ಶುಂಠಿ ಹೊಲ

ಶುಂಠಿ ಈಗ ನೆಟ್ಟರೆ ಬೆಳೆಗೆ ರೋಗ ಕಡಿಮೆ ಹೇಗೆ?.

ಶುಂಠಿ ಮುಂತಾದ  ಗೆಡ್ಡೆ ಗೆಣಸು ಬೆಳೆಗಳನ್ನು ಬೆಳೆಸುವರೇ ಕುಂಭ  ಮಾಸ ಅತ್ಯಂತ ಸೂಕ್ತ ಕಾಲ. ಶುಂಠಿಗೆ ಈ ವರ್ಷ ಬೆಲೆ ಕುಸಿತವಾಗಿದೆ ಎಂದು ಬೆಳೆ ಬಿಟ್ಟು ಬಿಡಬೇಡಿ. ಈ ವರ್ಷ ಮತ್ತೆ ಶುಂಠಿಗೆ ಚಾನ್ಸ್ ಬರುವ ಸಾಧ್ಯತೆ ಇದೆ. ಜೊತೆಗೆ ಬಿತ್ತನೆ ಗಡ್ಡೆಯೂ ಕಡಿಮೆ ಬೆಲೆಗೆ ಲಭ್ಯ. ಮಾರ್ಚ್ ನಂತರ ಶುಂಠಿ ನೆಟ್ಟರೆ ಮಳೆ ಬರುವ ಸಮಯಕ್ಕೆ ಗಿಡ ಬೆಳೆದು ರೋಗ ಸಾಧ್ಯತೆ ಕಡಿಮೆ. ಮಾಗಿ ತಿಂಗಳು ಅಥವಾ ಕುಂಭ ಮಾಸ ಕಳೆದರೆ ಮಳೆಗಾಲ. ಆಷಾಢ ಕಳೆದರೆ…

Read more
ಸಂಪೂರ್ಣ ಸಾವಯವ ತರಕಾರಿ

ಆರೋಗ್ಯ ರಕ್ಷಕ ಸಾವಯವ ತರಕಾರಿಗಳು.

ಗಡ್ಡೆ ಗೆಣಸಿನ ಬೆಳೆ ಬಹಳ ಹಿಂದಿನದ್ದು. ಬಹುಷಃ  ಮಾನವ ಬೇಯಿಸಿ ತಿನ್ನುವುದನ್ನು ಕಲಿಯುವ ಮುಂಚೆ  ಕಂದ ಮೂಲಗಳನ್ನು ತಿಂದು ಬದುಕುತ್ತಿದ್ದರಂತೆ. ಇದರಷ್ಟು ಆರೋಗ್ಯಕರ ತರಕಾರಿ ಬೇರೊಂದಿಲ್ಲ. ಇದಕ್ಕೆ ರಾಸಾಯನಿಕಗಳ ಅಗತ್ಯವೇ ಇಲ್ಲ. ಸಂಪೂರ್ಣ ಸಾವಯವ ತರಕಾರಿ ಎಂದರೆ ಇದು. ಇವುಗಳನ್ನು ಮರೆತು ಹೋದ ತರಕಾರಿಗಳು ಎಂದು ಹೇಳಿದರೂ ತಪ್ಪಾಗಲಾರದು. ತಲೆಮಾರಿನಿದ ತಲೆಮಾರಿಗೆ ಬದಲಾವಣೆಯಾಗುವಾಗ ಕೆಲವು ಮರೆತು ಹೋಗುವ ವಿಚಾರಗಳಿರುತ್ತವೆ. ಅವುಗಳಲ್ಲಿ ಈ ಗಡ್ಡೆ ಗೆಣಸು ತರಕಾರಿಗಳ ಬೆಳೆ ಹಾಗೂ ಅಡುಗೆಯೂ ಸೇರಿದೆ. ಈ ತರಕಾರಿಗಳಲ್ಲಿ  ಇರುವಷ್ಟು ಆರೋಗ್ಯ ಗುಣ…

Read more

ಈ ಗಡ್ದೆ ಗೆಣಸು ತರಕಾರಿ ಬೆಳೆಗೆ ಅತೀ ಕಡಿಮೆ ನೀರು ಸಾಕು.

ಎಲ್ಲಾ ತರಕಾರಿಗಳನ್ನು ಕೆಲವು ಋತುಮಾನಗಳಲ್ಲಿ ಬೆಳೆಸುವುದು ಕ್ರಮ. ಸುವರ್ಣ ಗಡ್ಡೆ ಎಂಬ ತರಕಾರಿಯನ್ನು ನಾಟಿ ಮಾಡುವ ಸಮಯ ಈಗ. ಈ ಬೆಳೆಗೆ  ಮಳೆಗಾಲ ಬರುವ ತನಕ ಅಲ್ಪ ಸ್ವಲ್ಪ ನೀರು ಕೊಟ್ಟರೆ ಸಾಕು ಮಳೆಗಾಲ ಮುಗಿಯುವ ಸಮಯದಲ್ಲಿ ದೊಡ್ಡ ಗಡ್ಡೆಯಾಗಿ ಪ್ರತಿಫಲ ಕೊಡುತ್ತದೆ.  ಇದು ಅತೀ ಕಡಿಮೆ ನೀರಿನಲ್ಲಿ ಬೆಳೆಯಬಹುದುದಾದ  ಗಡ್ದೆ ಗೆಣಸು  ತರಕಾರಿ ಎಂದರೂ ತಪ್ಪಾಗಲಾರದು. ಕೇರಳದವರು ಎಲ್ಲೇ ಹೋದರೂ ಮರಗೆಣಸು, ಸುವರ್ಣಗಡ್ಡೇ ಬೆಳೆಯುವುದನ್ನು ಬಿಡುವುದಿಲ್ಲ. ಅವರು ಸುವರ್ಣ ಗಡ್ಡೆ ನೆಡುವುದು ಮಾರ್ಚ್ ತಿಂಗಳಲ್ಲಿ,(ಕುಂಭ ಮಾಸ) …

Read more
error: Content is protected !!