ಇಪಿಎನ್ (EPN) ಸಿಂಪಡಿಸಿ- ಬೇರು ಹುಳ ನಿಯಂತ್ರಿಸಿ.

ಬೇರು ಹುಳ ಎಂಬುದು ಪ್ರಕೃತಿಯಲ್ಲಿಯೇ ಇರ್ವ ಒಂದು ಜೀವಿ. ನಿಸರ್ಗದಲ್ಲಿರುವ ಬೇರೆ ಬೇರೆ ಸಸ್ಯಗಳಿಗೆ  ಬೇರೆ ಬೇರೆ ನಮೂನೆಯ ಬೇರು ಹುಳಗಳು ತೊಂದರೆ ಮಾಡುತ್ತವೆ. ಹಾಗೆಯೇ ಪ್ರಕೃತಿಯಲ್ಲಿ ಅದನ್ನು ನಾಶಮಾಡುವ ಜೀವಿಯೂ ಇದೆ. ಅಂತಹ ಒಂದು ಜೀವಿ EPN. ಇದನ್ನು ಹೊಲದಲ್ಲಿ ಬಿಡುವುದರಿಂದ ಅವು ನೈಸರ್ಗಿಕವಾಗಿ ಬೇರು ಹುಳವನ್ನು ನಾಶ ಮಾಡುತ್ತವೆ.   ಇದು ಸಕಾಲ: ಮೇ ತಿಂಗಳಲ್ಲಿ ಬೇರು ಹುಳದ ದುಂಬಿ ಭೂಮಿಯಿಂದ ಹೊರಬಂದು ಗಂಡು ಹೆಣ್ಣು ಜೋಡಿಯಾಗಿ ಮತ್ತೆ ಮಣ್ಣಿಗೆ ಸೇರಿ ಅಲ್ಲಿ ಮೊಟ್ಟೆ…

Read more

ಕೊಕ್ಕೋ ಗಿಡ – ಪ್ರೂನಿಂಗ್ ಮಾಡುವ ವಿಧಾನ.

ಕೊಕ್ಕೋ ಸಸ್ಯ ಬೆಳೆಯಲು ಬಿಟ್ಟರೆ ಮರವೇ ಆಗಬಹುದು. ಹಾಗೆಂದು ಯಾವ ಬೆಳೆಗೂ ತೊಂದರೆ ಇಲ್ಲವಾದರೆ  ಅದನ್ನು ಅದರಷ್ಟಕ್ಕೇ ಬೆಳೆಯಲು ಬಿಡಿ. ಇಳುವರಿ ಹೆಚ್ಚುತ್ತದೆ. ಮಿಶ್ರ ಬೆಳೆಯಾಗಿ ಅಡಿಕೆ ತೋಟದಲ್ಲಿ ಬೆಳೆಸುವಾಗ ನಿಮ್ಮ ಒಡಾಟಕ್ಕೆ,ನೀರಾವರಿ, ಕೊಯಿಲು ಮತ್ತು ಇನ್ನಿತರ ಅನುಕೂಲಕ್ಕೆ ಸಮರ್ಪಕವಾಗಿ ಪ್ರೂನಿಂಗ್ ಮಾಡಬೇಕು. ಕೊಕ್ಕೋ ಬೆಳೆ ಕರಾವಳಿ, ಮಲೆನಾಡು, ಅರೆ ಮಲೆನಾಡು, ಹಾಗೆಯೇ  ಅಡಿಕೆ ತೆಂಗು ಬೆಳೆಯುವ ಬಯಲು ನಾಡಿಗೂ ಇದು  ಉತ್ತಮ ಅದಾಯದ  ಬೆಳೆ. ಕೊಕ್ಕೋವನ್ನು  ಅಡಿಕೆ, ತೆಂಗಿನ ತೋಟದಲ್ಲಿ ಮಿಶ್ರ ಬೆಳೆಯಾಗಿ ಬೆಳೆಯಬಹುದು. ಕೊಕ್ಕೋ…

Read more

ಅಡಿಕೆ- ಈ ರೀತಿಯಾಗಿ ಯಾಕೆ ಉದುರುತ್ತಿದೆ?

ಈ ವರ್ಷ ಅಡಿಕೆ ಬೆಳೆಗಾರರು ಬಹಳ ಸಮಸ್ಯೆಯನ್ನು  ಅನುಭವಿಸಿದ್ದಾರೆ. ಮೊದಲು ಸಿಂಗಾರ ಒಣಗುವ ಸಮಸ್ಯೆ , ನಂತರ ಮಿಡಿ ಕಾಯಿ ಉದುರುವುದು, ಈಗ ಮತ್ತೆ ಬಲಿಯುತ್ತಿರುವ (ಹಸ) ಕಾಯಿಗಳ ಉದುರುವಿಕೆ. ಬರೇ ಉದುರುವುದು ಮಾತ್ರವಲ್ಲ. ಕಾಯಿಯಲ್ಲಿ  ಸುಟ್ಟಂತಹ ಕಪ್ಪು ಕಲೆಗಳಿವೆ. ಕೊಳೆತ ಇಲ್ಲ. ಇದು ಯಾವ ಸಮಸ್ಯೆ ಎಂಬುದು ನಿಘೂಢವಾಗಿದೆ. ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ಹೇಳುತ್ತಿದ್ದಾರೆ. ಕಳೆದ 2 ವರ್ಷಗಳಲ್ಲಿ  ಅದೇನೂ ಮಹಾ ಮಳೆಯೋ, ಅಡಿಕೆಗೆ ಭಾರೀ ಕೊಳೆ ರೋಗ ಬಂತು. ಸುಮಾರು 25-30% ಬೆಳೆ ನಷ್ಟವಾಯಿತು. ಈ…

Read more

ತೆಂಗಿನ ಮರದಲ್ಲಿ ಹರಳು(ಮಿಡಿ ) ಉದುರುವುದು ಯಾಕೆ?

ಬಹಳ ಜನ ತಮ್ಮ ತೆಂಗಿನ ಮರದ ಹೂ ಗೊಂಚಲಿನಲ್ಲಿ ಮಿಡಿ ಕಾಯಿ (ಹರಳು) ಉಳಿಯುವುದೇ ಇಲ್ಲ ಎನ್ನುತ್ತಾರೆ. ಕೆಲವರು ಒಂದು ಎರಡು ಮಾತ್ರ ಉಳಿಯುತ್ತದೆ ಎನ್ನುತ್ತಾರೆ. ಕೆಲವರು ಎಲ್ಲಾ ಮಿಡಿಗಳೂ ಪೊಳ್ಳೇ ಆಗುತ್ತವೆ ಎನ್ನುತ್ತಾರೆ. ತೆಂಗಿನ ಮರದ ಹೂ ಗೊಂಚಲಿನಲ್ಲಿ ಮಿಡಿಗಳು ಉದುರಲು ಬೇರೆ ಬೇರೆ ಕಾರಣಗಳು ಇರುತ್ತವೆ. ಮರದ ಲಕ್ಷಣ , ನೀಡುವ ಪೋಷಕಾಂಶ, ಹವಾಮಾನ ಮತ್ತು ಹೊಲದ ಸ್ಥಿತಿಗಳನ್ನು ಅವಲಂಭಿಸಿ ಅದಕ್ಕೆ ಯವ ಕಾರಣ ಎಂಬುದನ್ನು ನಿರ್ಧರಿಸಬಹುದು. ತೆಂಗಿನ ಮರದ ಹೂವು ವ್ಯವಸ್ಥೆ: ತೆಂಗು…

Read more
ಸುಳಿ ಮುರುಟಿದ ಅಡಿಕೆ ಗಿಡ

ಅಡಿಕೆ ಸಸ್ಯಗಳು ಮುರುಟಿಕೊಳ್ಳುವುದೇಕೆ? ಪರಿಹಾರ ಏನು?

ಅಡಿಕೆ ಸಸ್ಯಗಳ ಸುಳಿ ಮುರುಟಿಕೊಳ್ಳುವಿಕೆ ಮತ್ತು ಶಿರಭಾಗ ಬಾಗಿ ತಿರುಗುವಿಕೆ, ಗರಗಸ ಗಂಟು ಇವೆಲ್ಲಾ ಒಂದು ಶಾರೀರಿಕ ಸಮಸ್ಯೆಗಳು.ಕೆಲವು ಪ್ರಾಥಮಿಕ ಹಂತದಲ್ಲಿರುವವುಗಳನ್ನು ಸರಿಪಡಿಸಲು ಸಾಧ್ಯವಾಗುತ್ತದೆ. ಆದರೆ ಇದು ಸ್ವಲ್ಪ ನಿಧಾನ ಪ್ರಕ್ರಿಯೆ. ಗೊಬ್ಬರ ನಿರ್ವಹಣೆ ಮತ್ತು ಅಗತ್ಯ ಬೇಸಾಯ ಕ್ರಮದಲ್ಲೇ ಇದನ್ನು  ಸರಿಪಡಿಸಿಕೊಳ್ಳಲು ಸಾಧ್ಯ. ನೂರು ಅಡಿಕೆ ಮರಗಳಲ್ಲಿ ಕನಿಷ್ಟ 10 ಆದರೂ ಈ ತರಹ ಸುಳಿ ಮುರುಟುವುದು, ಗರಿ ಬಿಡಿಸಿಕೊಳ್ಳದೆ ಅಲ್ಲಿಗೆ ಗುಛ್ಛವಾಗುವುದು ಇರುತ್ತದೆ. ಇದಕ್ಕೆ ಪ್ರಾದೇಶಿಕ ಇತಿ ಮಿತಿ ಇಲ್ಲ. ಇದನ್ನು ಕೆಲವರು ಹಿಡಿ…

Read more

ಅಡಿಕೆಯ ಗೊನೆ ಕಳಚಿ ಬೀಳುವುದಕ್ಕೆ ಕಾರಣ ಇದು.

ಅಡಿಕೆ  ಬೆಳೆಯುವವರು  ತಾವು ಬೆಳೆಸಿದ ಸಸಿಗಳ ಚೊಚ್ಚಲ ಫಸಲನ್ನು  ನೋಡಿ ಖುಷಿ ಪಡುತ್ತಾರೆ. ಅದರೆ  ಕೆಲವೊಮ್ಮೆ ಮಳೆಗಾಲದಲ್ಲಿ ಈ ಹೊಸ ಫಸಲು ಗೊನೆ ಸಮೇತ ಕೆಳಗೆ ಬೀಳುತ್ತದೆ.   ಯಾಕೆ ಹೀಗಾಯಿತು. ಯಾವ ರೋಗ ಎಂದು ಸಿಕ್ಕ ಸಿಕ್ಕವರ ಜೊತೆಯಲ್ಲಿ ಸಲಹೆ , ಔಷಧಿ ಕೇಳಬೇಡಿ. ಇದು ಮೊದಲ ಫಸಲಿನಲ್ಲಿ ಸಾಮಾನ್ಯ. ಇದಕ್ಕೆ ಯಾವ ಔಷಧಿಯೂ ಬೇಕಾಗಿಲ್ಲ. ಪೋಷಕಾಂಶಗಳ ಬಳಕೆಯಲ್ಲಿ ಸಮತೋಲನ ಕಾಯ್ದುಕೊಳ್ಳಿ. ಯಾಕೆ ಗೊನೆ ಬೀಳುತ್ತದೆ: ಅಡಿಕೆ ಸಸಿಗಳಲ್ಲಿ ಫಸಲು ಪ್ರಾರಂಭವಾಗಲು ಮೂರು-ನಾಲ್ಕು- ಐದು ವರ್ಷ  ಬೇಕಾಗುತ್ತದೆ…

Read more
areca nut plants

ಅಡಿಕೆಗಿಡ ನೆಡುವಾಗ ಟ್ರೆಂಚ್ ಪದ್ದತಿ ಬೇಡ- ಗಿಡ ಸೊರಗುತ್ತದೆ.

ಅಡಿಕೆ, ಮುಂತಾದ ಸಸ್ಯಗಳಿಗೆ ತಂತು ( Fiber roots) ಬೇರು ಮಾತ್ರ ಇರುತ್ತದೆ. ಈ ತಂತು ಬೇರುಗಳಲ್ಲಿ  ಮತ್ತೆ ಕವಲುಗಳು ಒಡೆದು ಬೇರು ವ್ಯೂಹ ರಚನೆಯಾಗುತ್ತದೆ. ಈ ಬೇರುಗಳು ತುಂಬಾ ಮೃದುವಾಗಿರುತ್ತವೆ. ಹೆಚ್ಚಿನ ತೇವ, ಅಧಿಕ ಬಿಸಿಯನ್ನು ತಡೆದುಕೊಳ್ಳಲಾರವು. ಆದ ಕಾರಣ ನಾವು ಟ್ರೆಂಚ್ ಪದ್ದತಿಯಲ್ಲಿ ಅಡಿಕೆ ಸಸಿ ನೆಟ್ಟರೆ ಅದರ ಬೇರುಗಳಿಗೆ ತೊಂದರೆಯಾಗಿ ಬೆಳವಣಿಗೆಗೆ ಅನನುಕೂಲವಾಗುತ್ತದೆ. ಸಸ್ಯಗಳ ಬೆಳವಣಿಗೆಗೆ ಬೇರುಗಳೇ ಸರ್ವಾಧಾರ. ಬೇರುಗಳ ರಕ್ಷಣೆ ಮತ್ತು ಅವುಗಳ ಪ್ರಸರಣಕ್ಕೆ ಎಷ್ಟು ಅನುಕೂಲ ಮಾಡಿಕೊಡುತ್ತೇವೆಯೋ ಅಷ್ಟು ಆ…

Read more
ಹೈಬ್ರೀಡ್ ಮರದ ಕಾಯಿ ಗೊಂಚಲು

ತೆಂಗಿನ ಹೈಬ್ರೀಡ್ ತಳಿಗಳು – ನಿಮಗೆ ಇದು ತಿಳಿದಿರಲಿ.

ಒಂದು ತಳಿಯ ಅಧಿಕ ಉತ್ಪಾದನೆಗೆ , ಅಥವಾ ತಳಿ ಉನ್ನತೀಕರಣಕ್ಕೆ  ಮತ್ತೊಂದು ತಳಿ ಮೂಲದಿಂದ ಕ್ರಾಸಿಂಗ್ ಮಾಡಿ ಪಡೆಯುವ ಹೊಸ ತಲೆಮಾರಿನ ತಳಿಗೆ ಹೈಬ್ರೀಡ್ ತಳಿ ಎನ್ನುತ್ತಾರೆ. ಇದು ಯಾವುದೋ ಅಧಿಕ ಇಳುವರಿ ಕೊಡುವ ಯಾರದೋ ಹಿತ್ತಲಲ್ಲಿರುವ ಮರದಿಂದ ಆಯ್ಕೆ ಮಾಡಿದ ಬೀಜ ಆಗಿರುವುದಿಲ್ಲ. ಗುರುತು ಪಡಿಸಿದ ಮರದ ಹೆಣ್ಣು ಹೂವಿಗೆ ಆಯ್ಕೆ ಮಾಡಿದ ಮರದ ಗಂಡು ಹೂವಿನ ಪರಾಗವನ್ನು ಕೈಯಿಂದ ( ಕೃತಕ) ಪರಾಗಸ್ಪರ್ಶ ಮಾಡಿ, ಅದರಲ್ಲಿ ಕಾಯಿ ಕಚ್ಚಿದ ಬೀಜವನ್ನು  ಅಭ್ಯಸಿಸಿ ಬಿಡುಗಡೆ ಮಾಡಿದ …

Read more
ಹೊಸತಾಗಿ ತೋಟ ಮಾಡುತ್ತೀರಾ

ಹೊಸತಾಗಿ ತೋಟ ಮಾಡುತ್ತೀರಾ ? ಹೀಗೆ ಮಾಡಿ.

ಹೊಸತಾಗಿ ಅಡಿಕೆ ಸಸಿಗಳನ್ನು  ನೆಡುವಾಗ ಸಾಂಪ್ರದಾಯಿಕ  ಅಂತರದಲ್ಲಿ  ಸ್ವಲ್ಪ ಬದಲಾವಣೆ ಮಾಡಿ ಅಷ್ಟೇ ಸಸಿ ಹಿಡಿಸಿ  ಬೇರೆ  ಬೇರೆ ಅಂತರದಲ್ಲಿ ನಾಟಿ ಮಾಡಿದರೆ  ಮಿಶ್ರ ಬೆಳೆ ಬೆಳೆಸಲು ಸುಲಭ. ಭವಿಷ್ಯದಲ್ಲಿ ಕೆಲಸಗಾರರ ಸಮಸ್ಯೆಗೆ ಇದು ಪರಿಹಾರವಾಗಲಿದೆ. ಮುಂದಿನ ದಿನಗಳಲ್ಲಿ ಕೆಲಸಗಾರರು ಸಿಗುತ್ತಾರೆ ಎಂಬ ಆಶೆ ಬೇಡ. ಇಷ್ಟಕ್ಕೂ ಕೆಲಸಗಾರರಿಗೆ ಕಾಲ ಕಾಲಕ್ಕೆ ಏರಿಕೆಯಾಗುವ ಮಜೂರಿಯನ್ನು ಕೊಡಲು ಕೃಷಿಯ ಉತ್ಪಾದನೆ ಸಾಲದು. ಹೀಗಿರುವಾಗ ನಮಗೆ ಇರುವ ಆಯ್ಕೆ ಕೆಲಸದವರ ಅವಲಂಬನೆಯನ್ನು ಕಡಿಮೆ ಮಾಡುವುದು ಒಂದೇ. ಇದಷ್ಟೇ ಅಲ್ಲ. ಒಂದು…

Read more
areca garden with out tilling

ಅಡಿಕೆ- ಬುಡ ಬಿಡಿಸಿ ಗೊಬ್ಬರ ಕೊಡಬೇಕಾಗಿಲ್ಲ.

ಬಹಳ ಜನ ಅಡಿಕೆ , ತೆಂಗಿನ ಮರಗಳಿಗೆ ಗೊಬ್ಬರ ಇತ್ಯಾದಿ ಹಾಕುವಾಗ ಮರದ ಬುಡ ಭಾಗವನ್ನು ಕೆರೆದು ಆ ಅವಕಾಶದ ಒಳಗೆ  ರಾಸಾಯನಿಕ ಗೊಬ್ಬರ, ಕೊಟ್ಟಿಗೆ ಗೊಬ್ಬರ ಕೊಟ್ಟು ಮತ್ತೆ ಮುಚ್ಚುತ್ತಾರೆ.  ಇದಕ್ಕೆ ತಗಲುವ ಖರ್ಚು ಗೊಬ್ಬರಕ್ಕಿಂತ ಹೆಚ್ಚು. ಅದನ್ನು ಉಳಿಸಿದರೆ ಗೊಬ್ಬರ ಜಾಸ್ತಿ ಕೊಟ್ಟು ಇಳುವರಿ ಹೆಚ್ಚು ಪಡೆಯಬಹುದು. ಇಲ್ಲಿ ತೋರಿಸಿರುವ ಚಿತ್ರ ಓರ್ವ ಅಡಿಕೆ  ಬೆಳೆಗಾರ ತನ್ನ ಅಡಿಕೆ  ತೋಟದಲ್ಲಿ ನೆಟ್ಟ ನಂತರ ಗುದ್ದಲಿ ಮುಟ್ಟಿಸಿಲ್ಲ. ಇಲ್ಲಿನ  ಇಳುವರಿ  ಮತ್ತು ಮರದ ಆರೋಗ್ಯ ಬೇರೆಲ್ಲೂ…

Read more
error: Content is protected !!