ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ತೋಟ ಮಾಡುವವರು  ಹಿಂದೆ ಇಂತಹ ಸಸಿ ಒಳ್ಳೆಯಯದು, ಇದನ್ನು ಆಯ್ಕೆ ಮಾಡಬೇಕು ಎಂದೆಲ್ಲಾ ಮುಂಜಾಗ್ರತಾ ಕ್ರಮ ಅನುಸರಿಸುತ್ತಿದ್ದರು. ಈಗಿನ ಪರಿಸ್ಥಿತಿಯಲ್ಲಿ ಗಮನಿಸಬೇಕಾದದ್ದು ಗಿಡದ ತಳಿ, ಬೆಳವಣಿಗೆ ಲಕ್ಷಣ ಮಾತ್ರವಲ್ಲದೆ ಗಿಡದ ಆರೋಗ್ಯವೂ ಸಹ. ಎಳೆ ಗಿಡಗಳ ಆರೋಗ್ಯ ಹೇಗಿದೆ ಎಂಬುದನ್ನು ಕೂಲಂಕುಶವಾಗಿ ನೋಡಿ ನಂತರ ಆಯ್ಕೆ ಮಾಡಿ ನೆಡಬೇಕು. ಬರೇ ಅಡಿಕೆ ಮಾತ್ರವಲ್ಲ ತೆಂಗಿನ ಸಸಿಯೂ ಹಾಗೆಯೇ.  ಅಡಿಕೆ ಸಸಿ ನೆಡುವವರು ಅದು ಅವರೇ ಮಾಡಿದ ಗಿಡ ಇರಬಹುದು ಅಥವಾ ನರ್ಸರಿಯಿಂದ ಖರೀದಿ ಮಾಡಿ ನೆಡುವುದೇ…

Read more
ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ

ಬಸಿಗಾಲುವೆ – ಅಡಿಕೆ, ತೆಂಗಿನ ತೋಟಕ್ಕೆ ಇದು ಯಾಕೆ ತೀರಾ ಅಗತ್ಯ?

ಬಸಿಗಾಲುವೆ  ಇಲ್ಲದ ಅಡಿಕೆ, ತೆಂಗಿನ ತೋಟದಲ್ಲಿ ಯಾವಾಗಲೂ ಒಂದಿಲ್ಲೊಂದು ಸಮಸ್ಯೆ ಇದ್ದೇ ಇರುತ್ತದೆ. ನೆಲಕ್ಕೆ ಮಳೆಯ ಮೂಲಕ ಸೇರುವ ನೀರು ಮಣ್ಣನ್ನು ತೇವವಷ್ಟೇ ಮಾಡಿ  ಸರಾಗವಾಗಿ ಹರಿದು ಹೋಗುತ್ತಿರಬೇಕು. ಆಗ ಸಸ್ಯಗಳ ಆರೋಗ್ಯಕ್ಕೆ ಅದು ಅನುಕೂಲಕರ. ಅಡಿಕೆ ತೆಂಗು, ತಾಳೆ, ಬಾಳೆ, ಕರಿಮೆಣಸು ಮುಂತಾದ ಏಕದಳ ಸಸ್ಯಗಳ ಬೇರು ನೀರಿಗೆ ಸೂಕ್ಷ್ಮ ಗ್ರಾಹಿಯಾಗಿದ್ದು, ಸ್ವಲ್ಪ ಹೆಚ್ಚಾದರೂ ತೊಂದರೆ ಉಂಟುಮಾಡುತ್ತದೆ. ಸಸ್ಯಗಳಿಗೆ ನೀರು ಬೇಕೇ? ಬೇಡ. ಸಸ್ಯಗಳಿಗೆ ಅವು ಬೇರು ಬಿಟ್ಟಿರುವ ಮಣ್ಣು ಎಂಬ ಮಾಧ್ಯಮ ತೇವಾಂಶದಿಂದ ಕೂಡಿದ್ದರೆ…

Read more
ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ

ಎಲೆ ಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ – ಮಾಡಬೇಕಾದದ್ದು ಬೇರೆ ಇದೆ.

ಎಲೆಚುಕ್ಕೆ ರೋಗ ಇಲ್ಲದ ಸ್ಥಳವೇ ಇಲ್ಲ. ಇದಕ್ಕೆ ಬೆಳೆಗಾರರು ಏನು ಸಿಂಪಡಿಸಬೇಕು ಎಂದು ಕೇಳುತ್ತಾರೆ. ಆದರೆ ಮೊದಲು ಮಾಡಬೇಕಾದಾದ ಈ ಕೆಲಸ ಮಾಡದೆ ಸಿಂಪರಣೆ  ಮಾಡಿದರೆ ವಾಸಿಯಾಗುವುದಿಲ್ಲ. ಕೆಲವು ಕಡೆ ಕಡಿಮೆ ಇರಬಹುದು. ಕೆಲವು ಕಡೆ ಉಲ್ಪಣ ಸ್ಥಿತಿಗೆ ತಲುಪಿರಲೂ ಬಹುದು. ನೂರು ಮರಗಳಲ್ಲಿ ಕೆಲವು ಮರಗಳು ಸೋಂಕು  ತಗಲಿಸಿಕೊಳ್ಳದೆಯೂ ಇರಬಹುದು. ಇದೆಲ್ಲಾ ಸಸ್ಯದ ಅಂತರ್ಗತ ಶಕ್ತಿಯ ಮೇಲೆ ಅವಲಂಭಿಸಿದೆ. ಕೆಲವು ಸಾಂಕ್ರಾಮಿಕ ರೋಗಗಳು ತೀವ್ರವಾಗಿ ಹರಡಿದರೂ ಎಲ್ಲರನ್ನೂ ಬಾಧಿಸದೆ ಕೆಲವರನ್ನು ಬಿಟ್ಟಿರಬಹುದು. ಅದು ರೋಗಾಣು ಕೊಟ್ಟ…

Read more
error: Content is protected !!