snail

ಅಡಿಕೆ ಮರದ ಸಿಂಗಾರ ತಿನ್ನುವ ಸಿಂಬಳದಹುಳು ನಿಯಂತ್ರಣ

ಸಿಂಬಳದ ಹುಳುವಿನ ಉಪಟಳ ಇಬ್ಬನಿ ಬೀಳುವ ಚಳಿಗಾಲದಲ್ಲಿ ಹೆಚ್ಚು. ಈ ಹುಳುಗಳು ನೆಲದಲ್ಲಿ ಇರುತ್ತವೆ. ಅವು ಆಹಾರ ಹುಡುಕುತ್ತಾ ಮರವನ್ನು ಏರಿ ಅಲ್ಲಿ ಎಳೆ ಹೂ ಗೊಂಚಲನ್ನು ತಿನ್ನುತ್ತವೆ. ಬರೇ ಅಡಿಕೆ ಹೂ ಗೊಂಚಲು ಮಾತ್ರವಲ್ಲ ಇವು ಆಹಾರವಾಗಿ ಹಣ್ಣು ತರಕಾರಿಗಳನ್ನೂ ತಿನ್ನುತ್ತವೆ. ಇದನ್ನು ನಿಯಂತ್ರಿಸದೆ ಇದ್ದರೆ  ಒಂದೆರಡು ಸಿಂಗಾರ ಹಾಳಾಗುತ್ತದೆ. ಇಳುವರಿ ನಷ್ಟವಾಗುತ್ತದೆ. ಬಸವನ ಹುಳುಗಳು, ಸಿಂಬಳದ ಹುಳುಗಳು , ಮಳೆಗಾಲದಲ್ಲಿ ನೆಲದಲ್ಲಿ ಅಲ್ಲಲ್ಲಿ ಸಂಚರಿಸುತ್ತಾ ಇರುತ್ತವೆ. ಹಾವಸೆ ಇತ್ಯಾದಿಗಳು ಇದರ ಆಹಾರ. ಅದನ್ನು ತಿನ್ನುತ್ತಾ…

Read more
Lakshmana phala

ಲಕ್ಷ್ಮಣ ಫಲ – ಇದು ಕ್ಯಾನ್ಸರ್ ನಿವಾರಕವೇ? ಇಲ್ಲಿದೆ ವಾಸ್ತವ.

ಕೆಲವು ಹಣ್ಣು ಹಂಪಲುಗಳಲ್ಲಿ ಒಮ್ಮೊಮ್ಮೆ ಭಾರೀ ಔಷಧೀಯ ಮಹತ್ವ ಬಂದು ಅದಕ್ಕೆ ಬೆಲೆ ಬರುತ್ತದೆ. ಹಾಗೆ ನೋಡಿದರೆ  ಇಂತಹ ಔಷಧೀಯ ಗುಣದ ಹಣ್ಣು ಹಂಪಲುಗಳು, ಕಾಯಿ, ಎಲೆ ಸೊಪ್ಪುಗಳು ಎಷ್ಟು ನಮ್ಮಲ್ಲಿವೆಯೋ ಯಾರಿಗೆ ಗೊತ್ತು? ಕೆಲವು ಪ್ರಚಾರಕ್ಕೆ ಬಂದು ಕೆಲವರಿಗೆ ಅದು ಲಾಭ ಮಾಡಿಕೊಡುತ್ತವೆ. ಇಂತಹ ಹಣ್ಣುಗಳ ಸಾಲಿನಲ್ಲಿ ಬಂದ ಒಂದು ಹಣ್ಣು ಲಕ್ಷ್ಮಣ ಫಲ ಎಂಬ ಒಂದು ಹುಳಿ ಹಣ್ಣು. ಯಾರೋ ಲಕ್ಷ್ಮಣ ಫಲ ಎಂಬುದು ಭಾರೀ  ಔಷಧೀಯ ಮಹತ್ವವನ್ನು ಹೊಂದಿದೆ ಎಂದರು ಅದಕ್ಕೆ ಈಗ…

Read more
ಮಣ್ಣು ಪರೀಕ್ಷೆ ಬೇಕಾಗಿಲ್ಲದ ಮಣ್ಣು ಇದು

ಮಣ್ಣು ಪರೀಕ್ಷೆ -ನಿಮ್ಮ ಸ್ವ ಅನುಭವದಲ್ಲೇ ಮಾಡಬಹುದು.

ಮಣ್ಣು ಪರೀಕ್ಷೆ ಮಾಡುವುದರಿಂದ ಗೊಬ್ಬರವನ್ನು  ಎಷ್ಟು ಬಳಸಬೇಕು, ಯಾವುದು ಬೇಕು, ಯಾವುದು ಬೇಕಾಗಿಲ್ಲ ಎಂಬುದು ತಿಳಿಯುತ್ತದೆ. ಇದು ಸತ್ಯವಾದರೂ ಮಣ್ಣು ಎಂಬುದು ಕಾಲಕಾಲಕ್ಕೆ  ಸ್ಥಿತಿಗತಿ ಬದಲಾವಣೆಯಾಗುವ ಕಾರಣ ಅದನ್ನು ಹೇಗೆ ಪರೀಕ್ಷಿಸಿ ಅದನ್ನು ತಿಳಿಯುವುದು ಎಂಬುದೇ  ಪ್ರಶ್ನೆ. ಇದಕ್ಕೆಇರುವ ಉತ್ತರ ರೈತರೇ  ಪರೀಕ್ಷೆ ವಿಚಾರದಲ್ಲಿ ತಜ್ಞತೆ ಹೊಂದುವುದು. ಹಾಗೆಂದು ಮಣ್ಣು ಪರೀಕ್ಷೆ ಎಂಬುದು ಬೇಡ ಎಂದಲ್ಲ. ಅನುಕೂಲ ಇದ್ದವರು ಇದನ್ನು ಸಮೀಪದ ಕೃಷಿ ಇಲಾಖೆಯಲ್ಲಿ ಮಾಡಿಸಿಕೊಳ್ಳಬಹುದು. ಕೆಲವು ಖಾಸಗಿ ಮಣ್ಣು ಪರೀಕ್ಷಾ ಪ್ರಯೋಗಾಲಯದಲ್ಲಿ ಮಾಡಿಸಿಕೊಳ್ಳಬಹುದು. ಕೆಲವು ಭಾರತ…

Read more
ವೇಸ್ಟ್ ಡಿ ಕಂಪೊಸರ್

“ವೇಸ್ಟ್ ಡಿ ಕಂಪೋಸರ್ “ ಒಂದು ಗೊಬ್ಬರ ಅಲ್ಲ.

ಹೆಸರೇ ಹೇಳುತ್ತದೆ, ಇದು ಕೃಷಿ ತ್ಯಾಜ್ಯಗಳನ್ನು ಕಳಿಯಿಸಿ ಕೊಡುವ ಜೀವಾಣುಗಳನ್ನು ಹೊಂದಿರುವ ಉತ್ಪನ್ನ ಎಂದು. ಆದರೆ ಜನ ಇದನ್ನೇ ಗೊಬ್ಬರ ಎಂದು ಭಾವಿಸಿ, ಎಲ್ಲದಕ್ಕೂ ವೇಸ್ಟ್ ಡಿ ಕಂಪೋಸರ್ ಬಳಸಿ ಎಂದು ಸಲಹೆ ಕೊಡುತ್ತಾರೆ.  ಯಾವ ಲಾಭಕ್ಕಾಗಿ ಹೀಗೆ ಮಾಡುತ್ತಿದ್ದಾರೆಯೋ ತಿಳಿಯದು. ಬರೇ ಇದನ್ನು ಬಳಸಿ ಬೆಳೆಗಳಿಗೆ ಪೋಷಕಾಂಶದ ತೃಷೆ ತೀರಿತೆಂದಾದರೆ ಅದು ಒಂದು ಅದ್ಭುತವೇ ಸರಿ. ಗೊಬ್ಬರಗಳು ಅಥವಾ ಪೊಷಕಾಂಶಗಳಲ್ಲಿ ಸ್ಥೂಲ ಗೊಬ್ಬರಗಳು ಮತ್ತು ತೀಕ್ಷ್ಣ ಗೊಬ್ಬರಗಳು ಎಂದು ಎರಡು ವಿಧ. ಈಗ ಅದರಲ್ಲಿ ನ್ಯಾನೋ…

Read more
good cow structure

ಇದು ಉತ್ತಮ ಹಸುವಿನ ಲಕ್ಷಣ

ಹೈನುಗಾರಿಕೆಯ ಯಶಸ್ಸು ಹಸುವಿನ ಆಯ್ಕೆಯಿಂದ ಮೊದಲ್ಗೊಳ್ಳುತ್ತದೆ. ಪ್ರತೀಯೊಂದು ಸಸ್ಯ, ಪ್ರಾಣಿ, ಮನುಷ್ಯರಿಗೆ  ವಂಶಗುಣದಲ್ಲೇ ಕೆಲವು ವಿಶೇಷತೆಗಳು ಇರುತ್ತವೆ. ಆದರ ಮೇಲೆ  ಅವುಗಳ ಉತ್ಪಾದಕತೆಯು ನಿಂತಿರುತ್ತದೆ. ಕೃಷಿಕರಲ್ಲಿ ಬಹುತೇಕ ಮಂದಿ ಹೈನುಗಾರಿಕೆ ಅವಲಂಬಿತರು. ಹಸು ಕೊಳ್ಳುವುದು, ಕೊಡುವುದು ಇದ್ದೇ ಇರುತ್ತದೆ. ಹೀಗಿರುತ್ತಾ ಕೊಳ್ಳುವ ಹಸು ಹೇಗಿರಬೇಕು ಎಂಬ ಬಗ್ಗೆ  ಪ್ರತೀಯೊಬ್ಬರಿಗೂ ಗೊತ್ತಿರಲೇ ಬೇಕು. ಹಸು ಕೊಳ್ಳುವುದು ಒಂದು ಪರೀಕ್ಷೆ: ಯಶಸ್ವೀ  ಹೈನುಗಾರಿಕೆಯ ಆಧಾರಸ್ಥಂಬವಾದ ಹಸು- ಕರುವನ್ನು ರೈತರು ತಮ್ಮ ಮನೆಯಲ್ಲೇ ತಳಿ ಸುಧಾರಣೆಯ ಮೂಲಕ ಪಡೆಯುವುದು ಎಲ್ಲದಕ್ಕಿಂತ ಉತ್ತಮ….

Read more
Healthy pepper vine

“ಟ್ರೈಕೋಡರ್ಮಾ’ ರೋಗ ನಿರೋಧಕ ಶಕ್ತಿಗೆ ಸಂಜೀವಿನಿ

ಟ್ರೈಕೋಡರ್ಮಾ ಅಥವಾ ಇನ್ಯಾವುದೇ ಜೀವಾಣುಗಳನ್ನು ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಜೈವಿಕ ಗುಣಧರ್ಮ ಬದಲಾಗುತ್ತದೆ. ಎಲ್ಲಾ ಜೀವಾಣುಗಳೂ ಮಣ್ಣು ಮೂಲದವುಗಳೇ ಆಗಿದ್ದು, ಅವುಗಳನ್ನು ಸಂಸ್ಲೇಶಿಸಿ ಕೃತಕವಾಗಿ ಬೆಳೆಸಿ ಸೂಕ್ತ ಮಾದ್ಯಮದಲ್ಲಿ ಸೇರಿಸಿ ರೈತರಿಗೆ ಬೇರೆ ಬೇರೆ ಬೆಳೆಗೆ ಬಳಕೆ ಮಾಡಲು ಕೊಡಲಾಗುತ್ತದೆ. ಇದು ಸಸ್ಯಗಳಿಗೆ  ರೋಗ ನಿರೋಧಕ ಶಕ್ತಿಯನ್ನು ಕೊಡಬಲ್ಲ ಮತ್ತು ರೋಗಕಾರಕ ಸೂಕ್ಷ್ಮಾಣು ಜೀವಿಗಳ ಜೊತೆಗೆ ಬದುಕಿ ಅದನ್ನು ನಿಶ್ಕ್ರಿಯಗೊಳಿಸುವ ಶಕ್ತಿಯನ್ನು ಹೊಂದಿದೆ. ಟ್ರೈಕೋಡರ್ಮಾ  ಎಂಬ ಶಿಲೀಂದ್ರವನ್ನು ಬಹಳ ಹಿಂದೆಯೇ ಸೂಕ್ಷ್ಮಾಣು ಜೀವಿ ಶಾಸ್ತ್ರಜ್ಞರು (1974)ಮಣ್ಣಿನಲ್ಲಿರುವುದನ್ನು ಗುರುತಿಸಿದ್ದಾರೆ….

Read more
pepper plantation

ಕರಿಮೆಣಸಿಗೆ ರೋಗ ಕಡಿಮೆಯಾಗಲು ಈ ಸರಳ ಕ್ರಮ ಅನುಸರಿಸಿ.

ನಿಮ್ಮ ಹೊಲದಲ್ಲಿ ಇರುವ ಕರಿಮೆಣಸಿನ ಬಳ್ಳಿಯನ್ನು ಒಮ್ಮೆ ಪರಾಂಬರಿಸಿ ನೋಡಿ. ತೆಂಗು, ಅಡಿಕೆ  ಮರಗಳಿಗೆ ಮೆಣಸು  ಬಳ್ಳಿ ಬಿಟ್ಟಿದ್ದು, ಆ ಮರ ಯಾವುದೇ ಕಾರಣಕ್ಕೆ ಸತ್ತು ಹೋದರೆ ಅದರಲ್ಲಿ ಇರುವ ಮೆಣಸಿನ ಬಳ್ಳಿ ಸಾಯಬೇಕು ಎಂದರೂ ಸಾಯಲಾರದು. ಮರ ಶಿಥಿಲವಾಗಿ ನೆಲಕ್ಕೆ ಬಿದ್ದ ನಂತರವೂ ಬಳ್ಳಿ ಜೀವಂತವಾಗಿರುತ್ತದೆ. ಇದು ಕರಿಮೆಣಸಿನ ಬಳ್ಳಿಯಲ್ಲಿ ನಾವು ಕಲಿಯಲಿಕ್ಕಿರುವ ಬೇಸಾಯ ಕ್ರಮ. ಮೆಣಸಿನ ಬಳ್ಳಿಗೆ ಅದರ ಶರೀರ ಪ್ರಕೃತಿಗೆ ಅನುಗುಣವಾಗಿ ನಾವು ಪೋಷಕಾಂಶ ನೀಡದ  ಕಾರಣದಿಂದ ರೋಗನಿರೋಧಕ ಶಕ್ತಿ ಕಡಿಮೆಯಾಗಿ ಬಳ್ಳಿಗೆ …

Read more
soft wood grated plant

‘ಮೃದು ಕಾಂಡ ಕಸಿ’ ಎಲ್ಲರೂ ಮಾಡಬಹುದಾದ ಸರಳ ಕಸಿ.

ಈಗ ನಿಮ್ಮಲ್ಲಿ ಹಲಸಿನ ಕಾಯಿ ಇದೆ. ಮಾವಿನ ಹಣ್ಣಿನ ಗೊರಟು ಇದೆ. ಹಾಗೆಯೇ ತಿಂದ ಇತರ ಹಣ್ಣು ಹಂಪಲುಗಳೂ  ಇರಬಹುದು. ಅದನ್ನು ಎಲ್ಲೆಂದರಲ್ಲಿ ಬಿಸಾಡಬೇಡಿ. ಪ್ಲಾಸ್ಟಿಕ್ ತೊಟ್ಟೆಗೆ ಹಾಕಿ ಸಸಿ ಮಾಡಿಕೊಳ್ಳಿ. ಯಾವಾಗಲಾದರೂ ಒಂದು ಉತ್ತಮ ಹಲಸು, ಮಾವು ಹಣ್ಣು ಹಂಪಲು, ಕೊಡುವ ಮರ ಸಿಕ್ಕರೆ ಅಲ್ಲಿಂದ ಒಂದೆರಡು ಗೆಲ್ಲು ತಂದು ಸಸಿ ಮಾಡಿಕೊಳ್ಳಬಹುದು. ಕಸಿ ಕಲಿಯುವುದೇ ಹಾಗೆ. ಯಾರನ್ನೂ ಅವಲಂಭಿಸದೇ ಬರೇ ಓದಿ, ನೋಡಿ ಮಾಡಬಹುದಾದ ಕಸಿ ವಿಧಾನ ಎಂದರೆ ಮೃದು ಕಾಂಡ ಕಸಿ. ಇದರಲ್ಲಿ…

Read more
Farmer showing the sheep

ತಿಂಗಳಿಗೆ 30,000 ಸಂಪಾದನೆ ಮಾಡುವ ಸರಳ ವೃತ್ತಿ.

ಜನ ಕೆಲಸ ಇಲ್ಲ. ಸಂಪಾದನೆ ಇಲ್ಲ. ಸರಕಾರ ನಮ್ಮ ನೆರವಿಗೆ ಬರಬೇಕು. ನಮಗೆ ಅದು ಕೊಡಬೇಕು. ಇದು ಕೊಡಬೇಕು ಎಂದು ಹರಟೆ ಹೊಡೆಯುತ್ತಾ ಕಾಲ ಹರಣ ಮಾಡಬೇಕಾಗಿಲ್ಲ. ಅತೀ ಕಡಿಮೆ ಬಂಡವಾಳದಲ್ಲಿ  ತಿಂಗಳಿಗೆ 30,000 ಸಂಪಾದನೆ ಮಾಡಬಹುದು. ಇದು ಚಿತ್ರದುರ್ಗ ಜಿಲ್ಲೆ, ಹೊಸದುರ್ಗದ ಜಾನಕಲ್  ಸೇವನಗರ ಗ್ರಾಮದ  ಪ್ರಿಯಾಂಕ್ ಎಂಬ 22 ವರ್ಷದ  ಯುವಕ ಹೇಳುವ ಮಾತು. ಇವರು  ಬಿ ಬಿ ಎಂ ವ್ಯಾಸಂಗ ಮಾಡುತ್ತಲೇ ಟಗರು ಸಾಕಣೆ ಮಾಡಿ ತಿಂಗಳಿಗೆ 30,000 ರೂ ಸಂಪಾದನೆ ಮಾಡುತ್ತಿದ್ದಾರೆ….

Read more
ಶ್ರೀಗಂಧದ ಸಸಿಗಳು

ಶ್ರೀಗಂಧ ಬೆಳೆಯಿಂದ ಕೋಟಿ ಗಳಿಕೆ ಸಾಧ್ಯವೇ?

ಶ್ರೀಗಂದ ಬೆಳೆದರೆ ರೈತರು ಕೋಟಿಯಲ್ಲಿ ಮಾತಾಡಬಹುದಂತೆ. ರೈತರೇ ಕೋಟಿಯ ಆಶೆಗಾಗಿ ಗಂಧ ಬೆಳೆಸಬೇಡಿ. ಆದರೆ ಹೋದರೆ ಬಂದರೆ ಕೊಟಿ ಅಷ್ಟೇ.    ಶ್ರೀಗಂಧದ ಬೆಳೆ ಎಲ್ಲದಕ್ಕಿಂತ ಸುಲಭ,ನಿರ್ವಹಣೆ ಇಲ್ಲ, ಬಂಡವಾಳದ ಅವಶ್ಯಕತೆ ಇಲ್ಲ, ಕಡಿಮೆ ಪರಿಶ್ರಮದಲ್ಲಿ ಕೋಟಿ ಲೆಕ್ಕದ ಆದಾಯ ಎಂದೆಲ್ಲಾ ಸಲಹೆ ಕೊಡುವವರು ಸಾಕಷ್ಟು ಜನ ಇದ್ದಾರೆ. ಮಾಡುವುದು ಯಾರೋ, ಬಂಡವಾಳ ಯಾರದ್ದೋ , ಹೇಳುವವರಿಗೆ ಪರೋಕ್ಷವಾಗಿ ತಕ್ಷಣದ ಲಾಭ ಇರುತ್ತದೆ. ಹಿತ್ತಾಳೆಯನ್ನು ಅಪ್ಪಟ ಚಿನ್ನವೆಂದೇ ವಾದ ಮಾಡುವವರಿರುತ್ತಾರೆ. ರೈತರೇ ಕೋಟಿ ಮಾಡಲಾಗುವುದಿದ್ದರೆ ನಿಮಗೆ ಯಾರೂ…

Read more
error: Content is protected !!