ಸಕ್ಕರೆ ಉತ್ಪಾದನೆ ಹೆಚ್ಚಿದೆ- ರೈತರು ಕಬ್ಬು ಬೆಳೆಯಬೇಡಿ. ಸರಕಾರದ ಹೇಳಿಕೆ.
ದೇಶದಲ್ಲಿ ಸಕ್ಕರೆ ಉತ್ಪಾದನೆ ಹೆಚ್ಚಾಗಿದೆ. ಹಾಗಾಗಿ ಕಬ್ಬು ಬೆಳೆಯುವ ರೈತರು ಇನ್ನು ಬೆಳೆಯಬೇಡಿ. ಬೆಳೆ ಪರಿವರ್ತನೆ ಮಾಡಿ, ಇಂಧನ ಮತ್ತು ಶಕ್ತಿ ಉತ್ಪಾದನೆ ಕಡೆಗೆ ಗಮನಹರಿಸಬೇಕು ಎಂಬುದು ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಮಂತ್ರಿಗಳಾದ ನಿಥಿನ್ ಗಡ್ಕರಿಯವರ ಮಾತು. ಭಾರತ ದೇಶದಲ್ಲಿ ಕಬ್ಬು ಬೆಳೆ ಹೆಚ್ಚಾಗುತ್ತಿದ್ದು, ಎಲ್ಲರೂ ಸಕ್ಕರೆ ಕಾರ್ಖಾನೆಗೆ ಕಬ್ಬು ಹಾಕುತ್ತಾರೆ. ಉತ್ಪಾದಿಸಿದ ಸಕ್ಕರೆ ಮಿಗತೆಯಾಗಿ ಕಾರ್ಖಾನೆಗಳು ನಷ್ಟಕ್ಕೊಳಗಾಗುತ್ತಿವೆಯಂತೆ. ನಮ್ಮ ದೇಶದಲ್ಲಿರುವ ಬಹುತೇಕ ಸಕ್ಕರೆ ಕಾರ್ಖಾನೆಗಳು ಈಗ ಸಕ್ಕರೆ ಉತ್ಪಾದನೆಗಾಗಿ ಕೆಲಸ ಮಾಡುತ್ತಿಲ್ಲ. ಬದಲಿಗೆ…