ಸಿಹಿಯಾದ ಕಲ್ಲಂಗಡಿ

ಹಣ್ಣು ಹಂಪಲಿನಲ್ಲಿ ಸಿಹಿ ಅಂಶ ಹೆಚ್ಚಿಸುವಿಕೆ.

ಯಾವುದೇ ಹಣ್ಣು ಹಂಪಲುಗಳಿದ್ದರೂ ಅದರ ಸಹಜವಾದ ರುಚಿ ಇದ್ದರೆ ಅದು ತಿನ್ನಲು ಇಷ್ಟವಾಗುತ್ತದೆ. ಬಹುತೇಕ ಹಣ್ಣು ಹಂಪಲುಗಳ ರುಚಿ ಸಿಹಿ. ಸಿಹಿ ಸಾಕಷ್ಟು ಇಲ್ಲದಿದ್ದರೆ ಇದನ್ನು ತಿನ್ನುವವರಿಗೆ ಅದು ರುಚಿ ಎನಿಸದು. ಸಿಹಿ ಅಂಶ ಹಣ್ಣು ಹಂಪಲಿಗೆ ಹೇಗೆ ಸೇರಿಕೊಳ್ಳುತ್ತದೆ. ಹೆಚ್ಚು ಸಿಹಿ ಬರಲು ಯಾವ ಪೋಷಕ ಹೆಚ್ಚು ಕೊಡಬೇಕು, ಯಾವುದನ್ನು ಕಡಿಮೆ ಮಾಡಬೇಕು ಈ ಬಗ್ಗೆ  ಇಲ್ಲಿದೆ ಮಾಹಿತಿ. ಸಮರ್ಪಕ ಬಿಸಿಲು, ವಾತಾವರಣ, ಹಾಗೂ ಸಾಂದರ್ಭಿಕ ಪೋಷಕಾಂಶ ನಿರ್ವಹಣೆಯಿಂದ ಹಣ್ಣು ಹಂಪಲುಗಳಲ್ಲಿ ಸಿಹಿ ಅಂಶ ಹೆಚ್ಚುತ್ತದೆ….

Read more
ಉತ್ತಮ ಇಳುವರಿ ಅಡಿಕೆ

ಅಡಿಕೆ – ತಳಿ ಬೆರಕೆ ಆದರೆ ಇಳುವರಿ ಹೆಚ್ಚುತ್ತದೆ.

ತಳಿ ಯಾವುದೇ ಇದ್ದರೂ ಬರೇ ಒಂದೇ ತಳಿಯನ್ನು ನೆಡುವ  ಬದಲು ಸ್ವಲ್ಪ ಪ್ರಮಾಣದಲ್ಲಿ ಬೇರೆ ತಳಿಗಳನ್ನೂ ಮಿಶ್ರಣ ಮಾಡಿದರೆ ಪರಾಗ ಸ್ಪರ್ಶಕ್ಕೆ ಅನುಕೂಲವಾಗಿ ಇಳುವರಿ ಹೆಚ್ಚು ಬರುತ್ತದೆ. ಯಾವಾಗಲು ಬೆರಕೆ ತಳಿಗಳಿದ್ಡಲ್ಲಿ   ನೈಸರ್ಗಿಕವಾಗಿ ತಳಿ ಅಭಿವ್ರುದ್ಧಿಯೂ ಆಗುತ್ತದೆ. ಇದು ತೆಂಗು, ಅಡಿಕೆಗೆರಡಕ್ಕೂ ಅನುಕೂಲ. ಅಡಿಕೆ ಬೆಳೆಸಲು ಈಗ  ಪ್ರಾದೇಶಿಕ ಇತಿಮಿತಿಗಳು ದೂರವಾಗಿ ಬಯಲು ಸೀಮೆಯಲ್ಲೂ ಬೆಳೆ ಬೆಳೆಯಲಾಗುತ್ತಿದೆ.  ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಅಡಿಕೆ  ಬೆಳೆ ಇದೆ.ಕರಾವಳಿ ಪ್ರದೇಶಕ್ಕೆ ಚಾಲಿಗೆ ಸೂಕ್ತವಾದ ತಳಿಗಳನ್ನು ಆಯ್ಕೆ ಮಾಡಬೇಕು. ಮಲೆನಾಡು ಮತ್ತು…

Read more

ಸಾವಯವ ಅಂಶ ಇಲ್ಲದಿದ್ದರೆ ಬೆಳೆ ಬರಲಾರದು.

ಕೃಷಿ ಮಾಡುವಾಗ ರಾಸಾಯನಿಕ ಗೊಬ್ಬರ ಒಂದನ್ನೇ ಮಣ್ಣಿಗೆ ಕೊಡುತ್ತಾ ಇದ್ದರೆ, ನಿಧಾನವಾಗಿ ಮಣ್ಣಿನ ರಚನೆ ಕೆಳಮಟ್ಟಕ್ಕೆ ಇಳಿಯುತ್ತದೆ. ಮಣ್ಣಿನ ರಚನೆ ವ್ಯತ್ಯಾಸವಾದರೆ ರಸಗೊಬ್ಬರಗಳು ಕೆಲಸ ಮಾಡುವುದಿಲ್ಲ. ಯಾವುದೇ ರಸ ಗೊಬ್ಬರಗಳನ್ನು ನೇರವಾಗಿ ಸಸ್ಯಗಳು ಬಳಕೆ ಮಾಡಿಕೊಳ್ಳಲಾರವು. ಮಣ್ಣಿನ ಜೀವಾಣುಗಳ ಸಹಕಾರದಿಂದ ಅವು ಸಸ್ಯಗಳಿಗೆ ಲಭ್ಯವಾಗುತ್ತದೆ. ಮಣ್ಣಿನಲ್ಲಿ ಜೀವಾಣುಗಳು ಇದ್ದರೆ ಅದು ಜೀರ್ಣಕ್ಕೊಳಪಡುತ್ತದೆ. ಫಲವತ್ತತೆ ಕಡಿಮೆಯಾದ ಮಣ್ಣಿನಲ್ಲಿ ಜೀವಾಣುಗಳ ಸಂಖ್ಯೆ ಕಡಿಮೆಯಾಗುತ್ತದೆ. ಆಗ ರಸ ಗೊಬ್ಬರಗಳ ಕ್ಷಮತೆಯೂ ಕಡಿಮೆಯಾಗುತ್ತದೆ. ಆದ ಕಾರಣ ಅಧಿಕ ಇಳುವರಿಗೆ  ಅಗತ್ಯವಿದ್ದರೆ ರಸಗೊಬ್ಬರ ಹಿತ…

Read more
ಅಡಿಕೆ

ಅಡಿಕೆ ಧಾರಣೆ ಏನಾಗಬಹುದು? ಯಾಕೆ ಏನೂ ಸಂಚಲನ ಇಲ್ಲ ?

ಅಡಿಕೆ ಧಾರಣೆ ಕಳೆದ ಎರಡು ತಿಂಗಳಿಂದ ನಿಂತ ನೀರಿನ ತರಹ ಮುಂದುವರಿದಿದೆ. ಯಾವ ಏರಿಕೆಯೂ ಇಲ್ಲ. ಇಳಿಕೆಯೂ ಇಲ್ಲ. ಕರಾವಳಿಯ ಅಡಿಕೆ ಬೆಳೆಗಾರರು ಅಡಿಕೆ ಕೊಡುವುದನ್ನು ಕಡಿಮೆಮಾಡಿದ್ದಾರೆ. ಕೆಂಪಡಿಕೆ ಮಾಡುವ ಕಡೆಯೂ ಜನ ದರ ಏರಿಕೆಗೆ ಕಾಯುತ್ತಿದ್ದಾರೆ. ಮಾರುಕಟ್ಟೆಗೆ ಬರುವ ಅಡಿಕೆ ಪೂರ್ತಿ ಚೇಣಿ ಮಾಡಿದವರ ಕಮಿಟ್ಮೆಂಟ್ ಹಾಗೂ ಮುಂದಿನ ಚೇಣಿ ವಹಿಸಿಕೊಳ್ಳುವುದಕ್ಕೇ ಬೇಕಾದ  ಫಂಡ್ ಕ್ರೋಡೀಕರಣಕ್ಕೆ ಎಂಬ ಸುದ್ದಿಗಳಿವೆ. ಇಷ್ಟಕ್ಕೂ ಮುಂದೆ ಅಡಿಕೆ ಧಾರಣೆ ಏನಾಗಬಹುದು, ಏನಾದರೂ ಸಂಚಲನ ಉಂಟಾಗಬಹುದೇ ಎಂಬ ಕುತೂಹಲ ಎಲ್ಲರದ್ದೂ. ಅಡಿಕೆ…

Read more

ಬೇಸಿಗೆಯಲ್ಲಿ ಗೊಬ್ಬರಗಳನ್ನು ಕೊಡುವುದರಿಂದ ಭಾರೀ ಲಾಭವಿದೆ.

ಬೇಸಿಗೆ ಕಾಲದಲ್ಲಿ ಸಸ್ಯ ಬೆಳವಣಿಗೆ ಚುರುಕಾಗಿರುತ್ತದೆ. ಅದಕ್ಕಾಗಿ ಬೇಸಿಗೆಯಲ್ಲಿ ನೀರಾವರಿ ಇರುವ ಬೆಳೆಗಳಿಗೆ ಗೊಬ್ಬರ ಕೊಡುವುದು ಉತ್ತಮ. ಯಾವಾಗಲೂ ಹಸಿವಿದ್ದಾಗ ಉಣ್ಣಬೇಕು. ಬಾಯಾರಿದಾಗ ನೀರು ಕುಡಿಯಬೇಕು. ಇದೇ ಸಿದ್ದಾಂತದಲ್ಲಿ  ಸಸ್ಯ ಪೋಷಣೆಯೂ ನಡೆಯಬೇಕು. ಸಸ್ಯಗಳು ಹೆಚ್ಚು ಬಾಯಾರಿಕೆ ಮತ್ತು ಹಸಿವಿನಿಂದ plant’s need  ಇರುವುದು ಬೇಸಿಗೆಯ ಕಾಲದಲ್ಲಿ. ಈಗ ಅವುಗಳಿಗೆ ನೀರನ್ನೂ ಪೋಷಕಗಳನ್ನೂ ಕೊಡುವುದರಿಂದ ಅವುಗಳ ಬೆಳವಣಿಗೆಗೆ ತುಂಬಾ ಪ್ರಯೋಜನವಾಗುತ್ತದೆ. ಸಸ್ಯಗಳು ನಾವು ಕೊಡುವ ನೀರು, ಗೊಬ್ಬರಕ್ಕೆ ಚೆನ್ನಾಗಿ ಸ್ಪಂದಿಸಿ ಸ್ವೀಕರಿಸುತ್ತವೆ. ನಾವೆಲ್ಲಾ ಬೆಳೆಗಳಿಗೆ ಗೊಬ್ಬರ ಕೊಡಲು…

Read more
ಕೊಡದಲ್ಲಿ ನೀರು ಸೇದಿ ಕುಡಿಯುವ ಭಾಗ್ಯ

ಜಲ –ಇದು ಲಕ್ಷ್ಮಿ . ಜಲವನ್ನು ಸಂರಕ್ಷಿಸೊಣ- ಗೌರವಿಸೋಣ.

ನಮಗೆ ಬಾವಿ ತೋಡಿದಾಗ ಹೇರಾವರಿ ನೀರು ಸಿಕ್ಕಿದರೆ ಅದು ನಮ್ಮ ಮನೆಗೆ ಲಕ್ಷ್ಮಿಯ ಕೃಪೆ ದಯಪಾಲಿಸಿದೆ ಎಂದರ್ಥ. ಲಕ್ಷ್ಮಿ ಒಲಿದಳೆಂದು ಸ್ವೇಚ್ಚಾಚಾರ ಮಾಡಿದರೆ ಯಾವುದೇ ಸಮಯದಲ್ಲಿ ಆಕೆ ನಿರ್ಗಮಿಸಿದರೂ ಅಚ್ಚರಿ ಇಲ್ಲ. ಇದು ನೀರು ಸಂಪತ್ತು ಎಲ್ಲದಕ್ಕೂ ಅನ್ವಯ.ಭಯ ಭಕ್ತಿ  ಗೌರವದಿಂದ ಪ್ರಾಕೃತಿಕ ಕೊಡುಗೆಗಳನ್ನು ಅನುಭವಿಸಬೇಕು.   ವಿಶ್ವ ಜಲ ದಿನ ಮಾರ್ಚ್ 22. ಜೀವ ಜಲದ ಪ್ರಾಮುಖ್ಯತೆ ಬಗ್ಗೆ ನಾವೆಲ್ಲರೂ ಜಾಗೃತರಾಗಬೇಕು. ವರ್ಷ ವರ್ಷವೂ ನಾವು ಜಲ ದಿನ ಎಂದು ಈ ದಿನವನ್ನು ಆಚರಿ ಸುತ್ತೇವೆ….

Read more
ಹಲಸಿನ ಕಾಯಿಯಾಗುವ ಕೌತುಕ

ಹಲಸು ಹೇಗೆ ಕಾಯಿಯಾಗುತ್ತದೆ. ಅದರ ಕೌತುಕ ಏನು?

ಹಲಸಿನ ಮರದಲ್ಲಿ ಹೂವು ಬಿಡುವುದು ಹಲಸಿನ ಕಾಯಿಯಾಗಲು. ಹಲಸಿನ ಕಾಯಿಯ ಮಿಡಿಯೇ ಅದರ ಹೂವು.  ಕಳ್ಳಿಗೆ ಮತ್ತು ಮೈ ಕಳ್ಳಿಗೆ ಎಂದು ಕರೆಯುವ ಇದು ಹೆಣ್ಣು ಮತ್ತು ಗಂಡು ಹೂವುಗಳು. ಚಳಿಗಾಲ ಪ್ರಾರಂಭವಾಗುವ ಸಮಯದಿಂದ ಆರಂಭವಾಗಿ ಶಿವರಾತ್ರೆ  ತನಕ ಹಲಸಿನ ಮರ ಹೂವು ಬಿಡುವ ಕಾಲ. ಈ ಸಮಯದಲ್ಲಿ ಕೆಲವು ಬೇಗ ಹೂವು ಬಿಟ್ಟರೆ ಮತ್ತೆ  ಕೆಲವು ನಿಧಾನವಾಗಿ ಶಿವರಾತ್ರೆ  ನಂತರವೂ ಹೂವು ಬಿಡುತ್ತವೆ. ಗಾಳಿ  ಬಂದಾಗ ಹೂವು ಬಿಡುವಿಕೆ ಜಾಸ್ತಿ ಎನ್ನುತ್ತಾರೆ. ವಾಸ್ತವವಾಗಿ ಹಾಗಲ್ಲ. ಶುಷ್ಕ…

Read more
ಡ್ರಿಪ್ ಇರಿಗೇಶನ್ ಅಳವಡಿಸಿದ ಅಡಿಕೆ ತೋಟ

ಡ್ರಿಪ್ ಇರಿಗೇಶನ್ ವ್ಯವಸ್ಥೆಯಲ್ಲಿ ಬ್ಲಾಕ್ ಆಗದಂತೆ ಮಾಡುವ ಸರಳ ವಿಧಾನ

ಬಹಳ ಜನ ರೈತರು ಡ್ರಿಪ್ ಮಾಡಿದರೆ ಅದು ಬ್ಲಾಕ್ ಆಗುತ್ತದೆ, ನೀರು ಸರಿಯಾಗಿ ಹೋಗದೆ ಸಮಸ್ಯೆಯಾಗುತ್ತದೆ ಎನ್ನುತ್ತಾರೆ. ಬ್ಲಾಕ್ ಆಗುವುದಕ್ಕೆ ಕಾರಣವನ್ನು ಗುರುತಿಸಿ ಅದಕ್ಕೆ ಬೇಕಾಗುವ ಸರಳ ಪರಿಹಾರಗಳನ್ನು ಮಾಡಿದರೆ  ಅದು ಸಮಸ್ಯೆಯೇ ಆಗದು. ಡ್ರಿಪ್ ಇರಿಗೇಶನ್ ವ್ಯವಸ್ಥೆಯಲ್ಲಿ ಕಣ್ಣಿಗೆ ಕಾಣದ ಕೆಲವು ಲವಣಗಳು ಸ್ವಲ್ಪ ಸ್ವಲ್ಪವೇ ಆಂಟಿಕೊಂಡು ನೀರು ಹರಿಯುವ  ದ್ವಾರವನ್ನು ಮುಚ್ಚುತ್ತದೆ. ಇದು ಹೆಚ್ಚಿನವರು ಅನುಭವಿಸುವ ಸಮಸ್ಯೆ. ಈ ಲವಣಗಳನ್ನು ಕಾಲ ಕಾಲಕ್ಕೆ ಅನುಗುಣವಾಗಿ ಸ್ವಚ್ಚತೆ ಮಾಡುತ್ತಿದ್ದರೆ ಆ ಸಮಸ್ಯೆಯಿಂದ ಪಾರಾಗಬಹುದು. ಮಳೆಗಾಲದಲ್ಲಿ ಯಾರೂ…

Read more

ಬೋರ್ ವೆಲ್ ಕೊರೆಯುವಾಗ ನೀರು ಎಲ್ಲಿಂದ ಬರುತ್ತದೆ?

ಜನ ಬೋರ್  ವೆಲ್ ಎಂದರೆ ಭೂಮಿಯ ಅಥವಾ ಬಂಡೆಯ ಎಡೆಯಲ್ಲಿ  ಅಂತರ್ಗಾಮೀ ನದಿಗಳೇ ಇದೆ ಎಂದು ತಿಳಿದಿದ್ದಾರೆ. ಆದರೆ ವಾಸ್ತವಿಕತೆ ಬೇರೆಯೇ ಇದೆ.ಭೂಮಿಯಲ್ಲಿ ಬಂಡೆಯ ಬಿರುಕುಗಳ ಎಡೆಯಲ್ಲಿ ಜಿನುಗುವ ನೀರು ಇರುತ್ತದೆ. ಇದೆಲ್ಲಾ ಒಟ್ಟುಗೂಡುತ್ತಾ ದೊಡ್ದ ಪ್ರಮಾಣದ ನೀರಾಗುತ್ತದೆಯೇ ಹೊರತು “ ದಂಡು” ಅಥವಾ ನದಿ ಇರುವುದಿಲ್ಲ. ಹಾಗಿದ್ದರೆ ಏನಿದೆ ಒಳಗೆ? ನೀವು ಎಲ್ಲಿಯಾದರೂ ಬೆಟ್ಟದ ಬದಿಯಲ್ಲಿ ನೀರು ಹೊರಬರುವ ಚಿಲುಮೆಯನ್ನು ಕಂಡದ್ದಿದೆಯೇ? ಕಂಡಿದ್ದರೆ ಅದನ್ನು ಸೂಕ್ಷ್ಮವಾಗಿ ಗಮನಿಸಿರಿ. ಅದು ಹೇಗೆ ಹೊರ ಬರುತ್ತದೆ. ಎಲ್ಲಿಂದ ಬರುತ್ತದೆ. ಅದರ…

Read more
ಹನಿ ನೀರಾವರಿ ಸಾಧನ

ಹನಿ ನೀರಾವರಿ ಅಳವಡಿಸಿಕೊಳ್ಳುವಾಗ ನೀವು ತಿಳಿದಿರಬೇಕಾದ ವಿಷಯಗಳು.

ಈ ವರ್ಷ ಬಹಳಷ್ಟು ಜನ ಅಡಿಕೆ ತೋಟ ಮಾಡುತ್ತಿದ್ದಾರೆ. ಹೆಚ್ಚಿನವರ ಆಯ್ಕೆ ಹನಿ ನೀರಾವರಿ. ಜನ ನೀರು ಉಳಿತಾಯದ ಕಡೆಗೆ ಹೆಚ್ಚಿನ ಗಮನ ಕೊಡುವಷ್ಟು ಮುಂದುವರಿದದ್ದು ಸಂತೋಷದ ವಿಚಾರ. ಹನಿ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳುವಾಗ, ಅಳವಡಿಸುವವರ ಜೊತೆಗೆ ನಾವೂ ಸ್ವಲ್ಪ ಅದರ ಸೂಕ್ಷ್ಮ ವಿಷಯಗಳನ್ನು ತಿಳಿದಿದ್ದರೆ ಬಹಳ ಒಳ್ಳೆಯದು. ಹನಿ ನೀರಾವರಿ ಎಂದರೆ ಲಭ್ಯವಿರುವ ನೀರನ್ನು ಎಲ್ಲೆಲ್ಲಿ ಬೆಳೆಗಳಿವೆಯೋ ಅಲ್ಲಿಗೆ ತಲುಪಿಸಿ ಆ ಸಸ್ಯಕ್ಕೆ ದಿನಕ್ಕೆ ಎಷ್ಟು ನೀರು ಬೇಕೋ ಅಷ್ಟನ್ನು ಮಾತ್ರ ಕೊಡುವ ವ್ಯವಸ್ಥೆ. ಇಲ್ಲಿ…

Read more
error: Content is protected !!