ಕೇರಳದವರ ಶುಂಠಿ ನಾಟಿ ವಿಧಾನ

ಕೇರಳದವರ ಶುಂಠಿ ನಾಟಿ ವಿಧಾನ.

ಕೇರಳದವರು ಶುಂಠಿ ಬೇಸಾಯದಲ್ಲಿ ಲಾಭ ಮಾಡಿಕೊಳ್ಳುತ್ತಾರೆ ನಮಗೆ ಯಾಕೆ ಆಗುವುದಿಲ್ಲ. ಇಲ್ಲಿದೆ ಕೇರಳದವರು ನಾಟಿ ಮಾಡುವ ಕ್ರಮ. ಈಗಾಗಲೇ ಶುಂಠಿ ಬೆಳೆಯಲಾಗುವ ಪ್ರದೇಶಗಳಲ್ಲಿ  ನಾಟಿ ಕೆಲಸ ಪ್ರಾರಂಭವಾಗಿದೆ. ಬೇಗ ನಾಟಿ ಮಾಡಿದರೆ  ಎರಡು – ಮೂರು ತಿಂಗಳು ಸ್ವಲ್ಪ ನೀರಾವರಿ, ನಂತರ ಮಳೆಗಾಲ ಹೀಗೆ ಗಡ್ಡೆ ಬೆಳವಣಿಗೆ  ಉತ್ತಮವಾಗಿ ಲಭವಾಗುತ್ತದೆ ಎನ್ನುತ್ತಾರೆ ಶಿಕಾರೀ ಪುರದ ಶುಂಠಿ ಬೆಳೆಗಾರ ಸಾಜೂ ಜೋಸ್. ಕುಂಭ ಮಾಸ ಪ್ರಾರಂಭವಾಗುವಾಗ ಗಡ್ಡೆ ಗೆಣಸು ನಾಟಿ ನಾಟಿ ಮಾಡುವುದು ಸಾಂಪ್ರದಾಯಿಕವಾದ ಸೂಕ್ತ ಕಾಲ. ಕೇರಳದವರು ಯಾವ…

Read more

ಕೀಟನಾಶಕ ಇಲ್ಲದೆ ಅಡಿಕೆ ಉಳಿಸಬಹುದು.

ಕೀಟನಾಶಕ ಬಳಸದೆ ಅಡಿಕೆ ಉಳಿಸಿಕೊಂಡವರು ಇದ್ದಾರೆ. ಕೆಲವರು ಅಡಿಕೆ ಮಿಡಿ ಉಳಿಸಲು ಪ್ರತೀ ಹೂ ಗೊಂಚಲಿಗೂ ತಿಂಗಳು ತಿಂಗಳು ಕೀಟ ನಾಶಕ ಸಿಂಪಡಿಸುವವರೂ ಇದ್ದಾರೆ. ಸಿಂಪಡಿಸದವರಲ್ಲೂ ಫಸಲು ಇದೆ. ಸಿಂಪಡಿಸಿದಲ್ಲಿಯೂ ಫಸಲು ಇದೆ. ಹೀಗಿರುವಾಗ ಅಡಿಕೆ ಮರದ ಆರೋಗ್ಯ ಹೊಂದಿಕೊಂಡು ಹೂ ಗೊಂಚಲಿನಲ್ಲಿ ಮಿಡಿ ಕಾಯಿ ಉಳಿಯುತ್ತದೆ ಎಂದರೆ ತಪ್ಪಾಗಲಾರದು. ಅಡಿಕೆ ಮರದ ಹೂ ಗೊಂಚಲಿಗೆ ಬರುವ ಕೀಟಗಳಲ್ಲಿ ಈ ತನಕ ಗುರುತಿಸಲಾದದ್ದು, ಸಿಂಗಾರ ತಿನ್ನುವ ಕಂಬಳಿ ಹುಳ. ಬಸವನ ಹುಳ ಪೆಂಟಟೋಮಿಡ್  ಬಗ್. ಇದಲ್ಲದೆ ಬೇರೆ…

Read more

ಗುಳ್ಳಕ್ಕೆ ಇದು ಬದಲಿ ತಳಿ.

ಬದನೆ ಬೆಳೆಸುವ ರೈತರು ಬೆಳೆ ಉಳಿಸಿಕೊಳ್ಳುವುದಕ್ಕಾಗಿ ಮಾಡುವ ಖರ್ಚು ಅತೀ ಹೆಚ್ಚು. ಸಾಕಷ್ಟು ಕೀಟನಾಶಕ – ರೋಗ ನಾಶಕ ಬಳಸಿ  ಬೆಳೆ ಉಳಿಸಿಕೊಳ್ಳುತ್ತಾರೆ. ಇಷ್ಟೆಲ್ಲಾ ಖರ್ಚು ಮಾಡಿದಾಗ ರೈತರಿಗೆ ಉಳಿಯುವುದು ಅಷ್ಟಕ್ಕಷ್ಟೇ.  ಖರ್ಚು ಕಡಿಮೆ ಮಾಡಿ ಬೆಳೆ ಬೆಳೆಸಬೇಕಿದ್ದರೆ ಇರುವುದು ರೋಗ ನಿರೋಧಕ ಶಕ್ತಿ ಪಡೆದ ತಳಿಯನ್ನು ಆಯ್ಕೆ ಮಾಡುವುದು ಒಂದೇ. ಗುಳ್ಳ ಬದನೆಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆ. ಆದರೆ ಈಗಿತ್ತಲಾಗಿ ಗುಳ್ಳ ಬದನೆ ಬೆಳೆಸುವುದೇ ಕಷ್ಟವಾಗುತ್ತಿದೆ. ಬೆಳೆಸು ರೈತರು ಗುಳ್ಳ ತಿನ್ನುವುದನ್ನೇ ಕಡಿಮೆ ಮಾಡಿದ್ದೂ ಇದೆ….

Read more

ಗುಣಮಟ್ಟದ ಹಲಸು ಪಡೆಯುವ ವಿಧಾನ.

ಹಲಸಿನ ಮರದಲ್ಲಿ ಮಿಡಿ ಕಾಯಿಗಳು ಬಿಡಲು ಪ್ರಾರಂಭವಾಗಿವೆ. ಇನ್ನು ಬರುವ ಚಳಿ, ಒಣ ಹವೆಯಿಂದ ಇನ್ನೂ ಸ್ವಲ್ಪ ಕಾಯಿ ಬಿಡಬಹುದು. ಬಿಟ್ಟ ಎಲ್ಲಾ ಕಾಯಿಗಳನ್ನೂ ಉಳಿಸಬೇಡಿ. ಒಂದು ಮರಕ್ಕೆ  ಇಂತಿಷ್ಟು ಎಂಬ ಲೆಕ್ಕಾಚಾರದಲ್ಲಿ ಕಾಯಿ ಉಳಿಸಿಕೊಂಡರೆ ಗುಣಮಟ್ಟದ ಹಲಸಿನ ಕಾಯಿ ಪಡೆಯಬಹುದು. ಹಲಸಿನ ಮರದಲ್ಲಿ ಮಿಡಿಗಳು ಸಾಕಷ್ಟು ಬಿಟ್ಟರೆ  ಎಲ್ಲಾ ಕಾಯಿಗಳೂ ಒಳ್ಳೆಯ ರೀತಿಯಲ್ಲಿ ಬೆಳೆವಣಿಗೆ ಹೊಂದುವುದಿಲ್ಲ. ಕೆಲವು ಚಪ್ಪಟೆಯಾಗುತ್ತದೆ. ಕೆಲವು ಮಾತ್ರ ಪುಷ್ಟಿಯಾಗುತ್ತದೆ. ಚಪ್ಪಟೆ ಇಲ್ಲದ ಎಲ್ಲಾ ಭಾಗವೂ ಏಕಪ್ರಕಾರವಾಗಿ ಉಬ್ಬಿರುವ ಹಲಸಿನ ಕಾಯಿಯಲ್ಲಿ ಸೊಳೆಗಳು…

Read more
ಏಳಿಗೆ ಕಾಣದ ಅಡಿಕೆ ಗಿಡ

ಸಸ್ಯಗಳು ಎಷ್ಟೇ ಆರೈಕೆ ಮಾಡಿದರೂ ಏಳಿಗೆ ಆಗದಿರಲು ಕಾರಣ.

ಮನುಷ್ಯರಿಗೆ ಹೊಟ್ಟೆ ಹುಳ ಬಾಧಿಸಿದರೆ ಏನಾಗುತ್ತದೆಯೋ ಅದೇ ರೀತಿ ಇದು ಬೇರುಗಳಿಗೆ ಬಾಧಿಸಿ, ಸಸ್ಯ ಬೆಳವಣಿಗೆಯನ್ನು  ಹಿಂಡುತ್ತವೆ. ಬೆಳೆ ಬೆಳೆಸುವ ಸಂಧರ್ಭದಲ್ಲಿ ಒಮ್ಮೊಮ್ಮೆ ಒಂದೊಂದು ಹೊಸ ಸಮಸ್ಯೆಗಳು ಉಧ್ಭವವಾಗುತ್ತದೆ. ಅದರಲ್ಲಿ ಒಂದು ನಮಟೋಡು. ಕೆಲವೇ ಬೆಳೆಗಳಿಗೆ ತೊಂದರೆ ಮಾಡುತ್ತಿದ್ದ ಇದು, ಈಗ ಎಲ್ಲಾ ಬೆಳೆಗಳನ್ನು ಮುಟ್ಟಿದೆ. ಇದು ಸಸ್ಯದ ಬೇರುಗಳಲ್ಲಿ ಸೇರಿಕೊಂಡು ಭಾರೀ ತೊಂದರೆ ಮಾಡುತ್ತದೆ. ಮೈನರ್ ಪೆಸ್ಟ್ ಇದ್ದುದು ಮೇಜರ್ ಪೆಸ್ಟ್ ಎಂಬ ಸ್ಥಾನ ಪಡೆಯಲಾರಂಭಿಸಿದೆ. ಬಾಳೆ, ದಾಳಿಂದೆ, ದ್ರಾಕ್ಷಿ, ಪೇರಳೆ, ಹಿಪ್ಪು ನೇರಳೆ, ಬದನೆ, ಬೆಂಡೆ, ಸೌತೆ…

Read more

ಕೀಟನಾಶಕಗಳಿಂದ ಜೇನು ನೋಣ ಸಾಯಿಸಬೇಕಾಗಿಲ್ಲ.

ಅಡಿಕೆ ಮರದ ಸಿಂಗಾರದ ಹುಳ ನಿವಾರಣೆಗೆ ಮತ್ತು ಸುಳಿ ತಿಗಣೆ ನಿಯಂತ್ರಣಕ್ಕೆ ರೈತರು ವಿಷ ರಾಸಾಯನಿಕ ಸಿಂಪರಣೆ ಮಾಡಿ ಜೇನು ನೊಣಗಳ ಮಾರಣಹೋಮ ನಡೆಯುತ್ತಿದೆ ಎಂಬ ಆರೋಪವಿದೆ. ನಿಜವಾಗಿ ಇದು ಕೀಟನಾಶಕದ ಫಲವೇ ಅಲ್ಲ ನಮ್ಮ ಅಜ್ಞಾನದ ಫಲವೇ ? ಹೌದು. ನಮ್ಮ ರೈತರು ಮಾಡುವ ಕೆಲವು ಅಚಾತುರ್ಯಗಳಿಂದ  ನಮ್ಮ ಕಣ್ಣೆದುರು  ಜೇನು ನೊಣಗಳು- ಇತರ ಪರಾಗ ಸ್ಪರ್ಷ ಮಾಡುವ ಕೀಟಗಳು ಸಾಯುತ್ತವೆ. ಮುಂದೆ ನಾವೂ ಇದೇ ಕಾರಣದಿಂದ ಅಸ್ವಸ್ಥರಾಗಿ ಸಾಯುವುದೇ. Click to WhatsApp us…

Read more

ನೀವೂ ಮಾಡಬಹುದು- ಸರಳ ಬಡ್ಡಿಂಗ್.

ನಿಮಗೆ ಬೇರೆಕಡೆ ಉತ್ತಮ ಹಣ್ಣಿನ – ಹೂವಿನ ಸಸಿ ನೋಡಿ, ಅದನ್ನು ನಿಮ್ಮಲ್ಲೂ ಬೆಳೆಸಬೇಕೆಂಬ ಆಸೆ ಉಂಟಾದರೆ, ಒಂದು  ಅದೇ ಜಾತಿಯ ಬೇರು ಗಿಡ ಇದ್ದರೆ ಸಾಕು. ಅಲ್ಲಿಂದ ಎಲೆಗಳು ಇರುವ ಒಂದು ಸಣ್ಣ  ಕಾಂಡದ ತುಂಡು ತಂದು ಅದರಿಂದ ಸಸಿ ಮಾಡಿಕೊಳ್ಳಬಹುದು. ಇದು ಬಡ್ಡಿಂಗ್ ವಿಧಾನದಲ್ಲಿ. ಪ್ರತೀ ಡೈಕೋಟ್ ( ದ್ವಿದಳ) ಸಸ್ಯದ ಎಲೆಯ ಕಂಕುಳಲ್ಲಿ ಒಂದು ಮೊಳಕೆ ಬರುವ ಜೀವ ಕೋಶ ಇರುತ್ತವೆ. ಇದು ಅನುಕೂಲ ಕೂಡಿ ಬಂದಾಗ ಅಲ್ಲೇ ಮೊಳೆತು ಹೊಸ ಚಿಗುರು…

Read more

ಕುರಿ – ಮೇಕೆಗಳು ತೂಕ ಬರುವುದು ಹೀಗೆ.

ಆಡು ಸಾಕುವುದು ಬ್ಯಾಂಕಿನಲ್ಲಿ ದುಡ್ಡು ಇಟ್ಟಂತೆ. ಇದನ್ನು ಯಾವಾಗ ಬೇಕಾದರೂ ನಗದೀಕರಣ ಮಾಡಿಕೊಳ್ಳಬಹುದು.  ಇದಕ್ಕೆ ಹೂಡಿದ ಬಂಡವಾಳ  ಒಂದೇ ವರ್ಷದಲ್ಲಿ ದ್ವಿಗುಣ. ಆ ಕಾರಣಕ್ಕೆ ಆಡು ಸಾಕಣಿಕೆ ಒಂದು ಕೃಷಿ ಪೂರಕ  ವೃತ್ತಿಯಾಗಿ ಬೆಳೆಯುತ್ತಿದೆ. ಬರೇ ಆಡನ್ನು ಎಲ್ಲೆಂದರಲ್ಲಿ ಮೇಯಲು ಬಿಟ್ಟಾಕ್ಷಣ  ಅದು ತನ್ನ ದೇಹದ ತೂಕವನ್ನು ಹೆಚ್ಚಿಸಿಕೊಳ್ಳಲಾರದು. ಅದಕ್ಕೆ  ಪೌಷ್ಟಿಕ, ಮೇವು ಮತ್ತು ಆಹಾರ ನೀಡಿದಾಗ ಮಾತ್ರ ಅದು ತೂಕ ಬರುತ್ತದೆ. ಬೇಗ ಮರಿ ಹಾಕುತ್ತದೆ. ಪೌಷ್ಟಿಕ ಮೇವು ಯಾವುದು: ಹಾಲು ಕೊಡುತ್ತಿರುವ ಆಡಿಗೆ  ದಿನಕ್ಕೆ …

Read more

ಇಲಾಖೆಗಳ ಮುಖಾಂತರ ಕೀಟನಾಶಕ ಮಾರಾಟ!.

ಬೆಳೆಒಳಸುರಿಗಳಾದ ಕೀಟನಾಶಕ – ರೋಗನಾಶಕ- ಕಳೆನಾಶಕ ಬಳಸಿ ಕೃಷಿಕರ ಆರೋಗ್ಯ ಕೆಡುತ್ತದೆ. ಪರಿಸರದ ಜೀವ ವೈವಿಧ್ಯಗಳ ಮೇಲೆ  ತುಂಬಾ ತೊಂದರೆ ಆಗುತ್ತದೆ. ಇದನ್ನು ಹಿತ ಮಿತ ಬಳಸಲು ನಮ್ಮ ದೇಶದ ಕೃಷಿಕರಿಗೆ ವೈಜ್ಞಾನಿಕ ಶಿಕ್ಷಣ ಇಲ್ಲ. ಕಾನೂನು ಕಟ್ಟು ನಿಟ್ಟು ಮಾಡಿದರೆ , ಮದುವೆಯಾಗಿ ಮಕ್ಕಳನ್ನು ಮಾಡಬಾರದು ಎಂದು ತಾಕೀತು ಮಾಡಿದಂತಾತ್ತದೆ. ಇದೆಲ್ಲಕ್ಕೂ ಪರಿಹಾರ ನಮ್ಮ ದೇಶದ ಕೃಷಿ ತೋಟಗಾರಿಕೆ ಅಭಿವೃದ್ದಿ ಇಲಾಖೆಗಳೇ ಇದನ್ನು ರೈತರಿಗೆ ಮಾರಾಟ ಮಾಡುವುದು ಸರಿಯಲ್ಲವೇ?. ಹೊಸ  ಮಸೂದೆ: ಭಾತರ ಸರಕಾರ ಕಳಪೆ…

Read more

ವಿಷ ಮಿಶ್ರಿತ -ನೇಂದ್ರ ಬಾಳೆ ಹಣ್ಣು

ಊಟದ ಹೊತ್ತಾಗಿತ್ತು. ಕೆ ಎಸ್ ಆರ್ ಟಿ ಸಿ ಬಸ್ ನವರ ಊಟದ ಹೋಟೆಲಿನಲ್ಲಿ ಉಣ್ಣಲು ಮನಸ್ಸು ಕೇಳಲಿಲ್ಲ. ಬಾಳೆ ಹಣ್ಣು ತಿನ್ನೋಣ ಎಂದು ಗುಂಡ್ಯದಲ್ಲಿ ಒಂದು ಅಂಗಡಿಯಲ್ಲಿ ಬಾಳೆ ಹಣ್ಣು ಕೇಳಿದರೆ ಅಂಗಡಿಯವನು ಹೇಳುತ್ತಾನೆ, ಈಗ ನೇಂದ್ರ ಬಿಟ್ಟರೆ ಬೇರೆ ಬಾಳೆ ಹಣ್ಣೇ ಇಲ್ಲ. ಒಂದೆಡೆ ಮಂಗಗಳ ಕಾಟ. ಇನ್ನೊಂದೆಡೆ ಬೆಲೆ ಇಲ್ಲ. ಎಲ್ಲರೂ ಹೆಚ್ಚು ಬೆಲೆ  ದೊರೆಯುತ್ತದೆ ಎಂದು ನೇಂದ್ರವನ್ನೇ ಬೆಳೆಯುತ್ತಾರೆ. ಇದರಿಂದಾಗಿ ಸ್ಥಳೀಯ ಬಾಳೆ ಕಾಯಿಯೇ ಕಡಿಮೆಯಾಗಿದೆ.  ಫೋರೇಟ್ ಹಾಕಿದರೆ ಮಂಗಸಹ ಬರುವುದಿಲ್ಲವಂತೆ….

Read more
error: Content is protected !!