ಎಲೆಚುಕ್ಕೆ ರೋಗ ಸಿಂಪರಣೆಯಿಂದ ವಾಸಿಯಾಗುವುದಿಲ್ಲ. ಯಾಕೆ ಗೊತ್ತೇ?

ಸಿಂಪರಣೆಯಿಂದ ಎಲೆ ಚುಕ್ಕೆರೋಗ ವಾಸಿ ಅಸಾಧ್ಯ. ಯಾಕೆ?

ಅಡಿಕೆಗೆ ಬಾದಿತವಾದ ಎಲೆ ಚುಕ್ಕೆರೋಗ ವಾಸಿ ಮಾಡುವುದಕ್ಕೆ ತಜ್ಞರು ಬಹಳಷ್ಟು ಸಲಹೆಗಳನ್ನು ನೀಡುತ್ತಿದ್ದಾರೆ.  ಅವರ ಸಲಹೆಯನ್ನು ಪಾಲಿಸಿದವರಲ್ಲಿ ಈ ರೋಗ ಒಮ್ಮೆ ಹತೋಟಿಯಾದಂತೆ ಕಂಡರೂ ಮತ್ತೆ ನಾನಿದ್ದೇನೆ ಎಂದು ಮರುಕಳಿಸುತ್ತಿದೆ. ದುಬಾರಿ ಬೆಲೆಯ ಶಿಲೀಂದ್ರ ನಾಶಕ- ದುಬಾರಿ ಕೂಲಿ ಸಂಭಾವನೆಯೊಂದಿಗೆ ಎಲೆಚುಕ್ಕೆ ರೋಗ ಓಡಿಸುವ ರೈತರ ಶ್ರಮ ಹೇಳತೀರದು. ಎಲೆ ಚುಕ್ಕೆ ರೋಗವನ್ನು ಅಲ್ಪ ಕಾಲದ ತನಕ ಹತೋಟಿ ಮಾಡಬಹುದೇ ಹೊರತು ಇಲ್ಲದಂತೆ ಮಾಡಲು  ಪ್ರಕೃತಿಯೇ ಸಹಕರಿಸಬೇಕು. ಎಲೆ ಚುಕ್ಕೆರೋಗ ಅಡಿಕೆ ಬೆಳೆಗಾರರ ಪಾಲಿಗೆ ಇಷ್ಟು ದೊಡ್ಡ …

Read more
ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ಸಸಿ ಆಯ್ಕೆ ಮಾಡುವಾಗ ಈಗ ಯಾವ ಮುಂಜಾಗ್ರತೆ ವಹಿಸಬೇಕು?

ಅಡಿಕೆ ತೋಟ ಮಾಡುವವರು  ಹಿಂದೆ ಇಂತಹ ಸಸಿ ಒಳ್ಳೆಯಯದು, ಇದನ್ನು ಆಯ್ಕೆ ಮಾಡಬೇಕು ಎಂದೆಲ್ಲಾ ಮುಂಜಾಗ್ರತಾ ಕ್ರಮ ಅನುಸರಿಸುತ್ತಿದ್ದರು. ಈಗಿನ ಪರಿಸ್ಥಿತಿಯಲ್ಲಿ ಗಮನಿಸಬೇಕಾದದ್ದು ಗಿಡದ ತಳಿ, ಬೆಳವಣಿಗೆ ಲಕ್ಷಣ ಮಾತ್ರವಲ್ಲದೆ ಗಿಡದ ಆರೋಗ್ಯವೂ ಸಹ. ಎಳೆ ಗಿಡಗಳ ಆರೋಗ್ಯ ಹೇಗಿದೆ ಎಂಬುದನ್ನು ಕೂಲಂಕುಶವಾಗಿ ನೋಡಿ ನಂತರ ಆಯ್ಕೆ ಮಾಡಿ ನೆಡಬೇಕು. ಬರೇ ಅಡಿಕೆ ಮಾತ್ರವಲ್ಲ ತೆಂಗಿನ ಸಸಿಯೂ ಹಾಗೆಯೇ.  ಅಡಿಕೆ ಸಸಿ ನೆಡುವವರು ಅದು ಅವರೇ ಮಾಡಿದ ಗಿಡ ಇರಬಹುದು ಅಥವಾ ನರ್ಸರಿಯಿಂದ ಖರೀದಿ ಮಾಡಿ ನೆಡುವುದೇ…

Read more
ಎಲೆ ಹಳದಿಯಾಗುವುದಕ್ಕೆ ಒಂದು ಕಾರಣ ಗಂಧಕದ ಕೊರತೆ.Yellowing of leaves is one of sulphur deficiency symptom

ಗಂಧಕ- ಬೆಳೆಗಳಿಗೆ ಅಗತ್ಯವಾಗಿ ಬೇಕಾಗುವ ಪೋಷಕಾಂಶ.

ಬಹಳ ರೈತರು ತಮ್ಮ ಅಡಿಕೆ ಮರದ ಗರಿಗಳು ಹಳದಿಯಾಗಿವೆ, ಮರದ ಸುಳಿಗಳು ಸಣ್ಣದಾಗುತ್ತಿವೆ. ತೆಂಗಿನ  ಮರದಲ್ಲಿ ಕಾಯಿ ಆಗುತ್ತಿಲ್ಲ. ರಸ ಹೀರುವ ಕೀಟಗಳ ಸಮಸ್ಯೆ ಎಂದೆಲ್ಲಾ  ಹೇಳುತ್ತಾರೆ. ಇದಕ್ಕೆ ಒಂದದು ಕಾರಣ ಗಂಧಕ ಎಂಬ ಅಗತ್ಯ ಪೋಷಕದ ಕೊರತೆ. ಬೆಳೆಗಳಲ್ಲಿ ಎಲೆಗಳು (Chlorosis)ಹಳದಿಯಾಗುವುದು, ಬೇರಿನ ಬೆಳವಣಿಗೆ ಕುಂಠಿತವಾಗುವುದು, ರೋಗ, ಕೀಟಗಳಿಗೆ ಬೇಗ ತುತ್ತಾಗುವುದು ಮುಂತಾದ ಕೆಲವು ಸಮಸ್ಯೆಗಳಿಗೆ  ಗಂಧಕದ ಕೊರತೆಯು ಒಂದು ಕಾರಣ. ಪ್ರತೀಯೊಂದು ಬೆಳೆಯೂ ಗಂಧಕವನ್ನು  ಅಪೇಕ್ಷಿಸುತ್ತದೆ. ರೈತರು ಸಲ್ಫೇಟ್ ರೂಪದ ಗೊಬ್ಬರವನ್ನು ಬೆಳೆಗಳಿಗೆ ಕೊಡುತ್ತಿದ್ದರೆ…

Read more
error: Content is protected !!