ಇದು ಅಸಾಮಾನ್ಯ ರೋಗನಿರೋಧಕ ಶಕ್ತಿಯುಳ್ಳ ಹಣ್ಣು.

ನಮ್ಮ ರಾಜ್ಯದ ಬಯಲು ಸೀಮೆ ಪ್ರದೇಶಗಳಲ್ಲಿ ಬೆಳೆಯುವ ಬೇಲದ ಹಣ್ಣಿನಷ್ಟು ಆರೋಗ್ಯಕರ ಹಣ್ಣು ಬೇರೊಂದಿಲ್ಲ.ಇದು ಒಂದು ಅರಣ್ಯ ಹಣ್ಣು. ರೋಮನ್ನರು ಈ ಮರವನ್ನು ಅರಣ್ಯ ದೇವತೆ ಎಂದು ಕರೆದಿದ್ದಾರೆ. ಅರೆ ಶುಷ್ಕ ಭೂಮಿಯಲ್ಲಿ ಬೆಳೆಯಲ್ಪಡುವ  ಹಣ್ಣಿನ ಬೆಳೆ ಇದು. ನಮ್ಮ ದೇಶದ ಫಲ ಸಂಪತ್ತಿನಲ್ಲಿ ಹೆಚ್ಚು ಜನಪ್ರಿಯವಾಗದೇ ಇರುವ ಬಹಳ ಆರೋಗ್ಯಪೂರ್ಣವಾದ  ಹಣ್ಣು ಎಂದರೆ ಇದು. ಬೆಳೆಯುವ ಪ್ರದೇಶಗಳು: ಕರಾವಳಿ ಮಲೆನಾಡಿನಲ್ಲಿ ಈ ಹಣ್ಣಿನ ಮರಗಳು ಇಲ್ಲವೇ ಇಲ್ಲ ಎನ್ನಬಹುದು. ಉಳಿದಂತೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಇದು…

Read more

ಬಿದಿರು ಬೆಳಸಬೇಕೆಂದಿರುವಿರೇ – ಇದನ್ನು ತಪ್ಪದೆ ಓದಿ.

ಬಿದಿರು ಬೆಳೆಸುವವರು  ಬೀಜದಿಂದ ಮಾಡಿದ ಸಸಿಯನ್ನು ಬೆಳೆಸಿದರೆ ಮಾತ್ರ ಅದಕ್ಕೆ ಪೂರ್ಣ ಆಯುಸ್ಸು. ಒಂದು ವೇಳೆ ಅದು ಬೆಳೆದ ಬಿದಿರಿನ ಕಳಲೆ, ಅಥವಾ ಅದರಿಂದ ಮಾಡಿದ ಸಸಿಯೇ ಆಗಿದ್ದರೆ ಬೇಗ ಅದರಲ್ಲಿ ಹೂ ಬಿಡಬಹುದು. ಬಿದಿರು ಬೆಳೆಸಿದರೆ ಅದರಿಂದ ತುಂಬಾ ಲಾಭವಿದೆ. ಒಂದೊಂದು ಬಿದಿರ ಹಿಂಡು ವರ್ಷಕ್ಕೆ  ಏನಿಲ್ಲವೆಂದರೂ ಕಳಲೆಯ ಮೂಲಕ  300-500 ರೂ. ತನಕ ಆದಾಯ ಕೊಡುತ್ತದೆ. ಅಲ್ಲದೆ ಬಿದಿರಿನ ಸೊಪ್ಪು ಗೊಬ್ಬರ. ಬಿದಿರನ್ನು ಬೇರೆ ಬೇರೆ ಬಳಕೆಗೆ ಉಪಯೋಗಿಸಬಹುದು. ಸಸಿಗೆ ಬೀಜವೇ ಸೂಕ್ತ: ಕಳೆದ…

Read more
ಸಾಗುವಾನು ಮರದ ಬುಡದ ಮಣ್ನು -soil of teak tree base

ಸಾಗುವಾನಿ ಮರದ ಬುಡದ ಮಣ್ಣು ಬಂಗಾರ.

ನಿಮ್ಮಲ್ಲಿ ಸಾಗುವಾನಿ ಮರ ಇದೆಯೇ , ಅದರ ಬುಡದಲ್ಲಿ ಬಿದ್ದ ತರಗೆಲೆಯ ಅಡಿಯ ಮಣ್ಣನ್ನು ಒಮ್ಮೆ ಗಮನ ಇಟ್ಟು ನೋಡಿ. ಇದು ಫಲವತ್ತಾದ ರಸಸಾರ ತಟಸ್ಥ ಇರುವ ಮೆಕ್ಕಲು ಮಣ್ಣಾಗಿರುತ್ತದೆ. ಸಾಗುವಾನಿ ಮರದ ಎಲೆಗಳು ಮಣ್ಣನ್ನು ಫಲವತ್ತಾಗಿಸುತ್ತದೆ, ಹಾಗೆಯೇ ಮಣ್ಣಿನ pH  ಅನ್ನು ಸರಿಮಾಡಿಕೊಡುತ್ತದೆ. ಸಾಗುವಾನಿ ಮರದ ಬುಡದಲ್ಲಿ ಎಲ್ಲಾ ನಮೂನೆಯ ಸೂಕ್ಷ್ಮ ಜೀವಿಗಳು ಇರುತ್ತವೆ ಎಂಬುದಾಗಿ ಕೇರಳದ ಅರಣ್ಯ ಸಂಶೊಧಾನ ಸಂಸ್ಥೆಯ ವಿಜ್ಞಾನಿಗಳು ಹೇಳುತ್ತಾರೆ. ಇದರ ಎಲೆಯ ಗಾತ್ರ, ಅದರ ತೂಕ, ಅದು ಕರಗುವ ವೇಗ…

Read more
ಸಮಗ್ರ ಕೃಷಿ ಯಲ್ಲಿ ಆಡು ಕುರಿ ಸಾಕಾಣಿಕೆ ಲಾಭದ್ದು- Goat and sheep farming is profitable in integrated farming

ಸಮಗ್ರ ಕೃಷಿ ಪದ್ದತಿಯಿಂದ ಕೃಷಿಕರ ಜೀವನ ಸುಬಧ್ರ.

ಕೃಷಿ ಮಾಡುವಾಗ ಲಾಭದ ಬೆಳೆಗಳ ಜೊತೆಗೆ ಕೃಷಿ ಆಧಾರಿತ ಉಪಕಸುಬುಗಳಾದ ಹೈನುಗಾರಿಕೆ, ಕೊಳಿ ಸಾಕಾಣಿಕೆ, ಆಡು ಮತ್ತು ಕುರಿ ಸಾಕಾಣಿಕೆ ಮುಂತಾದವುಗಳನ್ನು ಮಾಡಿಕೊಂಡರೆ ಅದು ಸುಸ್ಥಿರ.     ರೈತರು ತಮ್ಮಲ್ಲಿರುವ  ಸಂಪನ್ಮೂಲಗಳನ್ನು ಆಧರಿಸಿ  ಮಣ್ಣಿಗೆ ಹವಾಮಾನಕ್ಕೆ ಹೊಂದಿಕೊಳುವಂತೆ ಬೆಳೆ ಮತ್ತು ಕೃಷಿ ಪೂರಕ ಕಸುಬುಗಳನ್ನು ಅಳವಡಿಸಿಕೊಳ್ಳಬೇಕು. ಇಂಥ ಇಂತಹ ಕೃಷಿ ಪದ್ದತಿಗೆ ಮಿಶ್ರಕ್ರೃಷಿ ಅಥವಾ ಸಮಗ್ರಕ್ರೃಷಿ ಪದ್ದತಿ ಎಂದು ಕರೆಯುತ್ತಾರೆ. ಬೇಕಾಗುವ ಸಂಪನ್ಮೂಲಗಳು: ಈ ಕೃಷಿ ಪದ್ದತಿ ಅಳವಡಿಸಲು ರೈತನಿಗೆ  ಬೇಕಾಗುವುದು ಲಭ್ಯವಿರುವ  ನೀರು, ಜಮೀನು, ಕುಟುಂಬದ…

Read more
ಚೆನ್ನಾಗಿ ಬಿಸಿಲು ಪಡೆಯುವ ತೆಂಗಿನ ಮರಗಳು.

ಗೊಬ್ಬರ ನಂತರ ಕೊಡಿ- ಉಚಿತವಾಗಿ ಸಿಗುವ ಇದನ್ನು ಮೊದಲು ಒದಗಿಸಿ.

ನಾವು ಬೆಳೆ ಬೆಳೆಸುವಾಗ ಯಾವ ಗೊಬ್ಬರ ಕೊಡಬೇಕು, ಎಷ್ಟು ಕೊಡಬೇಕು. ಮತ್ತೆ ಏನೇನು ಕೊಡಬೇಕು ಎಂದು ಕೇಳುತ್ತೇವೆ. ಅದೆಲ್ಲಾ ನಂತರ. ಮೊದಲು ಉಚಿತವಾಗಿ ಸಿಗುವ ಬಿಸಿಲು ಪೂರ್ಣವಾಗಿ ಸಿಗುವಂತೆ ಮಾಡಿ. ದಾರಿ  ಬದಿಯ ತೆಂಗಿನ ಮರದಲ್ಲಿ ಫಸಲು ಯಾಕೆ ಹೆಚ್ಚು, ತೋಟದೊಳಗಿನ ಅಡಿಕೆ ಮರಳು ಉದ್ದುದ್ದ ಬೆಳೆಯುವುದೇಕೆ? ಬೆಳಗ್ಗಿನಿಂದ ಸಂಜೆ ತನಕ ಬಿಸಿಲು ಪಡೆಯುವ ದೊಡ್ಡ ಮರಗಳಲ್ಲಿ ಫಸಲು ಹೆಚ್ಚು ಏಕೆ? ಎತ್ತರ  ಬೆಳೆದ ಮರದಲ್ಲಿ ಫಸಲು ಹೆಚ್ಚು ಯಾಕೆ? ಇದಕ್ಕೆಲ್ಲಾ ಪ್ರಮುಖ ಕಾರಣ ಸೂರ್ಯನ ಬೆಳಕಿನ ಲಭ್ಯತೆ….

Read more

ಸಾರಜನಕ ಗೊಬ್ಬರ ನಮ್ಮ ಹೊಲದಲ್ಲೇ ಇದೆ ಗೊತ್ತೇ?

ಸಾರಜನಕ  ಗೊಬ್ಬರವಾಗಿ ರಾಸಾಯನಿಕ ರೂಪದ ಯೂರಿಯಾ, ಅಮೋನಿಯಂ ಸಲ್ಫೇಟ್ ಅಥವಾ ನೈಟ್ರೇಟ್ ಮುಂತಾದವುಗಳನ್ನೇ  ಬಳಸಬೇಕಾಗಿಲ್ಲ. ನಿಸರ್ಗ ಸಾರಜನಕ ಸತ್ವದ ಖಣಜ. ನಮ್ಮ ತುರ್ತು ಅವಶ್ಯಕತೆಗಾಗಿ ರಾಸಾಯನಿಕ ವಿಧಾನದ ಮೂಲಕ ಸಾರಜನಕ ಗೊಬ್ಬರವನ್ನು ಉತ್ಪಾದಿಸಿದ್ದು. ನಮ್ಮ ಸುತ್ತಮುತ್ತ ಇರುವ ಸಸ್ಯ ಮತ್ತು ಸಾವಯವ ವಸ್ತುಗಳಲ್ಲಿ  ನೈಸರ್ಗಿಕ ಸಾರಜನಕ ಸಾಕಷ್ಟು ಇದೆ. ಮಣ್ಣಿನಲ್ಲಿ ಸಾಕಷ್ಟು ಸಾರಜನಕದ ಅಂಶ ಇದೆಯಾದರೂ ನಾವು ಯಾಕೆ ಬೇರೆ ಮೂಲದಿಂದ ಸಾರಜನಕವನ್ನು ಬಳಸುತ್ತಿದ್ದೇವೆ ಎಂಬುದು ಎಲ್ಲರ ಭಾವನೆ. ಇದು ಸತ್ಯ. ಕಾರಣ ಇಷ್ಟೇ ಇವು ಬೇರೆ…

Read more

ಸೌರ ವಿದ್ಯುತ್ ಉತ್ಪಾದಿಸಿ – ಮಾರಾಟದಿಂದ ಆದಾಯ ಗಳಿಸಿ

ಸೂರ್ಯನ ಶಾಖದಲ್ಲೂ ದುಡ್ಡು ಮಾಡಬಹುದು ಎಂಬುದು ಸರಕಾರದ ಲೆಕ್ಕಾಚಾರ. ಇದು ಸೋಲಾರ್ ಎನರ್ಜಿ ಮನಿ. ಇದಕ್ಕೆ ಒಮ್ಮೆ ಬಂಡವಾಳ ಹಾಕಿದರೆ ಸಾಕು, ನಂತರ ಕೀಟ, ರೋಗ, ಮಾರುಕಟ್ಟೆ ಮುಂತಾದ ಸಮಸ್ಯೆಗಳೇ ಇಲ್ಲ. ನಿರಂತರ ಆದಾಯ  ಕೊಡುತ್ತಿರುತ್ತದೆ. ಉತ್ತರ ಕರ್ನಾಟಕದ ವರ್ಷದ ಹೆಚ್ಚಿನ ದಿನಗಳಲ್ಲಿ ಬಿಸಿಲು ಇರುವ ಕಡೆಗಳಲ್ಲಿ ಈಗ ಸೂರ್ಯನ ಬೆಳಕಿನಲ್ಲೂ ಹಣ ಮಾಡುವುದು ಸಾಧ್ಯವಾಗಿದೆ. ಸೌರ ವಿದ್ಯುತ್ ಉತ್ಪಾದಿಸಿ ಗ್ರಿಡ್ ಗೆ ಮಾರಿದರೆ ಅದಕ್ಕೆ ಹಣ ದೊರೆಯುತ್ತದೆ. ಹಲವಾರು ಜನ ಇದಕ್ಕೆ ಕೈ ಹಾಕಿದ್ದಾರೆ. ಕೆಲವು…

Read more

ಸಾವಯವ ಸಾರಜನಕ ಗೊಬ್ಬರಗಳ ಮೂಲ ಇವು.

ಸಾರಜನಕ ಎಂಬುದು ರಾಸಾಯನಿಕ ರೂಪದಲ್ಲಿರುವ ಯೂರಿಯಾ, ಅಮೋನಿಯಂ ಸಲ್ಫೇಟ್ ಅಥವಾ ನೈಟ್ರೇಟ್ ಮುಂತಾದ ಮೂಲಗಳಲ್ಲೇ ಬಳಸಬೇಕಾಗಿಲ್ಲ. ನಿಸರ್ಗ ಸಾರಜನಕ ಸತ್ವದ ಖಣಜ. ನಮ್ಮ ತುರ್ತು ಅವಶ್ಯಕತೆಗಾಗಿ ರಾಸಾಯನಿಕ ವಿಧಾನದ ಮೂಲಕ ಸಾರಜನಕ ಗೊಬ್ಬರವನ್ನು ಉತ್ಪಾದಿಸಿದ್ದು. ಮಣ್ಣಿನಲ್ಲಿ ಸಾಕಷ್ಟು ಸಾರಜನಕದ ಅಂಶ ಇದೆಯಾದರೂ ನಾವು ಯಾಕೆ ಬೇರೆ ಮೂಲದಿಂದ ಸಾರಜನಕವನ್ನು ಬಳಸುತ್ತಿದ್ದೇವೆ ಎಂಬುದು ಎಲ್ಲರ ಭಾವನೆ. ಇದು ಸತ್ಯ. ಕಾರಣ ಇಷ್ಟೇ ಇವು ಬೇರೆ ಬೇರೆ ಕಾರಣಗಳಿಂದ ನಷ್ಟವಾಗುತ್ತದೆ. ಇದನ್ನು ಪೂರ್ಣ ಉಳಿಸಲು ಅಸಾಧ್ಯ. ಪ್ರಯತ್ನ ಪಟ್ಟರೆ ಗರಿಷ್ಟ…

Read more
ಸೂಕ್ತವಾದ ನಾಟಿ ವಿಧಾನ

ಕರಿಮೆಣಸು ಬಳ್ಳಿ/ಸಸಿ ಹೇಗೆ ನೆಡಬೇಕು?

ಕರಿಮೆಣಸು ಬೆಳೆಸಲು ಕೆಲವರು ಬಳ್ಳಿ ತುಂಡುಗಳನ್ನು ನಾಟಿ ಮಾಡುತ್ತಾರೆ. ಮತ್ತೆ ಕೆಲವರು ಪ್ಯಾಕೆಟ್  ಸಸಿ ನಾಟಿ ಮಾಡುತ್ತಾರೆ. ಎರಡೂ ಉತ್ತಮ. ಬಳ್ಳಿ ನಾಟಿ ಮಾಡುವವರಿಗೆ ಮುಂಗಾರು ಮಳೆ ಪ್ರಾರಂಭವಾಗುವ ಈ ಸಮಯ ಉತ್ತಮ. ಸಸಿ ನಾಟಿಯನ್ನು  ಯಾವಾಗಲೂ ಮಾಡಬಹುದು. ಬಳ್ಳಿ ತುಂಡುಗಳನ್ನು ನಾಟಿ ಮಾಡಿದರೆ ಅದು  ಮಣ್ಣಿನಲ್ಲಿ ಬೇರು ಬಿಡುವ ತನಕ ಒಣಗದೆ ಇರಬೇಕು. ಹಾಗಾಗಬೇಕಾದರೆ ಬಿಸಿಲು ಇರಬಾರದು. ಹೆಚ್ಚು ಮಳೆಯೂ ಇರಬಾರದು.  ಅದಕ್ಕೇ ಈ ಸಮಯ ಸೂಕ್ತ. ಈಗ ನೆಟ್ಟರೆ ಅನುಕೂಲ ಏನು? ಹಿತಮಿತವಾದ ಮಳೆ…

Read more
Pepper

ಕರಿಮೆಣಸು ಬಳ್ಳಿಗೆ ರೋಗ ಬಾರದಂತೆ ರಕ್ಷಣೆ ಹೀಗೆ.

ಮಳೆಗಾಲ ಬಂದರೆ ಸಾಕು ಕರಿಮೆಣಸಿನ ಬೆಳೆಗೆ ಯಾವಾಗ ರೋಗ ಬರುತ್ತದೆ ಎಂಬುದು ಯಾರಿಂದಲೂ ಊಹಿಸಲು ಸಾಧ್ಯವಿಲ್ಲ.ಇದು ಕರಿಮೆಣಸು ಮಾತ್ರವಲ್ಲ ತೀರಾ ಸಪುರ ( ತೆಲೆಕೂದಲು ತರಹದ ) ಬೇರುಗಳಿರುವ ಎಲ್ಲಾ ಬೆಳೆಗಳೂ ಮಳೆಗಾಲ ಅಥವಾ ನೀರು ಹೆಚ್ಚಾಗಿ ಬೇರಿಗೆ ಉಸಿರು ಕಟ್ಟಿದ ತರಹದ  ಸನ್ನಿವೇಶ ಬಂದಾಗ ರೋಗಕ್ಕೆ  ತುತ್ತಾಗುತ್ತದೆ. ಕೆಲವು ಕಡೆ ರೋಗ ಹೆಚ್ಚು, ಇನ್ನು ಕೆಲವು ಕಡೆ ಕಡಿಮೆ. ಇದಕ್ಕೆ ಕಾರಣ ಅವರ ನಿರ್ವಹಣೆ. ಕರಿಮೆಣಸಿನ ಬಳ್ಳಿಯ ಬುಡ ಭಾಗದಲ್ಲಿ ಸುಮಾರು 20 ನಿಮಿಷಗಳ ಕಾಲ…

Read more
error: Content is protected !!