕೊಂಡು ಅಭಾವದ ಸಮಯದಲ್ಲಿ  ಅದನ್ನು ಬಳಸಿಕೊಂಡು ಬದುಕುತ್ತದೆ. ಅದೇ ರೀತಿ ಕೆಲವು ಪ್ರಾಣಿಗಳು, ಪಕ್ಷಿಗಳು, ಸಸ್ಯಗಳು ಆಪತ್ಕಾಲಕ್ಕೆ  ಬಳಕೆಗಾಗುವಂತೆ ತಮ್ಮಲ್ಲಿ ಆಹಾರ ದಾಸ್ತಾನು ಇಟ್ಟುಕೊಂಡಿರುತ್ತವೆ….

Read more
ಉತ್ತಮ ಇಳುವರಿ ಕೊಡುವ ಮರಗಳಿಂದ ಬೀಜ ಆಯ್ಕೆ ಮಾಡಬೇಕು.

ತೆಂಗು – ಲೋಕಲ್ ತಳಿಗಳಲ್ಲಿ ಉತ್ತಮ ಬೀಜ ಆಯ್ಕೆ.

ಮೂಲದಿಂದಲೂ ನಾವು ತೆಂಗು ಬೆಳೆಸುವಾಗ ಸ್ಥಳೀಯ ತಳಿಯನ್ನೇ ಆಯ್ಕೆ ಮಾಡುತ್ತಾ ಬಂದಿದ್ದೇವೆ. ಎಲ್ಲಿ ಉತ್ತಮ ತೆಂಗಿನ ಸಸಿ ಇದೆಯೋ ಅಲ್ಲಿಂದ ತೆಂಗಿನ ಬೀಜ ತಂದು ಅದನ್ನು ಬೀಜಕ್ಕಿಟ್ಟು ಅದು ಸಸಿಯಾದ ನಂತರ ನೆಡುವುದು ನಮ್ಮ ಕ್ರಮವಾಗಿದೆ. ಈಗಿನ ಆಧುನಿಕ ಹೈಬ್ರೀಡ್ ತಾಂತ್ರಿಕತೆಯ ಬೀಜೋತ್ಪಾದನೆಗೂ  ಮೂಲ ಇದೇ. ನೈಸರ್ಗಿಕ ಮಿಶ್ರ ಪರಾಗಸ್ಪರ್ಶ: ಸ್ಥಳಿಯ ತಳಿಗಳು ನೈಸರ್ಗಿಕವಾಗಿ  ಪರಾಗಸ್ಪರ್ಶಕ್ಕೆ ಒಳಗಾಗಿ ಆದವುಗಳು. ಇಂದು ನಮ್ಮಲ್ಲಿರುವ 95% ತೆಂಗಿನ ತೋಟಗಳು ಇದೇ ವಿಧಾನದಲ್ಲಿ ಆಯ್ಕೆ ಮಾಡಿದ್ದೇ ಆಗಿದೆ. ಇಂತಲ್ಲಿ  ಕೆಲವು ಉತ್ತಮ…

Read more
ತೆಂಗಿನ ಮರದ ಸುಳಿ ಕೊಳೆ

ತೆಂಗಿನ ಮರದ ಸುಳಿ ಕೊಳೆಯುವುದು ಯಾಕೆ? ಪರಿಹಾರ ಏನು?

ತೆಂಗಿನ ಮರದ ಶಿರ ಹೋಗುವುದಕ್ಕೆ ವಾತಾವರಣ ಕಾರಣ. ಇದು ಯಾವ ಪಕ್ಷಿ, ಪ್ರಾಣಿಯಿಂದಾಗಿ ಆಗುವುದಲ್ಲ. ಇದಕ್ಕೆ ಪ್ರಾರಂಭಿಕ ಹಂತದಲ್ಲಿ ಮಾತ್ರ ಚಿಕಿತ್ಸೆ   ಫಲಕಾರಿ. ಹಳ್ಳಿಯ ಜನ ಈಗಲೂ ಕುಪುಳು ಹಕ್ಕಿ Greater Coucal (ಬಾರದ್ವಾಜ ಪಕ್ಷಿ) ತೆಂಗಿನ ಗರಿಯಲ್ಲಿ ಕುಳಿತು ಮೂತ್ರ ಮಾಡಿದರೆ ತೆಂಗಿನ ಮರವೇ ಸತ್ತು ಹೋಗುತ್ತದೆ ಎಂದು ತಿಳಿದಿದ್ದಾರೆ. ಇದು ಈ ಹಕ್ಕಿಯಿಂದಾಗಿ ಆಗುವುದಲ್ಲ. ಹಕ್ಕಿಗಳು ಮೂತ್ರವನ್ನೇ ಮಾಡಲಾರವು. ಇದು ವಾತಾವರಣದ ಅನುಕೂಲ ಸ್ಥಿತಿ ಒದಗಿದಾಗ ಕೊಳೆತಿನಿ ಶಿಲೀಂದ್ರ ಬಾಧಿಸಿ ಉಂಟುಮಾಡುವ ರೋಗ.  ಸುಳಿ…

Read more
error: Content is protected !!