ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ ಕೀಟ ಇರಬಹುದು ಗಮನಿಸಿ.

ಕರಿಮೆಣಸು ಬಳ್ಳಿ ಸಾಯುತ್ತಿದೆಯೇ? ಈ  ಕೀಟ ಇರಬಹುದು ಗಮನಿಸಿ.

ಕರಿಮೆಣಸಿನ ಬಳ್ಳಿಗೆ ರೋಗ ಬರುತ್ತದೆ. ಇದರಿಂದಾಗಿ ಬಳ್ಳಿ ಸಾಯುತ್ತದೆ ಎಂಬುದು ನಮಗೆಲ್ಲಾ ಗೊತ್ತಿರುವ ವಿಚಾರ. ಆದರೆ ರೋಗ ಬಂದು ಬಳ್ಳಿ ಸಾಯುವುದಲ್ಲದೆ ಕೀಟದ ಕಾರಣದಿಂದಲೂ ಬಳ್ಳಿ ಸಾಯುತ್ತದೆ. ಇದು ಹರಡುವ ಕೀಟವಾಗಿದ್ದು, ರೋಗದಿಂದ ಬಳ್ಳಿ ಒಣಗಿದಂತೆ ಇದರಿಂದಲೂ ಒಣಗುತ್ತದೆ. ಕರೆಗಳೂ ಉದುರುತ್ತದೆ. ಎಲೆಗಳೂ ಉದುರುತ್ತದೆ. ಈ ಬಗ್ಗೆ ಮಾಹಿತಿ ಇಲ್ಲಿದೆ. ಗದ್ದೆ ಬೇಸಾಯ ಮಾಡುವವರಿಗೆ ಬೇಸಾಯ ಕೈ ಹಿಡಿಯಬೇಕಿದ್ದರೆ ದಿನಾ ಗದ್ದೆಗೆ ಸುತ್ತು ಬರಬೇಕಂತೆ. ಅದಕ್ಕಾಗಿಯೇ ಗದ್ದೆಗೆ ಹುಣಿಯೂ ಇರುತ್ತದೆ. ಉತ್ತಮ ಬೇಸಾಯಗಾರರು ಬೆಳಗ್ಗಿನ ಹೊತ್ತು ಗದ್ದೆಗೆ…

Read more
ಕೆಂಪಡಿಕೆ ಧಾರಣೆ 49000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49,000 ಕ್ಕೆ ಏರಿದೆ- ಚಾಲಿ ಸಹ ಸಧ್ಯವೇ ಏರುತ್ತದೆ.

ಕೆಂಪಡಿಕೆ ಧಾರಣೆ 49000 ಸಮೀಪಕ್ಕೆ ತಲುಪಿದೆ. ಇನ್ನೂ ಏರಿಕೆಯಾಗಬಹುದು ಎಂಬ ಸುದ್ದಿಗಳಿವೆ. ಕೆಂಪಡಿಕೆ ಏರಿದರೆ ಸಹಜವಾಗಿ ಚಾಲಿಯೂ ಏರಿಕೆಯಾಗಲೇಬೇಕು. ಈಗಾಗಲೇ ಚಾಲಿ ದಾರಣೆ ತುಸು ಏರಲಾರಂಭಿಸಿದೆ. ಇನ್ನೂ ಸ್ವಲ್ಪ ಏರಿಕೆ ಸಾಧ್ಯತೆಗಳಿವೆ. ಉತ್ಪಾದನಾ ಕ್ಷೇತ್ರದಿಂದ ಬೇಡಿಕೆ ಪ್ರಾರಂಭವಾಗಿದೆ. ಧೀರ್ಘ ಕಾಲದವರೆಗೆ ದರ ಇಳಿಕೆ ಹಾದಿಯಲ್ಲಿದ್ದ ಕಾರಣ ಈ ಬಾರಿ ದರ ಏರಿಕೆ ಸ್ವಲ್ಪ ಹೆಚ್ಚು ಸಮಯದ ತನಕ ಮುಂದುವರಿಯಬಹುದು ಎಂಬ ಲೆಕ್ಕಾಚಾರ ಇದೆ. ಕೆಂಪಡಿಕೆ ಮಾರುಕಟ್ಟೆಯಲ್ಲಿ ಖರೀದಿ ಉತ್ಸಾಹ ಇದೆ. ಹಾಗಾಗಿ ದರ ಸ್ವಲ್ಪ ಸ್ವಲ್ಪವೇ ಏರಿಕೆಯಾಗುತ್ತಿದೆ….

Read more
ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.

ಏರಿಕೆಯತ್ತ ಅಡಿಕೆ – ಕರಿಮೆಣಸು ಧಾರಣೆಯೂ ಏರಿಕೆ.   

ಅಡಿಕೆ ಧಾರಣೆ ಇನ್ನೇನು ನೆಗೆದು ಬೀಳುತ್ತದೆಯೋ ಎಂಬ ಅನುಮಾನ ಉಂಟಾಗಿತ್ತು.ಅದರೆ ಕೆಲವೇ ದಿನದಲ್ಲಿ ಮತ್ತೆ ಏರಿಕೆಯತ್ತ ಮುಖ ಮಾಡಿದೆ. ಜೊತೆಗೆ ಕರಿಮೆಣಸೂ ಸಹ. ನಿನ್ನೆಯೇ ಖಾಸಗಿ ವರ್ತಕರು ಹಳೆ ಅಡಿಕೆ, ಡಬ್ಬಲ್ ಚೋಳ್ ಹಾಗೂ ಹೊಸ ಅಡಿಕೆಗೆ ದರ ಎರಿಸಿದ್ದಾರೆ. ಇಂದು ಕ್ಯಾಂಪ್ಕೋ ಸಹ ಏರಿಕೆ ಮಾಡಿದೆ. ಕೆಂಪಡಿಕೆ ಮಾರುಕಟ್ಟೆ ಸ್ಥಿರವಾಗಿದ್ದು, ಮುಂದಿನ ದಿನಗಳಲ್ಲಿ ಅದೂ ಸ್ವಲ್ಪ ಏರಿಕೆ ಆಗುವ ಸಂಭವ ಇದೆ. ಏರಿಕೆಗೆ ಕಾರಣ ಅಡಿಕೆ ಅವಕ ಕಡಿಮೆಯಾದದ್ದು ಎನ್ನುತ್ತಾರೆ ವರ್ತಕರು. ಅಡಿಕೆ ಧಾರಣೆ ಇಳಿಕೆಯಾದಾಗ …

Read more
ಕಳೆದ ವರ್ಷ 7500. ಈ ವರ್ಷ 6300 ಅಡಿಕೆ ಮಾರುಕಟ್ಟೆ ಅಸ್ಥಿರವಾದೀತೇ

ಕಳೆದ ವರ್ಷ 7500. ಈ ವರ್ಷ 6300. ಅಡಿಕೆ ಮಾರುಕಟ್ಟೆ ಅಸ್ಥಿರವಾದೀತೇ?   

ಕಳೆದ ವರ್ಷ ಈ ಸಮಯದಲ್ಲಿ ಹಸಿ ಅಡಿಕೆಗೆ 7500 ರೂ. ಬೆಲೆಗೆ ಖರೀದಿ ಮಾಡಲಾಗುತ್ತಿತ್ತು. ಈ ವರ್ಷ ಪ್ರಾರಂಭಿಕ ದರ 6500, ಇನ್ನೂ ಇಳಿಕೆಯಾಗಿ 6300 ಕ್ಕೆ ಬಂದಿದೆ. ಇನ್ನೂ ಇಳಿಯುವ ಸಂಭವ. ಇದು ಮುಂದಿನ ಅಡಿಕೆ ಧಾರಣೆಯ ಅಸ್ಥಿರತೆಯನ್ನು ತೋರಿಸುತ್ತಿದೆ. ಕೆಂಪಡಿಕೆಯ ಉತ್ಪಾದನೆ ಭಾರೀ ಹೆಚ್ಚಳವಾಗುತ್ತಿದ್ದು, ಸಾಂಪ್ರದಾಯಿಕ ಪ್ರದೇಶಗಳ ಇಳುವರಿಯನ್ನು ಹೊಸ ಪ್ರದೇಶಗಳು ಹಿಂದಿಕ್ಕುತ್ತಿದೆ. ಜೋಳ, ರಾಗಿ, ಭತ್ತ ತರಕಾರಿ ಬೆಳೆಯುತ್ತಿದ್ದ ಬಯಲು ಸೀಮೆ ಪ್ರದೇಶಗಳಲ್ಲಿ  ಉತ್ತಮ ಇಳುವರಿ ಕಾಣಿಸುತ್ತಿದ್ದು,  ಮಾರುಕಟ್ಟೆ ಈ ಉತ್ಪಾದನೆಯನ್ನು ತಾಳಿಕೊಳ್ಳಬಹುದೇ…

Read more
ಅಡಿಕೆ ಮಾರುಕಟ್ಟೆ- ಕೆಂಪಡಿಕೆ ಹಿಂದೆ- ಚಾಲಿ ಮುಂದೆ.

 ಅಡಿಕೆ ಮಾರುಕಟ್ಟೆ- ಕೆಂಪಡಿಕೆ ಹಿಂದೆ- ಚಾಲಿ ಮುಂದೆ.   

ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ದಿನಾಂಕ 11-08-2023ರ ಶುಕ್ರವಾರ ಒಟ್ಟು ಸುಮಾರು 425 ಟನ್  ಅಡಿಕೆ ವ್ಯವಹಾರ ನಡೆದಿದೆ. ಕಳೆದ ವಾರ ಯಾವುದೋ  ಸುದ್ದಿಯ ಕಾರಣಕ್ಕೆ ಕೆಂಪಡಿಕೆ ಧಾರಣೆಯಲ್ಲಿ  ಇಳಿಕೆ ಕಂಡು ಬಂತು. ಚಾಲಿ ಅಡಿಕೆಯ ಧಾರಣೆಯಲ್ಲಿ ಏರಿಕೆ ಆಗುತ್ತಾ ಇದೆ. ಆಗಸ್ಟ್  ತಿಂಗಳು ಸಪ್ಟೆಂಬರ್ ತಿಂಗಳಲ್ಲಿ ಇನ್ನೂ ಸ್ವಲ್ಪ ಏರಿಕೆ ಆಗಬಹುದು ಎಂಬ ಆಶಾಭಾವನೆ  ಮಾರಾಟಗಾರರ ಮಾಹಿತಿಯಿಂದ ಕೇಳಿ ಬರುತ್ತಿದೆ. ಕೆಂಪಡಿಕೆ ಧಾರಣೆ ಇಳಿಕೆ ತಾತ್ಕಾಲಿಕವಾಗಿದ್ದು, ತಿಂಗಳಾಂತ್ಯಕ್ಕೆ  ಇದೆ. ಕ್ವಿಂಟಾಲಿಗೆ ರೂ.1000 ದಷ್ಟಾದರೂ ಏರಬಹುದು ಎನ್ನುತ್ತಾರೆ. ಕಳೆದ…

Read more
ಸಂಚಲನದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ

ಏರಿಳಿತದ ಸುಳಿಯಲ್ಲಿ ಅಡಿಕೆ,ಕರಿಮೆಣಸು ಮಾರುಕಟ್ಟೆ.ಮುಂದೆ ಯಾವುದರ ಸರದಿ?.

ಯಾರೂ ಕಲ್ಪಿಸಿಯೂ ಇರದಂತಹ ಸಂಚಲನವೊಂದು ಕರಿಮೆಣಸು ಮಾರುಕಟ್ಟೆಯಲ್ಲಿ ಜುಲೈ 2023 ರಲಿ ಘಟಿಸಿದೆ. ಹಾಗೆಯೇ ಅಡಿಕೆ ಮಾರುಕಟ್ಟೆಯಲ್ಲೂ ಒಂದು ಸಂಚಲನ ಉಂಟಾಗಿದೆ. ಮುಂದಿನ ದಿನಗಳಲ್ಲಿ ಅಡಿಕೆ ಧಾರಣೆ ಏನಾಗಬಹುದು? ಕರಿಮೆಣಸಿನ ಧಾರಣೆ ಏನಾಗಬಹುದು? ಇತರ ಉತ್ಪನ್ನಗಳಾದ ಕೊಬ್ಬರಿ, ಶುಂಠಿ, ಹಾಗೆಯೇ ರಬ್ಬರ್  ಧಾರಣೆ ಏನಾಗಬಹುದು ಎಂಬ ಕುತೂಹಲವೇ? ಕೆಲವು ಮಾರುಕಟ್ಟೆ  ತಿಳುವಳಿಕೆ ಉಳ್ಳ ಜನರ ಹಾಗು ಪರಿಸ್ಥಿತಿಗಳ ಆಧಾರದ ಮೇಲೆ ಒಂದು ಊಹನೆ ಹೀಗಿದೆ. 2023 ರ ಜುಲೈ ತಿಂಗಳಲ್ಲಿ ಹಠಾತ್ತಾಗಿ ಕರಿಮೆಣಸು, ಮಾರುಕಟ್ಟೆಯಲ್ಲಿ ಬೃಹತ್ ಸಂಚಲನ…

Read more
ಕರಿಮೆಣಸಿನ ಬೆಲೆ ಭಾರೀ ಏರಿಕೆ ಸಂಭವ

ಕರಿಮೆಣಸಿನ ಬೆಲೆ ಭಾರೀ ಏರಿಕೆ ಸಂಭವ –ಬೆಳೆಗಾರರು ಎಚ್ಚರಿಕೆಯಿಂದಿರಿ.

ಕಳೆದ ವಾರ 50000 ದ ಆಸುಪಾಸಿನಲ್ಲಿದ್ದ  ಕರಿಮೆಣಸಿನ ಬೆಲೆ ದಿಡೀರ್ ಆಗಿ ಒಂದೇ ವಾರದಲ್ಲಿ 56,000 ಕ್ಕೆ ಏರಿಕೆಯಾಗಿದೆ. ಕರಿಮೆಣಸು ಇದೆಯೇ ಎಂದು ಕೇಳುವ ಸ್ಥಿತಿ ಉಂಟಾಗಿದೆ. ಖಾಸಗಿ ಮಾರುಕಟ್ಟೆಯಲ್ಲಿ ದರ 60,000 ತನಕ ಏರಿದೆ. ಇನ್ನೂ ಏರಿಕೆ ಆಗಬಹುದು ಎಂಬ ಸುದ್ದಿ ಕೇಳಿಬರುತ್ತಿದೆ. ಮೆಣಸು ಬೆಳೆಯುವ ದೇಶಗಳಲ್ಲಿ ಉತ್ಪನ್ನದ ಕೊರೆತೆಯೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಕಳೆದ 5-6 ವರ್ಷಗಳಿಂದ ನೆಲಕಚ್ಚಿದ ಕರಿಮೆಣಸಿನ  ಬೆಲೆ ಕಳೆದ ವರ್ಷ 50,000 ದ ಆಸು ಪಾಸಿಗೆ ಬಂದಿತ್ತು.  ಒಮ್ಮೆ 55,000…

Read more
ಅಡಿಕೆ ಧಾರಣೆ ಸ್ವಲ್ಪ ಅಸ್ಥಿರವಾಗಿದೆ- ಬೆಳೆಗಾರರು ದೊಡ್ಡ ನಿರೀಕ್ಷೆ ಹೊಂದಬೇಕಾಗಿಲ್ಲ.

ಅಡಿಕೆ ಧಾರಣೆ ಸ್ವಲ್ಪ ಅಸ್ಥಿರವಾಗಿದೆ- ಬೆಳೆಗಾರರು ದೊಡ್ಡ ನಿರೀಕ್ಷೆ ಹೊಂದಬೇಕಾಗಿಲ್ಲ.

ಜುಲೈ ತಿಂಗಳ ಪ್ರಾರಂಭದಲ್ಲಿ ಕೆಂಪಡಿಕೆ ಧಾರಣೆ ಏರಿಕೆ ಪ್ರಾರಂಭವಾಗಿ ಬೆಳೆಗಾರರು  ಹೆಚ್ಚಿನ ನಿರೀಕ್ಷೆ ಹೊಂದುವಂತಾಯಿತು. ಇನ್ನೂ ಏರಬಹುದು ಸ್ವಲ್ಪ ಕಾಯೋಣ ಎಂದು ಮಾರಾಟಕ್ಕೆ ಹಿಂದೇಟು ಹಾಕುವ ಸ್ಥಿತಿ. ಸಹಜವಾಗಿ ಎಲ್ಲರೂ ಹೀಗೇ ಮಾಡುವುದು. ಆದರೆ ದರ ಏರುತ್ತಾ  ಏರುತ್ತಾ ಮುಂದೆ ಹೋಗುವುದಿಲ್ಲ. ಕೆಲ ಸಮಯದ ನಂತರ ಇಳಿಕೆ ಆಗಿಯೇ ಆಗುತ್ತದೆ. ಈಗ ಸ್ವಲ್ಪ ಇಳಿಕೆ ಸಾಧ್ಯತೆ ಕಾಣಿಸುತ್ತಿದೆ. ದರ ಏರಿಕೆಯಾಗುವಾಗ ಮಾಲು ಕೊಡಲು ಯಾವ ರೈತನಿಗೂ  ಮನಸ್ಸು ಬರುವುದಿಲ್ಲ. ಕೊನೆಗೆ ಇಳಿಕೆಯಾಗುವಾಗ ಮಾರಾಟ ಮಾಡುವುದು ಅನಿವಾರ್ಯವಾಗುತ್ತದೆ. ಇದುವೇ…

Read more
ಚೇತರಿಕೆಯತ್ತ ಕೆಂಪಡಿಕೆ ಮಾರುಕಟ್ಟೆ – ಚಾಲಿಯನ್ನೂ ಮೇಲೆತ್ತಬಹುದು!

ಚೇತರಿಕೆಯತ್ತ ಕೆಂಪಡಿಕೆ ಮಾರುಕಟ್ಟೆ – ಚಾಲಿಯೂ ಮೇಲೆ.

ಬಹಳ ಸಮಯದ ತನಕ ಅಲ್ಲಾಡದೆ ಅಸ್ಥಿರವಾಗಿದ್ದ ಕೆಂಪಡಿಕೆ ಧಾರಣೆ ಜೂನ್ ಎರಡನೇ ವಾರ ಮತ್ತೆ ಚೇತರಿಕೆ ಕಾಣಲಾರಂಭಿಸಿದೆ. ಪ್ರತೀ ವರ್ಷದ ಮಾರುಕಟ್ಟೆ ಲಯವನ್ನು ಗಮನಿಸಿದರೆ ಸಾಮಾನ್ಯವಾಗಿ ಜೂನ್ ತಿಂಗಳಿಗೆ ಏರಿಕೆ ಪ್ರಾರಂಭವಾಗುತ್ತದೆ. ನಿಧಾನವಾಗಿ ಏರುತ್ತಾ ಆಗಸ್ಟ್ ಸಪ್ಟೆಂಬರ್ ತಿಂಗಳಿಗೆ ಮತ್ತೆ ಹಿಮ್ಮುಖವಾಗುತ್ತದೆ. ಈ ವರ್ಷವೂ ಅದೇ ಆಗಿದೆ. ಕೆಂಪಡಿಕೆ ದರ ಏರಿದ ಪರಿಣಾಮ ಚಾಲಿ ದರ ಚೇತರಿಕೆ ಆಗಲಾರಂಭಿಸಿದೆ. ಕರಿಕೋಕಾ, ಪಟೋರಾ, ಉಳ್ಳಿಗಡ್ಡೆ ಸಹ ಏರಿಕೆ ಕಂಡಿದೆ. ಇಂದು ಖಾಸಗಿ ವ್ಯಾಪಾರಿಗಳು ಹೊಸ ಅಡಿಕೆ ರೂ.405-410 ಕ್ಕೆ…

Read more
ಅಡಿಕೆ ಕ್ರಯ ಏರಲಿದೆ- ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ

ಅಡಿಕೆ ಕ್ರಯ ಏರಲಿದೆ-  ರಾಶಿ ಬೆಲೆ ಚೇತರಿಕೆ. ಚಾಲಿಯೂ ಏರಿಕೆ ಸೂಚನೆ.

ಯಾವ ಲೆಕ್ಕಾಚಾರಕ್ಕೂ ಸಿಗದ ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆಯತ್ತ ಮುಖಮಾಡಿದೆ. ಸಾಮಾನ್ಯವಾಗಿ ವಸ್ತುವೊಂದರ ಬೆಲೆ ಬೇಡಿಕೆ ಮತ್ತು ಪೂರೈಕೆಯನ್ನು ಅವಲಂಭಿಸಿ ಹೆಚ್ಚು ಕಡಿಮೆ ಆಗುತ್ತಿರುತ್ತದೆ. ಆದರೆ ಅಡಿಕೆ ಹಾಗಿಲ್ಲ. ಬೆಳೆ ಹೆಚ್ಚಾದರೂ ಬೆಲೆ ಏರಬಹುದು. ಬೆಳೆ ಕಡಿಮೆಯಾದರೂ ಬೆಲೆ ಏರದೆ ಇರಬಹುದು. ಇದೆಲ್ಲಾ ಅಡಿಕೆ ಮಾರುಕಟ್ಟೆಯಲ್ಲಿ ಯಾವಾಗಲೂ ನಡೆಯುತ್ತಿರುವಂತದ್ದು.ವರ್ಷದುದ್ದಕ್ಕೂ ಗುಟ್ಕಾ ಫ್ಯಾಕ್ಟರಿ ನಡೆಯುತ್ತಿರುತ್ತದೆ. ಗುಟ್ಕಾ ತಿನ್ನುವವರು, ಪಾನ್ ತಿನ್ನುವವರು ಅದಕ್ಕೆ ರಜೆ / ವಿರಾಮ ಕೊಡುವ ಕ್ರಮವೇ ಇಲ್ಲ. ಆದರೂ  ಬೆಲೆ ಮಾತ್ರ ಒಮ್ಮೊಮ್ಮೆ ಏರುತ್ತಾ ಹೋಗುತ್ತದೆ….

Read more
error: Content is protected !!