ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ..

ಕಾಲಸ್ಥಿತಿಗೆ ಅನುಗುಣವಾಗಿ ಕೃಷಿ ಮಾಡಬೇಕು- ಅಶೋಕ್ ಕುಮಾರ್ ಕರಿಕಳ.

ಕೃಷಿಕರಾದವರು ಕಾಲಸ್ಥಿತಿಗೆ ಅನುಗುಣವಾಗಿ ತಮ್ಮ ವೃತ್ತಿಕ್ಷೇತ್ರದಲ್ಲಿ ಮಾರ್ಪಾಡುಗಳನ್ನು ಮಾಡಿಕೊಂಡು ಬಂದರೆ  ಯಾವುದೋ ಕಷ್ಟವಿಲ್ಲದೆ ಅದರಲ್ಲಿ ಯಶಸ್ಸನು ಹೊಂದಬಹುದು ಎಂಬುದು ಕರಿಕಳ ಅಶೋಕ್ ಕುಮಾರ್ ಇವರ ಅನುಭವದ ಮಾತು. ಇವರು ಹುಟ್ಟು ಕೃಷಿಕರು. ಅದೇ ಕ್ಷೇತ್ರದಲ್ಲಿ ವ್ಯಾಸಂಗವನ್ನೂ ಮಾಡಿದವರು. ಜೊತೆಗೆ ಅದೇ ಕ್ಷೇತ್ರದಲ್ಲೇ ತನ್ನ ಬದುಕನ್ನೂ ಕಟ್ಟಿಕೊಂಡವರು. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಮಣ್ಯ ಸಮೀಪದ ಕರಿಕಳ ಎಂಬಲ್ಲಿ ವೈದ್ಯರ ಮಗನಾಗಿ ಹುಟ್ಟಿ, ಈಗ ಬೆಂಗಳೂರು ದೊಡ್ಡಬಳ್ಳಾಪುರದಲ್ಲಿ ಕೃಷಿ ಮತ್ತು ಅದಕ್ಕೆ ಪೂರಕ ವೃತ್ತಿ ನಡೆಸುತ್ತಿದ್ದಾರೆ. ಇವರರನ್ನು  ಕೃಷಿ…

Read more
vertical farming

ಕಡಿಮೆ ಸ್ಥಳದಲ್ಲಿ ಹೆಚ್ಚು ಬೆಳೆ ಬೆಳೆಯಬಹುದಾದ ವರ್ಟಿಕಲ್ ಕೃಷಿ.

ಕೃಷಿ ದಿನದಿಂದ ದಿನಕ್ಕೆ ಬದಲಾವಣೆಯ ಮೆಟ್ಟಲೇರುತ್ತಾ ಇರುತ್ತದೆ. ಇನ್ನು ಮುಂದಿನ ದಿನಗಳಲ್ಲಿ ಅತೀ ಕಡಿಮೆ ಸ್ಥಳಾವಕಾಶದಲ್ಲಿ ಅಧಿಕ ಬೆಳೆ ಬೆಳೆಸಿ, ಅಧಿಕ ಇಳುವರಿ ಪಡೆಯುವುದೇ ಆಗಿರುತ್ತದೆ. ಸುಮಾರು 30-40 ವರ್ಷದ ಹಿಂದೆ ನಮ್ಮ ಕೃಷಿ ಹೇಗಿತ್ತು ಎಂಬುದನ್ನು ಆ ವಯೋಮಾನದವರು ಒಮ್ಮೆ ನೆನಪಿಸಿಕೊಳ್ಳಿ. ಅದೇ ರೀತಿ ತುಂಬಾ ಹಿರಿಯರಿದ್ದರೆ ಅವರ ಕಾಲದಲ್ಲಿ ಸುಮಾರು 50-60 ವರ್ಷಗಳ ಹಿಂದೆ ಹೇಗಿತ್ತು ಎಂಬುದನ್ನು ಒಮ್ಮೆ ಕೇಳಿ ನೋಡಿ ಈಗಿನದ್ದು   ನಮಗೆಲ್ಲಾ ಗೊತ್ತಿದೆ ತಾನೇ? ಎಲ್ಲವೂ ಭಾರೀ ಬದಲಾವಣೆ ಆಗಿದೆ. ಆಗುತ್ತಲೇ…

Read more

ಕಾಡು ಪ್ರಾಣಿಗಳಿಗೆ ಇನ್ನು ಹೊಲವೇ ಖಾಯಂ ವಾಸ್ತವ್ಯ!

ಸರಕಾರ ಈಗ ಅರಣ್ಯ ಇಲಾಖೆಯ ಸುಪರ್ದಿಯಲ್ಲಿದ್ದ ಸುಮಾರು 23 ಲಕ್ಷ ಎಕ್ರೆ ಅರಣ್ಯ ( ಡೀಮ್ದ್ ಫೋರೆಸ್ಟ್ )ನಲ್ಲಿ 15 ಲಕ್ಷ ಎಕರೆ  ಭೂಮಿಯನ್ನು ಸರಕಾರ ಕಂದಾಯ ಇಲಾಖೆಗೆ ವರ್ಗಾಯಿಸಲು ನಿರ್ಧರಿಸಿದೆ. ಈಗಲೇ ಅರಣ್ಯ ನಾಶದಿಂದ  ಕೃಷಿಕರ 10- 20 % ದಷ್ಟು ಬೆಳೆ ಕಾಡು ಪ್ರಾಣಿಗಳ ಪಾಲಾಗುತ್ತಿದೆ. ಒಂದು ವೇಳೆ ಇನ್ನೂ ಕಾಡು ಕಡಿಮೆಯಾದರೆ  ಕೃಷಿಕರ ಹೊಲದಲ್ಲೇ ಕಾಡು ಪ್ರಾಣಿಗಳು ವಾಸಮಾಡಬಹುದು. ಬೆಳೆಗಳು ಕೋತಿ, ಆನೆ ಕಾಡೆಮ್ಮೆಗಳ ಪಾಲಾಗಬಹುದು. ಹಟ್ಟಿಯಲ್ಲಿರುವ ಹಸುಗಳು ಹುಲಿ, ಚಿರತೆಯ ಪಾಲಾದರೂ…

Read more
areca nut palm with full yield

ಅಡಿಕೆ – ಉತ್ತಮ ಫಲ ಕೊಡುವ ಮರದ ಲಕ್ಷಣ ಹೇಗಿರಬೇಕು.

ಇತ್ತೀಚೆಗಿನ ಅಡಿಕೆ ತೋಟಗಳಲ್ಲಿ ಶೇ.50 ಮಾತ್ರ ಉತ್ತಮ ಫಲನೀಡಿ, ಉಳಿದವು ಅನುತ್ಪಾದಕ ಮರಗಳಂತೆ ಇರುವ ಕಾರಣ ತೋಟಗಳು ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದ್ದರೂ ಉತ್ಪಾದನೆ ಆ ಮಟ್ಟಕ್ಕೆ ಏರುತ್ತಿಲ್ಲ. ಬೆಳೆಗಾರರು ಹೆಚ್ಚು ಹೆಚ್ಚು ಸಸಿ ನೆಡುವ ಬದಲು ಇರುವ ತೋಟದಲ್ಲೇ ಬಹುತೇಕ ಉತ್ಪಾದಕ ಮರಗಳಿರುವಂತೆ ತೋಟವನ್ನು ಪುನಃಶ್ಚೇತನ ಮಾಡುವುದು ಎಲ್ಲಾ ದೃಷ್ಟಿಯಿಂದ ಉತ್ತಮ. ಸ್ವಲ್ಪ ಬಿಡುವು ಮಾಡಿಕೊಂಡು ತೋಟ ಸುತ್ತುತ್ತಾ ಬನ್ನಿ. ಹಿಂದೆ ಸುತ್ತುದಾಗ ಗಮನಿಸಿದ ಮರ, ಕಳೆದ ವರ್ಷ ಸುತ್ತುವಾಗ ಗಮನಿಸಿದ ಮರ , ಅದಕ್ಕಿಂತ ಹಿಂದಿನ…

Read more

ಸರಳ ವಿನ್ಯಾಸದ ಬಹು ಉಪಯೋಗಿ ಡ್ರೈಯರ್.

ಕೃಷಿ ಎಂದದೆ ಮಳೆಗಾಲದಲ್ಲಿ ಏನಾದರೂ ಒಣಗಿಸುವುದು ಇದ್ದೇ ಇರುತ್ತದೆ. ಅಂಗಡಿಯಿಂದ ತರುವ ಕೊತ್ತಂಬರಿ ಮೆಣಸು, ಮುಂತಾದವುಗಳನ್ನು ತೊಳೆದು ಒಣಗಿಸಿಯೇ ಬಳಸಬೇಕಾಗುತ್ತದೆ. ಮಳೆಗಾಲದಲ್ಲಿ ಇದು ತುಂಬಾ ಕಷ್ಟವಾಗುತ್ತದೆ. ಇಂಥ ಉದ್ದೇಶಕ್ಕೆ ಹಾಗೂ ಹಣ್ಣು ಹಂಪಲು, ಜಾಯೀಕಾಯಿ, ಕರಿಮೆಣಸು ಮುಂತಾದ ಆಹಾರ ವಸ್ತುಗಳು ಹಾಗೂ ಬೆಳೆಗಳಾದ ಅಲ್ಪ ಸ್ವಲ್ಪ ಕೊಬ್ಬರಿ, ಅಡಿಕೆ ಮುಂತಾದವುಗಳನ್ನು ಒಣಗಿಸಲು ಅವರರವರ ಅವಶ್ಯಕತೆಗೆ ಅನುಗುಣವಾಗಿ ಡ್ರೈಯರ್ ಗಳನ್ನು ಹೊಂದುವುದು ಉತ್ತಮ. ಇದರ ಒಂದು ವಿನ್ಯಾಸ ಇಲ್ಲಿ ಕೊಡಲಾಗಿದೆ. ಡ್ರೈಯರುಗಳಲ್ಲಿ ಅನುಕೂಲಕ್ಕೆ ತಕ್ಕುದಾಗಿ ಬೇರೆ ಬೇರೆ ಪ್ರಮಾಣ…

Read more

ರಾಜ್ಯದ ಹೊಸ ಭೂ ಸುಧಾರಣಾ ಕಾಯಿದೆ ಟುಸ್…

ಹಸುರು ಶಾಲು ಹೊದ್ದು, ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ, ನಮ್ಮೆಲ್ಲರ  ಮುಖ್ಯಮಂತ್ರಿಗಳು   ಮಾರ್ಚ್ ತಿಂಗಳಲ್ಲಿ  ವಿದೇಶಕ್ಕೆ ಹೋಗಿ ಬಂದು  ರೈತರಿಗೆ ಒಂದು ಶಾಕ್ನ ಸೂಚನೆ  ಕೊಟ್ಟಿದ್ದರು. ಆ ಶಾಕ್ ಈಗ ರಾಜ್ಯದ  ರೈತಾಪಿವರ್ಗದ  ಮೇಲೆಲ್ಲಾ ಹರಿಬಿಡಲಾಗಿದೆ. ಇದು ದುಡ್ಡಿಗಾಗಿ ಅಷ್ಟೇ: ಅಂದು  ( ಮಾರ್ಚ್ 15/2020 )  ಕರ್ನಾಟಕದ  ಮುಖ್ಯಮಂತ್ರಿಗಳು  ಕೃಷಿಕರಲ್ಲದವರು  ಮತ್ತು ಅಧಿಕ ಆದಾಯದ ಮೂಲ ಹೊಂದಿದವರು ಕೃಷಿ ಭೂಮಿ ಕೊಳ್ಳಲು ಅನುಕೂಲವಾಗುವ  ಶಾಸನ ತಿದುಪಡಿಯ ಪ್ರಸ್ತಾಪ ಮಾಡಿದ್ದರು. ಅದಕ್ಕೆ ದೇವರ ದಯೆ ಇರಲಿಲ್ಲವೆಂದು  ಕಾಣಿಸುತ್ತದೆ….

Read more
rain water

ಈ ವರ್ಷದ ಮಳೆ ಭವಿಷ್ಯ

ಮಳೆ ಭವಿಷ್ಯವನ್ನು ಹಿಂದೆ ಪಂಚಾಗಕರ್ತರು ಹೇಳುತ್ತಿದ್ದರು. ಈಗ ಅದನ್ನು ಹವಾಮಾನ ಇಲಾಖೆ ಹೇಳುತ್ತದೆ. ಅದು ಪೂರ್ವಭಾವಿಯಾಗಿಯೇ. ಭಾರತೀಯ ಹವಾಮಾನ ಕಚೇರಿ ಈ ವರ್ಷ ಸರಾಸರಿ ಮಳೆಯಾಗುವ ಸೂಚನೆಯನ್ನು ನೀಡಿದೆ. ಮೇ ಕೊನೇ ವಾರ, ಜೂನ್ ಒಂದನೇ ತಾರೀಖಿಗೆ ಕೇರಳ ಪ್ರವೇಶಿಸುವ ಮುಂಗಾರು ಮಳೆ ಸಪ್ಟೆಂಬರ್ ತನಕ ದೇಶದಾದ್ಯಂತ ಏಕ ಪ್ರಕಾರವಾಗಿ ಬೀಳಲಿದ್ದು, ಕೃಷಿಕರ ಬದುಕಿಗೆ ಇದು ನೆಮ್ಮದಿ ತರಲಿದೆ ಎಂಬುದಾಗಿ ಭೂ ವಿಜ್ಞಾನ ಸಚಿವಾಲಯದ ಕಾರ್ಯದರ್ಶಿ ಎಂ.ರಾಜೀವನ್ ಹೇಳುತ್ತಾರೆ. ಈ ವರ್ಷದ ಮುಂಗಾರು ಮಳೆಯನ್ನು ಸರಾಸರಿ ಮಳೆ…

Read more
error: Content is protected !!