Mulching to whole ground

ಅಡಿಕೆ – ಕಬ್ಬು ಬೆಳೆಯ ಬೇರು ದುಂಬಿ ನಿಯಂತ್ರಣ.

ಅಡಿಕೆಗೆ ಮಾತ್ರ ಬೇರು ಹುಳದ ಕಾಟ ಅಲ್ಲ. ಕಬ್ಬು, ಹಿಪ್ಪು ನೇರಳೆ ಹೀಗೆ ಬಹಳಷ್ಟು ಬೆಳೆಗಳಿಗೆ ಈ ಹುಳದ ಕಾಟ ಇದೆ. ಇದರ ದುಂಬಿಗಳು ಈಗ ಹೊರಗೆ ಹಾರಾಡುವ ಸಮಯ. ಈಗ ಅದನ್ನು ನಿಯಂತ್ರಿಸುವ ಉಪಾಯ ಇದು.ಮರದ ಆರೋಗ್ಯಕ್ಕೆ  ಮತ್ತು ಬೆಳೆವಣಿಗೆಗೆ  ಆಧಾರವೇ ಅದರ ಬೇರು. ಆ ಬೇರನ್ನು ತಿನ್ನುವ ಒಂದು ಹುಳ ಅದನ್ನು ಏಳಿಗೆಯಾಗಲು ಬಿಡುವುದಿಲ್ಲ. ಕೆಲವು ಮಣ್ಣಿನಲ್ಲಿ ಈ ಬೇರು ಹುಳದ ಸ್ತೊಂದರೆ ಹೆಚ್ಚು. ಮತ್ತೆ ಕೆಲವು ಕಡೆ ಕಡಿಮೆ. ಬೇರು ಹುಳಗಳನ್ನು  ಒಡಿಸದಿದ್ದರೆ…

Read more

ಕಿಸಾನ್ ಕ್ರೆಡಿಟ್ ಕಾರ್ಡ್ ಸರಕಾರದ ಕೊಡುಗೆಯೇ ?

ಕೇಂದ್ರ ಸರಕಾರ  ಮೇ. 14-2020 , ರಂದು ವಿಶೇಷ ಪ್ಯಾಕೇಜ್  ಅಡಿಯಲ್ಲಿ 2.5 ಕೋಟಿ ಹೊಸ ಕೃಷಿಕರಿಗೆ  ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸುವ ಯೋಜನೆ ಹಾಕಿಕೊಂಡಿದೆ. ಬಹಳಷ್ಟು ಜನ ಈ ಕಿಸಾನ್ ಕ್ರೆಡಿಟ್ ಕಾರ್ಡ್ ಅಂದರೆ ಸರಕಾರ  ಸರಕಾರ  ಕೊಡುವ ಸವಲತ್ತು ಎಂದು ಭಾವಿಸಿದೆ. ಇದು ಹಾಗಲ್ಲ. ರೈತರು ಬ್ಯಾಂಕ್ ವ್ಯವಹಾರ ಮಾಡುವಾಗ ಹಣ  ತೆಗೆಯಲು ಆನುಕೂಲವಾಗುವಂತೆ ಕೊಡುವ ಕ್ರೆಡಿಟ್  ಕಾರ್ಡ್ ಇದು. ಇದರಲ್ಲಿ ನಿಮ್ಮ ಖಾತೆಯಲ್ಲಿ ಜಮಾ ಇದ್ದರೆ ಅದು ಮುಗಿಯುವ  ತನಕ  ಹಣ ತೆಗೆಯಬಹುದು….

Read more
ಗುಲಗುಂಜಿ ಹುಳ ಕೀಟ ಭಕ್ಷಕ

ಈ ಕೀಟಗಳಿದ್ದರೆ ಕೀಟನಾಶಕ ಬೇಕಾಗಿಲ್ಲ.

ನಮಗೆಲ್ಲಾ ಗೊತ್ತಿರುವಂತೆ ಗುಡ್ದಕೆ ಗುಡ್ಡ ಅಡ್ದ ಇದ್ದೇ ಇದೆ. ಪ್ರತೀಯೊಂದು ಜೀವಿಗೂ ಮತ್ತೊಂದು ವೈರಿ ಜೀವಿ ಇರುತ್ತದೆ. ಇದನ್ನು ಪ್ರಕೃತಿ ಸೃಷ್ಟಿ ಮಾಡಿರುತ್ತದೆ. ಯಾವುದು ಪ್ರಭಲವಾಗುತ್ತದೆಯೋ ಆಗ  ಅದರ ವೈರಿ ಜೀವಿ ಕಾಣಿಸಿಕೊಳ್ಳುತ್ತದೆ. ಇದನ್ನು ನಮ್ಮ ಹಿರಿಯರು ತನ್ನಷ್ಟಕೇ ಕಡಿಮೆಯಾಗುವ  ವಿಧಾನ ಎಂದಿರುವುದು. ನಿಜವಾಗಿ ಇದು ಮಿತಿ ಮೀರುವುದನ್ನು ಪ್ರಕೃತಿ ಹದ್ದುಬಸ್ತಿನಲ್ಲಿಡುವ ವ್ಯವಸ್ಥೆ. ನಮ್ಮಲ್ಲಿ ಹಲವು ಕೀಟಗಳು ಕಣ್ಮರೆಯಾಗಿ ಈಗ ಕೀಟನಾಶಕ ಅನಿವಾರ್ಯವಾಗಿದೆ. ಇಂದಿನ ನಮ್ಮ ಬೇಸಾಯ ಪದ್ದತಿ ಮತ್ತು ವಾತಾವರಣದ ಸ್ಥಿತಿಗತಿಯ ಏರು ಪೇರಿನಿಂದ ಇದೆಲ್ಲವೂ…

Read more

ಕೋಲ್ಜೇನು- ಜೇನು ತೆಗೆಯುವುದು ಸುಲಭ.

ಸಾಕುವ ಜೇನು ಎಂದರೆ ಅದು ತೊಡುವೆ ಅಥವಾ ಎಪಿಸ್ ಇಂಡಿಕಾ ಜೇನು ನೊಣ ಮಾತ್ರ. ಎಪಿಸ್ ಮೆಲ್ಲಿಫೆರಾ  ನಮ್ಮ ದೇಶದ ಮೂಲದ್ದಲ್ಲ. ಉಳಿದೆಲ್ಲಾ ಜೇನು ಪ್ರವರ್ಗಗಳನ್ನು ಪೆಟ್ಟಿಗೆಯಲ್ಲಿ ಹಾಕಿ ಸಾಕಬಹುದು. ಆದರೆ ಕೋಲ್ಜೇನನ್ನು ಅಹಿಂಸಾತ್ಮಕವಾಗಿ ಹೆಚ್ಚು ಸಲ ಜೇನು ತೆಗೆಯಲು ಸಾಧ್ಯ. ಅದಕ್ಕೆ  ಅನುಭವಿಯೇ ಆಗಬೇಕೆಂದೇನೂ  ಇಲ್ಲ. ಎಪಿಸ್ ಇಂಡಿಕಾ ಮತ್ತು ಎಪಿಸ್ ಮೆಲ್ಲಿಫೆರಾ ಎರಡು ವಿಧದ ಜೇನುನೊಣಗಳು  ಬಹು ಸಂಖ್ಯೆಯ  ಎರಿಗಳನ್ನು  ತಯಾರಿಸುವವು.   ಉಳಿದೆಲ್ಲಾ ಜೇನುನೊಣಗಳು ಅಂದರೆ  ಕೋಲು ಜೇನು, ಹೆಜ್ಜೇನು ಇವು ಒಂದೇ…

Read more
ಸುಳಿ ಕೊಳೆಗೆ ತುತ್ತಾದ ಅಡಿಕೆ ಸಸಿ

ಅಡಿಕೆ – ಸುಳಿ ಕೊಳೆಯುವುದಕ್ಕೆ ಕಾರಣ ಮತ್ತು ಪರಿಹಾರ.

ಕಳೆದ ಕೆಲವು ವರ್ಷಗಳಿಂದ ಅಡಿಕೆ ಬೆಳೆಗಾರರು ಸಸಿ/ ಮರದ  ಸುಳಿ ಕೊಳೆಯುವ/ ಬುಡ ಕೊಳೆಯುವ ತೊಂದರೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಎದುರಿಸುತ್ತಿದ್ದಾರೆ. ಹವಾಮಾನ ವೆತ್ಯಾಸ ಮತ್ತು ಇನ್ನಿತರ ಕಾರಣಗಳಿಂದ ಇದು ಆಗುತ್ತದೆ. ಸಂಜೆ  ಮಳೆ ಬರುತ್ತದೆ, ಹಗಲು ಭಾರೀ ಪ್ರಖರವಾದ ಬಿಸಿಲು. ಈ ಸನ್ನಿವೇಶದಲ್ಲಿ  ಅಡಿಕೆ, ತೆಂಗು ಮುಂತಾದ ಸಸಿ/ ಮರದ ಎಳೆಯ ಸುಳಿ ಭಾಗದಲ್ಲಿ ಒಂದು ಶಿಲೀಂದ್ರ ಬೆಳೆದು ಅದು ಆ ಭಾಗವನ್ನು ಕೊಳೆಯುವಂತೆ  ಮಾಡಿ ಮರದ ಮೊಳೆಕೆ ತನಕ ವ್ಯಾಪಿಸಿ ಗಿಡವನ್ನು  ಸಾಯುವಂತೆ  ಮಾಡುತ್ತದೆ. ಇದು ಈಗ ಎಲ್ಲಾ…

Read more
ಬೇಗ ಇಳುವರಿ ಕೊಡಬಲ್ಲ ತೆಂಗಿನ ಸಸಿ ಲಕ್ಷಣ - Early yielding nature of plant

ಉತ್ತಮ ಇಳುವರಿ ನೀಡಬಲ್ಲ ತೆಂಗಿನ ಸಸಿಯ ಲಕ್ಷಣಗಳು ಹೇಗೆ ಇರಬೇಕು?

 ಧೀರ್ಘಾವಧಿ ಬೆಳೆಗಳಲ್ಲಿ ಸಸ್ಯ ಮೂಲವನ್ನು ಆರಿಸುವಾಗ ನಮಗೆ ಸ್ವಲ್ಪ ಮಟ್ಟಿಗೆ ಸಸಿ ಹೀಗೆ ಇದ್ದರೆ ಉತ್ತಮ ಎಂಬ ಮಾನದಂಡಗಳನ್ನು ತಿಳಿದಿದ್ದರೆ ಒಳ್ಳೆಯದು.  ಕಾರಣ ಈ ಗಿಡ ನೆಟ್ಟು ಪ್ರತಿಫಲ ತೋರಿಸಲು 5-6 ವರ್ಷ ಬೇಕು. ಆಗ ನಮ್ಮ ಆಯ್ಕೆ ಸ್ವಲ್ಪ ತಪ್ಪಿದ್ದರೆ ಅಷ್ಟೂ ವರ್ಷ ನಷ್ಟ. ಇದಕ್ಕಾಗಿ ಪ್ರತೀಯೊಬ್ಬ ತೆಂಗು ಬೆಳೆಯುವವನೂ ತೆಂಗಿನ ಉತ್ತಮ ಗಿಡದ ಲಕ್ಷಣಗ ಗಳು ಹೀಗೆ ಇರಬೇಕು ಎಂಬುದನ್ನು ತಿಳಿದಿದ್ದರೆ ಒಳ್ಳೆಯದು. ತೆಂಗು ಮಿಶ್ರ ಪರಾಗಸ್ಪರ್ಷದ ಮೂಲಕ ಕಾಯಿ ಕಚ್ಚುವ ಸಸ್ಯವಾಗಿದು, ಯಾವ ಮರದ ಕಾಯಿಯನ್ನು…

Read more
ಮೈದಾನ ಪ್ರದೇಶಕ್ಕೆ ಹೊಂದುವ ನೀರಾವರಿ ಬೇಕಾಗದ ಗೋಡಂಬಿ ತಳಿಗಳು.

ಮೈದಾನ ಪ್ರದೇಶಕ್ಕೆ ಹೊಂದುವ ನೀರಾವರಿ ಬೇಕಾಗದ ಗೋಡಂಬಿ ತಳಿಗಳು.

ಅರೆ ಮಲೆನಾಡು ಮತ್ತು ಬಯಲು ಸೀಮೆಗಳಾದ ತುಮಕೂರು, ಶಿರಾ, ಕೊಲಾರ, ರಾಮನಗರ, ಹಾಗೆಯೇ ಬಾಗಲಕೋಟೆ, ಬೆಳಗಾವಿಯ ಕೆಲವು ಭಾಗಗಳಲ್ಲಿ  ರೈತರು ಈಗಾಗಲೇ ಗೇರು ಬೆಳೆಸುತ್ತಿದ್ದು, ಇಲ್ಲಿನ ಹವಾಮಾನದಲ್ಲಿ ಉತ್ತಮ ಇಳುವರಿ ಬರುತ್ತಿದೆ. ಇಲ್ಲಿನ ಒಣ ಭೂಮಿಗೆ ಇದು ಚೆನ್ನಾಗಿ ಹೊಂದಿಕೊಂಡು ನೀರಾವರಿ ಮಾಡುವುದಿದ್ದರೂ ಅತೀ ಕಡಿಮೆ ನೀರಾವರಿ ಸಾಕು. ಬಾಗಲಕೋಟೆಯ ತೋಟಗಾರಿಕಾ ವಿಶ್ವವಿಧ್ಯಾನಿಲಯ, ಹುಲಕೋಟಿಯ ಕೃಷಿ ಸಂಶೋಧನಾ ಕೇಂದ್ರ, ಚಿಂತಾಮಣಿಯ ತೋಟಗಾರಿಕಾ ಸಂಶೋಧನಾ  ಕೇಂದ್ರಗಳು ಗೋಡಂಬಿ ಬೆಳೆಯನ್ನು  ಬೆಳೆಸುವ ರೈತರಿಗೆ ಮನವರಿಕೆ ಮಾಡಿಕೊಡಲು ಶ್ರಮಿಸುತ್ತಿದ್ದಾರೆ. ಮೈದಾನ ಪ್ರದೇಶಕ್ಕೆ…

Read more

ಕರಾವಳಿ ಮಲೆನಾಡಿಗೆ ಹೊಂದುವ ಉತ್ತಮ ಗೇರು ತಳಿಗಳು

ಗೇರು ಒಂದು ವಿದೇಶಿ ವಿನಿಮಯ ಗಳಿಸುವ ವಾಣಿಜ್ಯ ಬೆಳೆ. ನಮ್ಮ ದೇಶದಲ್ಲಿ ಇದನ್ನು ಕೇರಳ, ಮಹಾರಾಷ್ಟ್ರ, ಗೋವಾ, ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಒರಿಸ್ಸಾ ಈಶಾನ್ಯ ರಾಜ್ಯಗಳು ಹಾಗೂ ಪಶ್ಚಿಮ ಬಂಗಾಳದಲ್ಲೆಲ್ಲಾ ಬೆಳೆಯಲಾಗುತ್ತಿದೆ. ಹೆಚ್ಚು ಪ್ರೊಟೀನ್ ಹಾಗೂ ಕಡಿಮೆ ಪ್ರಮಾಣದ ಶರ್ಕರ ಹೊಂದಿರುವ ಗೇರುಬೀಜಕ್ಕೆ ಪಾಶ್ಚಿಮಾತ್ಯ ದೇಶಗಳಲ್ಲಿ ಹೆಚ್ಚಿನ ಬೇಡಿಕೆ ಇದೆ. ಇದು ನಮ್ಮ ರಾಜ್ಯದ ಕರಾವಳಿ, ಮಲೆನಾಡು ಅರೆ ಮಲೆನಾಡು ಪ್ರದೇಶಗಳಿಗೆ  ಚೆನ್ನಾಗಿ ಹೊಂದಿಕೆಯಾಗುವ ಬೆಳೆಯಾಗಿದೆ. ಕಡಿಮೆ ನೀರಿನಲ್ಲಿ ಬೆಳೆದು ಆದಾಯ ಕೊಡಬಲ್ಲ ಬೆಳೆ ಎಂದು…

Read more

ಶುಂಠಿ- ಎಲೆಗೆಳು ಹಳದಿಯಾಗದಂತೆ ತಡೆಯುವ ವಿಧಾನ.

ಬ್ಯಾಕ್ಟೀರಿಯಾ ಸೊರಗು ಬರುವುದು ಮುಖ್ಯವಾಗಿ ಗಡ್ಡೆಗಳಲ್ಲಿ ಸೋಂಕು ಇರುವ ಕಾರಣದಿಂದ. ಗಡ್ಡೆಗಳನ್ನು ಆಯ್ಕೆ ಮಾಡುವಾಗ ತುಂಬಾ ಜಾಗರೂಕತೆ ಬೇಕು. ಮಣ್ಣು ಒಮ್ಮೆ ಬೆಳೆ ಬೆಳೆದ ಸ್ಥಳ ಆಗಿರಬಾರದು. ಬಿತ್ತನೆ ಗಡ್ಡೆಯನ್ನು  ಉಪಚರಿಸಿಯೇ ನಾಟಿ ಮಾಡಬೇಕು. ಬ್ಯಾಕ್ಟೀರಿಯಾ ಸೊರಗು ರೋಗವು ಗಿಡವನ್ನು ತಕ್ಷಣಕ್ಕೆ ಸಾಯುವಂತೆ ಮಾಡುವುದಿಲ್ಲ. ಎಲೆ ಹಳದಿಯಾಗುತ್ತಾ ಕೊನೆಗೆ ಸಾಯುತ್ತದೆ.  ಇದು ಬೆಳಯನ್ನು ಏಳಿಗೆಯಾಗಲು ಬಿಡದ ರೋಗ. ಇದು ಸುಡೋಮೋನಾಸ್ ಸೋಲನೇಸಿಯಾರಂ ಎಂಬ  ಬ್ಯಾಕ್ಟೀರಿಯಾ ( ದುಂಡಾಣು) ದಿಂದ ಬರುತ್ತದೆ. ಇದು ಮುಂಗಾರು ಮಳೆ ಪ್ರಾರಂಭವಾಗುವ ಸಮಯದಲ್ಲಿ…

Read more

ರೈತರಿಗೆ ಕೇಂದ್ರ ಸರಕಾರದಿಂದ ಮುಷ್ಟಿ ಸಹಾಯ.

ಇಂದು ಗ್ರಾಮೀಣ ಭಾಗದ ಸಣ್ಣ – ಅತೀ ಸಣ್ಣ ರೈತರು, ಈಗಾಗಲೇ ಸರಾಸರಿ ತಲಾ 1 ಲಕ್ಷಕ್ಕೂ ಹೆಚ್ಚಿನ ಸಾಲದಲ್ಲಿ ಮುಳುಗಿದ್ದಾರೆ. ದೊಡ್ಡ ರೈತರ ಬದುಕೇ ಸಾಲ. ಇದರ ಮೇಲೆ ಇವರಿಗೆ ಮತ್ತೆ ಸಾಲ ಕೊಡುವ ಪ್ಲಾನ್ ನಲ್ಲಿದೆ ಕೇಂದ್ರ ಸರಕಾರ. ವಿಶೇಷ ಪ್ಯಾಕೇಜ್ ಮೂಲಕ ಸಾಲಕೊಟ್ಟು ಭಾರತದ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವುದು ಸಾಧ್ಯವೇ ? ಇದರ ಪರಿಣಾಮ ಏನಾಗಬಹುದು? ಕೇಂದ್ರ ಸರಕಾರ ರೈತರ ಕಲ್ಯಾಣಕ್ಕಾಗಿ ಭಾರೀ ಸವಲತ್ತುಗಳನ್ನು ನೀಡಲಿದೆ ಎಂಬ  ಪ್ರತೀಯೊಬ್ಬ ರೈತರ ಆಶಯ …

Read more
error: Content is protected !!