
ಭತ್ತ ಬೆಳೆಯುವವರು ಒಮ್ಮೆ ಇವರ ಅನುಭವವನ್ನು ಕೇಳಿ.
ಯಾವುದೇ ಬೆಳೆ ನಷ್ಟದ ಬೆಳೆ ಅಲ್ಲ. ಬೆಳೆಯ ಪೂರ್ವಾಪರವನ್ನು ಅರಿತುಕೊಳ್ಳಬೇಕು. ಆಯಾ ಬೆಳೆಗೆ ಏನು ಬೇಕು, ಹೇಗೆ ಬೆಳೆಯಬೇಕು ಎಂಬುದನ್ನು ತಿಳಿದುಕೊಳ್ಳಬೇಕು. ಸಂದೇಹಗಳನ್ನು ಸಂಕೋಚ ಇಲ್ಲದೆ ತಜ್ಞರ ಮೂಲಕ ತಿಳಿದುಕೊಳ್ಳಬೇಕು. ಆಗ ಬೆಳೆ ಕಷ್ಟವಾಗುವುದಿಲ್ಲ. ನಷ್ಟವೂ ಆಗುವುದಿಲ್ಲ. ಯಾವುದರಲ್ಲೂ ಅದು ಕೃಷಿ ಇರಲಿ, ಉದ್ದಿಮೆ ಇರಲಿ, ನಷ್ಟ ಆಗುವುದಲ್ಲ. ನಾವು ಮಾಡಿಕೊಳ್ಳುವುದು. ಇದು ನಿಟ್ಟೆ ಗುತ್ತು ನವೀನ್ ಚಂದ್ರ ಜೈನ್ ಅವರ ಅನುಭವ. ಇವರು ಎಲ್ ಎಲ್ ಬಿ ವ್ಯಾಸಂಗ ಮಾಡಿ ಆಯ್ಕೆ ಮಾಡಿಕೊಂಡದ್ದು ಕೃಷಿ ವೃತ್ತಿಯನ್ನು….