ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗ

ರಾಸಾಯನಿಕ ಕೀಟ-ರೋಗ ನಾಶಕಗಳ ಬದಲಿಗೆ ಇರುವ ತಯಾರಿಕೆಗಳು.

ಬೆಳೆಗಳಿಗೆ ಹಾನಿ ಮಾಡುವ ಕೀಟ – ರೋಗ ನಿಯಂತ್ರಣಕ್ಕೆ ವಿಷ ರಾಸಾಯನಿಕಗಳೇ ಅಂತಿಮ ಅಲ್ಲ. ಅದರ ಬದಲಿಗೆ ಜೈವಿಕ ಕೀಟ –ರೋಗ ನಿಯಂತ್ರಕಗಳು ಇವೆ. ಇವು ಉತ್ತಮವಾಗಿ ಕೆಲಸ ಮಾಡುತ್ತವೆ. ರಾಸಾಯನಿಕ ಕೀಟ ರೋಗ ನಿಯಂತ್ರಗಳಿಗೆ ಇವು ಪರ್ಯಾಯ.ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ ಮಾಡಿದರೆ ಕೆಲವು ಸರಳ , ಸುರಕ್ಷಿತ ಉಪಾಯಗಳು ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕ ಉಪಾಯಗಳಿಂದಲೇ ನಿಯಂತ್ರಿಸಬಹುದು ಎಂದು ಕಂಡುಕೊಳ್ಳಲಾಗಿದೆ. ಇದನ್ನು…

Read more
ಬೇರು ಹುಳ ಪೀಡಿತ ಅಡಿಕೆ ತೋಟ

ಬೇರು ಹುಳ ನಿಯಂತ್ರಣಕ್ಕೆ ಜೈವಿಕ ನಿಯಂತ್ರಕ –EPN.

ಜೈವಿಕವಾಗಿ ಕೆಲವು ಕೀಟಗಳನ್ನು ನಿಯಂತ್ರಿಸಲು ಸಾಧ್ಯ. ಅದರಲ್ಲಿ ಒಂದು EPN.  ಇದು ಬೇರು ಹುಳಗಳನ್ನೇ ಆಶ್ರಯಿಸಿ ಬದುಕಿ, ಅದನ್ನು ಕೊಲ್ಲುತ್ತದೆ. ಇದರ ಬಳಕೆ ಸುಲಭ. ಇದನ್ನು ರೈತರೇ ಉತ್ಪಾದಿಸುವ ತಂತ್ರಜ್ಝಾನವನ್ನು  CPCRI ಹೇಳಿಕೊಡುತ್ತದೆ. ಅಡಿಕೆ ತೆಂಗು, ಕಬ್ಬು ಬೆಳೆಗಾರರು ಬೇರು ಹುಳದ ಸಮಸ್ಯೆಗೆ ಯಾವುದು ಉತ್ತಮ ಪರಿಹಾರ ಎಂಬ ಹುಡುಕಾಟದಲ್ಲಿದ್ದಾರೆ. ಇತ್ತೀಚೆಗೆ ಈ ಹುಳ  ನಿಯಂತ್ರಣಕ್ಕೆ ಜೈವಿಕ ಪರಿಹಾರ ಉತ್ತಮವಾಗಿ ಕೆಲಸ ಮಾಡುತ್ತದೆ ಎಂದು ತಿಳಿಯಲಾಗಿದೆ. ಇದರಲ್ಲಿ ಒಮ್ದು ಎಂಟಮೋ ಪಥೋಜೆನಿಕ್ ನಮಟೋಡ್ (EPN) Entomopathogenic Nematodes ಇದನ್ನು ಬಳಸಿ…

Read more
Trichoderma Packet

ಟ್ರೈಕೋಡರ್ಮಾ ಬಳಸುವವರಿಗೆ ಉಪಯುಕ್ತ ಮಾಹಿತಿ.

ರೈತರು ತಮ್ಮ ಬೆಳೆಗಳಿಗೆ ಬರುವ ಶಿಲೀಂದ್ರ ರೋಗಗಳನ್ನು ಧೀರ್ಘಾವಧಿ ತನಕ  ನಿಯಂತ್ರಣಕ್ಕೆ ತರಲು ಟ್ರೈಕೋಡರ್ಮಾ ಬಳಸಬಹುದು.  ಇದು  ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಸಂಶೋಧನಾ ಕೇಂದ್ರ, ಕೃಷಿ ಮತ್ತು ತೋಟಗಾರಿಕಾ ಇಲಾಖೆಗಳಲ್ಲಿ ಲಭ್ಯ ಇರುತ್ತದೆ. ಇತ್ತಿಚೀನ ದಿನಗಳಲ್ಲಿ ಸಾವಯವ ಕೃಷಿಯಲ್ಲಿ ಜೈವಿಕ ಗೊಬ್ಬರ ಮತ್ತು ಶಿಲೀಂದ್ರ , ಕೀಟ ನಾಶಕಗಳ  ಬಳಕೆ ಹೆಚ್ಚುತ್ತಿದೆ. ಸಸ್ಯಗಳಲ್ಲಿ ಕಂಡು ಬರುವರೋಗದ ಹತೋಟಿಯನ್ನು ರಾಸಾಯನಿಕ ಶಿಲೀಂಧ್ರನಾಶಕಗಳಿಂದ ಮಾಡುವುದು ಒಂದು. ಆದರೆ ಅದರಲ್ಲಿ  ರಾಸಾಯನಿಕ ಶೇಷ ವಸ್ತುಗಳು ಮಣ್ಣಿನಲ್ಲಿ ಹಾಗೂ ಸಸ್ಯ ಭಾಗಗಳಲ್ಲಿ…

Read more
banana bunch

ಬಾಳೆ ನೆಡುವಾಗ ಥಿಮೆಟ್ ಬದಲು ಇದನ್ನು ಹಾಕಿ.

ಬಾಳೆ ಬೆಳೆಯಲ್ಲಿ  ಪ್ರಮುಖ ಸಮಸ್ಯೆಯಾದ ಕಾಂಡ – ಗಡ್ಡೆ  ಕೊರಕ ಹುಳದ ನಿಯಂತ್ರಣಕ್ಕೆ ಫೋರೇಟ್ ಮುಂತಾದ ವಿಷದ ಬದಲು ಜೈವಿಕ ಪರಿಹಾರ ಸುರಕ್ಷಿತ.  ಬಾಳೆ ಗೊನೆ ಹಾಕುವ ಸಮಯದಲ್ಲಿ ಅದಕ್ಕೆ ದಿಂಡು ಹುಟ್ಟಿಕೊಳ್ಳುತ್ತದೆ.  ದಿಂಡು ಬರುವ ತನಕ ಬಾಳೆಗೆ ಅಂತಹ ಕೀಟ ಸಮಸ್ಯೆ ಇಲ್ಲ. ಯಾವಾಗ ಗೊನೆ ಹಾಕುತ್ತದೆಯೋ ಆಗ ಮುನ್ಸೂಚನೆ ಇಲ್ಲದೆ ಕಾಂಡ ಕೊರಕ ಹುಳದ ತೊಂದರೆ ಉಂಟಾಗುತ್ತದೆ. ಈ ಕಾಂಡ ಕೊರಕ ಹುಳ ಬಾಧೆ ಇಲ್ಲದ ಬಾಳೆ ತಳಿಗಳೇ ಇಲ್ಲ. ಇದಕ್ಕೆ ಎಲ್ಲರೂ ವಿಷ…

Read more

ಜೈವಿಕ ಗೊಬ್ಬರವನ್ನು ಹೀಗೆ ಬಳಸಿದರೆ ಹೆಚ್ಚು ಫಲ ಸಿಗುತ್ತದೆ?

ಬೇರೆ ಬೇರೆ ಜೀವಾಣುಗಳ ಸಹಾಯದಿಂದ ಬೆಳೆ ಪೋಷಣೆ ಮತ್ತು ಬೆಳೆ ಸಂರಕ್ಷಣೆ ಮಾಡಬಹುದು. ಈ ಜೀವಾಣುಗಳನ್ನು ಹುಡಿ, ದ್ರವ ರೂಪದಲ್ಲಿ ರೈತರಿಗೆ ಒದಗಿಸಲಾಗುತ್ತದೆ. ಇದರ ಸಮರ್ಪಕ ಫಲಿತಾಂಶ ಯಾವ ಸಂದರ್ಭದಲ್ಲಿ ಚೆನ್ನಾಗಿ ನಡೆಯುತ್ತದೆ ಎಂಬುದು ಎಲ್ಲರೂ ತಿಳಿದಿರಬೇಕು. ಜೀವಾಣುಗಳನ್ನು ಬಳಸುವ ಮುನ್ನ ಅದರ ಬಗ್ಗೆ ರೈತರು ತಿಳಿದುಕೊಳ್ಳಬೇಕು. ಅದು ಜೀವಾಣು ಎಂದಲ್ಲ. ಯಾವುದೇ ಬೆಳೆ ಪೋಷಕ ಇರಲಿ ಬೆಳೆ ಸಂರಕ್ಷಕ ಇರಲಿ, ಬಳಸುವ ಮುನ್ನ ಅದರಲ್ಲಿ ಯಾವ ಅಂಶ ಇದೆ ಎಂಬುದನ್ನು ಯಾರು ಬಹಿರಂಗ ಗೊಳಿಸುತ್ತಾರೆಯೋ ಅವರಿಂದ…

Read more
ರಾಸಾಯನಿಕ ಮುಕ್ತ ಕೀಟ ನಿಯಂತ್ರಣ

ರಾಸಾಯನಿಕ ಮುಕ್ತ ಕೀಟ-ರೋಗ ನಿಯಂತ್ರಿಸುವ ವಿಧಾನಗಳು.

ಗುಡ್ಡಕ್ಕೆ ಗುಡ್ಡ ಅಡ್ದ ಇದ್ದೇ ಇದೆ. ಸ್ವಲ್ಪ ಯೋಚನೆ  ಮಾಡಿದರೆ ಕೆಲವು ಸರಳ, ಸುರಕ್ಷಿತ ಬೆಳೆ ಸಂರಕ್ಷಣಾ ವಿಧಾನಗಳು  ಗೊತ್ತಾಗುತ್ತವೆ. ಇದೇ ಸಿದ್ದಾಂತದಲ್ಲಿ, ಕೃಷಿ ಬೆಳೆಗಳ ಕೆಲವು ರೋಗ ಮತ್ತು ಕೀಟಗಳನ್ನು ನೈಸರ್ಗಿಕವಾಗಿ  ರಾಸಾಯನಿಕ  ಬಳಕೆ ಇಲ್ಲದೆ ನಿಯಂತ್ರಿಸಬಹುದು ಎಂದು ಕಂಡುಕೊಳ್ಳಲಾಗಿದೆ. ಇದನ್ನು ಜೈವಿಕ ಕೀಟ- ರೋಗ ನಿಯಂತ್ರಣ ಎನ್ನುತ್ತಾರೆ. ಇದು  ಯಾರಿಗೂ ಯಾವ ರೀತಿಯಲ್ಲೂ ಅಪಾಯ ಇಲ್ಲದ ಜೀವಾಣುಗಳಾಗಿದ್ದು, ಎಲ್ಲದರ ಮೂಲ ಮಣ್ಣೇ ಆಗಿರುತ್ತದೆ. ಒಂದು ತೋಟದಲ್ಲಿ ಎಲ್ಲದಕ್ಕೂ ರೋಗ ಅಥವಾ ಕೀಟ ಸಮಸ್ಯೆ ಉಂಟಾಗಿ,ಕೆಲವು…

Read more
error: Content is protected !!