Zink deficiency in plant

ಝಿಂಕ್ ಬಳಸಿದರೆ ಸಸ್ಯ ಆರೋಗ್ಯ ಮತ್ತು ಫಸಲು ಹೆಚ್ಚುತ್ತದೆ.

ಬೆಳೆಗಳು ಆರೋಗ್ಯವಾಗಿದ್ದು, ಫಲಧಾರಣಾ ಶಕ್ತಿ ಉತ್ತಮವಾಗಿ, ಪೌಷ್ಟಿಕ ಫಲ ಕೊಡಲು ಸತು ಎಂಬ ಸೂಕ್ಷ್ಮ ಪೊಷಕಾಂಶ ಅಗತ್ಯವಾಗಿ ಬೇಕು ಎನ್ನುತ್ತಾರೆ ಬೆಳೆ ತಜ್ಞರು. ಇತ್ತೀಚೆಗೆ ಬೆಳೆ ತಜ್ಞರುಗಳು ಸತುವಿನ ಬಳಕೆಗೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಕೆಲವು ಗೊಬ್ಬರ ತಯಾರಕರು ತಮ್ಮ ಕೆಲವು ಗೊಬ್ಬರಗಳನ್ನು (ವಿಶೇಷವಾಗಿ ಡಿಎಪಿ) ಸತುವಿನ ಮೂಲಕ ಬ್ಲೆಂಡ್ ಮಾಡಿ ಕೊಡುತ್ತಾರೆ. ಕರ್ನಾಟಕ ಸರಕಾರದ  ಕೃಷಿ ನಿಯಮಾವಳಿ ಪ್ರಕಾರ ಇಲ್ಲಿನ ಮಣ್ಣಿಗೆ ಸೂಕ್ಷ್ಮ ಪೋಷಕಾಂಶಗಳ ಜೊತೆಗೆ ಗರಿಷ್ಟ ಪ್ರಮಾಣ (3%) ದಲ್ಲಿ ಸತು ಸೇರಿಸಿರಬೇಕು. ಕರ್ನಾಟಕದ…

Read more

ಈ ಕಳೆ ಸಸ್ಯ ನಿಯಂತ್ರಿಸಲು ಕೆಲವು ಸರಳ ಉಪಾಯ.

ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಮಾತಿನಂತೆ ಕಳೆ ಗಿಡವನ್ನು ಇನ್ನೊಂದು ಗಿಡದ ಸಹಾಯದಿಂದ ತೆಗೆಯಲು ಸಾಧ್ಯ. ಅಂಥಹ ಗಿಡಗಳು ನಮ್ಮಲ್ಲಿ ಹಲವು ಇವೆ. ಒಂದು ಸಸ್ಯವನ್ನು ಮತ್ತೊಂದು ಸಸ್ಯದಿಂದ ನಿಯಂತ್ರಿಸಬಹುದು ಎಂಬುದು ಮನಗೆಲ್ಲಾ ಗೊತ್ತಿದೆ. ರಬ್ಬರ್ ಬೆಳೆಗಾರರು  ತೋಟದಲ್ಲಿ ಇತರ ಸಸ್ಯಗಳು ಬೆಳೆಯದೆ ಇರುವ ಸಲುವಾಗಿ ಮುಚ್ಚಲು ಬೆಳೆಯನ್ನು ಬೆಳೆಸುತ್ತಾರೆ. ಅದೇ ಸಿದ್ದಾಂತದಲ್ಲಿ  ಹಳದಿ ಸೇವಂತಿಕೆ ಹೂವಿನ ಸಸ್ಯ (Singapore daisy) Scientific name : Sphagneticola trilobata  ವನ್ನು ನಿಯಂತ್ರಿಸಬಹುದು. ದ್ವಿದಳ ಜಾತಿಯ ಸಸ್ಯಗಳನ್ನು ಹಳದಿ ಹೂವಿನ…

Read more
poultry farm

ಕೋಳಿ ಗೊಬ್ಬರದಲ್ಲಿ ಏನಿದೆ? ಪ್ರಯೋಜನ ಏನು?.

ರೈತರು ತಮ್ಮ ಬೆಳೆ ಪೋಷಣೆಗಾಗಿ ಬಳಕೆ ಮಾಡುವ ಕೋಳಿ ಹಿಕ್ಕೆಯ ಗೊಬ್ಬರದಲ್ಲಿ ಏನಿದೆ, ಇದರ ಫಲಿತಾಂಶ ಏನು ಎಂಬುದರ ಪೂರ್ಣ ಪರಿಚಯ ಇಲ್ಲಿದೆ. ಕೋಳಿ ಗೊಬ್ಬರದ ಬಳಕೆಗೆ ಬಹಳ ಹಿಂದಿನ ಇತಿಹಾಸ ಇದೆ.ಇತ್ತೀಚಿನ 20-30 ವರ್ಷಗಳಿಂದೀಚೆಗೆ ಕೋಳಿ ಸಾಕಾಣಿಕೆ ಭಾರೀ ವಾಣಿಜ್ಯಿಕವಾದ ನಂತರ ಕೋಳಿ ಸಾಕಾಣಿಕಾ ಶೆಡ್ ಗಳಿಂದ ಗೊಬ್ಬರ ತಂದು ಬೆಳೆಗಳಿಗೆ ಬಳಸುವಿಕೆ ಪ್ರಾರಂಭವಾಯಿತು. ಅದಕ್ಕೂ ಹಿಂದೆ ಸಾಮಾನ್ಯವಾಗಿ ಪ್ರತೀ ಮನೆಗಳಲ್ಲೂ ಅಲ್ಪ ಸ್ವಲ್ಪ ಕೋಳಿಗಳನ್ನು ಸಾಕುತ್ತಿದ್ದರು. ಅವುಗಳ ಕಾಲಿನ ಬುಡಕ್ಕೆ ಮರ ಸುಟ್ಟ ಬೂದಿ…

Read more
Organic University

ಕರ್ನಾಟಕದಲ್ಲಿ ಸಾವಯವ ಕೃಷಿಗಾಗಿ ವಿಶ್ವ ವಿಧ್ಯಾನಿಲಯ!

ಮಾನ್ಯ ಕೃಷಿ ಮಂತ್ರಿಗಳು ಸಾವಯವ ಕೃಷಿ ಸಂಶೋಧನೆಗಾಗಿ ಒಂದು ವಿಶ್ವ ವಿಧ್ಯಾನಿಲಯವನ್ನು ಸ್ಥಾಪಿಸಬೇಕು ಎಂಬ ಚಿಂತನೆ ನಡೆಸಿದ್ದಾರೆ. ಸುಮಾರು 10 ವರ್ಷಕ್ಕೆ ಹಿಂದೆ ನಮ್ಮ ರಾಜ್ಯದಲ್ಲಿ ಎರಡು ಕೃಷಿ ವಿಶ್ವ ವಿಧ್ಯಾನಿಲಯಗಳಿದ್ದವು. ಮತ್ತೊಂದು ಕೃಷಿ ವಿಶ್ವ ವಿಧ್ಯಾನಿಲಯ ಸೇರ್ಪಡೆಯಾಯಿತು. ತೋಟಗಾರಿಕಾ ವಿಶ್ವ ವಿಧ್ಯಾನಿಲಯವಾಯಿತು. ಪಶು ಸಂಗೋಪನಾ ವಿಶ್ವ ವಿಧ್ಯಾನಿಲಯ, ತೋಟಗಾರಿಕೆ ಮತ್ತು  ಕೃಷಿ ಜಂಟಿ ವಿಶ್ವ ವಿಧ್ಯಾನಿಲಯಗಳಾಯಿತು. ಇನ್ನು  ಉಳಿದದ್ದು ಸಾವಯವ ಕೃಷಿ ಒಂದೇ ಏನೋ ಎಂಬುದು ಮಾನ್ಯ ಕೃಷಿ ಸಚಿವರ ಇಂಗಿತದಲ್ಲಿ ಕಾಣುತ್ತದೆ. ಹಾಲೀ ಇರುವ…

Read more
Cashew Dwarf release

ಗೋಡಂಬಿಯಲ್ಲಿ ಹೊಸ ಕುಬ್ಜ ತಳಿ ಈಗ ಲಭ್ಯ.

ಕುಬ್ಜ ತಳಿ ಇಂದಿನ ಅಗತ್ಯತೆಗಳಲ್ಲಿ ಒಂದು. ಮರ ಹತ್ತುವ ಅಭ್ಯಾಸವೇ ಬಿಟ್ಟು ಹೋಗುತ್ತಿರುವ ಈ ಸಮಯದಲ್ಲಿ ಇದು ಅಗತ್ಯವಾಗಿದೆ. ಮಾವಿನಲ್ಲಿ ಕುಬ್ಜ ತಳಿ ಬಂದಿದೆ. ಅಡಿಕೆಯಲ್ಲಿ ಇದೆ. ತೆಂಗಿನಲ್ಲೂ  ಕೆಲವು ಗಿಡ್ದ  ತಳಿಗಳಿವೆ. ಹೈಬ್ರೀಡ್ ಮಾಡುವವರೂ ಕುಬ್ಜ ತನಕ್ಕೆ ಹೆಚ್ಚು ಒತ್ತುಕೊಡುತ್ತಿದ್ದಾರೆ.  ಎತ್ತರ ಬೆಳೆಯುವ ಮರ ಎಂದರೆ ಕಾಯಿ ಕೀಳುವ ಸಮಸ್ಯೆ. ಕುಬ್ಜ ಆದರೆ ಎಲ್ಲವೂ ಸುಲಭ. ಇಳುವರಿ ಕಡಿಮೆಯಾದರೂ ಆಗಬಹುದು, ಪರರನ್ನು ಅವಲಂಭಿಸಿ ಮಾಡುವುದಕ್ಕಿಂತ ನಾವೇ ಮಾಡಬಹುದು ಎಂಬುದೇ ಇದಕ್ಕೆ ಕಾರಣ. ಕರಾವಳಿ ಕರ್ನಾಟಕದಲ್ಲಿ  ದಕ್ಷಿಣ…

Read more
ಬೆಳೆಗಳಿಗೆ ಹಾನಿ ಮಾಡುವ ಮಂಗ

ಕಾಡುಪ್ರಾಣಿಗಳಿಂದ ಬೆಳೆಹಾನಿ- ಪರಿಹಾರಕ್ಕೆ ಸರ್ಕಾರದ ವಿಮೆ.

ಈ ವರ್ಷದಿಂದ  ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಲ್ಲಿ ರೈತರಿಗೆ ಕಾಡು ಪ್ರಾಣಿಗಳಿಂದಾಗುವ ನಷ್ಟಕ್ಕೆ ಪರಿಹಾರ ಕೊಡುವ ಬಗ್ಗೆ ವಿಮೆ ಮಾಡುವ  ವ್ಯವಸ್ಥೆ ಬರಲಿದೆ. ಮಾನ್ಯ ಸಭಾಪತಿಗಳು  ಮೊನ್ನೆ ಕೃಷಿಕರ ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದೆ ಇದಕ್ಕೆ ಪರಿಹಾರವಾದರೂ ಕೊಡಿ ಎಂದು ಸದನದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಇದು ಕಾರ್ಯಗತವಾಗಲು ರೈತರೂ ತಮ್ಮ ಕೆಲಸ ಮಾಡಬೇಕು. ಕಾಡುಪ್ರಾಣಿ ಯಾವುದೇ ಇದ್ದರೂ ಅದನ್ನು ಕೊಲ್ಲುವುದು ಅಪರಾಧ. ಕೊಲ್ಲಲು ಅದು ಎದೆಯೊಡ್ಡಿ ಬರುವುದೂ ಇಲ್ಲ. ಮಂಗಗಳು ತೆಂಗಿನಕಾಯಿ , ಹಣ್ಣು ಹಂಪಲುಗಳನ್ನು…

Read more
Mite infection

ತರಕಾರಿ ಬೆಳೆಗಳಲ್ಲಿ ಎಲೆ ಮುರುಟುವುದಕ್ಕೆ ಸುರಕ್ಷಿತ ಪರಿಹಾರ.

ಚಳಿಗಾಲದಲ್ಲಿ ಹೆಚ್ಚಾಗಿ ಕಂಡು ಬರುವ ಈ ಎಲೆ ಮುರುಟುವ ಸಮಸ್ಯೆಗೆ ಕಾರಣ ಏನು ಮತ್ತು ಸುರಕ್ಷಿತ ಪರಿಹಾರ ಯಾವುದು ಎಂಬ ಬಗ್ಗೆ ಮಾಹಿತಿ ಇಲ್ಲಿದೆ. ತರಕಾರಿ  ಬೆಳೆ ವಾಣಿಜ್ಯಿಕವಾಗಿ ಮಾಡಿದರೂ ಈ ಸಮಸ್ಯೆ ಇದೆ.  ಮನೆಬಳಕೆಗೆ ಬೇಕಾದಷ್ಟೇ ಮಾಡಿದರೂ ಈ ಸಮಸ್ಯೆ  ಬೆನ್ನು ಬಿಡುವುದಿಲ್ಲ. ತರಕಾರಿ ಬೆಳೆಗಳು ವಿಶೇಷವಾಗಿ ರಾಸಾಯನಿಕ ಮುಕ್ತವಾಗಿದ್ದರೆ ಬೆಳೆಗಾರರಿಗೂ ಒಳ್ಳೆಯದು. ಬಳಕೆದಾರರಿಗೂ  ಒಳ್ಳೆಯದು. ಕೃಷಿಕರು ಕೀಟನಾಶಕ ಬಳಸುವುದರಿಂದ ಮೊದಲಾಗಿ ದೊಡ್ಡ ದುಷ್ಪರಿಣಾಮ ಉಂಟಾಗುವುದು ಸಿಂಪಡಿಸಿದವರಿಗೆ. ಅದನ್ನು ಉಸಿರಾಡಿದವರಿಗೆ, ಮೈಗೆ ಕೈಗೆ ತಾಗಿಸಿಕೊಂಡವರಿಗೆ ಪ್ರಾಥಮಿಕ…

Read more
ಡ್ರಿಪ್ - ಕಟ್ಟಿಕೊಳ್ಳುವಂತೆ ಮಾಡುವ ಕಶ್ಮಲಗಳನ್ನು ನಿವಾರಿಸುವ ವ್ಯವಸ್ಥೆ

ಡ್ರಿಪ್ – ಕಟ್ಟಿಕೊಳ್ಳುವಂತೆ ಮಾಡುವ ಕಶ್ಮಲಗಳು.

ಬಹಳಷ್ಟು ಜನ ರೈತರು ಡ್ರಿಪ್ ನೀರಾವರಿಯಲ್ಲಿ ಕಟ್ಟಿಕೊಳ್ಳುವ ಸಮಸ್ಯೆ ರಗಳೆ ಎಂದು ಒಮ್ಮೆ ಅಳವಡಿಸಿ ನಂತರ ಕಿತ್ತು ಬಿಸಾಡುತ್ತಾರೆ. ಹೀಗೆ ಆಗುವುದು ಕಶ್ಮಲಗಳು  ಸೇರಿಕೊಂಡು. ಒಂದು ದಿನದ ಕೆಲಸ ಮತ್ತು ಸ್ವಲ್ಪ ತಾಳ್ಮೆ ಇದ್ದರೆ ಅದನ್ನು ಸ್ವಚ್ಚ ಮಾಡುವುದು ತುಂಬಾ ಸುಲಭ. ಹನಿ ನೀರಾವರಿ ವ್ಯವಸ್ಥೆಯಲ್ಲಿ ನೀರಿನ ಗುಣ ಹೊಂದಿಕೊಂಡು ಕಟ್ಟಿಕೊಳ್ಳುವ ಸಮಸ್ಯೆ ಉಂಟಾಗುತ್ತದೆ.ಇದನ್ನು ನಿವಾರಿಸಲು ಸೂಕ್ತ ಫಿಲ್ಟರ್ ಮತ್ತು ಆಗಾಗ ಪೈಪನ್ನು  ಪ್ಲಶ್ ಮಾಡುವುದು ವರ್ಷಕ್ಕೊಮ್ಮೆ , ಆಮ್ಲ ಉಪಚಾರ ಮಾಡುವುದು ಪರಿಹಾರ. ಹನಿ ನೀರಾವರಿಗೆ …

Read more
banana plantation

ಬಾಳೆ ಬೆಳೆಯುವಾಗ ಕಂದುಗಳನ್ನು ನಿಯತ್ರಿಸುವುದು ಹೇಗೆ?

ಬಾಳೆ ಬೆಳೆಗಾರರಿಗೆ ಕಂದುಗಳ ನಿಯಂತ್ರಣ ಒಂದು ದೊಡ್ಡ ಸಮಸ್ಯೆ. ಕಂದುಗಳು ಕಡಿಮೆಯಾದಷ್ಟೂ ಬಾಳೆ ಗೊನೆ ಚೆನ್ನಾಗಿ ಬರುತ್ತದೆ. ಬಾಳೆ ನೆಟ್ಟು ಸುಮಾರು 5-6 ತಿಂಗಳಿಗೆ ಕಂದುಗಳು ಬರಲಾರಂಭಿಸುತ್ತವೆ. ಕಂದುಗಳು ಬಂದ ನಂತರ ಇರುವ ಆಹಾರ ಅವುಗಳಿಗೂ ಹಂಚಿಕೆಯಾಗಬೇಕು. ಆಗ ಹೆಚ್ಚು ಹೆಚ್ಚು ಗೊಬ್ಬರಗಳನ್ನು ಕೊಡಬೇಕು. ಕಂದುಗಳನ್ನು ನಿಯಂತ್ರಿಸಿಕೊಂಡರೆ ಬಾಳೆಗೆ ಪೋಷಕಾಂಶ ಹಾಗೂ ನೀರಾವರಿ ಕಡಿಮೆ ಸಾಕಾಗುತ್ತದೆ. ಬಾಳೆ ಗೊನೆ ಪುಷ್ಟಿಯಾಗಿ ಬೆಳೆಯುತ್ತದೆ.  ಹಾಗಾದರೆ ಬಾಳೆಯಲ್ಲಿ ಕಂದುಗಳನ್ನು ತೆಗೆಯುವ ವಿಧಾನ ಹೇಗೆ? ಕಂದುಗಳ ನಿಯಂತ್ರಣಕ್ಕೂ ಬಾಳೆಯ ಅಧಿಕ ಇಳುವರಿಗೂ…

Read more
Wilt damage

ಬದನೆಯ ಕಾಯಿ ಕೊಳೆಯಲು ಕಾರಣ ಮತ್ತು ಪರಿಹಾರ.

ಬದನೆ ಬೆಳೆಯುವವರು ಎದುರಿಸುತ್ತಿರುವ ಕಾಯಿ ಕೊಳೆಯುವ ಸಮಸ್ಯೆ ಒಂದು ರೋಗವಾಗಿದ್ದು, ಇದಕ್ಕೆ ಸಮರ್ಪಕ ಪರಿಹಾರ ನೈರ್ಮಲ್ಯ ಮಾತ್ರ. ಬದನೆ ಬೆಳೆಗಾರರ ಹೊಲದಲ್ಲಿ ನೋಡಿದರೆ ಕೊಯಿದ ಬದನೆಯ ಅರ್ಧ ಪಾಲು ಹೊಲದ ಮೂಲೆಯಲ್ಲಿ ಬಿಸಾಡಿದ್ದು ಸಿಗುತ್ತದೆ. ಬದನೆ ಎಲ್ಲಿ ಬೆಳೆದರೂ ಪರಿಸ್ಥಿತಿ ಹೀಗೆಯೇ. ಇದು ಒಂದು ಸೊರಗು ರೋಗ.  ಇದಕ್ಕೆ ಬೇಸಾಯ ಪದ್ದತಿಯಲ್ಲಿ ಮಾರ್ಪಾಡು ಮತ್ತು ನೈರ್ಮಲ್ಯ ಮಾತ್ರ ಸೂಕ್ತ ಪರಿಹಾರ. ಬದನೆ  ಬೆಳೆ ಎಷ್ಟು ಇಳುವರಿ ಬಂದರೂ  ಬೆಳೆಗಾರರಿಗೆ ಸಿಗುವುದು ಅರ್ಧ ಮಾತ್ರ. ಉಳಿದವು ಕೊಳೆಯುತ್ತದೆ. ಇತ್ತೀಚಿನ…

Read more
error: Content is protected !!